ಅಬ್ರಹಾಮನು ಅಲ್ಲಿಂದ ದಕ್ಷಿಣ ದೇಶದ ಕಾದೇಶಿಗೆ ಪ್ರಯಾಣಮಾಡಿ, ಶೂರಿಗೆ ಮಧ್ಯದಲ್ಲಿ ವಾಸಿಸಿ ಗೆರಾರಿನಲ್ಲಿ ಪ್ರವಾಸಿಯಾಗಿದ್ದನು.
Cross references
ಕಾನಾನ್ಯರ ಮೇರೆಯು ಸೀದೋನಿ ನಿಂದ ಗೆರಾರಿನ ಮಾರ್ಗವಾಗಿ ಗಾಜಾದ ವರೆಗೆ ಸೊದೋಮ್ ಗೊಮೋರ ಅದ್ಮಾ ಚೆಬೋಯಿಮ್ ಮಾರ್ಗವಾಗಿ ಲೆಷಾದ ವರೆಗೂ ಇರುತ್ತದೆ.
ಅಬ್ರಾಮನು ಪ್ರಯಾಣ ಮಾಡಿ ದಕ್ಷಿಣದ ಕಡೆಗೆ ಇನ್ನೂ ಹೋಗುತ್ತಲೇ ಇದ್ದನು.
ಆಗ ಅಬ್ರಾಮನು ತನ್ನ ಹೆಂಡತಿಯೊಂದಿಗೆ ತನಗೆ ಇದ್ದದ್ದನ್ನೆಲ್ಲಾ ತಕ್ಕೊಂಡು ಲೋಟನ ಸಹಿತವಾಗಿ ಐಗುಪ್ತವನ್ನು ಬಿಟ್ಟು ದಕ್ಷಿಣಕ್ಕೆ ಏರಿಹೋದನು.
ಅವರು ಹಿಂತಿರುಗಿ ಕಾದೇಶ್ ಎಂಬ ಎನ್ಮಿಷ್ಪಾಟಿಗೆ ಬಂದು ಅಮಾಲೆಕ್ಯರ ಎಲ್ಲಾ ಬೈಲನ್ನು ಹಚಚೋನ್ತಾಮರಿನಲ್ಲಿ ವಾಸವಾಗಿದ್ದ ಅಮೋರಿಯರನ್ನೂ ಸಂಹರಿಸಿದರು.
ಅಬ್ರಾಮನ ಹೆಂಡತಿಯಾದ ಸಾರಯಳು ಅವನಿಂದ ಮಕ್ಕಳನ್ನು ಪಡೆಯಲಿಲ್ಲ. ಆಕೆಗೆ ಹಾಗರಳೆಂಬ ಐಗುಪ್ತದೇಶದ ದಾಸಿಯು ಇದ್ದಳು.
ಆಗ ಕರ್ತನ ದೂತನು ಅರಣ್ಯದಲ್ಲಿ ಶೂರಿನ ಮಾರ್ಗದಲ್ಲಿರುವ ಒಂದು ನೀರಿನ ಬುಗ್ಗೆಯ ಬಳಿಯಲ್ಲಿ ಅವಳನ್ನು ಕಂಡು
ಆದದರಿಂದ ಆ ಬಾವಿಗೆ ಬೆರ್ ಲಹೈರೋಯಿ ಎಂದು ಹೆಸರಾಯಿತು. ಅದು ಕಾದೇಶಿಗೂ ಬೆರೆದಿಗೂ ಮಧ್ಯದಲ್ಲಿ ಇದೆ.
ಕರ್ತನು ಮಮ್ರೇಯ ಮೈದಾನಗಳಲ್ಲಿ ಅಬ್ರಹಾಮನಿಗೆ ಕಾಣಿಸಿಕೊಂಡನು. ಅವನು ಮಧ್ಯಾಹ್ನದ ವೇಳೆ ಗುಡಾರದ ಬಾಗಲಿನಲ್ಲಿ ಕೂತುಕೊಂಡಿದ್ದನು.
ಅಬ್ರಹಾಮನು ಫಿಲಿಷ್ಟಿಯರ ದೇಶದಲ್ಲಿ ಬಹು ದಿವಸ ಪ್ರವಾಸಿಯಾಗಿದ್ದನು.
ಆಗ ಇಸಾಕನು ಲಹೈರೋಯಿ ಎಂಬ ಬಾವಿಯ ಮಾರ್ಗವಾಗಿ ಬಂದನು. ಅವನು ದಕ್ಷಿಣ ದೇಶದಲ್ಲಿ ವಾಸವಾಗಿದ್ದನು.
ಅಬ್ರಹಾಮನ ದಿನಗಳಲ್ಲಿ ಬಂದ ಮೊದಲನೆಯ ಬರವಲ್ಲದೆ ದೇಶದಲ್ಲಿ ಮತ್ತೊಂದು ಬರ ಬಂದಿತು. ಆಗ ಇಸಾಕನು ಗೆರಾರಿನಲ್ಲಿದ್ದ ಫಿಲಿಷ್ಟಿಯರ ಅರಸನಾದ ಅಬೀಮೆಲೆಕನ ಬಳಿಗೆ ಹೋದನು.
ಆಗ ಇಸಾಕನು ಗೆರಾರಿನಲ್ಲಿ ವಾಸವಾಗಿದ್ದನು.
ಗೆರಾರಿನ ಮಂದೆಯನ್ನು ಮೇಯಿಸುವವರು --ಈ ನೀರು ನಮ್ಮದು ಎಂದು ಇಸಾಕನ ಮಂದೆಯನ್ನು ಮೇಯಿಸುವವರ ಸಂಗಡ ಜಗಳವಾಡಿದರು. ಅವರು ಅವನ ಸಂಗಡ ಜಗಳವಾಡಿದ ಕಾರಣ ಅವನು ಆ ಬಾವಿಗೆ ಏಸೆಕ್ ಎಂದು ಹೆಸರಿಟ್ಟನು.
ತರುವಾಯ ಅಬೀಮೆಲೆಕನೂ ಅವನ ಸ್ನೇಹಿತರಲ್ಲಿ ಒಬ್ಬನಾದ ಅಹುಜ್ಜತನೂ ಅವನ ಮುಖ್ಯ ಸೈನ್ಯಾಧಿಪತಿ ಯಾದ ಫೀಕೋಲನೂ ಗೆರಾರಿನಿಂದ ಅವನ ಬಳಿಗೆ ಬಂದರು.
ಅವರು ಹೋಗಿ ಮೋಶೆ ಆರೋನರ ಬಳಿಗೂ ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಯ ಬಳಿಗೂ ಪಾರಾನ್ ಅರಣ್ಯದಲ್ಲಿರುವ ಕಾದೇಶಿಗೂ ಬಂದು ಅವರಿಗೂ ಸಮಸ್ತ ಸಭೆಗೂ ವಿಷಯವನ್ನು ವಿವರಿಸಿ ಆ ದೇಶದ ಫಲಗಳನ್ನು ಅವರಿಗೆ ತೋರಿಸಿದರು.
ಆದಕಾರಣ ನಾವು ಕರ್ತನಿಗೆ ಕೂಗಿದೆವು; ಆತನು ನಮ್ಮ ಧ್ವನಿಯನ್ನು ಕೇಳಿ ದೂತನನ್ನು ಕಳುಹಿಸಿ ನಮ್ಮನ್ನು ಐಗುಪ್ತದೊಳಗಿಂದ ಹೊರಗೆ ತಂದನು; ಇಗೋ, ನಾವು ನಿನ್ನ ಮೇರೆಯ ಕಡೇ ಊರಾದ ಕಾದೇಶಿನ ಲ್ಲಿದ್ದೇವೆ.
ಆಗ ನೀವು ಹೋರೇಬಿನಿಂದ ಹೊರಟು ನಮ್ಮ ದೇವರಾದ ಕರ್ತನು ನಮಗೆ ಆಜ್ಞಾಪಿಸಿದ ಪ್ರಕಾರ ನೀವು ಅಮೋರಿಯರ ಬೆಟ್ಟದ ಮಾರ್ಗದಲ್ಲಿ ನೋಡಿದ ಆ ದೊಡ್ಡ ಭಯಂಕರವಾದ ಅರಣ್ಯವನ್ನೆಲ್ಲಾ ದಾಟಿ ಕಾದೇಶ್ಬರ್ನೇಯಕ್ಕೆ ಬಂದೆವು.
ಕಾರಣವೇನಂದರೆ, ನೀವು ಜಿನ್ ಅರಣ್ಯದಲ್ಲಿ ಕಾದೇಶಿನ ಮೆರೀಬಾದ ನೀರಿನ ಬಳಿಯಲ್ಲಿ ನನ್ನನ್ನು ಇಸ್ರಾಯೇಲ್ ಮಕ್ಕಳಲ್ಲಿ ಪರಿಶುದ್ಧ ಮಾಡದೆ ನನಗೆ ವಿರೋಧವಾಗಿ ಆಜ್ಞೆ ವಿಾರಿದಿರಿ.ನೀನು ಆ ದೇಶವನ್ನು ಕಣ್ಣಾರೆ ನೋಡುವಿ; ಆದರೆ ನಾನು ಇಸ್ರಾಯೇಲ್ ಮಕ್ಕಳಿಗೆ ಕೊಡುವ ದೇಶದಲ್ಲಿ ನೀನು ಪ್ರವೇಶಿಸುವದಿಲ್ಲ ಎಂದು ಹೇಳಿದನು.
ಆಗ ಸೌಲನು ಹವೀಲಾದಿಂದ ಐಗುಪ್ತಕ್ಕೆ ಎದುರಾಗಿರುವ ಶೂರಿಗೆ ಹೋಗುವ ಮೇರೆಯ ವರೆಗೂ ಇದ್ದ ಅಮಾಲೇಕ್ಯರನ್ನು ಹೊಡೆದು ಅಮಾಲೇಕ್ಯರ ಅರಸನಾದ ಅಗಾಗನನ್ನು ಜೀವಂತವಾಗಿ ಹಿಡಿದನು.
ಆಗ ಆಸನೂ ಅವನ ಸಂಗಡ ಇದ್ದ ಜನರೂ ಅವರನ್ನು ಗೆರಾರಿನ ವರೆಗೂ ಹಿಂದಟ್ಟಿದರು. ಕೂಷಿಯರು ತಮಗೆ ತ್ರಾಣವಿಲ್ಲದ ಹಾಗೆ ಸೋತುಹೋದರು. ಅವರು ಕರ್ತನ ಮುಂದೆಯೂ ಆತನ ಸೈನ್ಯದ ಮುಂದೆಯೂ ನಾಶ ವಾದರು. ಯೆಹೂದದವರು ಬಹು ಕೊಳ್ಳೆಯನ್ನು ಒಯ್ದರು.
ಕರ್ತನ ಸ್ವರವು ಅರಣ್ಯ ವನ್ನು ಕದಲಿಸುತ್ತದೆ; ಕರ್ತನು ಕಾದೇಶ್ ಅರಣ್ಯವನ್ನು ಕದಲಿಸುತ್ತಾನೆ.