ಇದಲ್ಲದೆ ದೇವರು--ನೀರುಗಳ ನಡುವೆ ವಿಶಾಲ ವಿರಲಿ ಮತ್ತು ಅದು ನೀರುಗಳಿಂದ ನೀರುಗಳನ್ನು ಬೇರೆ ಮಾಡಲಿ ಅಂದನು.
Cross references
ದೇವರು--ಹಗಲನ್ನು ರಾತ್ರಿಯಿಂದ ಬೇರೆ ಮಾಡುವದಕ್ಕೆ ಆಕಾಶದ ವಿಶಾಲದಲ್ಲಿ ಬೆಳಕುಗಳಿರಲಿ; ಅವು ಹಗಲಿರುಳುಗಳನ್ನೂ ಸಮಯ ದಿನ ಸಂವತ್ಸರ ಗಳನ್ನೂ ತೋರಿಸುವದಕ್ಕೆ ಗುರುತುಗಳಾಗಿರಲಿ;
ದೇವರು--ಚಲಿಸುವ ಜೀವಜಂತುಗಳನ್ನು ನೀರು ಗಳು ಸಮೃದ್ಧಿಯಾಗಿ ಬರಮಾಡಲಿ; ಭೂಮಿಯ ಮೇಲೆ ಆಕಾಶದ ವಿಶಾಲದಲ್ಲಿ ಪಕ್ಷಿಗಳು ಹಾರಾಡಲಿ ಅಂದನು.
ನೋಹನ ಜೀವಮಾನದ ಆರುನೂರನೆಯ ವರುಷದ ಎರಡನೆಯ ತಿಂಗಳಿನ ಅಂದರೆ ಅದೇ ತಿಂಗಳಿನ ಹದಿನೇಳನೆಯ ದಿವಸದಲ್ಲಿಯೇ ಮಹಾ ಅಗಾಧದ ಬುಗ್ಗೆಗಳೆಲ್ಲಾ ಒಡೆದವು. ಆಕಾಶದ ಕಿಟಕಿ ಗಳು ತೆರೆಯಲ್ಪಟ್ಟವು.
ಉತ್ತರವನ್ನು ಶೂನ್ಯದ ಮೇಲೆ ವಿಸ್ತರಿಸುತ್ತಾನೆ; ಭೂಮಿ ಯನ್ನು ಏನೂ ಇಲ್ಲದ್ದರ ಮೇಲೆ ತೂಗ ಹಾಕಿದ್ದಾನೆ.
ನೀರನ್ನು ತನ್ನ ಮಂದವಾದ ಮೇಘಗಳಲ್ಲಿ ಕಟ್ಟುತ್ತಾನೆ. ಮೇಘವು ಅದರ ಕೆಳಗೆ ಸೀಳಿಹೋಗದು;
ಆತನ ಆತ್ಮನಿಂದ ಆಕಾಶವು ಶೃಂಗಾರವಾಗಿದೆ; ಆತನ ಕೈ ಓಡುವ ಸರ್ಪವನ್ನು ರೂಪಿಸಿತು.ಇಗೋ, ಇವು ಆತನ ಮಾರ್ಗಗಳ ಭಾಗಗಳು; ಆತನನ್ನು ಕುರಿತು ಸ್ವಲ್ಪ ಭಾಗ ಮಾತ್ರ ಕೇಳಿದ್ದೇವೆ; ಆದರೆ ಆತನ ಪರಾಕ್ರಮದ ಗುಡುಗನ್ನು ಯಾವನು ಗ್ರಹಿಸಿಕೊಳ್ಳು ವನು ಎಂಬದು.
ನೀರು ಹೊಯ್ಯುವಿಕೆಯಿಂದ ಮೋಡವನ್ನು ಭಾರಮಾಡುತ್ತಾನೆ; ಆತನು ತನ್ನ ಬೆಳಕಿನ ಮೇಘವನ್ನು ಚದರಿಸುತ್ತಾನೆ.
ಎರಕ ಹೊಯ್ದ ಕನ್ನಡಿಯ ಹಾಗೆ ಬಲವಾಗಿರುವ ಆಕಾಶವನ್ನು ಆತನ ಸಂಗಡ ಮಂಡಲವಾಗಿ ನೀನು ವಿಸ್ತರಿಸಿದ್ದೀಯೋ?
ನೀನು ಹಿಮದ ಉಗ್ರಾಣಗಳಲ್ಲಿ ಪ್ರವೇಶಿಸಿ ದಿಯೋ? ಇಲ್ಲವೆ ಆನೇಕಲ್ಲಿನ ಉಗ್ರಾಣಗಳನ್ನು ನೋಡಿದಿಯೋ?
ಆಕಾಶಗಳು ದೇವರ ಮಹಿಮೆಯನ್ನು ಸಾರುತ್ತವೆ; ಅಂತರಿಕ್ಷವು ಆತನ ಕೈ ಕೆಲಸ ವನ್ನು ತೋರಿಸುತ್ತದೆ.
ದಿನವು ದಿನಕ್ಕೆ ಮಾತನ್ನು ಉಚ್ಚರಿಸುತ್ತದೆ; ರಾತ್ರಿಯು ರಾತ್ರಿಗೆ ತಿಳುವಳಿಕೆಯನ್ನು ಅರುಹುತ್ತದೆ.
ಕರ್ತನ ವಾಕ್ಯ ದಿಂದ ಆಕಾಶವೂ ಆತನ ಬಾಯಿಯ ಉಸುರಿನಿಂದ ಅದರ ಸೈನ್ಯವೆಲ್ಲವೂ ಉಂಟಾದವು.
ಆತನು ಹೇಳಲು ಆಯಿತು; ಆಜ್ಞಾಪಿಸಲು ಅದು ಸ್ಥಿರವಾಯಿತು.
ಆತನು ವಸ್ತ್ರದ ಹಾಗೆ ಬೆಳಕನ್ನು ಧರಿಸಿಕೊಳ್ಳುವಾತನೂ ಆಕಾಶ ವನ್ನು ಪರದೆ ಹಾಗೆ ಹಾಸುವಾತನೂ ಆಗಿದ್ದಾನೆ.
ಆಕಾಶ ವನ್ನು ಜ್ಞಾನದಿಂದ ಉಂಟುಮಾಡಿದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
ಆಕಾಶಗಳ ಆಕಾಶಗಳೇ, ಆಕಾಶಗಳ ಮೇಲೆ ಇರುವ ನೀರುಗಳೇ, ಆತನನ್ನು ಸ್ತುತಿಸಿರಿ.
ನೀವು ಕರ್ತನನ್ನು ಸ್ತುತಿಸಿರಿ. ದೇವರನ್ನು ಆತನ ಪರಿಶುದ್ಧ ಆಲಯದಲ್ಲಿ ಸ್ತುತಿಸಿರಿ; ಆತನ ಬಲದ ಆಂತರಿಕ್ಷದಲ್ಲಿ ಆತನನ್ನು ಸ್ತುತಿಸಿರಿ.
ಮೋಡ ಗಳು ಮಳೆಯಿಂದ ತುಂಬಿದ್ದರೆ ಅವು ತಾವಾಗಿಯೇ ಭೂಮಿಯ ಮೇಲೆ ಬರಿದುಮಾಡಿಕೊಳ್ಳುತ್ತವೆ; ಮರವು ಉತ್ತರ ಇಲ್ಲವೆ ದಕ್ಷಿಣಕ್ಕೆ ಬಿದ್ದರೆ ಆ ಮರವು ಬಿದ್ದ ಸ್ಥಳದಲ್ಲಿಯೇ ಇರುವದು.
ನನ್ನ ಮಾತುಗಳನ್ನು ಕೇಳಲೊಲ್ಲದಿದ್ದ ತಮ್ಮ ಪಿತೃಗಳ ಅಕ್ರಮ ಗಳಿಗೆ ತಿರುಗಿಕೊಂಡಿದ್ದಾರೆ; ಬೇರೆ ದೇವರುಗಳನ್ನು ಸೇವಿಸುವದಕ್ಕೆ ಅವುಗಳ ಹಿಂದೆ ಹೋಗಿದ್ದಾರೆ; ನಾನು ಅವರ ತಂದೆಗಳ ಸಂಗಡ ಮಾಡಿದ ಒಡಂಬಡಿಕೆಯನ್ನು ಇಸ್ರಾಯೇಲಿನ ಮನೆತನದವರೂ ಯೆಹೂದದ ಮನೆ ತನದವರೂ ವಿಾರಿದ್ದಾರೆ.
ಆಗ ಯೆಹೂದದ ಪಟ್ಟಣಗಳೂ ಯೆರೂಸಲೇಮಿನ ನಿವಾಸಿಗಳೂ ಹೋಗಿ ತಾವು ಧೂಪವನ್ನರ್ಪಿಸುವ ದೇವರುಗಳಿಗೆ ಕೂಗುವರು; ಇವು ಅವರ ಕೇಡಿನ ಕಾಲದಲ್ಲಿ ಅವರನ್ನು ರಕ್ಷಿಸುವದೇ ಇಲ್ಲ.
ಕಾವಲಿನ ಅಧಿಪತಿಯಾದ ನೆಬೂಜರದಾನನು ಜನರಲ್ಲಿ ಬಡವ ರಾದ ಕೆಲವರನ್ನೂ ಪಟ್ಟಣದಲ್ಲಿ ಉಳಿದ ಜನರನ್ನೂ ಬಾಬೆಲಿನ ಅರಸನ ಕಡೆಗೆ ಬಿದ್ದವರನ್ನೂ ಸಮೂಹದಲ್ಲಿ ಮಿಕ್ಕಾದವರನ್ನೂ ಸೆರೆಯಾಗಿ ಒಯ್ದನು.
ಇಸ್ರಾಯೇಲಿನ ವಿಷಯವಾದ ಕರ್ತನ ವಾಕ್ಯದ ಭಾರವು ಆಕಾಶವನ್ನು ಹರಡಿಸು ವಾತನೂ ಭೂಮಿಯ ಅಸ್ತಿವಾರವನ್ನು ಹಾಕುವಾತನೂ ಮನುಷ್ಯನ ಆತ್ಮವನ್ನು ಅವನೊಳಗೆ ರೂಪಿಸುವಾತನೂ ಆದ ಕರ್ತನು ಹೇಳುವದೇನಂದರೆ--