ಆಗ ತನ್ನ ಕಣ್ಣುಗಳನ್ನೆತ್ತಿ ನೋಡಲು ಅಗೋ, ಮೂವರು ಪುರುಷರು ಅವನ ಪಕ್ಕದಲ್ಲಿ ನಿಂತಿದ್ದರು. ಅವನು ಅವರನ್ನು ನೋಡಿ ಅವರಿಗೆ ಎದುರಾಗಿ ಗುಡಾರದ ಬಾಗಲಿನಿಂದ ಓಡಿಬಂದು ನೆಲದ ವರೆಗೂ ಬೊಗ್ಗಿ--
Cross references
ತರುವಾಯ ಆ ಮನುಷ್ಯರು ಎದ್ದು ಅಲ್ಲಿಂದ ಸೊದೋಮಿನ ಕಡೆಗೆ ನೋಡಿದರು. ಅಬ್ರಹಾಮನು ಅವರನ್ನು ಸಾಗಕಳುಹಿಸುವದಕ್ಕೆ ಅವರ ಸಂಗಡ ಹೋದನು.
ಆ ಮನುಷ್ಯರು ಅಲ್ಲಿಂದ ತಮ್ಮ ಮುಖಗಳನ್ನು ತಿರುಗಿಸಿಕೊಂಡು ಸೊದೋಮಿನ ಕಡೆಗೆ ಹೋದರು. ಆದರೆ ಅಬ್ರಹಾಮನು ಇನ್ನೂ ಕರ್ತನ ಮುಂದೆ ನಿಂತುಕೊಂಡಿದ್ದನು.
ದೂತರಿಬ್ಬರು ಸಾಯಂಕಾಲದಲ್ಲಿ ಸೊದೋಮ್ಗೆ ಬಂದಾಗ ಲೋಟನು ಸೊದೋ ಮ್ನ ಬಾಗಲಲ್ಲಿ ಕೂತಿದ್ದನು. ಲೋಟನು ಅವರನ್ನು ಎದುರುಗೊಳ್ಳುವದಕ್ಕೆ ಎದ್ದು ನೆಲದ ಮಟ್ಟಿಗೆ ಬೊಗ್ಗಿ
ಆಗ ಅಬ್ರಹಾಮನು ಎದ್ದು ಹೇತನ ಮಕ್ಕಳಾದ ಆ ದೇಶದ ಜನರ ಮುಂದೆ ಬಾಗಿ
ಆಗ ಅಬ್ರಹಾಮನು ಆ ದೇಶದ ಜನರ ಮುಂದೆ ಬಾಗಿ ಕೊಂಡನು.
ಆಗ ಯಾಕೋಬನು ಒಬ್ಬನೇ ಉಳಿದಾಗ ಒಬ್ಬ ಮನುಷ್ಯನು ಉದಯ ವಾಗುವ ವರೆಗೆ ಅವನ ಸಂಗಡ ಹೋರಾಡಿದನು.
ತಾನೇ ಅವರ ಮುಂದಾಗಿ ಹೋಗಿ ತನ್ನ ಸಹೋದರನ ಬಳಿಗೆ ಬರುವ ವರೆಗೆ ಏಳು ಸಾರಿ ನೆಲದ ವರೆಗೆ ಬೊಗ್ಗಿದನು.
ಆಗ ಯೋಸೇಫನು ದೇಶದ ಮೇಲೆಲ್ಲಾ ಅಧಿಪತಿಯಾ ಗಿದ್ದನು. ದೇಶದ ಜನರಿಗೆಲ್ಲಾ ಧಾನ್ಯವನ್ನು ಮಾರು ವವನು ಅವನೇ ಆಗಿದ್ದನು. ಹೀಗಿರಲಾಗಿ ಯೋಸೇಫನ ಸಹೋದರರು ಬಂದು ತಮ್ಮ ಮುಖಗಳನ್ನು ನೆಲದ ಮಟ್ಟಿಗೂ ತಗ್ಗಿಸಿ ಅವನಿಗೆ ಅಡ್ಡಬಿದ್ದರು.
ಯೋಸೇಫನು ಮನೆಗೆ ಬಂದ ಮೇಲೆ ತಮ್ಮ ಕೈಗಳಲ್ಲಿದ್ದ ಕಾಣಿಕೆಯನ್ನು ಮನೆಯೊಳಗೆ ತಕ್ಕೊಂಡು ಬಂದು ನೆಲದ ಮಟ್ಟಿಗೂ ಅವನಿಗೆ ಅಡ್ಡಬಿದ್ದರು.
ಅದಕ್ಕವರು--ನಿನ್ನ ದಾಸರಾದ ನಮ್ಮ ತಂದೆಯು ಕ್ಷೇಮದಿಂದಿದ್ದಾನೆ. ಅವನು ಇನ್ನೂ ಬದುಕಿದ್ದಾನೆ ಎಂದು ಹೇಳಿ ತಮ್ಮ ತಲೆಗಳನ್ನು ಬಾಗಿಸಿ ವಂದಿಸಿದರು.
ಯೋಸೇಫನು ಇನ್ನು ಮನೆಯಲ್ಲಿದ್ದಾಗಲೇ ಯೆಹೂದನೂ ಅವನ ಸಹೋದ ರರೂ ಬಂದು ಅವನ ಮುಂದೆ ಅಡ್ಡಬಿದ್ದರು.
ಆಗ ಯೋಸೇಫನು ಅವರನ್ನು ತನ್ನ ಮೊಣಕಾಲುಗಳ ಬಳಿಯಿಂದ ದೂರ ಮಾಡಿ ಅಡ್ಡಬಿದ್ದನು.
ಇದಾದ ಮೇಲೆ ಯೆಹೋಶುವನು ಯೆರಿ ಕೋವಿನ ಬಳಿಯಲ್ಲಿ ಇದ್ದಾಗ ಆದದ್ದೇನಂದರೆ, ತನ್ನ ಕಣ್ಣುಗಳನ್ನೆತ್ತಿ ನೋಡಿದಾಗ ಇಗೋ, ಒಬ್ಬ ಮನು ಷ್ಯನು ಅವನಿಗೆದುರಾಗಿ ನಿಂತಿದ್ದನು; ಆತನ ಕೈಯಲ್ಲಿ ಬಿಚ್ಚುಕತ್ತಿ ಇತ್ತು. ಯೆಹೋಶುವನು ಆತನ ಬಳಿಗೆ ಹೋಗಿ ಆತನಿಗೆ--ನೀನು ನಮಗೋಸ್ಕರವೋ? ನಮ್ಮ ವೈರಿಗಳಿಗೋಸ್ಕರವೋ? ಅಂದನು.
ಅವನ ಹೆಂಡತಿಯು ಹೆರದೆ ಬಂಜೆಯಾಗಿದ್ದಳು. ಕರ್ತನ ದೂತನು ಆ ಸ್ತ್ರೀಗೆ ಪ್ರತ್ಯಕ್ಷ ವಾಗಿ ಅವಳಿಗೆ--ಇಗೋ, ನೀನು ಹೆರದೆ ಬಂಜೆಯಾ ಗಿದ್ದೀ. ಆದರೆ ನೀನು ಗರ್ಭ ಧರಿಸಿ ಒಬ್ಬ ಮಗನನ್ನು ಹೆರುವಿ.
ಆಗ ಆ ಸ್ತ್ರೀಯು ಬಂದು ತನ್ನ ಗಂಡನಿಗೆದೇವರ ಒಬ್ಬ ಮನುಷ್ಯನು ನನ್ನ ಬಳಿಗೆ ಬಂದನು. ಅವನ ರೂಪವು ದೇವದೂತನ ರೂಪದ ಹಾಗೆ ಮಹಾಭಯಂಕರವಾಗಿತ್ತು. ನಾನು ಅವನನ್ನು--ಎಲ್ಲಿಂದ ಬಂದಿ ಎಂದು ಕೇಳಲಿಲ್ಲ; ಅವನು ತನ್ನ ಹೆಸರನ್ನು ನನಗೆ ತಿಳಿಸಲಿಲ್ಲ.
ಆಗ ಅವಳು ಸಾಷ್ಟಾಂಗ ಬಿದ್ದು ವಂದಿಸಿ ಅವನಿಗೆ ನಾನು ಅನ್ಯಳಾಗಿರುವಾಗ ನೀನು ನನ್ನನ್ನು ತಿಳುಕೊಂಡು ನನ್ನ ಮೇಲೆ ನಿನ್ನ ಕೃಪೆ ಯನ್ನು ತೋರಿಸಿದ್ದು ಹೇಗೆ ಅಂದಳು.
ಯೆರಿಕೋವಿನ ಬಳಿಯಲ್ಲಿ ಎದುರಾಗಿದ್ದ ಪ್ರವಾದಿಗಳ ಮಕ್ಕಳು ಅವನನ್ನು ಕಂಡಾಗ--ಎಲೀಯನ ಆತ್ಮನು ಎಲೀಷನ ಮೇಲೆ ನಿಂತಿರುವನು ಎಂದು ಹೇಳಿ ಅವನನ್ನು ಎದುರುಗೊಂಡು ಅವನಿಗೆ ಸಾಷ್ಟಾಂಗನಮಸ್ಕಾರಮಾಡಿದರು.
ಪರಿಶುದ್ಧರ ಕೊರತೆಯ ಪ್ರಕಾರ ಹಂಚಿರಿ; ಅತಿಥಿಸತ್ಕಾರವನ್ನು ಮಾಡಿರಿ.
ಪರರಿಗೆ ಸತ್ಕಾರ ಮಾಡುವದನ್ನು ಮರೆಯಬೇಡಿರಿ; ಅದನ್ನು ಮಾಡುವಲ್ಲಿ ಕೆಲವರು ತಿಳಿಯದೆ ದೂತರನ್ನು ಸತ್ಕರಿಸಿದ್ದಾರೆ.
ಗುಣುಗುಟ್ಟದೆ ಒಬ್ಬರಿಗೊಬ್ಬರು ಅತಿಥಿ ಸತ್ಕಾರ ಮಾಡಿರಿ.