ಕರ್ತನಾದ ದೇವರು ಏದೆನಿನಲ್ಲಿ ಪೂರ್ವ ದಿಕ್ಕಿಗೆ ತೋಟವನ್ನು ಮಾಡಿ ತಾನು ರೂಪಿಸಿದ ಮನುಷ್ಯನನ್ನು ಅದರಲ್ಲಿ ಇಟ್ಟನು.
Cross references
ಆದದರಿಂದ ಕರ್ತನಾದ ದೇವರು ಅವನನ್ನು ಯಾವದರಿಂದ ತೆಗೆದನೋ ಆ ಭೂಮಿಯನ್ನು ವ್ಯವಸಾಯಮಾಡುವದಕ್ಕೆ ಏದೆನ್ ತೋಟದಿಂದ ಹೊರಡಿಸಿಬಿಟ್ಟನು.ಹೀಗೆ ಆತನು ಮನುಷ್ಯನನ್ನು ಹೊರಗೆ ಹಾಕಿ ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವದಕ್ಕೆ ಏದೆನ್ ತೋಟದ ಪೂರ್ವದಿಕ್ಕಿನಲ್ಲಿ ಕೆರೂಬಿಯರನ್ನೂ ಎಲ್ಲಾ ಕಡೆಯಲ್ಲಿ ಸುತ್ತುವ ಜ್ವಾಲೆಯ ಕತ್ತಿಯನ್ನೂ ಇರಿಸಿದನು.
ಹೀಗೆ ಆತನು ಮನುಷ್ಯನನ್ನು ಹೊರಗೆ ಹಾಕಿ ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವದಕ್ಕೆ ಏದೆನ್ ತೋಟದ ಪೂರ್ವದಿಕ್ಕಿನಲ್ಲಿ ಕೆರೂಬಿಯರನ್ನೂ ಎಲ್ಲಾ ಕಡೆಯಲ್ಲಿ ಸುತ್ತುವ ಜ್ವಾಲೆಯ ಕತ್ತಿಯನ್ನೂ ಇರಿಸಿದನು.
ಕಾಯಿನನು ಕರ್ತನ ಸನ್ನಿಧಿಯಿಂದ ಹೊರಟು ಏದೆನಿನ ಪೂರ್ವದಿಕ್ಕಿನಲ್ಲಿದ್ದ ನೋದು ಎಂಬ ದೇಶ ದಲ್ಲಿ ವಾಸಿಸಿದನು.
ಲೋಟನು ತನ್ನ ಕಣ್ಣುಗಳನ್ನು ಎತ್ತಿ ಯೊರ್ದನಿನ ಮೈದಾನವನ್ನೆಲ್ಲಾ ನೋಡಿದನು. ಯಾಕಂದರೆ ಕರ್ತನು ಸೊದೋಮನ್ನೂ ಗೊಮೋರ ವನ್ನೂ ನಾಶಮಾಡುವದಕ್ಕಿಂತ ಮುಂಚೆ ಅದೆಲ್ಲಾ ಚೋಗರಿನ ವರೆಗೆ ನೀರಾವರಿಯಾಗಿದ್ದು ಕರ್ತನ ತೋಟದಂತೆಯೂ ಐಗುಪ್ತದೇಶದಂತೆಯೂ ಇತ್ತು.
ನನ್ನ ತಂದೆಗಳು ಹಾಳು ಮಾಡಿದ ಗೋಜಾನ್, ಖಾರಾನ್, ರೆಚೆಫ್, ತೆಲಸ್ಸಾರ್ನಲ್ಲಿದ್ದ ಎದೆನಿನ ಮಕ್ಕಳು,
ಕರ್ತನು ಚೀಯೋನನ್ನು ಆದರಿಸುವನು; ಆತನು ಅದರ ಹಾಳಾದ ಸ್ಥಳಗ ಳನ್ನು ಸುಧಾರಿಸುವನು; ಅದರ ಅರಣ್ಯವನ್ನು ಏದೆನ್ ಹಾಗೆಯೂ ಮರುಭೂಮಿಯನ್ನು ಕರ್ತನ ತೋಟದ ಹಾಗೆಯೂ ಮಾಡುವನು. ಅಲ್ಲಿ ಆನಂದವೂ ಉಲ್ಲಾ ಸವೂ ಉಪಕಾರ ಸ್ತುತಿಯೂ ಇಂಪಾದ ಸ್ವರವೂ ಕಂಡುಬರುವವು.
ಹಾರಾನ್, ಕನ್ನೆ, ಏದೆನ್, ಶೆಬ, ಅಶ್ಶೂರ್ ಮತ್ತು ಕಿಲ್ಮದ್ವರು ನಿನ್ನ ವ್ಯಾಪಾರಿಗಳಾಗಿದ್ದರು.
ದೇವರ ತೋಟ ವಾದ ಏದೆನಿನಲ್ಲಿ ನೀನಿದ್ದಿ. ಮಾಣಿಕ್ಯ, ಪುಷ್ಯರಾಗ, ಪಚ್ಚೆ, ಪೀತರತ್ನ, ವಜ್ರ, ವೈಡೂರ್ಯ, ನೀಲ ಗೋಮೇ ಧಿಕ, ಕೆಂಪು, ಸ್ಪಟಿಕ, ಚಿನ್ನ ಈ ಅಮೂಲ್ಯವಾದವು ಗಳಿಂದ ಭೂಷಿತವಾಗಿದ್ದಿ. ನಿನ್ನಲ್ಲಿದ್ದ ದಮ್ಮಡಿಗಳೂ ಕೊಳಲುಗಳೂ ಇವುಗಳ ಕೆಲಸವು ನಿನ್ನಲ್ಲಿದ್ದು ನಿನ್ನ ಸೃಷ್ಟಿಯ ದಿನದಲ್ಲಿ ಸಿದ್ಧವಾದವು.
ದೇವರ ತೋಟದ ದೇವದಾರುಗಳು ಅವನನ್ನು ಮರೆಮಾಡಲಿಲ್ಲ; ತುರಾಯಿ ಮರಗಳು ಅವನ ಕೊಂಬೆಗಳಿಗೆ ಸಮ ವಾಗಲಿಲ್ಲ; ಆಲದ ಮರಗಳು ಅವನ ರೆಂಬೆಗಳಷ್ಟೂ ಇಲ್ಲ; ಆ ದೇವರ ತೋಟದ ಯಾವುದೇ ಮರವು ಇವನ ಸೌಂದರ್ಯಕ್ಕೆ ಸಮವಾಗಲಿಲ್ಲ.
ನಾನು ಅದನ್ನು ಕುಣಿಗೆ ಇಳಿಯುವವರ ಜೊತೆಗೆ ಸೇರಿಸಬೇಕೆಂದು ಪಾತಾಳಕ್ಕೆ ತಳ್ಳಿಬಿಟ್ಟಾಗ ಅದು ಬಿದ್ದ ಶಬ್ದಕ್ಕೆ ಸಕಲ ಜನಾಂಗಗಳು ನಡುಗಿದವು; ಅಧೋ ಲೋಕಕ್ಕೆ ಪಾಲಾದ ಏದೆನಿನ ಎಲ್ಲಾ ಮರಗಳು, ಲೆಬನೋನಿನ ಉತ್ತಮೋತ್ತಮವಾದ ವೃಕ್ಷಗಳು, ನೀರು ಕುಡಿಯುವವುಗಳೆಲ್ಲಾ ಕೆಳಗಿನ ಸೀಮೆಯಲ್ಲಿ ಸಂತೈಸಿ ಕೊಂಡವು.
ನೀನು ಹೀಗೆ ಘನತೆಯಿಂದಲೂ ದೊಡ್ಡಸ್ತಿಕೆ ಯಿಂದಲೂ ಏದೆನಿನ ಯಾವ ಮರಗಳಿಗೆ ಸಮ ನಾಗಿರುವೆ? ಆದರೂ ಏದೆನಿನ ಮರಗಳ ಸಂಗಡ ಕೆಳಗಿನ ಸೀಮೆಗಳಿಗೆ ಇಳಿಸಲ್ಪಡುವಿ; ಸುನ್ನತಿಯಿಲ್ಲದವರ ಮಧ್ಯದಲ್ಲಿ ಕತ್ತಿಯಿಂದ ಹತವಾದವರ ಸಂಗಡ ಮಲ ಗುವಿ. ಇದೇ ಫರೋಹನನೂ ಅವನ ಎಲ್ಲಾ ಜನ ಸಮೂಹವೂ ಆಗಿವೆ ಎಂದು ದೇವರಾದ ಕರ್ತನು ಹೇಳುತ್ತಾನೆ.
ಅವರ ಮುಂದೆ ಬೆಂಕಿ ದಹಿಸುತ್ತದೆ; ಅವರ ಹಿಂದೆ ಜ್ವಾಲೆ ಸುಡುತ್ತದೆ; ಅವರ ಮುಂದೆ ದೇಶವು ಏದೆನ್ ತೋಟದ ಹಾಗಿದೆ; ಅವರ ಹಿಂದೆ ಹಾಳಾದ ಕಾಡು; ಹೌದು, ಅವುಗಳಿಗೆ ಯಾವದೂ ತಪ್ಪಿಸಿಕೊಳ್ಳಲಾರದು.