ಕರ್ತನು--ಇಗೋ, ಜನವು ಒಂದೇ; ಅವರೆಲ್ಲರಿಗೆ ಭಾಷೆಯೂ ಒಂದೇ. ಈಗ ಅವರು ಇದನ್ನು ಮಾಡಲಾರಂಭಿಸಿದ್ದಾರೆ; ಇನ್ನು ಮುಂದೆ ಅವರು ಮಾಡುವದಕ್ಕೂ ಊಹಿಸುವದಕ್ಕೂ ಅಡ್ಡಿ ಯಾಗದು.
Cross references
ಇದ ಲ್ಲದೆ ಕರ್ತನಾದ ದೇವರು--ಇಗೋ, ಮನುಷ್ಯನು ಒಳ್ಳೇದರ ಕೆಟ್ಟದರ ಭೇದವನ್ನು ತಿಳಿದು ನಮ್ಮಲ್ಲಿ ಒಬ್ಬನಂತಾದನು; ಈಗ ಅವನು ಕೈಚಾಚಿ ಜೀವವೃಕ್ಷದ ಫಲವನ್ನು ತೆಗೆದು ತಿಂದು ಎಂದೆಂದಿಗೂ ಬದುಕ ಬಾರದು ಅಂದನು.
ಮನುಷ್ಯನ ದುಷ್ಟತ್ವವು ಭೂಮಿಯಲ್ಲಿ ಹೆಚ್ಚಿದ್ದನ್ನೂ ಅವನ ಹೃದಯದ ಆಲೋಚನೆಗಳ ಕಲ್ಪನೆಗಳೆಲ್ಲಾ ಯಾವಾಗಲೂ ಬರೀ ಕೆಟ್ಟವುಗಳೆಂದೂ ದೇವರು ನೋಡಿದನು.
ಆಗ ಕರ್ತನಿಗೆ ಅದರ ಸುವಾಸನೆಯು ಗಮಗಮಿಸಲು ತನ್ನ ಹೃದಯದಲ್ಲಿ--ಇನ್ನು ಮೇಲೆ ನಾನು ಮನುಷ್ಯನಿಗೋಸ್ಕರ ಭೂಮಿಯನ್ನು ಶಪಿಸುವ ದಿಲ್ಲ; ಯಾಕಂದರೆ ಮನುಷ್ಯನ ಹೃದಯದ ಕಲ್ಪನೆಯು ಅವನ ಚಿಕ್ಕತನದಿಂದಲೇ ಕೆಟ್ಟದ್ದು. ನಾನು ಈಗ ಮಾಡಿದ ಪ್ರಕಾರ ಇನ್ನು ಮೇಲೆ ಜೀವಿಗಳನ್ನೆಲ್ಲಾ ಸಂಹರಿಸುವದಿಲ್ಲ.ಭೂಮಿಯು ಇರುವ ವರೆಗೆ ಬಿತ್ತುವ ಕಾಲವೂ ಕೊಯ್ಯುವ ಕಾಲವೂ ತಂಪೂ ಶೆಕೆಯೂ ಬೇಸಿಗೆಯೂ ಚಳಿಗಾಲವೂ ಹಗಲೂ ರಾತ್ರಿಯೂ ನಿಂತು ಹೋಗವು ಎಂದು ಅಂದು ಕೊಂಡನು.
ಈ ಮೂವರು ನೋಹನ ಮಕ್ಕಳು. ಇವರಿಂದ ಭೂಮಿಯಲ್ಲೆಲ್ಲಾ ಜನರು ವಿಸ್ತರಿಸಿದರು.
ಆಗ ಭೂಮಿಯಲ್ಲೆಲ್ಲಾ ಒಂದೇ ಭಾಷೆ, ಒಂದೇ ಮಾತು ಇತ್ತು.
ನೀವು ಹೋಗಿ ನಿಮಗೆ ನೀವೇ ಆರಿಸಿಕೊಂಡ ದೇವರುಗಳಿಗೆ ಕೂಗಿರಿ; ಅವರು ನಿಮ್ಮ ಸಂಕಟದ ಕಾಲದಲ್ಲಿ ನಿಮ್ಮನ್ನು ರಕ್ಷಿಸಲಿ ಅಂದನು.
ಮಧ್ಯಾಹ್ನದಲ್ಲಿ ಎಲೀಯನು ಅವ ರನ್ನು ಗೇಲಿಮಾಡಿ ಅವರಿಗೆ--ದೊಡ್ಡ ಶಬ್ದದಿಂದ ಕೂಗಿರಿ, ಯಾಕಂದರೆ ಅವನು ಒಬ್ಬ ದೇವರು; ಇಲ್ಲವೆ ಮಾತನಾಡುತ್ತಿದ್ದಾನು; ಇಲ್ಲವೆ ಹಿಂದಟ್ಟುತ್ತಿದ್ದಾನು.; ಇಲ್ಲವೆ ಪ್ರಯಾಣದಲ್ಲಿದ್ದಾನು; ಇಲ್ಲವೆ ಅವನು ನಿದ್ರೆ ಮಾಡುತ್ತಿದ್ದಾನು; ಈಗ ಅವನು ಎಚ್ಚರಿಸಲ್ಪಡಬೇಕು ಅಂದನು.
ಅನ್ಯಜನರು ಕೋಪೋದ್ರೇಕಗೊಳ್ಳುವದೂ ಪ್ರಜೆಗಳು ವ್ಯರ್ಥವಾದದ್ದನ್ನು ಯೋಚಿಸುವದೂ ಯಾಕೆ?
ಓ ಯೌವನಸ್ಥನೇ, ನಿನ್ನ ಯೌವನದಲ್ಲಿ ಸಂತೋಷಪಡು. ನಿನ್ನ ಯೌವನದ ದಿನಗಳಲ್ಲಿ ನಿನ್ನ ಹೃದಯವು ನಿನ್ನನ್ನು ಆನಂದಪಡಿಸಲಿ; ನೀನು ನಿನ್ನ ಹೃದಯದ ಮಾರ್ಗಗಳಲ್ಲಿಯೂ ನಿನ್ನ ಕಣ್ಣುಗಳ ನೋಟ ದಲ್ಲಿಯೂ ನಡೆ; ಆ ಎಲ್ಲಾ ಸಂಗತಿಗಳಿಗಾಗಿ ದೇವರು ನಿನ್ನನ್ನು ನ್ಯಾಯತೀರ್ಪಿಗೆ ತರುವನೆಂದು ತಿಳಿದುಕೋ.ಆದಕಾರಣ ನಿನ್ನ ಹೃದಯದಿಂದ ದುಃಖವನ್ನು ತೆಗೆದು ಹಾಕು; ನಿನ್ನ ಶರೀರದಿಂದ ಕೆಟ್ಟದ್ದನ್ನು ತೆಗೆದುಬಿಡು; ಬಾಲ್ಯವೂ ಯೌವನವೂ ವ್ಯರ್ಥವಾಗಿವೆ.
ಆತನು ತನ್ನ ಬಾಹುಬಲವನ್ನು ತೋರಿಸಿ ಗರ್ವಿಷ್ಠರನ್ನು ಅವರ ಹೃದಯದ ಕಲ್ಪನೆಗಳ ನಿಮಿತ್ತವಾಗಿ ಅವರನ್ನು ಚದರಿಸಿಬಿಟ್ಟಿದ್ದಾನೆ;
ಆತನು ಒಂದೇ ರಕ್ತದಿಂದ ಎಲ್ಲಾ ಜನಾಂಗಗಳ ಮನುಷ್ಯರನ್ನು ಭೂಮುಖದ ಮೇಲೆಲ್ಲಾ ವಾಸಿಸುವದಕ್ಕಾಗಿ ಉಂಟು ಮಾಡಿದನು.