ಲೋಟನು ತನ್ನ ಕಣ್ಣುಗಳನ್ನು ಎತ್ತಿ ಯೊರ್ದನಿನ ಮೈದಾನವನ್ನೆಲ್ಲಾ ನೋಡಿದನು. ಯಾಕಂದರೆ ಕರ್ತನು ಸೊದೋಮನ್ನೂ ಗೊಮೋರ ವನ್ನೂ ನಾಶಮಾಡುವದಕ್ಕಿಂತ ಮುಂಚೆ ಅದೆಲ್ಲಾ ಚೋಗರಿನ ವರೆಗೆ ನೀರಾವರಿಯಾಗಿದ್ದು ಕರ್ತನ ತೋಟದಂತೆಯೂ ಐಗುಪ್ತದೇಶದಂತೆಯೂ ಇತ್ತು.
Cross references
ಕರ್ತನಾದ ದೇವರು ಏದೆನಿನಲ್ಲಿ ಪೂರ್ವ ದಿಕ್ಕಿಗೆ ತೋಟವನ್ನು ಮಾಡಿ ತಾನು ರೂಪಿಸಿದ ಮನುಷ್ಯನನ್ನು ಅದರಲ್ಲಿ ಇಟ್ಟನು.
ಸ್ತ್ರೀಯು--ಆ ಮರದ ಫಲವು ಆಹಾರಕ್ಕೆ ಒಳ್ಳೇದಾಗಿಯೂ ಕಣ್ಣಿಗೆ ರಮ್ಯವಾಗಿಯೂ ಒಬ್ಬನನ್ನು ಜ್ಞಾನಿಯನ್ನಾಗಿ ಮಾಡುವದಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಅದೆ ಎಂದು ನೋಡಿ ಅದರ ಫಲವನ್ನು ತೆಗೆದುಕೊಂಡು ತಿಂದಳು; ತನ್ನ ಸಂಗಡ ಇದ್ದ ತನ್ನ ಗಂಡನಿಗೂ ಕೊಟ್ಟಳು; ಅವನೂ ತಿಂದನು.
ಆಗ ದೇವಕುಮಾರರು ಮನುಷ್ಯ ಕುಮಾರ್ತೆಯರ ಸೌಂದರ್ಯವನ್ನು ನೋಡಿ ತಾವು ಆರಿಸಿಕೊಂಡವರನ್ನೆಲ್ಲಾ ತಮಗೆ ಹೆಂಡತಿಯ ರನ್ನಾಗಿ ಮಾಡಿಕೊಂಡರು.
ಇವರು ಸೊದೋಮಿನ ಅರಸನಾದ ಬೆರಗನೂ ಗೊಮೋರದ ಅರಸನಾದ ಬಿರ್ಶಗನೂ ಅದ್ಮಾಹದ ಅರಸನಾದ ಶಿನಾಬನಿಗೂ ಚೆಬೋಯಾಮಿನ ಅರಸನಾದ ಶಮೇಬರನಿಗೂ ಬೇಲ ಎಂಬ ಚೋಗರದ ಅರಸನಿಗೂ ವಿರೋಧವಾಗಿ ಯುದ್ದಮಾಡಿದರು.
ಸೊದೋಮಿನ ಅರಸನೂ ಗೊಮೋರದ ಅರಸನೂ ಅದ್ಮಾಹದ ಅರಸನೂ ಚೆಬೋಯಾಮಿನ ಅರಸನೂ ಚೋಗ ರೆಂಬ ಬೇಲದ ಅರಸನೂ ಹೊರಟು
ಅವರನ್ನು ಹೊರಗೆ ತಂದ ಮೇಲೆ ಆತನು--ನಿನ್ನ ಪ್ರಾಣಕ್ಕೋಸ್ಕರ ತಪ್ಪಿಸಿಕೋ; ನಿನ್ನ ಹಿಂದೆ ನೋಡಬೇಡ. ಸುತ್ತಲಿರುವ ಯಾವ ಮೈದಾನದಲ್ಲಿಯೂ ನಿಂತುಕೊಳ್ಳಬೇಡ, ನೀನು ನಾಶ ವಾಗದ ಹಾಗೆ ತಪ್ಪಿಸಿಕೊಂಡು ಬೆಟ್ಟಕ್ಕೆ ಹೋಗು ಅಂದನು.
ಆಗ ಕರ್ತನು ಸೊದೋಮ್ ಮತ್ತು ಗೊಮೋರದ ಮೇಲೆ ಗಂಧಕವನ್ನೂ ಬೆಂಕಿಯನ್ನೂ ಆಕಾಶದಿಂದ ಸುರಿಸಿದನು.
ಹೀಗೆ ಆತನು ಆ ಪಟ್ಟಣಗಳನ್ನೂ ಎಲ್ಲಾ ಮೈದಾನವನ್ನೂ ಪಟ್ಟಣಗಳ ಎಲ್ಲಾ ನಿವಾಸಿಗಳನ್ನೂ ಭೂಮಿಯ ಮೇಲೆ ಬೆಳೆದ ಬೆಳೆಯನ್ನೂ ಹಾಳುಮಾಡಿದನು.
ಇದಲ್ಲದೆ ರೂಬೇನನ ಮಕ್ಕಳಿಗೂ ಗಾದನ ಮಕ್ಕಳಿಗೂ ಬಹಳ ಅಧಿಕವಾದ ಪಶುಗಳು ಇದ್ದವು; ಅವರು ಯಗ್ಜೇರೂ ಗಿಲ್ಯಾದೂ ಎಂಬ ದೇಶ ಗಳನ್ನು ನೋಡಿದಾಗ ಅಗೋ, ಆ ಸ್ಥಳವು ಪಶುಗಳ ಸ್ಥಳವಾಗಿತ್ತು.
ದಕ್ಷಿಣವನ್ನೂ ಖರ್ಜೂರಗಳ ಪಟ್ಟಣ ವಾದ ಯೆರಿಕೋವಿನ ತಗ್ಗೆಂಬ ಬೈಲನ್ನೂ ಚೋಗ ರೂರಿನ ಪರ್ಯಂತರಕ್ಕೆ ತೋರಿಸಿದನು.
ಯೊರ್ದ ನಿಗೆ ಸೇರಿದ ಬೈಲಾದ ಸುಕ್ಕೋತಿಗೂ ಚಾರೆತಾನಿಗೂ ನಡುವೆ ಇರುವ ಜೇಡು ಮಣ್ಣಿನ ಸ್ಥಳದಲ್ಲಿ ಅರಸನು ಅವುಗಳನ್ನು ಎರಕ ಹೊಯ್ಸಿದನು.
ಫಲ ವುಳ್ಳ ಭೂಮಿಯನ್ನು ಬಂಜರಾಗಿಯೂ ಅದರ ನಿವಾಸಿ ಗಳ ಕೆಟ್ಟತನಕ್ಕೋಸ್ಕರ ಮಾರ್ಪಡಿಸುತ್ತಾನೆ.
ನನ್ನ ಹೃದಯವು ಮೋವಾಬಿನ ನಿಮಿತ್ತ ಕೂಗು ತ್ತದೆ; ಅಲ್ಲಿಂದ ಪಲಾಯನವಾದವರು ಮೂರು ವರುಷದ ಕಡಸಿನಂತೆ ಚೋಯರಿಗೆ ಓಡಿಹೋಗು ವರು; ಲೂಹೀಥ್ ದಿಣ್ಣೆಯನ್ನು ಅಳುತ್ತಾ ಹತ್ತುತ್ತಾರೆ; ಯಾಕಂ ದರೆ ಹೊರೊನಯಿಮಿನ ದಾರಿಯಲ್ಲಿ ನಡೆಯುತ್ತಾ ನಾಶವಾದೆವಲ್ಲಾ ಎಂದು ಸ್ವರಗೈಯು ತ್ತಾರೆ.
ಕರ್ತನು ಚೀಯೋನನ್ನು ಆದರಿಸುವನು; ಆತನು ಅದರ ಹಾಳಾದ ಸ್ಥಳಗ ಳನ್ನು ಸುಧಾರಿಸುವನು; ಅದರ ಅರಣ್ಯವನ್ನು ಏದೆನ್ ಹಾಗೆಯೂ ಮರುಭೂಮಿಯನ್ನು ಕರ್ತನ ತೋಟದ ಹಾಗೆಯೂ ಮಾಡುವನು. ಅಲ್ಲಿ ಆನಂದವೂ ಉಲ್ಲಾ ಸವೂ ಉಪಕಾರ ಸ್ತುತಿಯೂ ಇಂಪಾದ ಸ್ವರವೂ ಕಂಡುಬರುವವು.
ಯೆಹೂದದ ಅರಸನಾದ ಚಿದ್ಕೀಯನ ಆಳಿಕೆಯ ಆರಂಭದಲ್ಲಿ ಪ್ರವಾದಿಯಾದ ಯೆರೆವಿಾಯನಿಗೆ ಕರ್ತ ನಿಂದ ಏಲಾಮಿಗೆ ವಿರೋಧವಾಗಿ ಉಂಟಾದ ವಾಕ್ಯವು ಏನಂದರೆ--
ದೇವರ ತೋಟ ವಾದ ಏದೆನಿನಲ್ಲಿ ನೀನಿದ್ದಿ. ಮಾಣಿಕ್ಯ, ಪುಷ್ಯರಾಗ, ಪಚ್ಚೆ, ಪೀತರತ್ನ, ವಜ್ರ, ವೈಡೂರ್ಯ, ನೀಲ ಗೋಮೇ ಧಿಕ, ಕೆಂಪು, ಸ್ಪಟಿಕ, ಚಿನ್ನ ಈ ಅಮೂಲ್ಯವಾದವು ಗಳಿಂದ ಭೂಷಿತವಾಗಿದ್ದಿ. ನಿನ್ನಲ್ಲಿದ್ದ ದಮ್ಮಡಿಗಳೂ ಕೊಳಲುಗಳೂ ಇವುಗಳ ಕೆಲಸವು ನಿನ್ನಲ್ಲಿದ್ದು ನಿನ್ನ ಸೃಷ್ಟಿಯ ದಿನದಲ್ಲಿ ಸಿದ್ಧವಾದವು.
ದೇವರ ತೋಟದ ದೇವದಾರುಗಳು ಅವನನ್ನು ಮರೆಮಾಡಲಿಲ್ಲ; ತುರಾಯಿ ಮರಗಳು ಅವನ ಕೊಂಬೆಗಳಿಗೆ ಸಮ ವಾಗಲಿಲ್ಲ; ಆಲದ ಮರಗಳು ಅವನ ರೆಂಬೆಗಳಷ್ಟೂ ಇಲ್ಲ; ಆ ದೇವರ ತೋಟದ ಯಾವುದೇ ಮರವು ಇವನ ಸೌಂದರ್ಯಕ್ಕೆ ಸಮವಾಗಲಿಲ್ಲ.
ಅವರ ಮುಂದೆ ಬೆಂಕಿ ದಹಿಸುತ್ತದೆ; ಅವರ ಹಿಂದೆ ಜ್ವಾಲೆ ಸುಡುತ್ತದೆ; ಅವರ ಮುಂದೆ ದೇಶವು ಏದೆನ್ ತೋಟದ ಹಾಗಿದೆ; ಅವರ ಹಿಂದೆ ಹಾಳಾದ ಕಾಡು; ಹೌದು, ಅವುಗಳಿಗೆ ಯಾವದೂ ತಪ್ಪಿಸಿಕೊಳ್ಳಲಾರದು.
ಲೋಕವನ್ನಾಗಲಿ ಲೋಕದಲ್ಲಿರುವವುಗಳ ನ್ನಾಗಲಿ ಪ್ರೀತಿಸಬೇಡಿರಿ. ಯಾವನಾದರೂ ಲೋಕ ವನ್ನು ಪ್ರೀತಿಸಿದರೆ ತಂದೆಯ ಪ್ರೀತಿಯು ಅವನಲ್ಲಿಲ್ಲ.