ಅಬ್ರಾಮನು ದನಗಳಲ್ಲಿಯೂ ಬೆಳ್ಳಿಯಲ್ಲಿಯೂ ಬಂಗಾರದಲ್ಲಿಯೂ ಬಹು ಧನವಂತನಾಗಿದ್ದನು.
Cross references
ಅಬ್ರಹಾಮನು ಮುದುಕನೂ ದಿನಗತಿಸಿದವನೂ ಆಗಿದ್ದನು. ಕರ್ತನು ಅಬ್ರಹಾಮ ನನ್ನು ಎಲ್ಲಾದರಲ್ಲಿ ಆಶೀರ್ವದಿಸಿದನು.
ಕರ್ತನು ನನ್ನ ಯಜಮಾನನನ್ನು ಬಹಳವಾಗಿ ಆಶೀರ್ವದಿಸಿದ್ದರಿಂದ ಅವನು ದೊಡ್ಡವನಾದನು. ಆತನು ಅವನಿಗೆ ಕುರಿದನಗಳನ್ನೂ ಬೆಳ್ಳಿಬಂಗಾರವನ್ನೂ ದಾಸದಾಸಿಯರನ್ನೂ ಒಂಟೆಗಳನ್ನೂ ಕತ್ತೆಗಳನ್ನೂ ಕೊಟ್ಟಿದ್ದಾನೆ.
ಇದಲ್ಲದೆ ಇಸಾಕನು ಆ ದೇಶದಲ್ಲಿ ಬಿತ್ತಿದ ವರುಷದಲ್ಲಿಯೇ ನೂರರಷ್ಟು ಫಲವನ್ನು ಹೊಂದಿ ದನು. ಕರ್ತನು ಅವನನ್ನು ಆಶೀರ್ವದಿಸಿದನು.
ಅವನು ಅತಿ ದೊಡ್ಡವನಾಗುವ ವರೆಗೆ ಕ್ರಮೇಣ ಅಭಿವೃದ್ಧಿಯಾಗುತ್ತಾ ಬಂದನು.
ಅವನಿಗೆ ಕುರಿ ಮಂದೆಗಳೂ ದನಗಳ ಹಿಂಡೂ ಬಹಳ ಮಂದಿ ಸೇವಕರೂ ಇದ್ದರು. ಆದದರಿಂದ ಫಿಲಿಷ್ಟಿಯರು ಅವನ ಮೇಲೆ ಹೊಟ್ಟೇಕಿಚ್ಚುಪಟ್ಟರು.
ಈ ಪ್ರಕಾರ ಯಾಕೋಬನು ಅತ್ಯಧಿಕವಾಗಿ ಅಭಿವೃದ್ಧಿಯಾದದ್ದರಿಂದ ಬಹು ಕುರಿಗಳೂ ದಾಸದಾಸಿ ಯರೂ ಒಂಟೆಗಳೂ ಕತ್ತೆಗಳೂ ಅವನಿಗೆ ದೊರೆತವು.
ನಿನ್ನ ದೇವ ರಾದ ಕರ್ತನನ್ನು ಜ್ಞಾಪಕಮಾಡಿಕೊಳ್ಳಬೇಕು; ಈ ಹೊತ್ತು ಇರುವಂತೆ ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ತನ್ನ ಒಡಂಬಡಿಕೆಯನ್ನು ಸ್ಥಾಪಿಸುವ ಹಾಗೆ ಆಸ್ತಿಯನ್ನು ಸಂಪಾದಿಸುವ ಬಲವನ್ನು ನಿನಗೆ ಕೊಡುವಾತನು ಆತನೇ.
ಕರ್ತನು ಬಡತನವನ್ನು ಐಶ್ವರ್ಯ ವನ್ನು ಕೊಡುವಾತನೂ ತಗ್ಗಿಸುವಾತನೂ ಉನ್ನತಮಾಡು ವಾತನೂ ಆಗಿದ್ದಾನೆ.
ಅವನ ಸಂಪತ್ತು--ಏಳು ಸಾವಿರ ಕುರಿಗಳು, ಮೂರು ಸಾವಿರ ಒಂಟೆಗಳು, ಐನೂರು ಜೋಡು ಎತ್ತುಗಳು, ಐನೂರು ಹೆಣ್ಣು ಕತ್ತೆಗಳೂ ಮತ್ತು ಬಹು ಸೇವಕರ ಸಮೂಹವಿತ್ತು. ಹೀಗೆ ಆ ಮನುಷ್ಯನು ಎಲ್ಲಾ ಮೂಡಣದವರಿಗಿಂತಲೂ ಬಹು ಸ್ವಾಸ್ತ್ಯವುಳ್ಳವ ನಾಗಿದ್ದನು.
ನೀನು ಅವನಿಗೂ ಅವನ ಮನೆಗೂ ಅವನಿಗೆ ಉಂಟಾದ ಎಲ್ಲವುಗಳಿಗೂ ಸುತ್ತಲೂ ಬೇಲಿ ಕಟ್ಟಿದೆಯಲ್ಲಾ? ಅವನ ಕೈ ಕೆಲಸವನ್ನು ಆಶೀರ್ವದಿಸಿದಿ; ಅವನ ಸಂಪತ್ತು ದೇಶದಲ್ಲಿ ಹಬ್ಬಿಯದೆ.
ಆತನಿಗೆ ಪರಿಚಿತನಾಗಿ ಸಮಾಧಾನದಿಂದಿರು; ಇದರಿಂದ ನಿನಗೆ ಮೇಲು ಬರುವದು.
ನೀವು ಕರ್ತನನ್ನು ಸ್ತುತಿಸಿರಿ. ಕರ್ತನಿಗೆ ಭಯಪಟ್ಟು ಆತನ ಆಜ್ಞೆಗಳಲ್ಲಿ ಬಹಳವಾಗಿ ಸಂತೋಷಿಸುವ ಮನುಷ್ಯನು ಧನ್ಯನು.
ನಿನ್ನ ಆಸ್ತಿಯಿಂದಲೂ ಅಭಿವೃದ್ಧಿಯ ಎಲ್ಲಾ ಪ್ರಥಮ ಫಲಗಳಿಂದಲೂ ಕರ್ತನನ್ನು ಸನ್ಮಾನಿಸು.
ಕರ್ತನ ಆರ್ಶೀ ವಾದವು ಐಶ್ವರ್ಯವನ್ನುಂಟು ಮಾಡುವದು. ಅದ ರೊಂದಿಗೆ ಆತನು ಯಾವ ದುಃಖವನ್ನೂ ಸೇರಿಸುವ ದಿಲ್ಲ.
ಆದರೆ ಮೊದಲು ನೀವು ದೇವರ ರಾಜ್ಯವನ್ನೂ ಆತನ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವುಗಳು ಕೂಡಿಸಲ್ಪಡುವವು.ಆದಕಾರಣ ನಾಳೆಗೋಸ್ಕರ ಚಿಂತೆ ಮಾಡಬೇಡಿರಿ; ಯಾಕಂದರೆ ನಾಳಿನ ದಿನವು ತನಗೆ ಸಂಬಂಧ ಪಟ್ಟವುಗಳಿಗಾಗಿ ತಾನೇ ಚಿಂತಿಸುವದು. ಆ ದಿನಕ್ಕೆ ಅದರ ಕಾಟ ಸಾಕು.
ದೇಹಸಾಧನೆಯು ಸ್ವಲ್ಪ ಮಟ್ಟಿಗೆ ಲಾಭಕರವಾಗಿದೆ, ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಲಾಭಕರವಾದದ್ದು; ಆದಕ್ಕೆ ಈಗಲೂ ಮುಂದೆ ಬರುವದಕ್ಕೂ ಜೀವಾಗ್ದಾನ ಉಂಟು.