ದೇವರಾದ ಕರ್ತನು ಮನುಷ್ಯ ನಿಗೆ ಆಜ್ಞಾಪಿಸಿದ್ದೇನಂದರೆ--ನೀನು ತೋಟದ ಎಲ್ಲಾ ಮರಗಳ ಫಲವನ್ನು ಯಥೇಚ್ಛವಾಗಿ ತಿನ್ನಬಹುದು;
Cross references
ದೇವರು--ಇಗೋ, ಸಮಸ್ತ ಭೂಮಿಯ ಮೇಲೆ ಇರುವ ಬೀಜವುಳ್ಳ ಪ್ರತಿಯೊಂದು ಪಲ್ಯವನ್ನೂ ಬೀಜಬಿಡುವ ಪ್ರತಿಯೊಂದು ಹಣ್ಣಿನ ಮರವನ್ನೂ ನಿಮಗೆ ಕೊಟ್ಟಿದ್ದೇನೆ. ಅದು ನಿಮಗೆ ಆಹಾರಕ್ಕಾಗಿ ರುವದು.
ಕರ್ತನಾದ ದೇವರು ನೋಟಕ್ಕೆ ರಮ್ಯವಾದ ಮತ್ತು ಊಟಕ್ಕೆ ಒಳ್ಳೇದಾದ ಎಲ್ಲಾ ಮರಗಳನ್ನು, ತೋಟದ ಮಧ್ಯದಲ್ಲಿ ಜೀವದ ಮರವನ್ನು, ಒಳ್ಳೇದರ ಕೆಟ್ಟದರ ತಿಳುವಳಿಕೆಯ ಮರವನ್ನು ಭೂಮಿಯೊಳಗಿಂದ ಬೆಳೆಯಿಸಿದನು.
ಕರ್ತನಾದ ದೇವರು ಮಾಡಿದ ಅಡವಿಯ ಎಲ್ಲಾ ಮೃಗಗಳಿಗಿಂತ ಸರ್ಪವು ಯುಕ್ತಿ ಯುಳ್ಳದ್ದಾಗಿತ್ತು. ಅದು ಸ್ತ್ರೀಗೆ--ನೀವು ತೋಟ ದಲ್ಲಿರುವ ಯಾವ ಮರದ ಫಲವನ್ನು ತಿನ್ನಬಾರದೆಂದು ದೇವರು ಹೇಳಿದ್ದು ನಿಜವೋ ಎಂದು ಕೇಳಿತು.
ಅದಕ್ಕೆ ಸಮುವೇಲನು--ಕರ್ತನ ವಾಕ್ಯಕ್ಕೆ ವಿಧೇಯನಾದರೆ ಕರ್ತನಿಗೆ ಆಗುವ ಸಂತೋಷ ದಹನ ಬಲಿಗಳಲ್ಲಿಯೂ ಬಲಿಗಳಲ್ಲಿಯೂ ಆಗುವದೋ? ಇಗೋ, ಬಲಿಗಿಂತ ವಿಧೇಯವಾಗುವದು ಟಗರುಗಳ ಕೊಬ್ಬಿಗಿಂತ ಆಲೈಸುವದು ಉತ್ತಮವಾಗಿರುವದು.
ದೇವರ ಪ್ರತಿಯೊಂದು ಸೃಷ್ಟಿಯೂ ಒಳ್ಳೇದಾಗಿದೆ; ಸ್ತೋತ್ರ ಮಾಡಿ ತೆಗೆದು ಕೊಳ್ಳುವ ಪಕ್ಷಕ್ಕೆ ಯಾವದನ್ನೂ ನಿರಾಕರಿಸಬಾರದು.
ಈ ಲೋಕದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿ ಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ಭರವಸ ವನ್ನಿಡದೆ ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲ ವನ್ನೂ ಹೇರಳವಾಗಿ ದಯಪಾಲಿಸುವ ಜೀವವುಳ್ಳ ದೇವರ ಮೇಲೆ ಭರವಸವನ್ನಿಡಬೇಕೆಂತಲೂ