ಆದರೆ ಬರುವ ವರುಷ ಈ ಕಾಲದಲ್ಲಿ ಸಾರಳು ನಿನಗೆ ಹೆರುವ ಇಸಾಕನ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸುವೆನು ಎಂದು ಹೇಳಿದನು.
Cross references
ಆಗ ಆತನು--ಬರುವ ವರುಷ ಇದೇ ಸಮಯಕ್ಕೆ ನಿಶ್ಚಯ ವಾಗಿ ತಿರಿಗಿ ನಿನ್ನ ಬಳಿಗೆ ಬರುತ್ತೇನೆ. ಆಗ ಇಗೋ, ನಿನ್ನ ಹೆಂಡತಿಯಾದ ಸಾರಳಿಗೆ ಮಗನು ಇರುವನು ಅಂದನು. ಸಾರಳು ಆತನ ಹಿಂದೆ ಇದ್ದ ಗುಡಾರದ ಬಾಗಲಲ್ಲಿದ್ದು ಅದನ್ನು ಕೇಳಿಸಿಕೊಂಡಳು.
ಕರ್ತನು ತಾನು ಹೇಳಿದ ಹಾಗೆ ಸಾರಳನ್ನು ದರ್ಶಿಸಿ ತಾನು ಹೇಳಿದಂತೆ ಸಾರಳಿಗೆ ಮಾಡಿದನು.
ದೇವರು ಅಬ್ರಹಾಮನಿಗೆ ಮುಂತಿ ಳಿಸಿದ ಹಾಗೆ ಸಾರಳು ಗರ್ಭಿಣಿಯಾಗಿ ಅವನು ಮುದುಕನಾಗಿದ್ದಾಗ ಅವನಿಗೆ ಮಗನನ್ನು ಹೆತ್ತಳು.
ಅಬ್ರ ಹಾಮನಿಗೆ--ಈ ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು; ಈ ದಾಸಿಯ ಮಗನು ನನ್ನ ಮಗನಾದ ಇಸಾಕನ ಸಂಗಡ ಬಾಧ್ಯನಾಗಬಾರದು ಅಂದಳು.
ಆಗ ಕರ್ತನು ಅವನಿಗೆ ಕಾಣಿಸಿಕೊಂಡು--ಐಗುಪ್ತಕ್ಕೆ ಇಳಿದು ಹೋಗಬೇಡ. ನಾನು ನಿನಗೆ ಹೇಳುವ ದೇಶದಲ್ಲಿ ವಾಸವಾಗಿರು.
ಇಸ್ರಾಯೇಲನು ತನಗಿದ್ದದ್ದನ್ನೆಲ್ಲಾ ತಕ್ಕೊಂಡು ಬೇರ್ಷೆಬಕ್ಕೆ ಬಂದು ತನ್ನ ತಂದೆಯಾದ ಇಸಾಕನ ದೇವರಿಗೆ ಬಲಿಗಳನ್ನು ಅರ್ಪಿಸಿ ದನು.
ಆಗ ಅವನು ಯೋಸೇಫನನ್ನು ಆಶೀರ್ವದಿಸಿ--ನನ್ನ ತಂದೆಗಳಾದ ಅಬ್ರಹಾಮನೂ ಇಸಾಕನೂ ಯಾವಾತನ ಮುಂದೆ ನಡಕೊಂಡರೋ ಆ ದೇವರೇ, ನಾನು ಹುಟ್ಟಿದಂದಿನಿಂದ ಇಂದಿನ ವರೆಗೆ ನನ್ನನ್ನು ಪೋಷಣೆ ಮಾಡಿದ ದೇವರು,
ದೇವರು ಅವರ ನರಳಾಟವನ್ನು ಕೇಳಿ ಅಬ್ರಹಾಮ ಇಸಾಕ ಯಾಕೋಬ ಇವರ ಸಂಗಡ ತಾನು ಮಾಡಿದ ಒಡಂಬಡಿಕೆಯನ್ನು ಜ್ಞಾಪಕಮಾಡಿ ಕೊಂಡನು.ಆಗ ದೇವರು ಇಸ್ರಾಯೇಲ್ ಮಕ್ಕಳನ್ನು ನೋಡಿ ಅವರಲ್ಲಿ ಲಕ್ಷ್ಯವಿಟ್ಟನು.
ಇದಲ್ಲದೆ ಆತನು ಅವನಿಗೆ--ನಾನು ನಿನ್ನ ತಂದೆಯ ದೇವರು ಅಬ್ರಹಾಮನ ದೇವರು ಇಸಾಕನ ದೇವರು ಯಾಕೋಬನ ದೇವರು ಆಗಿದ್ದೇನೆ ಎಂದು ಹೇಳಿದನು. ಆಗ ಮೋಶೆಯು ದೇವರನ್ನು ನೋಡುವದಕ್ಕೆ ಭಯ ಪಟ್ಟು ತನ್ನ ಮುಖವನ್ನು ಮುಚ್ಚಿಕೊಂಡನು.
ನೀನು ನನ್ನನ್ನು ಸಮಾಧಿಯಲ್ಲಿ ಮರೆಮಾಡಿ, ನಿನ್ನ ಕೋಪವು ತಿರುಗುವ ವರೆಗೂ ನನ್ನನ್ನು ಅಡಗಿಸಿ ನನಗೆ ನೇಮಕವಾದ ಸಮಯವನ್ನು ನೇಮಿಸಿ ನನ್ನನ್ನು ಜ್ಞಾಪಕಮಾಡಿಕೊಂಡರೆ ಲೇಸು.
ಇದಲ್ಲದೆ ನಮ್ಮ ಪಿತೃಗಳಿಗೂ ಅಬ್ರ ಹಾಮನಿಗೂ ಅವನ ಸಂತತಿಗೂ ಸದಾಕಾಲಕ್ಕೆ ಆತನು ಹೇಳಿದಂತೆ ಮಾಡಿದ್ದಾನೆ ಅಂದಳು.
ನಮ್ಮ ಪಿತೃಗಳಿಗೆ ವಾಗ್ದಾನ ಮಾಡಿದ ಕರುಣೆಯನು ನೆರವೇರಿಸಲು ತನ್ನ ಪರಿಶುದ್ಧ ಒಡಂಬಡಿಕೆಯನ್ನು ನೆನಪಿಗೆ ತಂದು
ಆತನು ಅವರಿಗೆ--ತಂದೆಯು ತನ್ನ ಸ್ವಂತ ಅಧಿಕಾರದಲ್ಲಿ ಇಟ್ಟುಕೊಂಡಿರುವ ಸಮಯ ಗಳನ್ನೂ ಕಾಲಗಳನ್ನೂ ತಿಳಿದುಕೊಳ್ಳುವದು ನಿಮಗೆ ಸಂಬಂಧಪಟ್ಟದ್ದಲ್ಲ.
ಪಿತೃಗಳು ಇವರಿಗೆ ಸಂಬಂಧಪಟ್ಟವರೇ; ಶರೀರ ಸಂಬಂಧವಾಗಿ ಕ್ರಿಸ್ತನು ಇವರಿಂದಲೇ ಬಂದನು; ಆತನು ಎಲ್ಲಾದರ ಮೇಲೆ ಇರುವಾತನಾಗಿದ್ದು ನಿರಂತರಕ್ಕೂ ಸ್ತುತಿ ಹೊಂದತಕ್ಕ ದೇವರಾಗಿದ್ದಾನೆ. ಆಮೆನ್.
ಈ ವಾಗ್ದಾನದ ಮಾತೇನಂ ದರೆ--ಮುಂದಿನ ವರುಷದ ಇದೇ ಕಾಲದಲ್ಲಿ ನಾನು ಬರುವೆನು. ಆಗ ಸಾರಳಿಗೆ ಮಗನು ಇರುವನು ಎಂಬದೇ.
ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ಸಂತತಿಯವರು ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.
ನಂಬಿಕೆಯಿಂದಲೇ ಅವನು ವಾಗ್ದತ್ತ ದೇಶದಲ್ಲಿ ಅನ್ಯದೇಶದಲ್ಲಿ ಇದ್ದವನಂತೆ ಗುಡಾರಗಳಲ್ಲಿ ಇದ್ದುಕೊಂಡು ಪ್ರವಾಸಿಯಾಗಿದ್ದನು. ಅದೇ ವಾಗ್ದಾನಕ್ಕೆ ಬಾಧ್ಯರಾಗಿದ್ದ ಇಸಾಕ ಯಾಕೋಬರೊಂದಿಗೆ ಗುಡಾರಗಳಲ್ಲಿ ವಾಸಿಸಿದನು.