ಸುನ್ನತಿಯಾಗದ ಗಂಡಸಿಗೆ ನನ್ನ ಒಡಂಬಡಿಕೆಯನ್ನು ವಿಾರಿದ ಕಾರಣ ಅವನು ಜನರೊಳಗಿಂದ ತೆಗೆದುಹಾಕಲ್ಪಡಬೇಕು ಅಂದನು.
Cross references
ಇದಲ್ಲದೆ ಅವನು ದಾರಿಯ ವಸತಿ ಗೃಹದಲ್ಲಿ ದ್ದಾಗ ಕರ್ತನು ಅವನೆದುರಿಗೆ ಬಂದು ಅವನ ಪ್ರಾಣ ತೆಗೆಯಬೇಕೆಂದಿದ್ದನು.
ಏಳು ದಿನಗಳ ವರೆಗೆ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನು ನಿಮ್ಮ ಮನೆಯೊಳಗಿಂದ ತೆಗೆದುಹಾಕಬೇಕು; ಮೊದಲನೆಯ ದಿನದಿಂದ ಏಳ ನೆಯ ದಿನದ ವರೆಗೆ ಹುಳಿರೊಟ್ಟಿಯನ್ನು ತಿನ್ನುವವರು ಇಸ್ರಾಯೇಲಿನೊಳಗಿಂದ ತೆಗೆದು ಹಾಕಲ್ಪಡಬೇಕು.
ಏಳು ದಿನಗಳ ವರೆಗೆ ಹುಳಿಹಿಟ್ಟು ನಿಮ್ಮ ಮನೆಗಳಲ್ಲಿ ಇರಬಾರದು; ಹುಳಿಕಲಸಿದ್ದನ್ನು ಯಾರು ತಿನ್ನುವರೋ ಆ ವ್ಯಕ್ತಿಯು ಪರದೇಶದವನಾಗಲಿ ಸ್ವದೇಶದವ ನಾಗಲಿ ಅವನನ್ನು ಇಸ್ರಾಯೇಲ್ ಸಭೆಯೊಳಗಿಂದ ತೆಗೆದು ಹಾಕಬೇಕು.
ಅದರ ಹಾಗೆ ತೈಲ ಮಾಡುವವನೂ ಅದನ್ನು ಅನ್ಯನಿಗೆ ಕೊಡುವವನೂ ತನ್ನ ಜನರೊಳಗಿಂದ ತೆಗೆದುಹಾಕಲ್ಪಡಬೇಕು ಎಂದು ಹೇಳು ಅಂದನು.
ಅದರ ಪರಿಮಳವನ್ನು ನೋಡುವದಕ್ಕೆ ಅದರ ಹಾಗೆ ಮಾಡುವವನು ತನ್ನ ಜನರೊಳಗಿಂದ ತೆಗೆದು ಹಾಕಲ್ಪಡ ಬೇಕು ಅಂದನು.
ಯಾವನಾದರೂ ಅಶುದ್ಧನಾಗಿದ್ದು ಕರ್ತ ನಿಗೆ ಸಂಬಂಧಪಟ್ಟ ಸಮಾಧಾನ ಬಲಿಗಳ ಯಜ್ಞದ ಮಾಂಸವನ್ನು ತಿನ್ನುವನೋ ಅವನು ತನ್ನ ಜನರಿಂದ ತೆಗೆಯಲ್ಪಡಬೇಕು.
ಮನುಷ್ಯರು ಕರ್ತನಿಗೆ ಬೆಂಕಿಯಿಂದ ಸಮರ್ಪಿಸಿದ ಪ್ರಾಣಿಯ ಕೊಬ್ಬನ್ನು ಯಾವನಾದರೂ ತಿಂದರೆ ಅವನು ತನ್ನ ಜನರಿಂದ ತೆಗೆಯಲ್ಪಡಬೇಕು.
ಯಾವುದೇ ತರದ ರಕ್ತವನ್ನು ತಿಂದವನು ಯಾವನೇ ಆಗಿರಲಿ ಅವನು ತನ್ನ ಜನರಿಂದ ತೆಗೆದು ಹಾಕಲ್ಪಡಬೇಕು ಎಂಬದೇ.
ಯಾವನಾದರೂ ಈ ಅಸಹ್ಯವಾದವುಗಳಲ್ಲಿ ಯಾವ ದನ್ನಾದರೂ ಮಾಡಿದರೆ ಅವುಗಳನ್ನು ಮಾಡುವ ಮನುಷ್ಯರನ್ನು ಅವರ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.ಆದದರಿಂದ ನಿಮಗಿಂತ ಮೊದಲಿನವರು ಮಾಡಿದಂತೆ ಅಸಹ್ಯವಾದ ಆಚರಣೆ ಗಳಲ್ಲಿ ಒಂದನ್ನಾದರೂ ನೀವು ಮಾಡದಂತೆ ಮತ್ತು ಅವುಗಳಲ್ಲಿ ನಿಮ್ಮನ್ನು ಹೊಲೆಮಾಡಿಕೊಳ್ಳದಂತೆ ನೀವು ನನ್ನ ಕಟ್ಟಳೆಗಳನ್ನು ಕೈಕೊಳ್ಳಬೇಕು; ನಿಮ್ಮ ದೇವರಾಗಿರುವ ಕರ್ತನು ನಾನೇ.
ಆದದರಿಂದ ಅದನ್ನು ತಿನ್ನುವ ಪ್ರತಿಯೊಬ್ಬನು ತನ್ನ ಅಪರಾಧವನ್ನು ಹೊತ್ತುಕೊಳ್ಳಬೇಕು. ಕರ್ತನ ಪವಿತ್ರ ವಾದದ್ದನ್ನು ಅವನು ಅಶುದ್ಧಮಾಡಿದ್ದಾನೆ. ಅವನು ತನ್ನ ಜನರ ಮಧ್ಯದೊಳಗಿಂದ ತೆಗೆದುಹಾಕಲ್ಪಡಬೇಕು.
ಆದರೆ ಯಾವನಾದರೂ ಅಂದರೆ ದೇಶದಲ್ಲಿ ಹುಟ್ಟಿದವನಾಗಲಿ ಪರಕೀಯನಾಗಲಿ ಹಟದಿಂದ ಪಾಪಮಾಡಿದರೆ ಅವನು ಕರ್ತನನ್ನು ನಿಂದಿಸುತ್ತಾನೆ. ಆ ಮನುಷ್ಯನು ತನ್ನ ಜನರ ಮಧ್ಯದಿಂದ ತೆಗೆದುಹಾಕ ಲ್ಪಡಬೇಕು.
ಆ ಕಾಲದಲ್ಲಿ ಕರ್ತನು ಯೆಹೋಶುವ ನಿಗೆ--ನೀನು ಹರಿತವಾದ ಚೂರಿಗಳನ್ನು ಮಾಡಿ ಕೊಂಡು ತಿರಿಗಿ ಎರಡನೇ ಸಾರಿ ಇಸ್ರಾಯೇಲ್ ಮಕ್ಕಳಿಗೆ ಸುನ್ನತಿಮಾಡು ಅಂದನು.
ಅವನು ತನ್ನ ಸಂಗಡ ಸಮಾಧಾನವುಳ್ಳವರಿಗೆ ವಿರೋಧವಾಗಿ ತನ್ನ ಕೈಗಳನ್ನು ಹಾಕಿದ್ದಾನೆ; ತನ್ನ ಒಡಂಬಡಿಕೆಯನ್ನು ಮುರಿದಿದ್ದಾನೆ.
ಭೂನಿವಾಸಿಗಳು ನ್ಯಾಯಪ್ರಮಾಣಗಳನ್ನು ವಿಾರಿ ನಿಯಮಗಳನ್ನು ಬದ ಲಾಯಿಸಿ ನಿತ್ಯವಾದ ಒಡಂಬಡಿಕೆಯನ್ನು ಭಂಗಪಡಿಸಿ ದ್ದರಿಂದ ಭೂಮಿಯು ಸಹ ಅದರ ನಿವಾಸಿಗಳ ಹೆಜ್ಜೆ ಯಿಂದ ಅಪವಿತ್ರವಾಗುವದು.
ರಾಜಮಾರ್ಗಗಳು ಹಾಳಾಗಿವೆ. ಹಾದಿಯಲ್ಲಿ ಹೋಗುವವರು ನಿಂತುಹೋದರು. ಅವನು ಒಪ್ಪಂದವನ್ನು ವಿಾರಿದ್ದಾನೆ. ಪಟ್ಟಣಗಳನ್ನು ತಿರಸ್ಕಾರಮಾಡಿ ಯಾವ ಮನುಷ್ಯನನ್ನು ಗಣನೆಗೆತಾ ರನು.
ಅನೇಕ ಕುರುಬರು ನನ್ನ ದ್ರಾಕ್ಷೇ ತೋಟವನ್ನು ಕೆಡಿಸಿದ್ದಾರೆ, ನನ್ನ ಭಾಗವನ್ನು ತುಳಿದುಬಿಟ್ಟಿದ್ದಾರೆ, ನಾನು ಮೆಚ್ಚಿದ ಭಾಗವನ್ನು ಹಾಳಾದ ಅರಣ್ಯವಾಗ ಮಾಡಿದ್ದಾರೆ.
ಇಸ್ರಾಯೇಲಿನ ಮಕ್ಕಳೂ ಯೆಹೂದನ ಮಕ್ಕಳೂ ಅವರ ಅರಸರೂ ಪ್ರಧಾನರೂ ಯಾಜಕರೂ ಪ್ರವಾದಿ ಗಳೂ ಯೆಹೂದದ ಜನರೂ ಯೆರೂಸಲೇಮಿನ ನಿವಾಸಿಗಳೂ ಸಹಿತವಾಗಿ ನನಗೆ ಕೋಪೋದ್ರೇಕ ಎಬ್ಬಿಸುವ ಹಾಗೆ ಮಾಡಿದ ಎಲ್ಲಾ ಕೆಟ್ಟತನದ ನಿಮಿತ್ತ ನಾನು ಆ ಪಟ್ಟಣವನ್ನು ನನ್ನ ಸನ್ನಿಧಿಯಿಂದ ತೆಗೆದುಹಾಕಬೇಕು.
ಹೀಗಿರುವದರಿಂದ ಯಾವನಾದರೂ ಅಯೋಗ್ಯ ವಾಗಿ ಈ ರೊಟ್ಟಿಯನ್ನು ತಿಂದು ಕರ್ತನ ಪಾತ್ರೆಯಲ್ಲಿ ಪಾನಮಾಡಿದರೆ ಅವನು ಕರ್ತನ ದೇಹಕ್ಕೂ ರಕ್ತಕ್ಕೂ ಅಪರಾಧ ಮಾಡಿದವನಾಗಿರುವನು.
ಯಾಕಂದರೆ ಕರ್ತನ ದೇಹವೆಂದು ವಿವೇಚಿಸದೆ ಅಯೋಗ್ಯವಾಗಿ ತಿಂದು ಕುಡಿಯುವವನು ಹಾಗೆ ತಿಂದು ಕುಡಿಯುವದರಿಂದ ನ್ಯಾಯತೀರ್ಪಿಗೊಳ ಗಾಗುವನು.