ಕರ್ತನಾದ ದೇವರು ನೋಟಕ್ಕೆ ರಮ್ಯವಾದ ಮತ್ತು ಊಟಕ್ಕೆ ಒಳ್ಳೇದಾದ ಎಲ್ಲಾ ಮರಗಳನ್ನು, ತೋಟದ ಮಧ್ಯದಲ್ಲಿ ಜೀವದ ಮರವನ್ನು, ಒಳ್ಳೇದರ ಕೆಟ್ಟದರ ತಿಳುವಳಿಕೆಯ ಮರವನ್ನು ಭೂಮಿಯೊಳಗಿಂದ ಬೆಳೆಯಿಸಿದನು.
Cross references
ಆದರೆ ಒಳ್ಳೇದು ಕೆಟ್ಟದರ ತಿಳುವಳಿಕೆಯನ್ನುಂಟು ಮಾಡುವ ಮರದ ಫಲವನ್ನು ನೀನು ತಿನ್ನಬಾರದು; ಅದನ್ನು ತಿಂದ ದಿನದಲ್ಲಿ ಖಂಡಿತವಾಗಿ ಸಾಯುವಿ ಅಂದನು.
ಆದರೆ ತೋಟದ ಮಧ್ಯದಲ್ಲಿ ರುವ ಮರದ ಫಲದ ವಿಷಯದಲ್ಲಿ ದೇವರು--ನೀವು ಸಾಯದ ಹಾಗೆ ಅದನ್ನು ತಿನ್ನಲೂ ಬಾರದು, ಮುಟ್ಟಲೂ ಬಾರದು ಎಂದು ಹೇಳಿದ್ದಾನೆ ಅಂದಳು.
ನೀವು ಅದನ್ನು ತಿಂದ ದಿನದಲ್ಲಿ ನಿಮ್ಮ ಕಣ್ಣುಗಳು ತೆರೆಯ ಲ್ಪಡುವವೆಂದೂ ನೀವು ಒಳ್ಳೇದರ ಕೆಟ್ಟದರ ಭೇದವನ್ನು ಅರಿತವರಾಗಿ ದೇವರುಗಳ ಹಾಗೆ ಇರುವಿರೆಂದೂ ದೇವರಿಗೆ ತಿಳಿದಿದೆ ಎಂದು ಹೇಳಿತು.
ಇದ ಲ್ಲದೆ ಕರ್ತನಾದ ದೇವರು--ಇಗೋ, ಮನುಷ್ಯನು ಒಳ್ಳೇದರ ಕೆಟ್ಟದರ ಭೇದವನ್ನು ತಿಳಿದು ನಮ್ಮಲ್ಲಿ ಒಬ್ಬನಂತಾದನು; ಈಗ ಅವನು ಕೈಚಾಚಿ ಜೀವವೃಕ್ಷದ ಫಲವನ್ನು ತೆಗೆದು ತಿಂದು ಎಂದೆಂದಿಗೂ ಬದುಕ ಬಾರದು ಅಂದನು.
ಆತನು ನಮಗೆ ಆಜ್ಞಾಪಿಸಿದಂತೆ ನಮ್ಮ ದೇವರಾದ ಕರ್ತನ ಮುಂದೆ ಈ ಎಲ್ಲಾ ಆಜ್ಞೆಯನ್ನು ಕೈಕೊಂಡು ನಡೆದರೆ ಅದು ನಮಗೆ ನೀತಿಯಾಗಿರುವದು.
ತನ್ನನ್ನು ಹಿಡಿದುಕೊಳ್ಳುವ ವರಿಗೆ ಆಕೆಯು ಜೀವದ ವೃಕ್ಷವಾಗಿದ್ದಾಳೆ; ಆಕೆಯನ್ನು ಭದ್ರವಾಗಿ ಇಟ್ಟುಕೊಳ್ಳುವ ಪ್ರತಿಯೊಬ್ಬನೂ ಧನ್ಯನು.
ನೀತಿವಂತರ ಫಲವು ಜೀವವೃಕ್ಷ; ಆತ್ಮಗಳನ್ನು ಗೆಲ್ಲು ವವನು ಜ್ಞಾನಿಯಾಗಿದ್ದಾನೆ.ಇಗೋ, ಭೂಮಿಯ ಮೇಲೆ ನೀತಿವಂತರು ಪ್ರತಿಫಲವನ್ನು ಹೊಂದುವರು; ದುಷ್ಟನೂ ಪಾಪಿಯೂ ಎಷ್ಟೋ ಹೆಚ್ಚಾಗಿ ಪ್ರತಿಫಲ ವನ್ನು ಹೊಂದುತ್ತಾರೆ.
ಸುಳ್ಳುಗಾರರ ಗುರುತುಗಳನ್ನು ನಿರರ್ಥಕಮಾಡುವವನೂ ಕಣಿ ಹೇಳು ವವರನ್ನು ಹುಚ್ಚರನ್ನಾಗಿ ಮಾಡುವವನೂ ಜ್ಞಾನಿಗಳನ್ನು ಹಿಂದಕ್ಕೆ ತಳ್ಳಿ ಅವರ ತಿಳುವಳಿಕೆಯನ್ನು ಬುದ್ದಿಹೀನ ವಾಗ ಮಾಡುವವನೂ
ನೀನು ನಿನ್ನ ಕೆಟ್ಟತನದಲ್ಲಿ ನಂಬಿಕೆಯಿಟ್ಟು ನನ್ನನ್ನು ಯಾರೂ ನೋಡುವದಿಲ್ಲವೆಂದು ಹೇಳಿದಿ. ನಿನ್ನ ಜ್ಞಾನವು, ನಿನ್ನ ತಿಳುವಳಿಕೆಯು ನಿನ್ನನ್ನು ದಾರಿತಪ್ಪಿಸಿದ್ದ ರಿಂದ ನಿನ್ನ ಹೃದಯದಲ್ಲಿ--ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ ಎಂದು ಅಂದು ಕೊಂಡಿ.
ದೇವರ ತೋಟದ ದೇವದಾರುಗಳು ಅವನನ್ನು ಮರೆಮಾಡಲಿಲ್ಲ; ತುರಾಯಿ ಮರಗಳು ಅವನ ಕೊಂಬೆಗಳಿಗೆ ಸಮ ವಾಗಲಿಲ್ಲ; ಆಲದ ಮರಗಳು ಅವನ ರೆಂಬೆಗಳಷ್ಟೂ ಇಲ್ಲ; ಆ ದೇವರ ತೋಟದ ಯಾವುದೇ ಮರವು ಇವನ ಸೌಂದರ್ಯಕ್ಕೆ ಸಮವಾಗಲಿಲ್ಲ.
ನಾನು ಅದನ್ನು ಕುಣಿಗೆ ಇಳಿಯುವವರ ಜೊತೆಗೆ ಸೇರಿಸಬೇಕೆಂದು ಪಾತಾಳಕ್ಕೆ ತಳ್ಳಿಬಿಟ್ಟಾಗ ಅದು ಬಿದ್ದ ಶಬ್ದಕ್ಕೆ ಸಕಲ ಜನಾಂಗಗಳು ನಡುಗಿದವು; ಅಧೋ ಲೋಕಕ್ಕೆ ಪಾಲಾದ ಏದೆನಿನ ಎಲ್ಲಾ ಮರಗಳು, ಲೆಬನೋನಿನ ಉತ್ತಮೋತ್ತಮವಾದ ವೃಕ್ಷಗಳು, ನೀರು ಕುಡಿಯುವವುಗಳೆಲ್ಲಾ ಕೆಳಗಿನ ಸೀಮೆಯಲ್ಲಿ ಸಂತೈಸಿ ಕೊಂಡವು.
ನೀನು ಹೀಗೆ ಘನತೆಯಿಂದಲೂ ದೊಡ್ಡಸ್ತಿಕೆ ಯಿಂದಲೂ ಏದೆನಿನ ಯಾವ ಮರಗಳಿಗೆ ಸಮ ನಾಗಿರುವೆ? ಆದರೂ ಏದೆನಿನ ಮರಗಳ ಸಂಗಡ ಕೆಳಗಿನ ಸೀಮೆಗಳಿಗೆ ಇಳಿಸಲ್ಪಡುವಿ; ಸುನ್ನತಿಯಿಲ್ಲದವರ ಮಧ್ಯದಲ್ಲಿ ಕತ್ತಿಯಿಂದ ಹತವಾದವರ ಸಂಗಡ ಮಲ ಗುವಿ. ಇದೇ ಫರೋಹನನೂ ಅವನ ಎಲ್ಲಾ ಜನ ಸಮೂಹವೂ ಆಗಿವೆ ಎಂದು ದೇವರಾದ ಕರ್ತನು ಹೇಳುತ್ತಾನೆ.
ನದಿಯ ಬಳಿ ಅದರ ತೀರದಲ್ಲಿ ಆ ಕಡೆಯೂ ಈ ಕಡೆಯೂ ಆಹಾರಕ್ಕಾಗಿ ಎಲ್ಲಾ ಮರಗಳು ಬೆಳೆಯುವವು, ಅವುಗಳ ಎಲೆಗಳು ಬಾಡುವದಿಲ್ಲ ಹಣ್ಣು ಮುಗಿದು ಹೋಗುವದಿಲ್ಲ. ಅವು ತಿಂಗಳುಗಳ ಪ್ರಕಾರ ಹೊಸ ಫಲಗಳನ್ನು ಫಲಿಸು ವವು; ಅವುಗಳ ನೀರು ಪರಿಶುದ್ಧ ಸ್ಥಳದಿಂದ ಹೊರಟು ಬಂದದ್ದು, ಅವುಗಳ ಹಣ್ಣುಗಳು ಆಹಾರಕ್ಕೂ ಎಲೆಗಳು ಔಷಧಕ್ಕೂ ಆಗುವವು.
ನಾನೇ ಆ ಜೀವದ ರೊಟ್ಟಿಯಾಗಿದ್ದೇನೆ.
ವಿಗ್ರಹಗಳಿಗೆ ಸಮರ್ಪಣೆ ಮಾಡುವವು ಗಳ ವಿಷಯದಲ್ಲಿ ನಮ್ಮೆಲ್ಲರಿಗೂ ಜ್ಞಾನ ವಿದೆಯೆಂದು ನಾವು ಬಲ್ಲೆವು; ಜ್ಞಾನವು ಉಬ್ಬಿಕೊಳ್ಳುತ್ತದೆ, ಆದರೆ ಪ್ರಿತಿಯು ಭಕ್ತಿವೃದ್ಧಿಯನ್ನುಂಟುಮಾಡು ತ್ತದೆ.
ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ದೇವರ ಪರದೈಸಿನ ಮಧ್ಯದಲ್ಲಿರುವ ಜೀವವೃಕ್ಷದ ಹಣ್ಣನ್ನು ತಿನ್ನುವದಕ್ಕೆ ಕೊಡುವೆನು.
ಅದರ ಬೀದಿಯ ಮಧ್ಯದಲ್ಲಿಯೂ ಆ ನದಿಯ ಉಭಯ ಪಾರ್ಶ್ವಗಳಲ್ಲಿಯೂ ಜೀವವೃಕ್ಷವಿತ್ತು; ಅದು ತಿಂಗಳು ತಿಂಗಳಿಗೆ ಫಲವನ್ನು ಫಲಿಸುತ್ತಾ ಹನ್ನೆರಡು ತರದ ಫಲಗಳನ್ನು ಕೊಡುತ್ತದೆ. ಆ ಮರದ ಎಲೆಗಳು ಜನಾಂಗದವರನ್ನು ವಾಸಿಮಾಡುವದಕ್ಕೆ ಇದ್ದವು.
ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವರು ಧನ್ಯರು; ಅವರಿಗೆ ಜೀವವೃಕ್ಷದ ಹಕ್ಕು ಇರುವದು; ಅವರು ಹೆಬ್ಬಾಗಿಲು ಗಳಿಂದ ಆ ಪಟ್ಟಣದೊಳಕ್ಕೆ ಸೇರುವರು.