ಇದಲ್ಲದೆ ಕರ್ತನ ದೂತನು ಅವಳಿಗೆ--ನಿನ್ನ ಸಂತತಿಯನ್ನು ಬಹಳವಾಗಿ ಹೆಚ್ಚಿಸುವೆನು; ಅದು ಹೆಚ್ಚಾಗುವದರಿಂದ ಅದನ್ನು ಲೆಕ್ಕಿಸುವದಕ್ಕಾಗುವದಿಲ್ಲ ಅಂದನು.
Cross references
ಇಷ್ಮಾಯೇಲನ ವಿಷಯದಲ್ಲಿ ನೀನು ಬೇಡಿದ್ದನ್ನು ಕೇಳಿದ್ದೇನೆ. ಇಗೋ, ನಾನು ಅವನನ್ನು ಆಶೀರ್ವದಿ ಸಿದೆನು. ಅವನನ್ನು ಅಭಿವೃದ್ಧಿಮಾಡಿ ಅತ್ಯಧಿಕವಾಗಿ ಹೆಚ್ಚಿಸುವೆನು. ಅವನಿಂದ ಹನ್ನೆರಡು ಪ್ರಭುಗಳು ಹುಟ್ಟುವರು. ನಾನು ಅವನನ್ನು ದೊಡ್ಡ ಜನಾಂಗವಾಗ ಮಾಡುವೆನು.
ದಾಸಿಯ ಮಗನು ಸಹ ನಿನ್ನ ಸಂತಾನವಾಗಿರುವದರಿಂದ ಅವನನ್ನು ನಾನು ಜನಾಂಗ ವಾಗ ಮಾಡುವೆನು ಅಂದನು.
ಬಿಲ್ಲೆಸೆಯುವಷ್ಟು ದೂರ ಹೋಗಿ ಅವನಿಗೆ ಎದುರಾಗಿ ಕೂತುಕೊಂಡು--ಮಗುವಿನ ಸಾವನ್ನು ನಾನು ನೋಡಲಾರೆನು ಎಂದು ಹೇಳಿ ಆಕೆಯು ತನ್ನ ಸ್ವರವೆತ್ತಿ ಅತ್ತಳು.
ಎದ್ದು ಹುಡುಗನನ್ನು ಎತ್ತಿಕೊಂಡು ಅವನನ್ನು ನಿನ್ನ ಕೈಯಲ್ಲಿ ತಕ್ಕೋ; ನಾನು ಅವನನ್ನು ದೊಡ್ಡ ಜನಾಂಗವಾಗ ಮಾಡುವೆನು ಅಂದನು.
ಕರ್ತನ ದೂತನು ಆಕಾಶದೊಳಗಿಂದ ಎರಡ ನೆಯ ಸಾರಿ ಅಬ್ರಹಾಮನನ್ನು ಕರೆದನು.
ಸಾರಳ ದಾಸಿಯಾದ ಐಗುಪ್ತ್ಯದ ಹಾಗರಳು ಅಬ್ರಹಾಮನಿಗೆ ಹೆತ್ತ ಅಬ್ರಹಾಮನ ಮಗನಾದ ಇಷ್ಮಾಯೇಲನ ವಂಶಾವಳಿಗಳು.
ಆಗ ದೇವದೂತನು ಸ್ವಪ್ನದಲ್ಲಿ ನನಗೆ ಯಾಕೋಬನೇ ಅಂದನು. ಅದಕ್ಕೆ ನಾನು--ಇಲ್ಲಿ ಇದ್ದೇನೆ ಅಂದೆನು.
ಆಗ ಯಾಕೋಬನು ಒಬ್ಬನೇ ಉಳಿದಾಗ ಒಬ್ಬ ಮನುಷ್ಯನು ಉದಯ ವಾಗುವ ವರೆಗೆ ಅವನ ಸಂಗಡ ಹೋರಾಡಿದನು.
ಆಗ ಅವನು ಯೋಸೇಫನನ್ನು ಆಶೀರ್ವದಿಸಿ--ನನ್ನ ತಂದೆಗಳಾದ ಅಬ್ರಹಾಮನೂ ಇಸಾಕನೂ ಯಾವಾತನ ಮುಂದೆ ನಡಕೊಂಡರೋ ಆ ದೇವರೇ, ನಾನು ಹುಟ್ಟಿದಂದಿನಿಂದ ಇಂದಿನ ವರೆಗೆ ನನ್ನನ್ನು ಪೋಷಣೆ ಮಾಡಿದ ದೇವರು,
ಆಗ ಕರ್ತನ ದೂತನು ಪೊದೆಯೊಳಗಿಂದ ಅಗ್ನಿಜ್ವಾಲೆಯಲ್ಲಿ ಅವನಿಗೆ ಕಾಣಿಸಿ ಕೊಂಡನು. ಅವನು ನೋಡಿದಾಗ ಇಗೋ, ಪೊದೆಯು ಬೆಂಕಿಯಿಂದ ಉರಿಯುತ್ತಿತ್ತು. ಆದಾಗ್ಯೂ ಪೊದೆಯು ಸುಡಲಿಲ್ಲ.
ಕರ್ತನ ದೂತನು ಗಿಲ್ಗಾಲಿನಿಂದ ಬೋಕೀಮಿಗೆ ಬಂದು--ನಾನು ನಿಮ್ಮನ್ನು ಐಗುಪ್ತ ದಿಂದ ಬರಮಾಡಿ ನಿಮ್ಮ ತಂದೆಗಳಿಗೆ ಆಣೆಯಿಟ್ಟ ದೇಶದಲ್ಲಿ ನಿಮ್ಮನ್ನು ಸೇರಿಸಿದೆನು. ನಾನು ನಿಮ್ಮ ಸಂಗಡ ಮಾಡಿದ ನನ್ನ ಒಡಂಬಡಿಕೆಯನ್ನು ಎಂದಿಗೂ ನಿರರ್ಥಕ ಮಾಡೆನು.
ಕರ್ತನ ದೂತನು ಬಂದು ಅಬೀಯೆಜೆರನಾದ ಯೋವಾಷನು ಹೊಂದಿದ ಒಫ್ರದಲ್ಲಿರುವ ಏಲಾ ಮರದ ಕೆಳಗೆ ಕುಳಿತನು. ಆಗ ಯೋವಾಷನ ಮಗ ನಾದ ಗಿದ್ಯೋನನು ಮಿದ್ಯಾನ್ಯರಿಗೆ ಮರೆಯಾಗುವ ಹಾಗೆ ದ್ರಾಕ್ಷೇ ಆಲೆಯ ಬಳಿಯಲ್ಲಿ ಗೋಧಿಯನ್ನು ಬಡಿಯುತ್ತಿದ್ದನು.
ಆದರೆ ಕರ್ತನು ಅವ ನಿಗೆ--ನಾನು ನಿನ್ನ ಸಂಗಡ ಖಂಡಿತವಾಗಿ ಇರುವ ದರಿಂದ ನೀನು ಮಿದ್ಯಾನ್ಯರನ್ನು ಒಬ್ಬ ಮನುಷ್ಯನೋ ಎಂಬಂತೆ ಹೊಡೆಯುವಿ ಅಂದನು.
ಆಗ ಕರ್ತನ ದೂತನು ತನ್ನ ಕೈಯಲ್ಲಿದ್ದ ಕೋಲಿನ ಕೊನೆಯನ್ನು ಚಾಚಿ ಮಾಂಸವನ್ನೂ ಹುಳಿ ಇಲ್ಲದ ರೊಟ್ಟಿಗಳನ್ನೂ ಮುಟ್ಟಿದನು. ಆಗ ಬೆಂಕಿಯು ಬಂಡೆ ಯಿಂದ ಎದ್ದು ಮಾಂಸವನ್ನೂ ಹುಳಿ ಇಲ್ಲದ ರೊಟ್ಟಿ ಗಳನ್ನೂ ದಹಿಸಿಬಿಟ್ಟಿತು. ಆಗ ಕರ್ತನ ದೂತನು ಅವನ ಕಣ್ಣುಗಳಿಗೆ ಕಾಣಿಸದೆ ಹೋದನು.
ಕರ್ತನ ದೂತನು ಮಾನೋಹನಿಗೆ--ನೀನು ನನ್ನನ್ನು ನಿಲ್ಲಿಸಿಕೊಂಡರೂ ನಾನು ನಿನ್ನ ರೊಟ್ಟಿಯನ್ನು ತಿನ್ನುವ ದಿಲ್ಲ; ನೀನು ದಹನಬಲಿಯನ್ನು ಅರ್ಪಿಸಿದರೆ ಅದನ್ನು ಕರ್ತನಿಗೆ ಅರ್ಪಿಸಬೇಕು ಅಂದನು.
ಎದೋಮ್ಯರ ಮತ್ತು ಇಷ್ಮಾಯೇಲ್ಯರ ಗುಡಾರಗಳೂ ಮೋವಾಬೂ ಹಗ್ರೀಯರೂ
ಅವರಿಗೆ ಆದ ಎಲ್ಲಾ ಶ್ರಮೆಯಲ್ಲಿ ಆತನಿಗೆ ಶ್ರಮೆ ಆಯಿತು; ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು; ತನ್ನ ಪ್ರೀತಿಯಲ್ಲಿಯೂ ತನ್ನ ಕನಿಕರ ದಲ್ಲಿಯೂ ಆತನೇ ಅವರನ್ನು ವಿಮೋಚಿಸಿದನು; ಪೂರ್ವಕಾಲದ ದಿನಗಳಲ್ಲೆಲ್ಲಾ ಅವರನ್ನು ಎತ್ತಿಕೊಂಡು ಹೊತ್ತುಕೊಂಡನು.
ಗರ್ಭದಲ್ಲಿ ಅವನು ತನ್ನ ಸಹೋದರ ನನ್ನು ಹಿಮ್ಮಡಿಯಿಂದ ಹಿಡಿದು ತನ್ನ ಶಕ್ತಿಯಿಂದ ದೇವರೊಂದಿಗೆ ಬಲಹೊಂದಿದನು.
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮನ್ನು ಸುಲುಕೊಂಡ ಜನಾಂಗ ಗಳ ಬಳಿಗೆ ಮಹಿಮೆಯ ತರುವಾಯ ನನ್ನನ್ನು ಆತನು ಕಳುಹಿಸಿದ್ದಾನೆ; ನಿಮ್ಮನ್ನು ಮುಟ್ಟುವವನು ಆತನ ಕಣ್ಣುಗುಡ್ಡೆಯನ್ನು ತಾಕುವವನಾಗಿದ್ದಾನೆ.
ಇಗೋ, ನನ್ನ ದೂತನನ್ನು ನಾನು ಕಳುಹಿಸುತ್ತೇನೆ; ಅವನು ನನ್ನ ಮುಂದೆ ಮಾರ್ಗವನ್ನು ಸಿದ್ಧಮಾಡುವನು; ನೀವು ಹುಡುಕುವ ಕರ್ತನು ಫಕ್ಕನೆ ತನ್ನ ಆಲಯಕ್ಕೆ ಬರುವನು; ನೀವು ಸಂತೋಷಪಡುವ ಒಡಂಬಡಿಕೆಯ ದೂತನೇ, ಇಗೋ, ಬರುತ್ತಾನೆಂದು ಸೈನ್ಯಗಳ ಕರ್ತನು ಹೇಳು ತ್ತಾನೆ.
ಯಾವನೂ ಯಾವ ಕಾಲದಲ್ಲೂ ದೇವರನ್ನು ಕಂಡಿಲ್ಲ. ತಂದೆಯ ಎದೆಯಲ್ಲಿರುವ ಆ ಒಬ್ಬನೇ ಮಗ ನಾಗಿರುವಾತನು ಆತನನ್ನು ತಿಳಿಯಪಡಿಸಿದ್ದಾನೆ.
ನಾಲ್ವತ್ತು ವರುಷ ತುಂಬಿದ ಮೇಲೆ ಸೀನಾಯಿ ಬೆಟ್ಟದ ಅಡವಿಯಲ್ಲಿ ಮುಳ್ಳಿನ ಪೊದೆಯೊಳಗೆ ಉರಿಯುವ ಬೆಂಕಿಯಲ್ಲಿ ಕರ್ತನ ದೂತನು ಅವನಿಗೆ ಕಾಣಿಸಿಕೊಂಡನು.
ಆತನೊಬ್ಬನೇ ಅಮರತ್ವವುಳ್ಳವನೂ ಯಾರೂ ಸವಿಾಪಿಸಲಾರದಂತ ಬೆಳಕಿನಲ್ಲಿ ವಾಸಿಸುವಾತನೂ ಆಗಿದ್ದಾನೆ; ಯಾವ ಮನುಷ್ಯನೂ ಆತನನ್ನು ಕಾಣಲಿಲ್ಲ; ಯಾರೂ ಕಾಣ ಲಾರರು; ಆತನಿಗೆ ಮಾನವೂ ನಿತ್ಯಾಧಿಕಾರವೂ ಇರಲಿ. ಆಮೆನ್.