ಅಬ್ರಹಾಮನು--ಈ ಸ್ಥಳದಲ್ಲಿ ಖಂಡಿತವಾಗಿ ದೇವರ ಭಯವು ಇಲ್ಲವೆಂದೂ ನನ್ನ ಹೆಂಡತಿಗಾಗಿ ಅವರು ನನ್ನನ್ನು ಕೊಲ್ಲುವರೆಂದೂ ನಾನು ಅಂದುಕೊಂಡೆನು.
Cross references
ಹೀಗಿರುವದರಿಂದ ಐಗುಪ್ತ್ಯರು ನಿನ್ನನ್ನು ನೋಡಿ--ಈಕೆಯು ಅವನ ಹೆಂಡತಿ ಎಂದು ಹೇಳುವರು. ನನ್ನನ್ನು ಕೊಂದುಹಾಕಿ ನಿನ್ನನ್ನು ಜೀವದಲ್ಲಿ ಉಳಿಸುವರು.
ಆಗ ಅವನು --ಹುಡಗನ ಮೇಲೆ ಕೈ ಹಾಕಬೇಡ; ಅವನಿಗೆ ಏನೂ ಮಾಡಬೇಡ. ನೀನು ದೇವರಿಗೆ ಭಯ ಪಡುತ್ತೀಯೆಂದು ಈಗ ನಾನು ತಿಳಿದಿದ್ದೇನೆ. ನಿನ್ನ ಒಬ್ಬನೇ ಮಗನನ್ನು ನನಗೆ ಅರ್ಪಿಸುವದಕ್ಕೆ ಹಿಂತೆಗೆಯಲಿಲ್ಲ ಅಂದನು.
ಆ ಸ್ಥಳದ ಮನುಷ್ಯರು ಅವನ ಹೆಂಡತಿಯ ವಿಷಯದಲ್ಲಿ ವಿಚಾರಿಸಿದಾಗ ಅವನು--ರೆಬೆಕ್ಕಳು ನೋಟಕ್ಕೆ ಸೌಂದರ್ಯಳಾಗಿದ್ದರಿಂದ ಈಕೆಯ ನಿಮಿತ್ತ ಆ ಸ್ಥಳದ ಜನರು ತನ್ನನ್ನು ಕೊಂದಾರೆಂದು ಆಕೆಯು ತನ್ನ ಹೆಂಡತಿಯೆಂದು ಹೇಳುವದಕ್ಕೆ ಅಂಜಿ ಅವನು--ಆಕೆಯು ನನ್ನ ತಂಗಿ ಅಂದನು.
ಮೂರನೆಯ ದಿನದಲ್ಲಿ ಯೋಸೇಫನು ಅವರಿಗೆ--ಇದನ್ನು ಮಾಡಿ ಬದುಕಿರಿ, ಯಾಕಂದರೆ ನಾನು ದೇವರಿಗೆ ಭಯಪಡುವವನಾ ಗಿದ್ದೇನೆ.
ಆದರೆ ನನಗಿಂತ ಮುಂಚೆ ಇದ್ದ ಅಧಿಪತಿಗಳು ಜನರಿಗೆ ಭಾರವಾಗಿದ್ದು ನಾಲ್ವತ್ತು ಬೆಳ್ಳಿಯ ಶೇಕೆಲುಗಳ ಹೊರ ತಾಗಿ ಅವರಿಂದ ರೊಟ್ಟಿಯನ್ನೂ ದ್ರಾಕ್ಷಾರಸವನ್ನೂ ತೆಗೆದುಕೊಳ್ಳುತ್ತಾ ಇದ್ದರು. ಅವರ ಸೇವಕರು ಸಹ ಜನರನ್ನು ಆಳುತ್ತಾ ಇದ್ದರು. ಆದರೆ ದೇವರ ಭಯದ ನಿಮಿತ್ತ ನಾನು ಹೀಗೆ ಮಾಡಿದವನಲ್ಲ.
ಊಚ್ ಎಂಬ ದೇಶದಲ್ಲಿ ಒಬ್ಬ ಮನುಷ್ಯನು ಇದ್ದನು. ಅವನ ಹೆಸರು ಯೋಬ. ಆ ಮನುಷ್ಯನು ಸಂಪೂರ್ಣನೂ ಯಥಾರ್ಥನೂ ದೇವರಿಗೆ ಭಯಪಡುವವನೂ ಕೇಡನ್ನು ಬಿಟ್ಟು ತೊಲ ಗುವವನೂ ಆಗಿದ್ದನು.
ಆತನು ಮನುಷ್ಯನಿಗೆ ಹೇಳಿದ್ದೇ ನಂದರೆ--ಇಗೋ, ಕರ್ತನ ಭಯವೇ ಜ್ಞಾನ; ಕೇಡಿನಿಂದ ತೊಲಗುವದೇ ಗ್ರಹಿಕೆ.
ಕರ್ತನನ್ನು ಪ್ರಾರ್ಥಿಸದೆ ರೊಟ್ಟಿಯನ್ನೋ ಎಂಬಂತೆ ನನ್ನ ಜನರನ್ನು ತಿಂದು ಅಪರಾಧಮಾಡಿದವರಿಗೆ ತಿಳುವಳಿಕೆಯಿಲ್ಲವೋ?
ಪಾಪವು ದುಷ್ಟನ ಮನಸ್ಸಿನೊಳಗೆ ನುಡಿಯುತ್ತಿರುವದರಿಂದ ಅವನ ಕಣ್ಣೆದು ರಿಗೆ ದೇವರ ಭಯವೇ ಇಲ್ಲ.
ಕರ್ತನ ಭಯವೇ ಜ್ಞಾನದ ಮೂಲ; ಮೂರ್ಖರು ಜ್ಞಾನವನ್ನೂ ಶಿಕ್ಷೆಯನ್ನೂ ಅಸಡ್ಡೆಮಾಡುತ್ತಾರೆ.
ನೀನು ಕರ್ತನ ಭಯವನ್ನು ತಿಳಿದುಕೊಳ್ಳುವಿ. ದೇವರ ಜ್ಞಾನವನ್ನು ಕಂಡುಕೊಳ್ಳುವಿ.
ಕರ್ತನ ಭಯವು ದುಷ್ಟತ್ವವನ್ನು ಹಗೆಮಾಡುವದು; ಗರ್ವ ಅಹಂಭಾವ ಕೆಟ್ಟದಾರಿ ಮೂರ್ಖನಬಾಯಿ ಇವುಗಳನ್ನು ನಾನು ಹಗೆಮಾಡು ತ್ತೇನೆ.
ಕನಿಕರ ಮತ್ತು ಸತ್ಯದಿಂದ ಅಕ್ರಮವು ಶುದ್ಧೀಕರಿಸಲ್ಪಡುತ್ತದೆ; ಕರ್ತನ ಭಯದ ಮೂಲಕ ಮನುಷ್ಯರು ಕೆಟ್ಟದ್ದರಿಂದ ತೊಲಗುತ್ತಾರೆ.
ಅವರ ಕಣ್ಣೆದುರಿಗೆ ದೇವರ ಭಯವೇ ಇಲ್ಲ ಎಂಬವುಗಳೇ.