ಅವರು ಹಿಂತಿರುಗಿ ಕಾದೇಶ್ ಎಂಬ ಎನ್ಮಿಷ್ಪಾಟಿಗೆ ಬಂದು ಅಮಾಲೆಕ್ಯರ ಎಲ್ಲಾ ಬೈಲನ್ನು ಹಚಚೋನ್ತಾಮರಿನಲ್ಲಿ ವಾಸವಾಗಿದ್ದ ಅಮೋರಿಯರನ್ನೂ ಸಂಹರಿಸಿದರು.
Cross references
ಆದದರಿಂದ ಆ ಬಾವಿಗೆ ಬೆರ್ ಲಹೈರೋಯಿ ಎಂದು ಹೆಸರಾಯಿತು. ಅದು ಕಾದೇಶಿಗೂ ಬೆರೆದಿಗೂ ಮಧ್ಯದಲ್ಲಿ ಇದೆ.
ಅಬ್ರಹಾಮನು ಅಲ್ಲಿಂದ ದಕ್ಷಿಣ ದೇಶದ ಕಾದೇಶಿಗೆ ಪ್ರಯಾಣಮಾಡಿ, ಶೂರಿಗೆ ಮಧ್ಯದಲ್ಲಿ ವಾಸಿಸಿ ಗೆರಾರಿನಲ್ಲಿ ಪ್ರವಾಸಿಯಾಗಿದ್ದನು.
ತಿಮ್ನಳು ಏಸಾವನ ಮಗನಾದ ಎಲೀಫಜನಿಗೆ ಉಪಪತ್ನಿ ಯಾಗಿದ್ದು ಅಮಾಲೇಕನನ್ನು ಹೆತ್ತಳು. ಏಸಾವನ ಹೆಂಡತಿಯಾಗಿದ್ದ ಆದಾಳ ಕುಮಾರರು ಇವರೇ.
ಕೋರಹ ಗತಾಮ್ ಅಮಾಲೇಕ್ ಎದೋಮ್ಯ ದೇಶದಲ್ಲಿದ್ದ ಎಲೀಫಜನಿಂದ ಬಂದ ಮುಖಂಡರು ಇವರೇ. ಇವರು ಆದಾಳ ಕುಮಾರರು.
ತರುವಾಯ ಅಮಾಲೇಕ್ಯರು ಬಂದು ರೆಫೀದೀಮಿ ನಲ್ಲಿ ಇಸ್ರಾಯೇಲ್ಯರ ಸಂಗಡ ಯುದ್ಧಮಾಡಿದರು.
ಅವರು ಹೋಗಿ ಮೋಶೆ ಆರೋನರ ಬಳಿಗೂ ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಯ ಬಳಿಗೂ ಪಾರಾನ್ ಅರಣ್ಯದಲ್ಲಿರುವ ಕಾದೇಶಿಗೂ ಬಂದು ಅವರಿಗೂ ಸಮಸ್ತ ಸಭೆಗೂ ವಿಷಯವನ್ನು ವಿವರಿಸಿ ಆ ದೇಶದ ಫಲಗಳನ್ನು ಅವರಿಗೆ ತೋರಿಸಿದರು.
ಅಮಾಲೇಕ್ಯರೂ ಕಾನಾನ್ಯರೂ ನಿಮ್ಮ ಎದುರಿನಲ್ಲಿರುವದರಿಂದ ನೀವು ಅವರ ಕತ್ತಿಯಿಂದ ಬೀಳುವಿರಿ. ನೀವು ಕರ್ತನ ಕಡೆ ಯಿಂದ ತಿರುಗಿದ ಕಾರಣ ಆತನು ನಿಮ್ಮ ಸಂಗಡ ಇರುವದಿಲ್ಲ ಎಂದು ಹೇಳಿದನು.
ಆಗ ಆ ಬೆಟ್ಟದಲ್ಲಿ ವಾಸವಾಗಿದ್ದ ಅಮಾಲೇಕ್ಯರೂ ಕಾನಾ ನ್ಯರೂ ಇಳಿದು ಅವರನ್ನು ಹೊಡೆದು ಹೊರ್ಮಾದ ವರೆಗೆ ಅಟ್ಟಿಬಿಟ್ಟರು.
ಇಸ್ರಾಯೇಲ್ ಮಕ್ಕಳ ಸಭೆಯೆಲ್ಲಾ ಜಿನ್ ಎಂಬ ಅರಣ್ಯಕ್ಕೆ ಮೊದಲನೇ ತಿಂಗಳಿನಲ್ಲಿ ಬಂದರು; ಜನರು ಕಾದೇಶಿನಲ್ಲಿ ವಾಸಿಸುವಾಗ ಅಲ್ಲಿ ಮಿರ್ಯಾಮಳು ಸತ್ತು ಅಲ್ಲೇ ಹೂಣಲ್ಪಟ್ಟಳು.
ತರುವಾಯ ಅವನು ಅಮಾಲೇಕ್ಯರನ್ನು ನೋಡಿ ಸಾಮ್ಯರೂಪವಾಗಿ--ಜನಾಂಗಗಳಲ್ಲಿ ಮೊದಲನೆ ಯವನೇ ಅಮಾಲೇಕ್ಯನು; ಆದರೆ ಅವನ ಅಂತ್ಯವು ಸದಾಕಾಲಕ್ಕೆ ನಾಶವಾಗುವದು ಅಂದನು.
ಆಗ ನೀವು ಹೋರೇಬಿನಿಂದ ಹೊರಟು ನಮ್ಮ ದೇವರಾದ ಕರ್ತನು ನಮಗೆ ಆಜ್ಞಾಪಿಸಿದ ಪ್ರಕಾರ ನೀವು ಅಮೋರಿಯರ ಬೆಟ್ಟದ ಮಾರ್ಗದಲ್ಲಿ ನೋಡಿದ ಆ ದೊಡ್ಡ ಭಯಂಕರವಾದ ಅರಣ್ಯವನ್ನೆಲ್ಲಾ ದಾಟಿ ಕಾದೇಶ್ಬರ್ನೇಯಕ್ಕೆ ಬಂದೆವು.
ಆ ಮೇಲೆ ನೀವು ಕಾದೇಶಿನಲ್ಲಿ ವಾಸವಾಗಿದ್ದ ಕಾಲದ ಪ್ರಕಾರ ಬಹಳ ದಿವಸ ವಾಸವಾಗಿದ್ದಿರಿ.
ನಿಬ್ಷಾನ್, ಉಪ್ಪಿನಪಟ್ಟಣವು, ಏಂಗೆದೀ ಎಂಬ ಆರು ಪಟ್ಟಣಗಳು; ಮತ್ತು ಅವು ಗಳ ಗ್ರಾಮಗಳು.ಆದರೆ ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಯೂದನ ಮಕ್ಕಳು ಹೊರಡಿಸಿ ಬಿಡುವದಕ್ಕಾಗಲಿಲ್ಲ. ಆದದರಿಂದ ಈ ದಿವಸದ ವರೆಗೂ ಯೆಬೂಸಿಯರು ಯೂದನ ಮಕ್ಕಳ ಸಂಗಡ ಯೆರೂಸಲೇಮಿನಲ್ಲಿ ವಾಸವಾಗಿದ್ದಾರೆ.
ಸಮುವೇಲನು ಸೌಲನಿಗೆ--ಕರ್ತನು ತನ್ನ ಜನರಾದ ಇಸ್ರಾಯೇಲ್ಯರ ಮೇಲೆ ನಿನ್ನನ್ನು ಅರಸನನ್ನಾಗಿ ಅಭಿಷೇಕಿಸಲು ನನ್ನನ್ನು ಕಳುಹಿಸಿದನು. ಈಗ ನೀನು ಕರ್ತನ ಮಾತುಗಳನ್ನು ಕೇಳು.
ದಾವೀದನು ತನ್ನ ಹೃದಯದಲ್ಲಿ--ನಾನು ಎಂದಿಗಾದರೂ ಒಂದು ದಿನ ಸೌಲನ ಕೈಯಿಂದ ಮಡಿದುಹೋಗುತ್ತೇನೆ. ನಾನು ತ್ವರೆಯಾಗಿ ಫಿಲಿಷ್ಟಿಯರ ದೇಶಕ್ಕೆ ತಪ್ಪಿಸಿಕೊಂಡು ಓಡಿಹೋಗುವ ದಕ್ಕಿಂತ ನನಗೆ ಉತ್ತಮವಾದ ಕಾರ್ಯವಿಲ್ಲ. ಸೌಲನು ನನ್ನನ್ನು ಇಸ್ರಾಯೇಲಿನಲ್ಲಿ ಇನ್ನು ಹುಡುಕಲು ದಿಕ್ಕು ಕಾಣದೆ ಹೋಗುವನು. ಈ ಪ್ರಕಾರ ನಾನು ಅವನ ಕೈಯಿಂದ ತಪ್ಪಿಸಿಕೊಂಡು ಹೋಗುವೆನು ಅಂದು ಕೊಂಡನು.
ದಾವೀದನೂ ಅವನ ಜನರೂ ಮೂರನೇದಿವಸದಲ್ಲಿ ಚಿಕ್ಲಗಿಗೆ ಬಂದು ಸೇರುವಷ್ಟರಲ್ಲಿ ಏನಾಯಿತಂದರೆ, ಅಮಾಲೇಕ್ಯರು ದಕ್ಷಿಣ ಸೀಮೆಯ ಮೇಲೆಯೂ ಚಿಕ್ಲಗಿನ ಮೇಲೆಯೂ ಬಂದು ಬಿದ್ದು ಚಿಕ್ಲಗನ್ನು ಹೊಡೆದು ಅದನ್ನು ಬೆಂಕಿಯಿಂದ ಸುಟ್ಟುಬಿಟ್ಟು
ಆಗ ಕೆಲವರು ಬಂದು ಯೆಹೋಷಾಫಾಟನಿಗೆ--ಸಮು ದ್ರದ ಆಚೆಯಿಂದ ನಿನಗೆ ವಿರೋಧವಾಗಿ ಅರಾಮಿನ ಬಹುಗುಂಪು ಈ ಕಡೆ ಬರುತ್ತದೆ; ಇಗೋ, ಅವರು ಏಂಗೆದಿ ಎಂಬ ಹಚೆಚೋನ್ ತಾಮಾರಿನಲ್ಲಿ ಇದ್ದಾ ರೆಂದು ತಿಳಿಸಿದರು.