Cross references
ಅದೇ ದಿನದಲ್ಲಿ ಕರ್ತನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು--ಐಗುಪ್ತದ ನದಿಯಿಂದ ಮಹಾನದಿಯಾದ ಯೂಫ್ರೇಟೀಸ್ ನದಿಯ ವರೆಗೆ ವಾಸಿಸುವ
ತರುವಾಯ ಅಬ್ರಹಾಮನು (ತನ್ನ ಹೆಂಡತಿಯ) ಶವದ ಬಳಿಯಿಂದ ಎದ್ದು ಹೇತನ ಮಕ್ಕಳ ಸಂಗಡ ಮಾತನಾಡಿದ್ದೇನಂದರೆ--
ಸರ್ವಶಕ್ತನಾದ ದೇವರು ನಿನ್ನನ್ನು ಆಶೀರ್ವದಿಸಿ ನೀನು ಜನಸಮುದಾಯವಾಗುವಂತೆ ನಿನ್ನನ್ನು ಅಭಿವೃದ್ಧಿ ಮಾಡಿ ಹೆಚ್ಚಿಸಲಿ,
ಜೆಬೂಲೂನನು ಸಮುದ್ರದ ರೇವಿನಲ್ಲಿ ವಾಸಿಸು ವನು; ಅವನು ಹಡಗುಗಳ ರೇವೂ ಆಗಿರುವನು. ಅವನ ಮೇರೆಯು ಚೀದೋನಿಗೆ ಮುಟ್ಟುವದು.
ಆದಕಾರಣ ಅವರನ್ನು ಐಗುಪ್ತ್ಯರ ಕೈಯೊ ಳಗಿಂದ ಬಿಡುಗಡೆ ಮಾಡುವದಕ್ಕೂ ಆ ದೇಶದಿಂದ ಬಿಡಿಸಿ ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೇ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡಿಸಿ ಕೊಂಡು ಹೋಗುವದಕ್ಕೂ ಇಳಿದು ಬಂದಿದ್ದೇನೆ.
ನಾನು ಈ ಹೊತ್ತು ನಿನಗೆ ಆಜ್ಞಾಪಿಸುವದನ್ನು ಅನುಸರಿಸು; ಇಗೋ, ಅಮೋರಿಯರನ್ನೂ ಕಾನಾನ್ಯ ರನ್ನೂ ಹಿತ್ತಿಯರನ್ನೂ ಪೆರಿಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ನಿನ್ನ ಎದುರಿನಿಂದ ಹೊರಡಿಸಿ ಬಿಡುತ್ತೇನೆ.
ನೀನು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಿ ಅವರಿಗೆ ಹೇಳಬೇಕಾದದ್ದೇ ನಂದರೆ--ನೀವು ಕಾನಾನ್ ದೇಶದೊಳಗೆ ಬರುವಾಗ ನಿಮಗೆ ಸ್ವಾಸ್ತ್ಯಕ್ಕಾಗಿ ಬರುವ ಕಾನಾನ್ ದೇಶವು ಅದರ ಮೇರೆಗಳ ಪ್ರಕಾರ ಹೀಗಿರಬೇಕು.
ಕರ್ತನು ಅವರನ್ನು ಇಸ್ರಾಯೇಲಿನ ಕೈಯಲ್ಲಿ ಒಪ್ಪಿಸಿಕೊಟ್ಟನು. ಅವರು ಅವರನ್ನು ಹೊಡೆದು ದೊಡ್ಡ ಚೀದೋನಿನವರೆಗೂ ಮಿಸ್ರೆಫೋತ್ಮಯೀಮಿನ ವರೆಗೂ ಮೂಡಲಲ್ಲಿರುವ ಮಿಚ್ಪೆಯ ತಗ್ಗಿನ ವರೆಗೂ ಹಿಂದಟ್ಟಿ ಅವರಲ್ಲಿ ಒಬ್ಬನ ನ್ನಾದರೂ ಉಳಿಸದೆ ಅವರನ್ನು ಹೊಡೆದುಬಿಟ್ಟರು.
ಅರಣ್ಯದಲ್ಲಿಯೂ ದಕ್ಷಿಣದಲ್ಲಿಯೂ ಯೆಹೋಶುವನು ಇಸ್ರಾಯೇಲಿನ ಗೋತ್ರಗಳಿಗೆ ಸ್ವಾಸ್ತ್ಯವಾಗಿ ಪಾಲು ಇಟ್ಟ ದೇಶವಾದಂಥ ಹಿತ್ತಿಯರ ಅಮೋರಿಯರ ಕಾನಾನ್ಯರ ಪೆರಿಜ್ಜೀಯರ ಹಿವ್ವೀಯರ ಯೆಬೂಸಿಯರ ದೇಶದಲ್ಲಿದ್ದ ಯೆಹೋಶು ವನೂ ಇಸ್ರಾಯೇಲ್ ಮಕ್ಕಳೂ ಹೊಡೆದುಬಿಟ್ಟ ಅರಸರು ಯಾರಂದರೆ--
ಆಗ ದಾವೀದನು ಹಿತ್ತಿಯನಾದ ಅಹೀಮೆಲೆಕನನ್ನೂ ಚೆರೂಯಳ ಮಗ ನಾಗಿರುವ ಯೋವಾಬನ ಸಹೋದರನಾದ ಅಬೀಷೈ ಯನ್ನೂ ನೋಡಿ--ನನ್ನ ಸಂಗಡ ದಂಡಿನಲ್ಲಿ ಪ್ರವೇಶಿ ಸಲು ಬರುವವನು ಯಾರೆಂದು ಕೇಳಿದನು; ಅದಕ್ಕೆ ಅಬೀಷೈಯು--ನಾನು ನಿನ್ನ ಸಂಗಡ ಬರುವೆನು ಅಂದನು.
ಆ ಸ್ತ್ರೀಯು ಮಹಾಸೌಂದರ್ಯ ರೂಪವುಳ್ಳವಳಾಗಿದ್ದಳು. ಆಗ ದಾವೀದನು ಆ ಸ್ತ್ರೀ ಯಾರೆಂದು ಕೇಳುವದಕ್ಕೆ--ಕಳುಹಿಸಿದಾಗ ಒಬ್ಬನು--ಅವಳು ಹಿತ್ತಿಯನಾದ ಊರೀಯನ ಹೆಂಡತಿಯಾಗಿರುವ ಎಲೀಯಾಮನ ಮಗಳಾದ ಬತ್ಷೆಬೆಯಲ್ಲವೋ ಅಂದನು.
ಅಲ್ಲಿಂದ ಗಿಲ್ಯಾದಿಗೂ ತಖ್ತೀಮ್ ಹೊಜೀಯ ದೇಶಕ್ಕೂ ಅಲ್ಲಿಂದ ದಾನ್ನಿಗೂ ಅಲ್ಲಿಂದ ಸುತ್ತಿಕೊಂಡು ಚೀದೋನಿಗೂ ಬಂದರು.
ಕಾನಾನನು ತನ್ನ ಚೊಚ್ಚಲ ಮಗನಾದ ಸೀದೋನ ನನ್ನೂ
ಚೀದೋನೇ, ನಾಚಿಕೆ ಪಡು, ಸಮುದ್ರವು, ಸಮುದ್ರದುರ್ಗವೂ--ನಾವು ಪ್ರಸವವೇದನೆ ಪಡುವದಿಲ್ಲ, ಹೆರುವದಿಲ್ಲ; ಇಲ್ಲವೆ ಮಕ್ಕಳನ್ನು ಬೆಳೆಸುವದಿಲ್ಲ ಕನ್ಯಾಸ್ತ್ರೀಯರನ್ನು ಸಾಕಿ ಸಲ ಹಲಿಲ್ಲ ಎಂದು ಹೇಳಿದೆಯಷ್ಟೆ.
ಚೀದೋ ನಿನ ಅರ್ವಾದಿನ ನಿವಾಸಿಗಳು ನಿನಗೆ ಹುಟ್ಟು ಹಾಕುವ ವರಾಗಿದ್ದಾರೆ; ತೂರೇ, ನಿನ್ನಲ್ಲಿನ ವಿವೇಕಿಗಳೇ ನಿನ್ನ ನಾವಿಕರು.