ಕಾನಾನ್ಯರ ಮೇರೆಯು ಸೀದೋನಿ ನಿಂದ ಗೆರಾರಿನ ಮಾರ್ಗವಾಗಿ ಗಾಜಾದ ವರೆಗೆ ಸೊದೋಮ್ ಗೊಮೋರ ಅದ್ಮಾ ಚೆಬೋಯಿಮ್ ಮಾರ್ಗವಾಗಿ ಲೆಷಾದ ವರೆಗೂ ಇರುತ್ತದೆ.
Cross references
ಲೋಟನು ತನ್ನ ಕಣ್ಣುಗಳನ್ನು ಎತ್ತಿ ಯೊರ್ದನಿನ ಮೈದಾನವನ್ನೆಲ್ಲಾ ನೋಡಿದನು. ಯಾಕಂದರೆ ಕರ್ತನು ಸೊದೋಮನ್ನೂ ಗೊಮೋರ ವನ್ನೂ ನಾಶಮಾಡುವದಕ್ಕಿಂತ ಮುಂಚೆ ಅದೆಲ್ಲಾ ಚೋಗರಿನ ವರೆಗೆ ನೀರಾವರಿಯಾಗಿದ್ದು ಕರ್ತನ ತೋಟದಂತೆಯೂ ಐಗುಪ್ತದೇಶದಂತೆಯೂ ಇತ್ತು.
ಇವರು ಸೊದೋಮಿನ ಅರಸನಾದ ಬೆರಗನೂ ಗೊಮೋರದ ಅರಸನಾದ ಬಿರ್ಶಗನೂ ಅದ್ಮಾಹದ ಅರಸನಾದ ಶಿನಾಬನಿಗೂ ಚೆಬೋಯಾಮಿನ ಅರಸನಾದ ಶಮೇಬರನಿಗೂ ಬೇಲ ಎಂಬ ಚೋಗರದ ಅರಸನಿಗೂ ವಿರೋಧವಾಗಿ ಯುದ್ದಮಾಡಿದರು.
ಅದೇ ದಿನದಲ್ಲಿ ಕರ್ತನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು--ಐಗುಪ್ತದ ನದಿಯಿಂದ ಮಹಾನದಿಯಾದ ಯೂಫ್ರೇಟೀಸ್ ನದಿಯ ವರೆಗೆ ವಾಸಿಸುವ
ಕರ್ತನು--ಸೊದೋಮ್ ಗೊಮೋರಗಳ ಕೂಗು ದೊಡ್ಡದಾಗಿರುವದರಿಂದಲೂ ಅವರ ಪಾಪವು ಘೋರವಾಗಿರುವದರಿಂದಲೂ
ಆಗ ಕರ್ತನು ಸೊದೋಮ್ ಮತ್ತು ಗೊಮೋರದ ಮೇಲೆ ಗಂಧಕವನ್ನೂ ಬೆಂಕಿಯನ್ನೂ ಆಕಾಶದಿಂದ ಸುರಿಸಿದನು.
ಅಬ್ರಹಾಮನು ಅಲ್ಲಿಂದ ದಕ್ಷಿಣ ದೇಶದ ಕಾದೇಶಿಗೆ ಪ್ರಯಾಣಮಾಡಿ, ಶೂರಿಗೆ ಮಧ್ಯದಲ್ಲಿ ವಾಸಿಸಿ ಗೆರಾರಿನಲ್ಲಿ ಪ್ರವಾಸಿಯಾಗಿದ್ದನು.
ಅಬ್ರಹಾಮನ ದಿನಗಳಲ್ಲಿ ಬಂದ ಮೊದಲನೆಯ ಬರವಲ್ಲದೆ ದೇಶದಲ್ಲಿ ಮತ್ತೊಂದು ಬರ ಬಂದಿತು. ಆಗ ಇಸಾಕನು ಗೆರಾರಿನಲ್ಲಿದ್ದ ಫಿಲಿಷ್ಟಿಯರ ಅರಸನಾದ ಅಬೀಮೆಲೆಕನ ಬಳಿಗೆ ಹೋದನು.
ನೀನು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಿ ಅವರಿಗೆ ಹೇಳಬೇಕಾದದ್ದೇ ನಂದರೆ--ನೀವು ಕಾನಾನ್ ದೇಶದೊಳಗೆ ಬರುವಾಗ ನಿಮಗೆ ಸ್ವಾಸ್ತ್ಯಕ್ಕಾಗಿ ಬರುವ ಕಾನಾನ್ ದೇಶವು ಅದರ ಮೇರೆಗಳ ಪ್ರಕಾರ ಹೀಗಿರಬೇಕು.
ಹಾಗೆ ಹಚರೀಮಿನ ಅಜ್ಹದ ಪರ್ಯಂತರ ವಾಸ ವಾಗಿದ್ದ ಅವ್ವಿಯರನ್ನು ಕಫ್ತೋರಿಂದ ಹೊರಟ ಕಫ್ತೋರ್ಯರು ನಾಶಮಾಡಿ ಅವರ ಬದಲಾಗಿ ವಾಸಿಸಿದರು.)
ಮಹೋನ್ನತನು ಜನಾಂಗಗಳಿಗೆ ಸ್ವಾಸ್ತ್ಯ ಹಂಚಿ ಆತನು ಆದಾಮನ ಮಕ್ಕಳನ್ನು ವಿಂಗಡಿಸಿದಾಗ ಇಸ್ರಾ ಯೇಲ್ ಮಕ್ಕಳ ಲೆಕ್ಕದ ಪ್ರಕಾರ ಜನಗಳ ಮೇರೆಗಳನ್ನು ಇಟ್ಟನು.
ಆದರೆ ಯೊರ್ದನಿಗೆ ಪಶ್ಚಿಮದಲ್ಲಿ ಲೆಬನೋ ನಿನ ತಗ್ಗಿನಲ್ಲಿರುವ ಬಾಲಾದ್ ಮೊದಲುಗೊಂಡು ಸೇಯಾರಿಗೆ ಏರಿಹೋಗುವ ಹಾಲಾಕ್ ಬೆಟ್ಟದ ವರೆಗೆ ಬೆಟ್ಟಗಳಲ್ಲಿಯೂ ತಗ್ಗುಗಳಲ್ಲಿಯೂ ಬೈಲಿನಲ್ಲಿಯೂ ನೀರು ಬುಗ್ಗೆಗಳ ಸ್ಥಳಗಳಲ್ಲಿಯೂ
ಅವರ ಯಾಜಕನಾದ ಎಲ್ಲಾಜಾರನೂ ನೂನನ ಮಗನಾದ ಯೆಹೋಶುವನೂ ಇಸ್ರಾಯೇಲ್ ಮಕ್ಕಳ ಗೋತ್ರಗಳ ತಂದೆಗಳ ಮುಖ್ಯಸ್ಥರೂ ಅವರಿಗೆ ಬಾಧ್ಯತೆಯಾಗಿ ಕೊಡಲು ಕಾನಾನ್ ದೇಶದಲ್ಲಿ ಇಸ್ರಾಯೇಲ್ ಮಕ್ಕಳು ಬಾಧ್ಯ ವಾಗಿ ಹೊಂದಿದ ದೇಶಗಳು ಇವೇ.
ಗಾಜಾದ ಪ್ರದೇಶದ ಮಟ್ಟಿಗೂ ಭೂಮಿಯ ಫಲವನ್ನು ಕೆಡಿಸಿಬಿಟ್ಟು ಇಸ್ರಾಯೇಲಿನಲ್ಲಿ ಆಹಾರವಾದರೂ ಕುರಿದನ ಕತ್ತೆಗಳಾದರೂ ಉಳಿಯ ಗೊಡಿಸಲಿಲ್ಲ.
ಆಗ ಸಂಸೋನನು ಗಾಜಕ್ಕೆ ಹೋಗಿ ಅಲ್ಲಿ ಒಬ್ಬ ಜಾರಸ್ತ್ರೀಯನ್ನು ಕಂಡು ಅವಳ ಬಳಿಗೆ ಹೋದನು.
ಮತ್ತೊಂದು ಗುಂಪು ಬೇತ್ಹೋರೋನಿನ ಮಾರ್ಗ ವಾಗಿ ಹೋಯಿತು; ಬೇರೊಂದು ಗುಂಪು ಅರಣ್ಯಕ್ಕೆ ಎದುರಾಗಿರುವ ಜೆಬೋಯಾಮ್ ತಗ್ಗಿಗೆದುರಾದ ಮೇರೆಯ ಮಾರ್ಗವಾಗಿ ಹೋಯಿತು.
ಆಗ ಕರ್ತನು ಕೂಷಿಯರನ್ನು ಆಸನ ಮುಂದೆಯೂ ಯೆಹೂ ದದವರ ಮುಂದೆಯೂ ಹೊಡೆದನು. ಆದದರಿಂದ ಕೂಷಿಯರು ಓಡಿಹೋದರು.
ಅದರ ಗಡಿಯ ವರೆಗೆ ಅದನ್ನು ತೆಗೆದುಕೊಳ್ಳುವಿಯೋ? ಅದರ ಮನೆಗೆ ಹೋಗುವ ಹಾದಿಗಳನ್ನು ಗ್ರಹಿಸಿದಿಯೋ?
ಆತನು ಸಮುದ್ರದ ಮೇಲೆ ತನ್ನ ಕೈಚಾಚಿ ರಾಜ್ಯಗಳನ್ನು ನಡುಗಿಸಿದ್ದಾನೆ; ಕರ್ತನು ವ್ಯಾಪಾರದ ಪಟ್ಟಣವನ್ನು (ಕಾನಾನ್) ಅದರ ದುರ್ಗ ಗಳನ್ನು ನಾಶಮಾಡಬೇಕೆಂದು ಆಜ್ಞಾಪಿಸಿದ್ದಾನೆ.
ಇದಲ್ಲದೆ ಕಿರ್ಯತ್ಯಾರೀಮಿನವನಾದ ಶೆಮಾ ಯನ ಮಗನಾದ ಊರೀಯನೆಂಬವನು ಸಹ ಕರ್ತನ ಹೆಸರಿನಲ್ಲಿ ಪ್ರವಾದಿಸುತ್ತಿರಲಾಗಿ ಯೆರೆವಿಾಯನ ಎಲ್ಲಾ ಮಾತುಗಳ ಪ್ರಕಾರ ಈ ಪಟ್ಟಣಕ್ಕೂ ಈ ದೇಶಕ್ಕೂ ವಿರೋಧವಾಗಿ ಪ್ರವಾದಿಸಿದನು.
ಎಫ್ರಾಯಾಮೇ, ನಾನು ನಿನ್ನನ್ನು ಬಿಟ್ಟು ಬಿಡುವದು ಹೇಗೆ? ಇಸ್ರಾಯೇಲೇ, ನಿನ್ನನ್ನು ನಾನು ಬಿಡಿಸುವದು ಹೇಗೆ? ನಾನು ನಿನ್ನನ್ನು ಅದ್ಮದ ಹಾಗೆ ಮಾಡುವದು ಹೇಗೆ? ನಾನು ನಿನ್ನನ್ನು ಜೆಬೋಯಾಮಿನ ಹಾಗೆ ಸ್ಥಾಪಿಸುವದು ಹೇಗೆ? ನನ್ನ ಹೃದಯವು ನನ್ನಲ್ಲಿ ತಿರುಗಿಕೊಂಡಿದೆ. ನನ್ನ ಪಶ್ಚಾತ್ತಾಪಗಳು ಒಟ್ಟಿಗೆ ಹತ್ತಿ ಕೊಂಡಿವೆ.