ತರುವಾಯ ದೇವರು--ನಮ್ಮ ರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯನನ್ನು ಮಾಡೋಣ; ಅವರು ಸಮುದ್ರದ ವಿಾನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಪಶುಗಳ ಮೇಲೆಯೂ ಎಲ್ಲಾ ಭೂಮಿಯ ಮೇಲೆಯೂ ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದು ಕ್ರಿಮಿಯ ಮೇಲೆಯೂ ದೊರೆತನಮಾಡಲಿ ಅಂದನು.
Cross references
ಇದ ಲ್ಲದೆ ಕರ್ತನಾದ ದೇವರು--ಇಗೋ, ಮನುಷ್ಯನು ಒಳ್ಳೇದರ ಕೆಟ್ಟದರ ಭೇದವನ್ನು ತಿಳಿದು ನಮ್ಮಲ್ಲಿ ಒಬ್ಬನಂತಾದನು; ಈಗ ಅವನು ಕೈಚಾಚಿ ಜೀವವೃಕ್ಷದ ಫಲವನ್ನು ತೆಗೆದು ತಿಂದು ಎಂದೆಂದಿಗೂ ಬದುಕ ಬಾರದು ಅಂದನು.
ಆದಾಮನ ವಂಶಾವಳಿಯ ಪುಸ್ತಕವು ಇದೇ. ದೇವರು ಮನುಷ್ಯನನ್ನು ಸೃಷ್ಟಿಸಿದ ದಿನದಲ್ಲಿ ತನ್ನ ಹೋಲಿಕೆಯಲ್ಲಿ ಆತನು ಅವನನ್ನು ಉಂಟುಮಾಡಿದನು.
ಭೂಮಿಯ ಮೇಲಿರುವ ಎಲ್ಲಾ ಮೃಗಗಳ ಮೇಲೆಯೂ ಆಕಾಶದ ಎಲ್ಲಾ ಪಕ್ಷಿಗಳ ಮೇಲೆಯೂ ಭೂಮಿಯ ಮೇಲೆ ಹರಿದಾಡುವವು ಗಳೆಲ್ಲವುಗಳ ಮೇಲೆಯೂ ಸಮುದ್ರದ ಎಲ್ಲಾ ವಿಾನುಗಳ ಮೇಲೆಯೂ ನಿಮ್ಮ ಭಯವು ಮತ್ತು ನಿಮ್ಮ ಹೆದರಿಕೆಯು ಇರುವದು; ನಿಮ್ಮ ಕೈಗಳಲ್ಲಿ ಅವು ಕೊಡಲ್ಪಟ್ಟಿವೆ.
ಎಲ್ಲಾ ಮೃಗಗಳಿಂದ ಅದನ್ನು ವಿಚಾರಿಸುವೆನು. ಮನುಷ್ಯನ ಪ್ರಾಣವನ್ನು ಮನುಷ್ಯನಿಂದಲೂ ಅವ ನವನ ಸಹೋದರನಿಂದಲೂ ವಿಚಾರಿಸುವೆನು. ಯಾವನು ಮನುಷ್ಯನ ರಕ್ತವನ್ನು ಸುರಿಸುವನೋ ಅವನ ರಕ್ತವು ಮನುಷ್ಯನಿಂದಲೇ ಸುರಿಸಲ್ಪಡುವದು. ಯಾಕಂದರೆ ದೇವರು ತನ್ನ ಸ್ವರೂಪದಲ್ಲಿ ಮನುಷ್ಯ ನನ್ನು ಉಂಟುಮಾಡಿದನು.
ಆದದರಿಂದ ನಾವು ಇಳಿದು ಹೋಗಿ ಅವರು ಒಬ್ಬರ ಮಾತು ಒಬ್ಬರು ತಿಳಿಯದ ಹಾಗೆ ಅವರ ಭಾಷೆಯನ್ನು ಗಲಿಬಿಲಿ ಮಾಡೋಣ ಅಂದನು.
ಹೊಲದ ಕಲ್ಲುಗಳ ಸಂಗಡ ನಿನಗೆ ಒಡಂಬಡಿಕೆ ಇರುವದು; ಹೊಲದ ಮೃಗಗಳು ನಿನ್ನೊಂದಿಗೆ ಸಮಾ ಧಾನವಾಗಿರುವವು.
ಆದರೆ ರಾತ್ರಿಯಲ್ಲಿ ಗೀತೆಗಳನ್ನು ಕೊಡುವ ನನ್ನ ನಿರ್ಮಾಣಿಕನಾದ ದೇವರು ಎಲ್ಲಿ ಎಂದು ಯಾರೂ ಹೇಳುವದಿಲ್ಲ.
ಅದರ ಶಕ್ತಿ ಬಹಳವಾಗಿರುವದರಿಂದ ಅದರಲ್ಲಿ ಭರವಸ ಇಡುವಿಯೋ? ನಿನ್ನ ಕೆಲಸವನ್ನು ಅದಕ್ಕೆ ಒಪ್ಪಿಸುವಿಯೋ?
ಮನುಷ್ಯನನ್ನು ನೆನಸುವ ಹಾಗೆ ಅವನು ಎಷ್ಟರವನು? ಅವನನ್ನು ದರ್ಶಿಸುವ ಹಾಗೆ ಮನುಷ್ಯನ ಮಗನು ಎಷ್ಟರವನು?
ಎಲ್ಲಾ ಕುರಿದನಗಳನ್ನೂ ಹೌದು, ಅಡವಿಯ ಮೃಗಗಳನ್ನೂ
ಕರ್ತನೇ ದೇವರೆಂದು ತಿಳುಕೊಳ್ಳಿರಿ; ನಾವಲ್ಲ, ಆತನೇ ನಮ್ಮನ್ನು ಉಂಟು ಮಾಡಿದ್ದಾನೆ; ನಾವು ಆತನ ಜನರೂ ಆತನ ಹುಲ್ಲುಗಾವಲಿನ ಮಂದೆಯೂ ಆಗಿದ್ದೇವೆ.
ನೀನು ಕತ್ತಲನ್ನು ಬರಮಾಡುತ್ತೀ; ಆಗ ರಾತ್ರಿಯಾಗುತ್ತದೆ; ಅದರಲ್ಲಿ ಅಡವಿಯ ಮೃಗ ಗಳೆಲ್ಲಾ ಸಂಚರಿಸುತ್ತವೆ.
ಇಸ್ರಾಯೇಲು ತನ್ನನ್ನು ಉಂಟುಮಾಡಿದಾತನಲ್ಲಿ ಸಂತೋಷಿಸಲಿ; ಚೀಯೋನಿನ ಮಕ್ಕಳು ತಮ್ಮ ಅರಸನಲ್ಲಿ ಉಲ್ಲಾಸಿಸಲಿ.
ಇಗೋ, ದೇವರು ಮನುಷ್ಯನನ್ನು ಸತ್ಯವಂತನನ್ನಾಗಿ ಮಾಡಿದನು. ಇದನ್ನು ಮಾತ್ರ ನಾನು ಕಂಡುಕೊಂಡಿದ್ದೇನೆ, ಅವರಾದರೋ ಅನೇಕ ಕಲ್ಪನೆ ಗಳನ್ನು ಹುಡುಕಿದ್ದಾರೆ.
ನಾವು ನಿನ ಗೋಸ್ಕರ ಬಂಗಾರದ ಅಂಚುಗಳನ್ನು ಬೆಳ್ಳಿಯ ಕುಚ್ಚುಗಳೊಂದಿಗೆ ಮಾಡುವೆವು.
ಆಗ ನಾನು -- ಯಾರನ್ನು ಕಳುಹಿಸಲಿ; ಯಾವನು ನಮ ಗೋಸ್ಕರ ಹೋಗುವನು ಎಂಬ ಕರ್ತನ ನುಡಿಯನ್ನು ಸಹ ಕೇಳಿ -- ನಾನು ಇದ್ದೇನೆ; ನನ್ನನ್ನು ಕಳುಹಿಸು ಅಂದೆನು.
ಆದರೆ ಈಗ ಓ ಕರ್ತನೇ, ನಮ್ಮ ತಂದೆಯು ನೀನೇ; ನಾವು ಮಣ್ಣು, ನೀನು ನಮ್ಮ ಕುಂಬಾರನು; ನಾವೆ ಲ್ಲರೂ ನಿನ್ನ ಕೈಕೆಲಸವೇ.
ಪ್ರವಾದಿಯಾದ ಯೆರೆವಿಾ ಯನು ಹೇಳಿದ್ದೇನಂದರೆ-- ಆಮೆನ್: ಕರ್ತನು ಹಾಗೆಯೇ ಮಾಡಲಿ: ನೀನು ಪ್ರವಾದಿಸಿದ ನಿನ್ನ ವಾಕ್ಯಗಳನ್ನು ಕರ್ತನು ನೆರವೇರಿಸಿ ಕರ್ತನ ಆಲಯದ ಪಾತ್ರೆಗಳನ್ನೂ ಸೆರೆಯವರೆಲ್ಲರನ್ನೂ ಬಾಬೆಲಿನಿಂದ ತಿರುಗಿ ಈ ಸ್ಥಳಕ್ಕೆ ಬರಮಾಡಲಿ.
ಆದರೆ ಯೇಸು ಅವರಿಗೆ--ನನ್ನ ತಂದೆಯು ಈ ವರೆಗೂ ಕೆಲಸ ಮಾಡುತ್ತಾನೆ ಮತ್ತು ನಾನೂ ಕೆಲಸ ಮಾಡುತ್ತೇನೆ ಅಂದನು.
ಯೇಸು ಪ್ರತ್ಯುತ್ತರವಾಗಿ ಅವನಿಗೆ--ಯಾವನಾ ದರೂ ನನ್ನನ್ನು ಪ್ರೀತಿಸುವದಾದರೆ ಅವನು ನನ್ನ ಮಾತುಗಳನ್ನು ಕೈಕೊಳ್ಳುವನು; ನನ್ನ ತಂದೆಯು ಅವ ನನ್ನು ಪ್ರೀತಿಸುವನು. ಇದಲ್ಲದೆ ನಾವು ಅವನ ಬಳಿಗೆ ಬಂದು ಅವನೊಂದಿಗೆ ನಮ್ಮ ನಿವಾಸವನ್ನು ಮಾಡಿ ಕೊಳ್ಳುವೆವು.
ಅಪೂರ್ವವಾದ ಕೆಲವು ಸಂಗತಿಗಳನ್ನು ನಮಗೆ ಶ್ರುತಪಡಿಸುತ್ತೀಯಲ್ಲಾ. ಆದಕಾರಣ ಅದರ ಅರ್ಥ ವನ್ನು ತಿಳಿಯುವದಕ್ಕೆ ನಮಗೆ ಅಪೇಕ್ಷೆಯದೆ ಅಂದರು.
ಆತನು ಒಂದೇ ರಕ್ತದಿಂದ ಎಲ್ಲಾ ಜನಾಂಗಗಳ ಮನುಷ್ಯರನ್ನು ಭೂಮುಖದ ಮೇಲೆಲ್ಲಾ ವಾಸಿಸುವದಕ್ಕಾಗಿ ಉಂಟು ಮಾಡಿದನು.
ಆತನಲ್ಲಿಯೇ ನಾವು ಜೀವಿಸುತ್ತೇವೆ ಚಲಿಸುತ್ತೇವೆ ಇರುತ್ತೇವೆ. ನಿಮ್ಮ ಸ್ವಂತ ಕವಿಗಳಲ್ಲಿಯೂ ಕೆಲವರು--ನಾವೂ ಆತನ ಸಂತಾನದವರೇ ಎಂಬ ದಾಗಿ ಹೇಳಿದ್ದಾರೆ.
ಆದರೆ ಪುರುಷನು ದೇವರ ಪ್ರತಿರೂಪವೂ ಪ್ರಭಾವವೂ ಆಗಿರುವದರಿಂದ ತಲೆಯನ್ನು ಮುಚ್ಚಿ ಕೊಳ್ಳಕೂಡದು; ಸ್ತ್ರೀಯಾದರೋ ಪುರುಷನ ಪ್ರಭಾವ ವಾಗಿದ್ದಾಳೆ.
ಆದರೆ ನಾವೆಲ್ಲರೂ ತೆರೆದ ಮುಖವುಳ್ಳವರಾಗಿ ದರ್ಪಣದಲ್ಲಿ ಕಾಣುವಂತೆ ಕರ್ತನ ಮಹಿಮೆಯನ್ನು ನೋಡುತ್ತಾ ಕರ್ತನ ಆತ್ಮನಿಂದಲೋ ಎಂಬಂತೆ ಅದೇ ಸಾರೂಪ್ಯಕ್ಕೆ ಮಹಿಮೆಯಿಂದ ಮಹಿಮೆಗೆ ಮಾರ್ಪಡುತ್ತೇವೆ.
ದೇವರ ಪ್ರತಿರೂಪವಾಗಿರುವ ಕ್ರಿಸ್ತನ ಪ್ರಭಾವವನ್ನು ತೋರಿಸುವ ಮಹಿಮೆಯ ಸುವಾರ್ತೆಯು ಇವರಲ್ಲಿ ಪ್ರಕಾಶಿಸಬಾರದೆಂದು ಈ ಪ್ರಪಂಚದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಮಂಕುಮಾಡಿದ್ದಾನೆ.
ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ ನೀತಿಯಲ್ಲಿಯೂ ನಿಜವಾದ ಪರಿಶುದ್ಧತೆಯಲ್ಲಿಯೂ ನಿರ್ಮಿಸಲ್ಪಟ್ಟಿದೆ.
ಆತನು ಅದೃಶ್ಯನಾದ ದೇವರ ಪ್ರತಿರೂಪನೂ ಪ್ರತಿಯೊಂದು ಸೃಷ್ಟಿಗೆ ಜ್ಯೇಷ್ಠನೂ ಆಗಿದ್ದಾನೆ.
ನೀವು ನೂತನ ಮನುಷ್ಯನನ್ನು ಧರಿಸಿಕೊಂಡವರಾಗಿದ್ದೀರಿ ಅವನನ್ನು ಸೃಷ್ಟಿಸಿದಾತನ ಹೋಲಿಕೆಯ ಮೇರೆಗೆ ಜ್ಞಾನದಲ್ಲಿ ಅವನು ನೂತನವಾಗುತ್ತಾನೆ.
ಆದರೆ ಒಬ್ಬನು ಒಂದಾನೊಂದು ಸ್ಥಳದಲ್ಲಿ--ಮನುಷ್ಯನು ಎಷ್ಟು ಮಾತ್ರದವನು? ಅವನನ್ನು ನೀನು ಯಾಕೆ ನೆನಸಬೇಕು? ಇಲ್ಲವೆ ನರಪುತ್ರನು ಎಷ್ಟರವನು? ಅವನನ್ನು ಯಾಕೆ ದರ್ಶಿಸಬೇಕು?
ಮನುಷ್ಯ ಜಾತಿಯು ಸಕಲ ವಿಧವಾದ ಮೃಗ, ಪಕ್ಷಿ, ಸರ್ಪ, ಜಲಚರಗಳನ್ನು ಹತೋಟಿಗೆ ತರುವದುಂಟು ಮತ್ತು ತಂದದ್ದುಂಟು.
ಅದೇ ನಾಲಿಗೆಯಿಂದ ತಂದೆಯಾದ ದೇವರನ್ನು ಕೊಂಡಾಡುತ್ತೇವೆ; ಆದರಿಂದಲೇ ದೇವರ ಹೋಲಿಕೆಗೆ ಸರಿಯಾಗಿ ಉಂಟುಮಾಡಲ್ಪಟ್ಟ ಮನುಷ್ಯರನ್ನು ನಾವು ಶಪಿಸುತ್ತೇವೆ.
ಪರಲೋಕದಲ್ಲಿ ಸಾಕ್ಷಿಕೊಡುವವರು ಮೂವರಿದ್ದಾರೆ; ಅವರು ಯಾರಂದರೆ ತಂದೆಯು, ವಾಕ್ಯವು ಮತ್ತು ಪರಿಶುದ್ಧಾತ್ಮನು; ಮೂವರಾಗಿರುವ ಇವರು ಒಂದಾಗಿದ್ದಾರೆ.