ಇವುಗಳಾದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಕರ್ತನ ವಾಕ್ಯವು ಬಂದು--ಅಬ್ರಾಮನೇ, ಭಯಪಡಬೇಡ; ನಾನೇ ನಿನ್ನ ಗುರಾಣಿಯೂ ನಿನ್ನ ಅತ್ಯಧಿಕವಾದ ಬಹುಮಾನವೂ ಆಗಿದ್ದೇನೆ.
Cross references
ಅವರು ಸೇವಿಸುವ ಜನಾಂಗಕ್ಕೆ ನಾನೇ ನ್ಯಾಯ ತೀರಿಸುವೆನು; ತರುವಾಯ ಮಹಾ ಸಂಪತ್ತಿನೊಂದಿಗೆ ಅವರು ಹೊರಗೆ ಬರುವರು.
ಆಗ ದೇವರು ಆ ಹುಡುಗನ ಸ್ವರವನ್ನು ಕೇಳಿದನು. ಆಗ ದೇವದೂತನು ಆಕಾಶದೊಳಗಿಂದ ಹಾಗರಳನ್ನು ಕರೆದು ಆಕೆಗೆ--ಹಾಗರಳೇ, ನಿನ್ನ ವ್ಯಥೆಯೇನು? ಅಂಜಬೇಡ; ದೇವರು ಹುಡುಗನ ಸ್ವರವನ್ನು ಅವನು ಇದ್ದಲ್ಲಿಂದ ಕೇಳಿದ್ದಾನೆ.
ಇವುಗಳಾದ ಮೇಲೆ ದೇವರು ಅಬ್ರಹಾಮನನ್ನು ಶೋಧಿಸುವದಕ್ಕಾಗಿ ಆತನು ಅವನಿಗೆ--ಅಬ್ರಹಾಮನೇ ಅಂದನು. ಅದಕ್ಕವನು --ಇಗೋ, ಇಲ್ಲಿದ್ದೇನೆ ಅಂದನು.
ಇವುಗಳಾದ ಮೇಲೆ ಅಬ್ರಹಾಮನಿಗೆ--ಇಗೋ, ಮಿಲ್ಕಳು ಸಹ ನಿನ್ನ ಸಹೋದರನಾದ ನಾಹೋರನಿಗೆ ಮಕ್ಕಳನ್ನು ಹೆತ್ತಿದ್ದಾಳೆ ಎಂದು ತಿಳಿಸಲ್ಪಟ್ಟಿತು.
ಅದೇ ರಾತ್ರಿಯಲ್ಲಿ ಕರ್ತನು ಅವನಿಗೆ ಕಾಣಿಸಿ ಕೊಂಡು--ನಿನ್ನ ತಂದೆಯಾದ ಅಬ್ರಹಾಮನ ದೇವರು ನಾನೇ; ಭಯಪಡಬೇಡ; ನಾನು ನಿನ್ನ ಸಂಗಡ ಇದ್ದೇನೆ; ನನ್ನ ದಾಸನಾದ ಅಬ್ರಹಾಮನಿಗೋಸ್ಕರ ನಿನ್ನನ್ನು ಆಶೀರ್ವದಿಸಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು ಅಂದನು.
ದೇವರು ಇಸ್ರಾಯೇಲನಿಗೆ ರಾತ್ರಿ ದರ್ಶನ ದಲ್ಲಿ ಮಾತನಾಡಿ--ಯಾಕೋಬನೇ, ಯಾಕೋಬನೇ ಅಂದನು. ಅದಕ್ಕವನು--ಇಗೋ, ಇದ್ದೇನೆ ಅಂದನು.
ಅದಕ್ಕೆ ಮೋಶೆಯು ಜನರಿಗೆ--ನೀವು ಭಯಪಡ ಬೇಡಿರಿ; ಕದಲದೆ ನಿಲ್ಲಿರಿ; ಕರ್ತನು ನಿಮಗೆ ಈ ಹೊತ್ತು ತೋರಿಸುವ ರಕ್ಷಣೆಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಐಗುಪ್ತ್ಯರನ್ನು ಇನ್ನು ಮುಂದೆ ಎಂದೆಂದಿಗೂ ನೋಡುವದಿಲ್ಲ.
ಆತನು--ನನ್ನ ಮಾತುಗಳನ್ನು ಈಗ ಕೇಳಿರಿ--ನಿಮ್ಮಲ್ಲಿ ಒಬ್ಬ ಪ್ರವಾದಿ ಇದ್ದರೆ ಕರ್ತನಾದ ನಾನು ದರ್ಶನದಲ್ಲಿ ಅವನಿಗೆ ತಿಳಿಯಪಡಿಸುವೆನು, ಸ್ವಪ್ನದಲ್ಲಿ ಅವನ ಸಂಗಡ ಮಾತನಾಡುವೆನು.
ಆದದರಿಂದ ಅವರಿಗೆ ಅವರ ಸಹೋದರರ ಮಧ್ಯದಲ್ಲಿ ಸ್ವಾಸ್ತ್ಯವಿರಬಾರದು; ಕರ್ತನು ಅವರಿಗೆ ಹೇಳಿದ ಹಾಗೆ ಆತನೇ ಅವರ ಸ್ವಾಸ್ತ್ಯವಾಗಿದ್ದಾನೆ.
ಬಲವಾಗಿರ್ರಿ; ಧೈರ್ಯವಾಗಿರ್ರಿ; ಭಯಪಡಬೇಡಿರಿ; ಅವರಿಗೆ ಹೆದರಬೇಡಿರಿ; ನಿನ್ನ ದೇವರಾದ ಕರ್ತನು ತಾನೇ ನಿನ್ನ ಸಂಗಡ ಹೋಗುತ್ತಾನೆ; ಆತನು ನಿನ್ನನ್ನು ಬಿಡುವದಿಲ್ಲ, ವಿಸರ್ಜಿಸುವದೂ ಇಲ್ಲ ಎಂದು ಹೇಳಿದನು.
ಯೆಶುರೂನನ ದೇವರ ಹಾಗೆ ಯಾರೂ ಇಲ್ಲ. ಆತನು ನಿನ್ನ ಸಹಾಯಕ್ಕೆ ಪರಲೋಕದಲ್ಲಿಯೂ ತನ್ನ ಘನತೆಯಲ್ಲಿಯೂ ಆಕಾಶದ ಮೇಲೆಯೂ ಬರುತ್ತಾನೆ.
ನೀನು ಮಾಡಿದ್ದಕ್ಕೆ ಕರ್ತನು ನಿನಗೆ ಬದಲು ಕೊಡಲಿ; ಇಸ್ರಾಯೇಲ್ ದೇವರಾದ ಕರ್ತನ ರೆಕ್ಕೆಗಳ ಕೆಳಗೆ ಆಶ್ರಯಿಸಿಕೊಳ್ಳಲು ಬಂದ ನಿನಗೆ ಆತನಿಂದ ಬರುವ ನಿನ್ನ ಬಹುಮಾನ ಪರಿಪೂರ್ಣವಾಗಿರಲಿ ಅಂದನು.
(ಪೂರ್ವದಲ್ಲಿ ಇಸ್ರಾಯೇಲಿನಲ್ಲಿ ಯಾವನಾದರೂ ದೇವರ ಹತ್ತಿರ ವಿಚಾರಿಸಬೇಕಾದರೆ--ದೀರ್ಘ ದರ್ಶಿಯ ಬಳಿಗೆ ಹೋಗೋಣ ಬನ್ನಿರಿ ಅನ್ನುವನು.) ಯಾಕಂದರೆ ಈ ಕಾಲದಲ್ಲಿ ಪ್ರವಾದಿ ಎಂದು ಕರೆಯಲ್ಪ ಟ್ಟವನು ಪೂರ್ವಕಾಲದಲ್ಲಿ ದೀರ್ಘದರ್ಶಿ ಎಂದು ಕರೆಯಲ್ಪಡುತ್ತಿದ್ದನು.
ಆಗ ಕರ್ತನ ದೂತನು ಎಲೀಯನಿಗೆ--ಅವನ ಸಂಗಡ ಇಳಿದು ಹೋಗು; ಅವನಿಗೆ ಭಯಪಡಬೇಡ ಅಂದನು.
ದಾವೀದನು ತನ್ನ ಮಗನಾದ ಸೊಲೊಮೋನ ನಿಗೆ ಹೇಳಿದ್ದೇನಂದರೆ--ನೀನು ಬಲಗೊಂಡು ದೃಢ ಪಟ್ಟು ಮಾಡು; ಭಯಪಡಬೇಡ, ಹೆದರಬೇಡ; ಯಾಕಂದರೆ ನನ್ನ ದೇವರಾಗಿರುವ ಕರ್ತನಾದ ದೇವರು ನಿನ್ನ ಸಂಗಡ ಇರುವನು. ಕರ್ತನ ಮನೆಯ ಸೇವೆಯ ಕಾರ್ಯವನ್ನೆಲ್ಲಾ ನೀನು ತೀರಿಸುವ ವರೆಗೂ ಆತನು ನಿನ್ನನ್ನು ವಿಸರ್ಜಿಸುವದಿಲ್ಲ, ಕೈ ಬಿಡುವದಿಲ್ಲ.ಇಗೋ, ಕರ್ತನ ಮನೆಯ ಸಮಸ್ತ ಸೇವೆಗೋಸ್ಕರ ಯಾಜಕರ ಲೇವಿಯರ ವರ್ಗಗಳುಂಟು. ಎಲ್ಲಾ ಕೆಲ ಸಕ್ಕೂ ಎಲ್ಲಾ ಸೇವೆಗೂ ಪೂರ್ಣ ಮನಸ್ಸುಳ್ಳಂಥ ಜ್ಞಾನವುಳ್ಳಂಥ ಪ್ರತಿ ಮನುಷ್ಯನು ನಿನ್ನ ಸಂಗಡ ಇರುವನು. ಇದಲ್ಲದೆ ಪ್ರಧಾನರೂ ಸಕಲ ಜನರೂ ನಿನ್ನ ಮಾತುಗಳಿಗೆಲ್ಲಾ ಕಿವಿಗೊಡುತ್ತಾರೆ.
ಆದರೆ ಓ ನನ್ನ ಕರ್ತನೇ, ನನಗೆ ಗುರಾಣಿಯೂ ನನ್ನ ಘನವೂ ನನ್ನ ತಲೆ ಎತ್ತುವವನೂ ನೀನೇ.
ನನ್ನ ಧ್ವನಿಯೆತ್ತಿ ಕರ್ತನಿಗೆ ಮೊರೆಯಿಟ್ಟೆನು; ಆತನು ತನ್ನ ಪರಿಶುದ್ಧ ಪರ್ವತದಿಂದ ನನ್ನ ಮೊರೆಯನ್ನು ಕೇಳಿದನು. ಸೆಲಾ.
ಕರ್ತನೇ, ನೀನು ನೀತಿವಂತನನ್ನು ಆಶೀರ್ವದಿಸುತ್ತೀ. ಖೇಡ್ಯದ ಹಾಗೆ ಅನುಗ್ರಹದಿಂದ ಅವನನ್ನು ಸುತ್ತಿಕೊಳ್ಳುತ್ತೀ.
ಕರ್ತನು ನನ್ನ ಪಾಲಿನ ಮತ್ತು ನನ್ನ ಪಾತ್ರೆಯ ಭಾಗವಾಗಿದ್ದಾನೆ; ನೀನು ನನ್ನ ಸ್ವಾಸ್ತ್ಯವನ್ನು ಸ್ಥಿರವಾಗಿ ಕಾಪಾಡುತ್ತೀ.
ಕರ್ತನು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನನ್ನು ತಪ್ಪಿಸು ವಾತನೂ ನನ್ನ ದೇವರೂ ನಾನು ಭರವಸವಿಡುವ ನನ್ನ ಬಲವೂ ನನ್ನ ಗುರಾಣಿಯೂ ನನ್ನ ರಕ್ಷಣೆಯ ಕೊಂಬೂ ನನ್ನ ಉನ್ನತವಾದ ದುರ್ಗವೂ ಆಗಿದ್ದಾನೆ.
ಕರ್ತನು ನನ್ನ ಬೆಳಕೂ ರಕ್ಷಣೆಯೂ ಆಗಿದ್ದಾನೆ; ನಾನು ಯಾರಿಗೆ ಭಯಪಡು ವೆನು? ಕರ್ತನು ನನ್ನ ಜೀವದ ಬಲವಾಗಿದ್ದಾನೆ; ನಾನು ಯಾರಿಗೆ ಹೆದರುವೆನು?
ನಿಶ್ಚಯವಾಗಿ ನೀತಿವಂತನಿಗೆ ಪ್ರತಿಫಲವಿದೆ; ನಿಶ್ಚಯವಾಗಿ ಭೂಮಿಯಲ್ಲಿ ನ್ಯಾಯ ತೀರಿಸುವ ದೇವರು ಆತನೇ ಎಂದು ಮನುಷ್ಯನು ಹೇಳುವನು.
ನಮ್ಮ ಗುರಾಣಿಯಾಗಿರುವ ಓ ದೇವರೇ, ನೋಡು; ನಿನ್ನ ಅಭಿಷಿಕ್ತನ ಮುಖವನ್ನು ದೃಷ್ಟಿಸು.
ದೇವರಾದ ಕರ್ತನು ಸೂರ್ಯ ನೂ ಗುರಾಣಿಯೂ ಆಗಿದ್ದಾನೆ; ಕರ್ತನು ಕೃಪೆಯನ್ನೂ ಮಹಿಮೆಯನ್ನೂ ಕೊಡುತ್ತಾನೆ; ಸಂಪೂರ್ಣವಾಗಿ ನಡೆದುಕೊಳ್ಳುವವರಿಗೆ ಆತನು ಯಾವ ಒಳ್ಳೇದನ್ನು ಹಿಂದೆಗೆಯುವದಿಲ್ಲ.ಸೈನ್ಯಗಳ ಓ ಕರ್ತನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು.
ತನ್ನ ರೆಕ್ಕೆಗಳಿಂದ ನಿನ್ನನ್ನು ಹೊದಗಿಸುವನು; ಆತನ ರೆಕ್ಕೆಗಳ ಕೆಳಗೆ ಆಶ್ರಯಿಸಿಕೊಳ್ಳುವಿ; ಆತನ ಸತ್ಯವು ನಿನ್ನ ಖೇಡ್ಯವೂ ಡಾಲೂ ಆಗಿದೆ.
ಆರೋನನ ಮನೆಯವರೇ, ಕರ್ತನಲ್ಲಿ ಭರವಸವಿಡಿರಿ; ಆತನೇ ಅವರ ಸಹಾಯವೂ ಗುರಾ ಣಿಯೂ ಆಗಿದ್ದಾನೆ.
ನನ್ನ ಆಶ್ರಯವೂ ಗುರಾಣಿಯೂ ನೀನೇ; ನಿನ್ನ ವಾಕ್ಯದಲ್ಲಿಯೇ ನಿರೀಕ್ಷೆ ಯಿಟ್ಟಿದ್ದೇನೆ.
ಓ ಕರ್ತನೇ, ನಿನಗೆ ಮೊರೆಯಿಡುತ್ತೇನೆ, ನಾನು ಹೇಳುವದೇನಂದರೆ -- ನೀನು ನನ್ನ ಆಶ್ರಯವೂ ಜೀವಿತರ ದೇಶದಲ್ಲಿ ನನ್ನ ಪಾಲೂ ಆಗಿದ್ದೀ ಎಂಬದೇ.
ದುಷ್ಟನು ಮೋಸದ ಕೃತ್ಯವನ್ನು ಮಾಡುತ್ತಾನೆ; ನೀತಿಯನ್ನು ಬಿತ್ತುವವನಿಗೆ ನಿಸ್ಸಂದೇಹ ವಾಗಿ ಬಹುಮಾನವಿರುವದು.
ದೇವರ ಪ್ರತಿಯೊಂದು ಮಾತು ಶುದ್ಧವಾಗಿದೆ; ಆತನಲ್ಲಿ ಭರವಸವಿಡುವವನಿಗೆ ಆತನು ಗುರಾಣಿಯಾಗಿದ್ದಾನೆ.
ಭಯಭ್ರಾಂತ ಹೃದಯವುಳ್ಳವರಿಗೆ--ಬಲಗೊಳ್ಳಿರಿ, ಹೆದರಬೇಡಿರಿ; ಇಗೋ, ನಿಮ್ಮ ದೇವರು ಮುಯ್ಯಿ ತೀರಿಸುವದಕ್ಕೂ ಪ್ರತಿಫಲವನ್ನು ಕೊಡುವದಕ್ಕೂ ಆತನೇ ಬಂದು ನಿಮ್ಮನ್ನು ರಕ್ಷಿಸುವನು ಎಂದು ಅವರಿಗೆ ಹೇಳಿರಿ.
ಇಗೋ, ಕರ್ತನಾದ ದೇವರು ಬಲವುಳ್ಳ ಕೈಯಿಂದ ಬರುತ್ತಾನೆ, ಆತನ ತೋಳು ತನಗೋಸ್ಕರ ಆಳುವದು. ಇಗೋ, ಆತನ ಬಹುಮಾನವು ಆತನ ಸಂಗಡಲೂ ಆತನ ಪ್ರತಿಫಲವು ಆತನ ಮುಂದೆಯೂ ಇದೆ.
ನೀನಂತೂ ಹೆದರಬೇಡ; ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು. ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿ ಸುತ್ತೇನೆ; ಹೌದು, ನಾನು ನಿನಗೆ ಸಹಾಯ ಮಾಡು ತ್ತೇನೆ. ಹೌದು, ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿ ಹಿಡಿಯುತ್ತೇನೆ.
ಹುಳುವಾದ ಯಾಕೋಬೇ, ಮತ್ತು ಇಸ್ರಾಯೇಲ್ ಜನವೇ, ಭಯಪಡಬೇಡ; ನಾನೇ ನಿನಗೆ ಸಹಾಯ ಮಾಡುತ್ತೇನೆಂದು ಕರ್ತನೂ ನಿನ್ನ ವಿಮೋಚಕನೂ ಇಸ್ರಾಯೇಲಿನ ಪರಿಶುದ್ಧನೂ ಹೇಳುತ್ತಾನಲ್ಲಾ!
ಈಗಲಾದರೋ ಓ ಯಾಕೋಬೇ, ಇಸ್ರಾಯೇಲೇ ನಿನ್ನನ್ನು ಸೃಷ್ಟಿಸಿದಾತನೂ ರೂಪಿಸಿದಾತನೂ ಆದ ಕರ್ತನು ಇಂತೆನ್ನುತ್ತಾನೆ--ಹೆದರಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ ನಿನ್ನ ಹೆಸರು ಹಿಡಿದು ಕರೆದೆನಲ್ಲಾ; ನೀನು ನನ್ನವನೇ.
ಭಯಪಡಬೇಡ; ನಾನೇ ನಿನ್ನೊಂದಿಗೆ ಇದ್ದೇನೆ; ನಿನ್ನ ಸಂತತಿಯವರನ್ನು ಮೂಡಣದಿಂದ ತರುವೆನು; ಪಶ್ಚಿಮದಿಂದ ನಿನ್ನನ್ನು ಕೂಡಿಸುವೆನು.
ನಿನ್ನನ್ನು ನಿರ್ಮಾಣ ಮಾಡಿ ಗರ್ಭದಿಂದಲೂ ರೂಪಿಸುತ್ತಾ ಬಂದು ನಿನಗೆ ಸಹಾಯ ಮಾಡುವವನಾದ ಕರ್ತನು ಹೀಗೆನ್ನುತ್ತಾನೆ--ನನ್ನ ಸೇವಕನಾದ ಯಾಕೋಬೇ, ನಾನು ಆದುಕೊಂಡ ಯೆಶುರೂನೇ, ಭಯಪಡಬೇಡ.
ಹೆದರಬೇಡಿರಿ ಇಲ್ಲವೆ ಭಯಪಡಬೇಡಿರಿ ನಾನು ಪೂರ್ವದಿಂದಲೂ ನಿಮಗೆ ಹೇಳಲಿಲ್ಲವೋ? ಅದನ್ನು ಪ್ರಕಟಿಸಲಿ ಲ್ಲವೋ? ಅಂತೂ ನೀವೇ ನನ್ನ ಸಾಕ್ಷಿಗಳು. ನಾನಲ್ಲದೆ ಇನ್ನೊಬ್ಬ ದೇವರು ಇದ್ದಾನೋ? ಹೌದು, ಇನ್ನು ಯಾವ ದೇವರೂ ಇಲ್ಲ, ಯಾರೂ ನನಗೆ ಗೊತ್ತಿಲ್ಲ.
ನಾನೇ, ನಾನೇ ನಿನ್ನನ್ನು ಆದರಿಸುವವನಾಗಿ ದ್ದೇನೆ; ಹಾಗಾದರೆ ಸಾಯುವ ಮನುಷ್ಯನಿಗೂ ಹುಲ್ಲಿನಂತೆ ಮಾಡಲ್ಪಟ್ಟಿರುವ ನರಪುತ್ರನಿಗೂ ಭಯ ಪಡುವ ನೀನು ಯಾರು?