ಆಗ ಅಬ್ರಾಮನು ತನ್ನ ಗುಡಾರವನ್ನು ತೆಗೆದುಕೊಂಡು ಹೆಬ್ರೋನಿನ ಲ್ಲಿರುವ ಮಮ್ರೆಯ ಮೈದಾನಕ್ಕೆ ಬಂದು ಅಲ್ಲಿ ವಾಸವಾಗಿದ್ದನು. ಅವನು ಅಲ್ಲಿ ಕರ್ತನಿಗೆ ಬಲಿ ಪೀಠವನ್ನು ಕಟ್ಟಿದನು.
Cross references
ನೋಹನು ಕರ್ತನಿಗೆ ಬಲಿಪೀಠವನ್ನು ಕಟ್ಟಿ ಶುದ್ಧವಾದ ಎಲ್ಲಾ ಪಶು ಪಕ್ಷಿಗಳಿಂದಲೂ (ಕೆಲವನ್ನು) ತೆಗೆದು ಬಲಿಪೀಠದ ಮೇಲೆ ದಹನಬಲಿಗಳನ್ನು ಅರ್ಪಿಸಿದನು.
ಕರ್ತನು ಅಬ್ರಾಮನಿಗೆ ಕಾಣಿಸಿಕೊಂಡು--ನಿನ್ನ ಸಂತತಿಗೆ ನಾನು ಈ ದೇಶವನ್ನು ಕೊಡುವೆನು ಅಂದನು. ಆಗ ಅವನು ಅಲ್ಲಿ ತನಗೆ ಕಾಣಿಸಿಕೊಂಡ ಕರ್ತನಿಗೆ ಬಲಿಪೀಠವನ್ನು ಕಟ್ಟಿದನು.
ಮೊದಲು ಅವನು ಮಾಡಿದ್ದ ಬಲಿಪೀಠದ ಸ್ಥಳಕ್ಕೂ ಬಂದನು. ಅಲ್ಲಿ ಅಬ್ರಾಮನು ಕರ್ತನ ಹೆಸರನ್ನು ಹೇಳಿಕೊಂಡನು.
ತಪ್ಪಿಸಿಕೊಂಡವನೊಬ್ಬನು ಹೋಗಿ ಇಬ್ರಿಯ ನಾದ ಅಬ್ರಾಮನಿಗೆ ಇದನ್ನು ತಿಳಿಸಿದನು. ಇವನು ಎಷ್ಕೋಲನಿಗೂ ಆನೇರನಿಗೂ ಸಹೋದರನಾಗಿದ್ದು ಅಮೋರಿಯನಾದ ಮಮ್ರೆಯ ಮೈದಾನದಲ್ಲಿ ವಾಸ ವಾಗಿದ್ದನು. ಇವರು ಅಬ್ರಾಮನೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದರು.
ಕರ್ತನು ಮಮ್ರೇಯ ಮೈದಾನಗಳಲ್ಲಿ ಅಬ್ರಹಾಮನಿಗೆ ಕಾಣಿಸಿಕೊಂಡನು. ಅವನು ಮಧ್ಯಾಹ್ನದ ವೇಳೆ ಗುಡಾರದ ಬಾಗಲಿನಲ್ಲಿ ಕೂತುಕೊಂಡಿದ್ದನು.
ಸಾರಳು ಕಾನಾನ್ ದೇಶದಲ್ಲಿರುವ ಹೆಬ್ರೋನ್ ಎಂಬ ಕಿರ್ಯತರ್ಬದಲ್ಲಿ ಸತ್ತಳು. ಅಬ್ರಹಾಮನು ಸಾರಳಿಗೋಸ್ಕರ ಗೋಳಾಡುವದಕ್ಕೂ ಅಳುವದಕ್ಕೂ ಬಂದನು.
ಯಾಕೋಬನು ಮಮ್ರೆಯಲ್ಲಿದ್ದ ತನ್ನ ತಂದೆ ಯಾದ ಇಸಾಕನ ಬಳಿಗೆ ಅಬ್ರಹಾಮನೂ ಇಸಾಕನೂ ಪ್ರವಾಸವಾಗಿದ್ದ ಹೆಬ್ರೋನ್ ಎಂಬ ಅರ್ಬದ ಪಟ್ಟಣಕ್ಕೆ ಬಂದನು.
ಯಾಕೋಬನು ಅವನಿಗೆ--ಹೋಗಿ ನಿನ್ನ ಸಹೋದರರ ಕ್ಷೇಮಸಮಾಚಾರವನ್ನೂ ಮಂದೆಗಳ ಕ್ಷೇಮಸಮಾಚಾರವನ್ನೂ ತಿಳಿದುಕೊಂಡು ಬಂದು ನನಗೆ ತಿಳಿಸು ಎಂದು ಹೇಳಿ ಹೆಬ್ರೋನ್ ತಗ್ಗಿನಿಂದ ಕಳುಹಿಸಿದನು. ಆಗ ಅವನು ಶೆಕೆಮಿಗೆ ಬಂದನು.
ಅವರು ದಕ್ಷಿಣದ ಕಡೆಯಲ್ಲಿ ಹೆಬ್ರೋನಿನ ವರೆಗೆ ಬಂದರು; ಅಲ್ಲಿ ಅನಾಕನ ಮಕ್ಕಳಾದ ಅಹೀಮನ ಶೇಷೈಯನೂ ತಲ್ಮೈಯನೂ ಇದ್ದರು. ಹೆಬ್ರೋನು ಐಗುಪ್ತದೇಶದ ಚೋವನಿಗಿಂತ ಏಳು ವರುಷಗಳ ಮೊದಲು ಕಟ್ಟಲ್ಪ ಟ್ಟಿತ್ತು.
ಆಗ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬ ನನ್ನು ಆಶೀರ್ವದಿಸಿ ಅವನಿಗೆ ಹೆಬ್ರೋನನ್ನು ಬಾಧ್ಯತೆ ಯಾಗಿ ಕೊಟ್ಟನು.
ಇದಲ್ಲದೆ ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬ ನಿಗೆ ಅನಾಕನ ತಂದೆಯ ಕಿರ್ಯಾತ್ಅರ್ಬ ಎಂಬ ಹೆಬ್ರೋನನ್ನು ಯೂದನ ಮಕ್ಕಳ ನಡುವೆ ಪಾಲಾಗಿ ಕೊಟ್ಟನು.
ಇದಾದ ಮೇಲೆ ದಾವೀದನು ಕರ್ತನನ್ನು -- ಯೆಹೂದದ ಪಟ್ಟಣಗಳಲ್ಲಿ ಯಾವದಕ್ಕಾದರೂ ಹೋಗಲೋ ಎಂದು ಕೇಳಿದನು. ಕರ್ತನು ಅವನಿಗೆ--ಹೋಗು ಅಂದನು. ದಾವೀ ದನು--ನಾನು ಎಲ್ಲಿಗೆ ಹೋಗಲಿ ಎಂದು ಕೇಳಿದಕ್ಕೆ ಆತನು -- ಹೆಬ್ರೋನಿಗೆ ಅಂದನು.
ನಾನು ಕರ್ತನನ್ನು ಯಾವಾಗಲೂ ನನ್ನ ಮುಂದೆ ಇಟ್ಟುಕೊಂಡಿದ್ದೇನೆ. ಆತನು ನನ್ನ ಬಲಗಡೆಯಲ್ಲಿ ಇರುವದರಿಂದ ನಾನು ಕದಲೆನು.
ಆದದರಿಂದ ಪುರುಷರು ಎಲ್ಲಾ ಸ್ಥಳಗಳಲ್ಲಿ ಕೋಪವೂ ಸಂದೇಹವೂ ಇಲ್ಲದೆ ಪವಿತ್ರವಾದ ಕೈಗಳನ್ನೆತ್ತಿ ಪ್ರಾರ್ಥಿಸಬೇಕೆಂದು ನಾನು ಅಪೇಕ್ಷಿಸು ತ್ತೇನೆ.