ಅಬ್ರಾಮನು ಲೋಟನಿಗೆ--ನನಗೂ ನಿನಗೂ ನನ್ನ ದನಕಾಯುವವರಿಗೂ ನಿನ್ನ ದನಕಾಯುವವರಿಗೂ ಜಗಳವಿರಬಾರದು; ನಾವು ಸಹೋದರರು.
Cross references
ತೆರಹನ ವಂಶಾವಳಿಗಳು ಇವೇ; ತೆರಹನಿಂದ ಅಬ್ರಾಮನೂ ನಾಹೋರನೂ ಹಾರಾನನೂ ಹುಟ್ಟಿದರು. ಹಾರಾನನಿಂದ ಲೋಟನು ಹುಟ್ಟಿದನು.
ತನ್ನ ಸಹೋದರನು ಸೆರೆ ಯಾಗಿ ಒಯ್ಯಲ್ಪಟ್ಟನೆಂದು ಕೇಳಿ ಅಬ್ರಾಮನು ತನ್ನ ಮನೆಯಲ್ಲಿ ಹುಟ್ಟಿ ಶಿಕ್ಷಿತರಾಗಿದ್ದ ಮುನ್ನೂರ ಹದಿನೆಂಟು ಸೇವಕರನ್ನು ಯುದ್ಧಕ್ಕೆ ಸಿದ್ಧಮಾಡಿ ದಾನಿನ ವರೆಗೆ ಹಿಂದಟ್ಟಿ
ಅವನು ಅವರಿಗೆ--ಮಾರ್ಗದಲ್ಲಿ ಜಗಳವಾಡಬೇಡಿರಿ ಎಂದು ಅವರಿಗೆ ಹೇಳಿದ ಮೇಲೆ ಅವರು ಹೋದರು.
ಎರಡನೇ ದಿನ ಅವನು ಮತ್ತೆ ಹೊರಗೆ ಹೋದಾಗ ಇಗೋ, ಇಬ್ರಿಯರಾದ ಇಬ್ಬರು ಮನುಷ್ಯರು ಜಗಳವಾಡು ತ್ತಿದ್ದರು. ತಪ್ಪು ಮಾಡಿದವನಿಗೆ ಅವನು--ಯಾಕೆ ನಿನ್ನ ಜೊತೆಯವನನ್ನು ಹೊಡೆಯುತ್ತೀ ಅಂದನು.
ಆಗ ಎಬೆದನ ಮಗನಾದ ಗಾಳನೂ ಅವನ ಸಹೋದರರೂ ಶೆಕೆಮಿಗೆ ದಾಟಿ ಬಂದರು; ಆದರೆ ಶೆಕೆಮಿನ ಜನರು ಅವನಲ್ಲಿ ಭರವಸವಿಟ್ಟು
ಇಗೋ, ಸಹೋದರರು ಒಂದಾಗಿ ವಾಸಮಾಡುವದು ಎಷ್ಟೋಒಳ್ಳೇದು! ಎಷ್ಟೋ ರಮ್ಯವಾದದ್ದು!
ಮೃದುವಾದ ಪ್ರತ್ಯುತ್ತರವು ಕೋಪವನ್ನು ತಿರುಗಿಸಿಬಿಡುತ್ತದೆ; ತೀಕ್ಷ್ಣವಾದ ಮಾತು ಗಳು ಕೋಪವನ್ನು ಎಬ್ಬಿಸುತ್ತವೆ.
ಕೋಪಿಷ್ಠನು ವಿವಾದವನ್ನು ಎಬ್ಬಿಸುವನು; ದೀರ್ಘ ಶಾಂತನು ವಿವಾದವನ್ನು ಶಮನಪಡಿಸುತ್ತಾನೆ.
ಕಲಹವನ್ನು ತಡೆಯುವವನು ಮಾನಕ್ಕೆ ಯೋಗ್ಯನು; ಪ್ರತಿಯೊಬ್ಬ ಬುದ್ಧಿಹೀನನು ತಲೆಹಾಕು ತ್ತಾನೆ.
ಸಮಾಧಾನ ಮಾಡುವವರು ಧನ್ಯರು; ಯಾಕಂದರೆ ಅವರು ದೇವರ ಮಕ್ಕಳೆಂದು ಕರೆಯಲ್ಪಡುವರು.
ಮರುದಿನ ತಾವು ಹೊಡೆದಾಡಿ ಕೊಳ್ಳುತ್ತಿರುವಾಗ ಅವನು ಕಾಣಿಸಿಕೊಂಡು--ಅಯ್ಯಗಳಿರಾ, ನೀವು ಸಹೋದರರಲ್ಲವೇ; ನೀವೇಕೆ ಒಬ್ಬರಿಗೊಬ್ಬರು ಅನ್ಯಾ ಯಮಾಡುತ್ತೀರಿ ಎಂದು ಹೇಳಿ ಅವರನ್ನು ಸಮಾಧಾನ ಪಡಿಸಬೇಕೆಂದಿದ್ದನು.
ಸಹೋದರ ಪ್ರೀತಿಯಿಂದ ಒಬ್ಬರಿಗೊಬ್ಬರು ಕರುಣಾ ವಾತ್ಸಲ್ಯವುಳ್ಳ ವರಾಗಿರ್ರಿ; ಸನ್ಮಾನಿಸುವದರಲ್ಲಿ ಒಬ್ಬರಿಗಿಂತ ಒಬ್ಬರು ಮುಂದಾಗಿರ್ರಿ.
ಆದರೆ ಸಹೋದರನು ಸಹೋದರನ ಮೇಲೆ ವ್ಯಾಜ್ಯ ವಾಡುವದಲ್ಲದೆ ಅವಿಶ್ವಾಸಿಗಳ ಮುಂದೆಯೂ ಹೋಗುತ್ತಾನೆ.
ನೀವು ಪೂರ್ಣ ವಿನಯ ಸಾತ್ವಿಕತ್ವ ಗಳಿಂದಲೂ ದೀರ್ಘಶಾಂತಿಯಿಂದಲೂ ಕೂಡಿದವ ರಾಗಿ ಪ್ರೀತಿಯಿಂದ ಒಬ್ಬರನ್ನೊಬ್ಬರು ಸಹಿಸಿಕೊಳ್ಳಿರಿ.
ಗುಣಗುಟ್ಟದೆ ಯೂ ವಿವಾದವಿಲ್ಲದೆಯೂ ಎಲ್ಲವನ್ನು ಮಾಡಿರಿ.
ಆದರೆ ಸಹೋದರ ಪ್ರೀತಿಯ ವಿಷಯದಲ್ಲಿ ನಿಮಗೆ ಬರೆಯುವದು ಅವಶ್ಯವಿಲ್ಲ; ಒಬ್ಬರನ್ನೊಬ್ಬರು ಪ್ರೀತಿಸ ಬೇಕೆಂಬ ಉಪದೇಶವನ್ನು ನೀವೇ ದೇವರಿಂದ ಹೊಂದಿದವರಾಗಿದ್ದೀರಿ.
ಎಲ್ಲರ ಸಂಗಡ ಸಮಾಧಾನದಿಂದಿರುವದನ್ನೂ ಪರಿಶುದ್ಧತೆಯನ್ನೂ ಅನುಸರಿಸಿರಿ; ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವದಿಲ್ಲ.
ಸಹೋದರ ಪ್ರೀತಿಯು ನೆಲೆಯಾಗಿರಲಿ.
ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸುಲಭವಾಗಿ ಒಪ್ಪಿಕೊಳ್ಳುವಂಥದು, ಕರುಣೆಯಿಂದಲೂ ಒಳ್ಳೇ ಫಲಗಳಿಂದಲೂ ತುಂಬಿರುವಂಥದ್ದು ಆಗಿದೆ; ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ.
ನೀವು ಆತ್ಮನ ಮೂಲಕ ಸತ್ಯಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡದ್ದರಿಂದ ನಿಷ್ಕಪಟ ವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರ ಲಾಗಿ ಒಬ್ಬರನ್ನೊಬ್ಬರು ಶುದ್ಧವಾದ ಹೃದಯದಿಂದಲೂ ಆಸಕ್ತಿಯಿಂದಲೂ ಪ್ರೀತಿಸಿರಿ.
ಎಲ್ಲರನ್ನು ಸನ್ಮಾನಿ ಸಿರಿ, ಸಹೋದರರನ್ನು ಪ್ರೀತಿಸಿರಿ, ದೇವರಿಗೆ ಭಯ ಪಡಿರಿ, ಅರಸನನ್ನು ಸನ್ಮಾನಿಸಿರಿ.
ಕಡೆಗೆ ನೀವೆಲ್ಲರೂ ಏಕ ಮನಸ್ಸುಳ್ಳವರಾಗಿರ್ರಿ; ಒಬ್ಬರಿಗೊಬ್ಬರು ಕರುಣೆಯುಳ್ಳವರಾಗಿದ್ದು ಸಹೋದರ ರಂತೆ ಪ್ರೀತಿಸಿರಿ; ಕನಿಕರವೂ ದೀನ ಭಾವವೂ ಉಳ್ಳವರಾಗಿರ್ರಿ.
ಎಲ್ಲವುಗಳಿಗೆ ಮಿಗಿಲಾಗಿ ನಿಮ್ಮ ನಿಮ್ಮೊಳಗೆ ಯಥಾರ್ಥವಾದ ಪ್ರೀತಿಯಿರಲಿ; ಯಾಕಂದರೆ ಪ್ರೀತಿಯು ಎಷ್ಟೋ ಪಾಪಗಳನ್ನು ಮುಚ್ಚುತ್ತದೆ.
ಭಕ್ತಿಗೆ ಸಹೋದರ ಕರುಣೆಯನ್ನೂ ಸಹೋದರ ಕರುಣೆಗೆ ಪ್ರೀತಿಯನ್ನೂ ಕೂಡಿಸಿರಿ.
ಬೆಳಕಿನಲ್ಲಿದ್ದೇನೆಂದು ಹೇಳಿಕೊಂಡು ತನ್ನ ಸಹೋದರನನ್ನು ದ್ವೇಷಿಸುವವನು ಈವರೆಗೂ ಕತ್ತಲೆಯಲ್ಲಿದ್ದಾನೆ.
ನಾವಂತೂ ಸಹೋದರರನ್ನು ಪ್ರೀತಿಸುವವರಾಗಿರುವದರಿಂದ ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದೇವೆಂಬದು ನಮಗೆ ಗೊತ್ತಾಗಿದೆ. ತನ್ನ ಸಹೋದರನನ್ನು ಪ್ರೀತಿಸದೆ ಇರುವವನು ಮರಣದಲ್ಲೇ ಇದ್ದಾನೆ.
ಪ್ರಿಯರೇ, ನಾವು ಒಬ್ಬರನ್ನೊಬ್ಬರು ಪ್ರೀತಿಸೋಣ. ಯಾಕಂದರೆ ಪ್ರೀತಿಯು ದೇವರಿಂದಾಗಿದೆ. ಪ್ರೀತಿ ಮಾಡುವ ಪ್ರತಿಯೊಬ್ಬನು ದೇವರಿಂದ ಹುಟ್ಟಿದವನೂ ದೇವರನ್ನು ಬಲ್ಲವನೂ ಆಗಿದ್ದಾನೆ.
ಒಬ್ಬನು--ನಾನು ದೇವರನ್ನು ಪ್ರೀತಿಸುತ್ತೇನೆ ಎಂದು ಹೇಳಿ ತನ್ನ ಸಹೋದರನನ್ನು ಹಗೆ ಮಾಡಿದರೆ ಅವನು ಸುಳ್ಳುಗಾರನಾಗಿದ್ದಾನೆ. ಯಾಕಂದರೆ ತಾನು ಕಾಣುವ ಸಹೋದರನನ್ನು ಪ್ರೀತಿಸದವನು ಕಾಣದಿರುವ ದೇವರನ್ನು ಅವನು ಹೇಗೆ ಪ್ರೀತಿಸಾನು?ದೇವರನ್ನು ಪ್ರೀತಿಸುವವನು ತನ್ನ ಸಹೋದರನನ್ನೂ ಪ್ರೀತಿಸಬೇಕೆಂಬ ಈ ಆಜ್ಞೆ ಯನ್ನು ನಾವು ಆತನಿಂದ ಹೊಂದಿದ್ದೇವೆ.