ದೇವರು--ಇಗೋ, ಸಮಸ್ತ ಭೂಮಿಯ ಮೇಲೆ ಇರುವ ಬೀಜವುಳ್ಳ ಪ್ರತಿಯೊಂದು ಪಲ್ಯವನ್ನೂ ಬೀಜಬಿಡುವ ಪ್ರತಿಯೊಂದು ಹಣ್ಣಿನ ಮರವನ್ನೂ ನಿಮಗೆ ಕೊಟ್ಟಿದ್ದೇನೆ. ಅದು ನಿಮಗೆ ಆಹಾರಕ್ಕಾಗಿ ರುವದು.
Cross references
ದೇವರಾದ ಕರ್ತನು ಮನುಷ್ಯ ನಿಗೆ ಆಜ್ಞಾಪಿಸಿದ್ದೇನಂದರೆ--ನೀನು ತೋಟದ ಎಲ್ಲಾ ಮರಗಳ ಫಲವನ್ನು ಯಥೇಚ್ಛವಾಗಿ ತಿನ್ನಬಹುದು;
ತಿನ್ನತಕ್ಕ ಆಹಾರ ವನ್ನೆಲ್ಲಾ ನಿನ್ನ ಕೂಡ ತೆಗೆದುಕೊಂಡು ನಿನ್ನ ಬಳಿಯಲ್ಲಿ ಕೂಡಿಸಿಕೋ; ಅದು ನಿನಗೂ ಅವುಗಳಿಗೂ ಆಹಾರ ವಾಗಿರುವದು ಎಂದು ಹೇಳಿದನು.ಹಾಗೆಯೇ ನೋಹನು ಮಾಡಿದನು; ದೇವರು ಅವನಿಗೆ ಅಪ್ಪಣೆಕೊಟ್ಟ ಪ್ರಕಾರವೇ ಅವನು ಮಾಡಿದನು.
ಚಲಿಸುವ ಜೀವಜಂತುಗಳೆಲ್ಲಾ ನಿಮಗೆ ಆಹಾರವಾಗಿ ಇರಲಿ, ಹಸುರು ಪಲ್ಯಗಳ ಹಾಗೆಯೇ ಅವುಗಳನ್ನೆಲ್ಲಾ ನಾನು ನಿಮಗೆ ಕೊಟ್ಟಿದ್ದೇನೆ.
ಅವುಗಳಿಂದ ಜನಗಳಿಗೆ ಆತನು ನ್ಯಾಯ ತೀರಿಸುತ್ತಾನೆ; ಸಮೃದ್ಧಿಯಾಗಿ ಆತನು ಆಹಾರ ಕೊಡುತ್ತಾನೆ.
ಭೂಮಿಯೂ ಅದರ ಸಮಸ್ತವೂ ಭೂಲೋಕವೂ ಅದರಲ್ಲಿ ವಾಸಿಸುವವುಗಳೂ ಕರ್ತನವುಗಳು.
ಆತನು ಪಶುಗಳಿಗೋಸ್ಕರ ಹುಲ್ಲನ್ನೂ ಮನುಷ್ಯನ ಸೇವೆ ಗೋಸ್ಕರ ಪಲ್ಯಗಳನ್ನೂ ಮೊಳಿಸುತ್ತಾನೆ; ಹೀಗೆ ಭೂಮಿಯೊಳಗಿಂದ ಆಹಾರವನ್ನು ಬರಮಾಡುತ್ತಾನೆ.
ನೀನು ಅವುಗಳ ಆಹಾರವನ್ನು ತಕ್ಕ ಕಾಲದಲ್ಲಿ ಕೊಡುವಹಾಗೆ ಅವುಗಳೆಲ್ಲಾ ನಿನ್ನನ್ನು ಕಾದುಕೊಳ್ಳುತ್ತವೆ.
ಆತನು ತನಗೆ ಭಯಪಡುವ ವರಿಗೆ ಆಹಾರ ಕೊಟ್ಟಿದ್ದಾನೆ; ಯುಗಯುಗಕ್ಕೂ ತನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವನು.
ಆಕಾಶಗಳು ಕರ್ತನವುಗಳೇ. ಆತನು ಭೂಮಿ ಯನ್ನು ನರಪುತ್ರರಿಗೆ ಕೊಟ್ಟಿದ್ದಾನೆ.
ಮನುಷ್ಯರಿಗೆಲ್ಲಾ ಆಹಾರ ಕೊಡುವಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.ಪರಲೋಕದ ದೇವರನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
ಎಲ್ಲರ ಕಣ್ಣುಗಳು ನಿನಗೆ ಕಾದುಕೊಳ್ಳುತ್ತವೆ; ನೀನು ಅವರಿಗೆ ಅವರ ಆಹಾರವನ್ನು ತಕ್ಕ ಕಾಲದಲ್ಲಿ ಕೊಡುತ್ತೀ.
ಹಿಂಸೆಗೆ ಗುರಿಯಾದವರ ನ್ಯಾಯವನ್ನು ಸ್ಥಾಪಿಸುವವನೂ ಹಸಿ ದವರಿಗೆ ಆಹಾರ ಕೊಡುವವನೂ ಆತನೇ.
ಆತನು ಪಶುಗಳಿಗೂ ಕೂಗುವ ಕಾಗೆ ಮರಿಗಳಿಗೂ ಆಹಾರ ಕೊಡುತ್ತಾನೆ.
ಬಂಡೆಗಳ ಕೋಟೆಗಳು ಅವನಿಗೆ ಆಶ್ರಯವಾಗಿ ರುವವು. ರೊಟ್ಟಿಯು ಅವನಿಗೆ ಕೊಡಲ್ಪಡುವದು, ನೀರು ತಪ್ಪುವದಿಲ್ಲ.
ಅವರು ಬಾಳನಿಗಾಗಿ ಸಿದ್ಧಮಾಡಿದ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ನಾನು ಕೊಟ್ಟು ಅವ ಳಿಗೆ ಬೆಳ್ಳಿ ಬಂಗಾರವನ್ನು ನಾನೇ ಹೆಚ್ಚಿಸಿದ್ದೇನೆಂದು ಅವಳಿಗೆ ತಿಳಿಯಲಿಲ್ಲ.
ನಮ್ಮ ಅನುದಿನದ ರೊಟ್ಟಿಯನ್ನು ಈ ದಿನವು ನಮಗೆ ದಯಪಾಲಿಸು.
ಆದಕಾರಣ ನಾನು ನಿಮಗೆ ಹೇಳುವದೇ ನಂದರೆ--ನಿಮ್ಮ ಪ್ರಾಣಕ್ಕೋಸ್ಕರ ನೀವು ಏನು ತಿನ್ನಬೇಕು ಮತ್ತು ಏನು ಕುಡಿಯಬೇಕು ಎಂಬದರ ವಿಷಯಕ್ಕಾಗಲೀ ಇಲ್ಲವೆ ನಿಮ್ಮ ಶರೀರಕ್ಕೆ ನೀವು ಏನು ಹೊದ್ದುಕೊಳ್ಳಬೇಕೆಂತಾಗಲೀ ಚಿಂತೆ ಮಾಡ ಬೇಡಿರಿ; ಊಟಕ್ಕಿಂತ ಪ್ರಾಣವೂ ಉಡುಪಿಗಿಂತ ಶರೀರವೂ ಹೆ
ಆದರೂ ಆತನು ತನ್ನ ವಿಷಯದಲ್ಲಿ ಸಾಕ್ಷಿಕೊಡದೆ ಇರಲಿಲ್ಲ; ಆಕಾಶದಿಂದ ಮಳೆಯನ್ನೂ ಸುಗ್ಗೀಕಾಲ ಗಳನ್ನೂ ದಯಪಾಲಿಸಿ ನಮಗೆ ಆಹಾರ ಕೊಟ್ಟು ನಮ್ಮ ಹೃದಯಗಳನ್ನು ಆನಂದದಿಂದ ತುಂಬಿಸಿ ಒಳ್ಳೇದನ್ನು ಮಾಡುತ್ತಾ ಬಂದನು ಎಂದು ಹೇಳಿದರು.
ಜಗತ್ತನ್ನೂ ಅದರಲ್ಲಿರುವ ಎಲ್ಲವುಗಳನ್ನೂ ಉಂಟುಮಾಡಿದ ದೇವರು ಭೂಮ್ಯಾಕಾಶಗಳ ಒಡೆಯ ನಾಗಿರುವದರಿಂದ ಕೈಯಿಂದ ಕಟ್ಟಿರುವ ಗುಡಿಗಳಲ್ಲಿ ವಾಸಮಾಡುವಾತನಲ್ಲ.
ಆತನಲ್ಲಿಯೇ ನಾವು ಜೀವಿಸುತ್ತೇವೆ ಚಲಿಸುತ್ತೇವೆ ಇರುತ್ತೇವೆ. ನಿಮ್ಮ ಸ್ವಂತ ಕವಿಗಳಲ್ಲಿಯೂ ಕೆಲವರು--ನಾವೂ ಆತನ ಸಂತಾನದವರೇ ಎಂಬ ದಾಗಿ ಹೇಳಿದ್ದಾರೆ.
ಈ ಲೋಕದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿ ಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ಭರವಸ ವನ್ನಿಡದೆ ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲ ವನ್ನೂ ಹೇರಳವಾಗಿ ದಯಪಾಲಿಸುವ ಜೀವವುಳ್ಳ ದೇವರ ಮೇಲೆ ಭರವಸವನ್ನಿಡಬೇಕೆಂತಲೂ