ನಿನ್ನ ಶತ್ರುಗಳನ್ನು ನಿನ್ನ ಕೈಗೆ ಒಪ್ಪಿಸಿದ ಮಹೋನ್ನತ ನಾದ ದೇವರು ಸ್ತುತಿಹೊಂದಲಿ ಅಂದನು. ಅಬ್ರಾ ಮನು ಅವನಿಗೆ ಎಲ್ಲಾದರಲ್ಲಿ ದಶಮಭಾಗವನ್ನು ಕೊಟ್ಟನು.
Cross references
ಶೇಮನ ದೇವ ರಾದ ಕರ್ತನು ಸ್ತುತಿಸಲ್ಪಡಲಿ; ಕಾನಾನನು ಅವನಿಗೆ ದಾಸನಾಗಿರಲಿ.
ನನ್ನ ಯಜಮಾನನಾದ ಅಬ್ರಹಾಮನ ಕರ್ತನಾದ ದೇವರು ಸ್ತುತಿಹೊಂದಲಿ; ಆತನು ನನ್ನ ಯಜಮಾನನನ್ನು ಅನಾಥನನ್ನಾಗಿ ಬಿಡದೆ ತನ್ನ ಕೃಪೆಯನ್ನೂ ಸತ್ಯವನ್ನೂ ತೋರಿಸಿದ್ದಾನೆ. ನಾನು ಮಾರ್ಗದಲ್ಲಿರುವಾಗ ಕರ್ತನು ನನ್ನನ್ನು ನನ್ನ ಯಜಮಾನನ ಸಹೋದರನ ಮನೆಗೆ ನಡಿಸಿದ್ದಾನೆ ಅಂದನು.
ಇದಲ್ಲದೆ ಸ್ತಂಭವಾಗಿ ನಾನು ನಿಲ್ಲಿಸಿದ ಈ ಕಲ್ಲು ದೇವರ ಮನೆಯಾಗಿರುವದು. ಆಗ ನೀನು ನನಗೆ ಕೊಡುವದ ರಲ್ಲೆಲ್ಲಾ ಹತ್ತರಲ್ಲಿ ಒಂದು ಭಾಗವನ್ನು ನಿನಗೆ ನಾನು ಖಂಡಿತವಾಗಿ ಕೊಡುವೆನು ಅಂದನು.
ಬೆಳೆ ಬಂದಾಗ ಐದನೆಯ ಪಾಲನ್ನು ಫರೋಹನಿಗೆ ಕೊಡಬೇಕು. ನಾಲ್ಕು ಪಾಲು ಹೊಲದ ಬೀಜಕ್ಕಾ ಗಿಯೂ ನಿಮ್ಮ ಆಹಾರಕ್ಕಾಗಿಯೂ ನಿಮ್ಮ ಮಕ್ಕಳ ಆಹಾರಕ್ಕಾಗಿಯೂ ನಿಮಗೆ ಇರಲಿ ಅಂದನು.
ಹೀಗೆ ಯೋಸೇಫನು ಫರೋಹನಿಗೆ ಐದನೆಯ ಪಾಲು ಆಗಬೇಕೆಂಬದನ್ನು ಐಗುಪ್ತದ ಭೂಮಿಗೆ ಇಂದಿನ ವರೆಗೂ ನೇಮಕಮಾಡಿ ಸ್ಥಾಪಿಸಿ ದನು. ವೈದಿಕರ ಭೂಮಿಯು ಮಾತ್ರ ಫರೋಹ ನದಾಗಲಿಲ್ಲ.
ಭೂಮಿಯ ಬೀಜದಲ್ಲಾಗಲಿ ಮರದ ಫಲದ ಲ್ಲಾಗಲಿ ಹತ್ತನೇ ಪಾಲೆಲ್ಲಾ ಕರ್ತನದೇ. ಅದು ಕರ್ತನಿಗೆ ಪರಿಶುದ್ಧವಾದದ್ದು.
ಪ್ರಥಮ ಫಲಗಳ ದಿವಸದಲ್ಲಿಯೂ ನೀವು ಕರ್ತ ನಿಗೆ ನಿಮ್ಮ ವಾರಗಳಲ್ಲಿ ಹೊಸ ಆಹಾರದ ಅರ್ಪಣೆ ಯನ್ನು ಅರ್ಪಿಸುವಾಗ ನಿಮಗೆ ಪರಿಶುದ್ಧವಾದ ಸಭೆ ಇರಬೇಕು; ಯಾವ ಕೆಲಸವನ್ನಾದರೂ ಮಾಡಬಾರದು.
ನಿನ್ನ ಧಾನ್ಯ ದ್ರಾಕ್ಷಾರಸ ಎಣ್ಣೆಗಳ ದಶಮಾಂಶ ವನ್ನೂ ನಿನ್ನ ಪಶು ಕುರಿಗಳ ಚೊಚ್ಚಲಾದವುಗಳನ್ನೂ ನೀನು ಮಾಡುವ ಎಲ್ಲಾ ಪ್ರಮಾಣಗಳನ್ನೂ ಉಚಿತ ವಾದ ಕಾಣಿಕೆಗಳನ್ನೂ ಕೈ ಎತ್ತುವ ಅರ್ಪಣೆಯನ್ನೂ ನಿನ್ನ ಬಾಗಲುಗಳಲ್ಲಿ ತಿನ್ನಬೇಡ.
ನೀನು ನಿನ್ನ ದೇವರಾದ ಕರ್ತ ನಿಗೆ ಎಂದೆಂದಿಗೂ ಭಯಪಡುವದನ್ನು ಕಲಿಯುವ ಹಾಗೆ ನಿನ್ನ ಧಾನ್ಯ ದ್ರಾಕ್ಷರಸ ಎಣ್ಣೆಗಳ ದಶಮಾಂಶ ವನ್ನೂ ನಿನ್ನ ಪಶು ಕುರಿಗಳಲ್ಲಿ ಚೊಚ್ಚಲುಗಳನ್ನೂ ನಿನ್ನ ದೇವರಾದ ಕರ್ತನ ಮುಂದೆ ಆತನು ತನ್ನ ಹೆಸರನ್ನು ಇರಿಸುವದಕ್ಕೆ ಆದುಕೊಂಡ ಸ್ಥಳದಲ್ಲಿ ತಿನ್ನಬೇಕು.
ಮೂರು ವರುಷಗಳ ಅಂತ್ಯದಲ್ಲಿ ಅಂದರೆ ಅದೇ ವರುಷದಲ್ಲಿ ನಿನಗೆ ಸಿಕ್ಕಿದ ಹುಟ್ಟುವಳಿಯ ದಶಮ ಭಾಗವನ್ನೆಲ್ಲಾ ಹೊರಗೆ ತಂದು ನಿನ್ನ ಬಾಗಲುಗಳಲ್ಲಿ ಇಟ್ಟುಬಿಡಬೇಕು.ಆಗ (ನಿನ್ನ ಸಂಗಡ ಪಾಲನ್ನೂ ಸ್ವಾಸ್ತ್ಯವನ್ನೂ ಹೊಂದದ) ಲೇವಿಯನೂ ನಿನ್ನ ಬಾಗಲು ಗಳಲ್ಲಿರುವ ಅನ್ಯದೇಶದವನೂ ದಿಕ್ಕಿಲ್ಲದವನೂ ವಿಧ ವೆಯೂ ಬಂದು ನಿನ್ನ ದೇವರಾದ ಕರ್ತನು ನಿನ್ನನ್ನು ನೀನು ಮಾಡುವ ಎಲ್ಲಾ ಕೈಕೆಲಸದಲ್ಲಿ ಆಶೀರ್ವದಿಸುವ ಹಾಗೆ ತಿಂದು ತೃಪ್ತರಾಗಲಿ.
ಯೆಹೋಶುವನು ಈ ಸಮಸ್ತ ಅರಸುಗಳನ್ನೂ ಅವರ ದೇಶವನ್ನೂ ಒಂದೇ ಸಾರಿ ತೆಗೆದುಕೊಂಡನು. ಯಾಕಂದರೆ ಇಸ್ರಾಯೇಲಿನ ದೇವ ರಾದ ಕರ್ತನು ಇಸ್ರಾಯೇಲಿಗೋಸ್ಕರ ಯುದ್ಧ ಮಾಡಿದನು.ಆಗ ಯೆಹೋಶುವನು ಇಸ್ರಾಯೇಲ್ಯ ರೆಲ್ಲರ ಸಂಗಡ ಗಿಲ್ಗಾಲಿನಲ್ಲಿರುವ ಪಾಳೆಯಕ್ಕೆ ಹಿಂತಿರುಗಿ ಬಂದನು.
ಆಗ ಅಹೀಮಾಚನು ಕೂಗಿ ಅರಸನಿಗೆಎಲ್ಲವೂ ಕ್ಷೇಮ ಎಂದು ಹೇಳಿ ಅರಸನ ಮುಂದೆಅರಸನಾದ ನನ್ನ ಒಡೆಯನಿಗೆ ವಿರೋಧವಾಗಿ ತಮ್ಮ ಕೈಗಳನ್ನೆತ್ತಿದ ಜನರನ್ನು ಒಪ್ಪಿಸಿಕೊಟ್ಟ ನಿನ್ನ ದೇವರಾದ ಕರ್ತನು ಸ್ತುತಿಸಲ್ಪಡಲಿ ಅಂದನು.
ಈ ಆಜ್ಞೆ ಹೊರಗೆ ಬಂದಾಗಲೇ ಇಸ್ರಾಯೇಲ್ ಮಕ್ಕಳು ಧಾನ್ಯ, ದ್ರಾಕ್ಷಾರಸ, ಎಣ್ಣೆ, ಜೇನು, ಹೊಲಗಳ ಹುಟ್ಟುವಳಿ ಇವುಗಳ ಮೊದಲನೇ ಪಾಲನ್ನು ಬಹಳವಾಗಿ ಒಳಗೆ ತಂದರು. ಹಾಗೆಯೇ ಸಮಸ್ತ ವಸ್ತುಗಳಲ್ಲಿ ದಶಮಾಂಶದ ಪಾಲನ್ನು ಬಹಳ ವಾಗಿ ತಂದರು;
ಅವರು ಅವುಗಳನ್ನು ಸಿದ್ಧಮಾಡಿದ ಮೇಲೆ ಕಾಣಿಕೆಗಳನ್ನೂ ದಶಮಾಂಶ ವನ್ನೂ ಪ್ರತಿಷ್ಠಿಸಲ್ಪಟ್ಟವುಗಳನ್ನೂ ನಂಬಿಕೆಯಾಗಿ ಒಳಗೆ ತಂದರು. ಇವುಗಳ ಮೇಲೆ ಲೇವಿಯನಾದ ಕೋನನ್ಯನು ಅಧಿಕಾರಿಯಾಗಿದ್ದನು. ಅವನ ತರು ವಾಯ ಸಹೋದರನಾದ ಶಿಮ್ಮಿಯು ಅಧಿಕಾರಿಯಾಗಿ ದ್ದನು.
ನಮ್ಮ ಹಿಟ್ಟಿನಲ್ಲಿ ಮೊದಲಿನ ಪಾಲನ್ನೂ ನಮ್ಮ ಕಾಣಿಕೆಗಳನ್ನೂ ಸಕಲ ಮರಗಳ ಫಲವನ್ನೂ ದ್ರಾಕ್ಷಾ ರಸವನ್ನೂ ಎಣ್ಣೆಯನ್ನೂ ಯಾಜಕರ ಬಳಿಗೆ ನಮ್ಮ ದೇವರ ಆಲಯದ ಕೊಠಡಿಗಳಲ್ಲಿ ತಂದಿಡುವದಕ್ಕೂ; ಲೇವಿಯರು ಒಕ್ಕಲುತನದವರಿರುವ ಪಟ್ಟಣಗಳಿಂದ ಹತ್ತರಲ್ಲೊಂದು ಪಾಲನ್ನು ಹೊಂದುವ ಹಾಗೆ ನಮ್ಮ ಭೂಮಿಯ ಹತ್ತರಲ್ಲೊಂದು ಪಾಲನ್ನು ಲೇವಿಯರಿಗೆ ತರುವದಕ್ಕೂ ಪ್ರಮಾಣಮಾಡಿದೆವು.
ಆಗ ಯೆಹೂದದವರೆಲ್ಲರು ಧಾನ್ಯ, ಹೊಸ ದ್ರಾಕ್ಷಾರಸ, ಎಣ್ಣೆ, ಇವುಗಳಲ್ಲಿ ಹತ್ತರಲೊಂದು ಪಾಲು ಕೊಠಡಿ ಗಳಲ್ಲಿ ತಂದರು.
ಅವರು ತಮ್ಮ ಕತ್ತಿಯಿಂದ ದೇಶವನ್ನು ಸ್ವಾಧೀನಪಡಿಸಿಕೊಳ್ಳಲಿಲ್ಲ; ಅವರ ತೋಳು ಅವರನ್ನು ರಕ್ಷಿಸಲಿಲ್ಲ; ಆದರೆ ನಿನ್ನ ಬಲಗೈಯೂ ತೋಳೂ ನಿನ್ನ ಮುಖದ ಪ್ರಕಾಶವೂ ಇವುಗಳೇ ಅವರನ್ನು ರಕ್ಷಿಸಿದವು; ನಿನ್ನ ಒಲುಮೆ ಅವರಿಗಿತ್ತಲ್ಲಾ.
ಪ್ರತಿ ದಿನವೂ ನಮ್ಮನ್ನು ಮೇಲುಗಳಿಂದ ತುಂಬಿಸು,ಕರ್ತನು ಅಂದರೆ ನಮ್ಮ ರಕ್ಷಣೆಯ ದೇವರು ಸ್ತುತಿ ಹೊಂದಲಿ. ಸೆಲಾ.
ಆತನ ನಾಮವು ಎಂದೆಂದಿಗೂ ಇರುವದು; ಸೂರ್ಯನು ಇರುವವರೆಗೂ ಆತನ ಹೆಸರು ಇರು ವದು. ಮನುಷ್ಯರು ಆತನಲ್ಲಿ ಆಶೀರ್ವಾದ ಹೊಂದು ವರು. ಎಲ್ಲಾ ಜನಾಂಗಗಳು ಆತನನ್ನು ಭಾಗ್ಯವಂತ ನೆಂದು ಕರೆಯುವರು.
ನನ್ನ ಕೈಗಳಿಗೆ ಕಾಳಗವನ್ನು, ನನ್ನ ಬೆರಳುಗಳಿಗೆ ಯುದ್ಧವನ್ನು, ಕಲಿಸಿದ ನನ್ನ ಬಲವಾಗಿರುವ ಕರ್ತನಿಗೆ ಸ್ತೋತ್ರವಾಗಲಿ.
ಬೇತೇಲಿಗೆ ಬಂದು ದ್ರೋಹಮಾಡಿರಿ, ಗಿಲ್ಗಾಲಿ ನಲ್ಲಿ ದ್ರೋಹಗಳನ್ನು ಮತ್ತಷ್ಟು ಮಾಡಿರಿ, ಪ್ರತಿ ಬೆಳಗಿನ ಜಾವದಲ್ಲಿ ನಿಮ್ಮ ಯಜ್ಞಗಳನ್ನು ತನ್ನಿರಿ; ಹತ್ತ ನೆಯ ಒಂದು ಪಾಲನ್ನು ಮೂರು ವರ್ಷವಾದ ಮೇಲೆ ತನ್ನಿರಿ.
ಮನುಷ್ಯನು ದೇವರದನ್ನು ಕಳ್ಳತನ ಮಾಡುವನೋ? ಆದರೆ ನೀವು ನನ್ನದನ್ನು ಕಳ್ಳತನ ಮಾಡಿದ್ದೀರಿ; ಆದರೆ ನೀವು--ಯಾವದರಲ್ಲಿ ನಿನ್ನದನ್ನು, ಕಳ್ಳತನ ಮಾಡಿದ್ದೇವೆಂದು ಅನ್ನುತ್ತೀರಿ? ದಶಮಭಾಗ ಮತ್ತು ಅರ್ಪಣೆಗಳನ್ನೇ.
ನನ್ನ ಆಲಯದಲ್ಲಿ ಆಹಾರವಿರುವ ಹಾಗೆ ಹತ್ತನೇ ಪಾಲು ಗಳನ್ನೆಲ್ಲಾ ಬೊಕ್ಕಸದ ಮನೆಯಲ್ಲಿ ತನ್ನಿರಿ; ಇದರಿಂದ ನನ್ನನ್ನು ಪರೀಕ್ಷಿಸಿರಿ; ನಾನು ನಿಮಗೆ ಆಕಾಶದ ಕಿಟಕಿ ಗಳನ್ನು ತೆರೆದು ಸಾಕಾಗುವಷ್ಟಕ್ಕಿಂತ ಹೆಚ್ಚಾಗುವಷ್ಟು ಆಶೀರ್ವಾದ ನಿಮಗೆ ಸುರಿಸದಿರುವೆನೇ? ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ನಾನು ವಾರದಲ್ಲಿ ಎರಡು ಸಾರಿ ಉಪವಾಸ ಮಾಡುತ್ತೇನೆ; ನನಗಿರುವದೆ ಲ್ಲವುಗಳಲ್ಲಿ ದಶಾಂಶ ಕೊಡುತ್ತೇನೆ ಎಂದು ಹೇಳಿದನು.
ಹೀಗೆ ಅನ್ಯಜನಗಳೆಂಬ ಅರ್ಪಣೆಯು ಪವಿತ್ರಾತ್ಮನ ಮೂಲಕ ಶುದ್ಧೀಕರಿಸಲ್ಪಟ್ಟು ಆತನಿಂದ ಅಂಗೀಕಾರವಾಗುವಂತೆ ನಾನು ದೇವರ ಸುವಾರ್ತಾ ಸೇವೆಯನ್ನು ನಡಿಸುತ್ತಾ ಅನ್ಯಜನರಿಗೆ ಯೇಸು ಕ್ರಿಸ್ತನ ಸೇವಕನಾಗಿರುವೆನು.
ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರ. ಆತನು ಪರಲೋಕದಲ್ಲಿನ ಸಕಲ ಆತ್ಮೀಯ ಆಶೀರ್ವಾದ ಗಳನ್ನು ನಮಗೆ ಕ್ರಿಸ್ತನಲ್ಲಿ ಅನುಗ್ರಹಿಸಿದ್ದಾನೆ.
ಈ ಮನುಷ್ಯನು ಎಷ್ಟು ದೊಡ್ಡವನಾಗಿದ್ದನೆಂದು ಆಲೋಚಿಸಿರಿ. ನಮ್ಮ ಮೂಲ ಪಿತೃವಾದ ಅಬ್ರಹಾ ಮನು ಸುಲುಕೊಂಡು ಬಂದವುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಆತನಿಗೆ ಕೊಟ್ಟನಲ್ಲಾ.
ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ತನ್ನ ಮಹಾ ಕರುಣಾನುಸಾರವಾಗಿ ಜೀವಕರವಾದ ನಿರೀಕ್ಷೆಗೂ