ಆಗ ದೇವರು ರಾತ್ರಿ ಕನಸಿನಲ್ಲಿ ಅಬೀಮೆಲೆಕನ ಬಳಿಗೆ ಬಂದು--ಇಗೋ, ನೀನು ತಕ್ಕೊಂಡ ಆ ಸ್ತ್ರೀಗೋಸ್ಕರ ನೀನು ಸತ್ತವನೇ; ಆಕೆಯು ಒಬ್ಬ ಮನುಷ್ಯನ ಹೆಂಡತಿ ಎಂದು ಅವನಿಗೆ ಹೇಳಿದನು.
Cross references
ಈಗ ಆ ಮನುಷ್ಯನ ಹೆಂಡತಿಯನ್ನು ನೀನು ಹಿಂದಕ್ಕೆ ಕಳುಹಿಸು; ಅವನು ಪ್ರವಾದಿಯಾಗಿದ್ದಾನೆ. ನೀನು ಬದುಕುವ ಹಾಗೆ ಅವನು ನಿನಗೋಸ್ಕರ ಪ್ರಾರ್ಥಿಸುವನು. ನೀನು ಆಕೆಯನ್ನು ಹಿಂದಕ್ಕೆ ಕಳುಹಿಸದಿದ್ದರೆ ನೀನೂ ನಿನ್ನವರೆಲ್ಲರೂ ಖಂಡಿತವಾಗಿ ಸಾಯುವಿರಿ ಎಂದು ತಿಳಿದುಕೋ ಅಂದನು.
ಆಗ ಅವನು ಕನಸು ಕಂಡನು. ಇಗೋ, ಏಣಿಯು ಭೂಮಿಯ ಮೇಲೆ ನಿಲ್ಲಿಸಲ್ಪಟ್ಟಿತ್ತು. ಅದರ ತುದಿಯು ಆಕಾಶಕ್ಕೆ ಮುಟ್ಟಿತ್ತು. ಇಗೋ, ದೇವದೂತರು ಅದರ ಮೇಲೆ ಏರುತ್ತಾ ಇಳಿಯುತ್ತಾ ಇದ್ದರು.
ಆ ರಾತ್ರಿ ದೇವರು ಸ್ವಪ್ನದಲ್ಲಿ ಅರಾಮ್ಯನಾದ ಲಾಬಾನನ ಬಳಿಗೆ ಬಂದು ಅವನಿಗೆ--ನೀನು ಯಾಕೋಬನ ಸಂಗಡ ಒಳ್ಳೆಯದನ್ನಾಗಲಿ ಕೆಟ್ಟದನ್ನಾಗಲಿ ಮಾತನಾಡದಂತೆ ಎಚ್ಚರಿಕೆಯಾಗಿರು ಅಂದನು.
ಯೋಸೇಫನು ಒಂದು ಕನಸನ್ನು ಕಂಡು ತನ್ನ ಸಹೋದರರಿಗೆ ತಿಳಿಸಿದಾಗ ಅವರು ಅವನನ್ನು ಇನ್ನೂ ಹೆಚ್ಚಾಗಿ ದ್ವೇಷಿಸಿದರು.
ಇದಲ್ಲದೆ ಅವನು ಇನ್ನೊಂದು ಕನಸನ್ನು ಕಂಡು ತನ್ನ ಸಹೋದರರಿಗೆ--ಇಗೋ, ಇನ್ನೊಂದು ಕನಸನ್ನು ಕಂಡಿದ್ದೇನೆ; ಇಗೋ, ಸೂರ್ಯನೂ ಚಂದ್ರನೂ ಹನ್ನೊಂದು ನಕ್ಷತ್ರಗಳೂ ನನಗೆ ಅಡ್ಡಬಿದ್ದವು ಅಂದನು.
ಅವರಿಬ್ಬರಿಗೂ ಅಂದರೆ ಐಗುಪ್ತದೇಶದ ಅರಸನು ಸೆರೆಯಲ್ಲಿ ಹಾಕಿಸಿದ್ದ ಪಾನದಾಯಕನಿಗೂ ರೊಟ್ಟಿ ಗಾರನಿಗೂ ಒಂದೇ ರಾತ್ರಿ ಕನಸುಬಿತ್ತು. ಅವರವರ ಕನಸಿನ ಪ್ರಕಾರ ಅರ್ಥವಿತ್ತು.
ಅವರು ಯೋಸೇಫನಿಗೆ--ನಾವು ಕನಸನ್ನು ಕಂಡಿದ್ದೇವೆ; ಆದರೆ ಅದರ ಅರ್ಥವನ್ನು ನಮಗೆ ಹೇಳುವವರಿಲ್ಲ ಅಂದರು. ಯೋಸೇಫನು ಅವರಿಗೆ ಅರ್ಥ ಹೇಳುವದು ದೇವರದಲ್ಲವೋ ಎಂದು ಹೇಳಿ ಅವುಗಳನ್ನು ನನಗೆ ಹೇಳಿರಿ ಅಂದನು.
ಪೂರ್ಣವಾದ ಎರಡು ವರುಷಗಳ ಕೊನೆಯಲ್ಲಿ ಫರೋಹನು ಕನಸನ್ನು ಕಂಡನು.
ದೇವರು ಇಸ್ರಾಯೇಲನಿಗೆ ರಾತ್ರಿ ದರ್ಶನ ದಲ್ಲಿ ಮಾತನಾಡಿ--ಯಾಕೋಬನೇ, ಯಾಕೋಬನೇ ಅಂದನು. ಅದಕ್ಕವನು--ಇಗೋ, ಇದ್ದೇನೆ ಅಂದನು.
ಒಂದು ಮಾತು ನನಗೆ ಗುಪ್ತವಾಗಿ ಬಂದಿತು. ಅದರಿಂದ ಸ್ವಲ್ಪ ಮಾತ್ರ ನನ್ನ ಕಿವಿಗೆ ಬಿದ್ದಿತು.
ರಾತ್ರಿಯ ದರ್ಶನಗಳ ಆಲೋಚನೆಗಳಲ್ಲಿ ಗಾಢ ನಿದ್ರೆಯು ಜನರ ಮೇಲೆ ಬೀಳುವಾಗ
ಸ್ವಪ್ನದಲ್ಲಿ ರಾತ್ರಿಯ ದರ್ಶನ ದಲ್ಲಿ; ಗಾಢ ನಿದ್ರೆಯು ಮನುಷ್ಯರ ಮೇಲೆ ಬೀಳುವಾಗ ಮಂಚದ ಮೇಲಿನ ತೂಕಡಿಕೆಗಳಲ್ಲಿ
ಮನುಷ್ಯ ನನ್ನು ಅವನ ಉದ್ದೇಶದಿಂದ ತೊಲಗಿಸುವದಕ್ಕೂ ಮನುಷ್ಯನ ಗರ್ವವನ್ನು ಅಡಗಿಸುವದಕ್ಕೂ ಹಾಗೆ ಮಾಡುತ್ತಾನೆ.
ಮನುಷ್ಯರು ಅವರಿಗೆ ಕೇಡು ಮಾಡದಂತೆ ಆತನು ತಡೆದನು; ಹೌದು, ಅವರಿಗೋ ಸ್ಕರ ಆತನು ಅರಸುಗಳನ್ನು ಗದರಿಸಿದನು.
ನಾನು ದುಷ್ಟನಿಗೆ--ನೀನು ನಿಶ್ಚಯ ವಾಗಿ ಸಾಯುವಿ ಎಂದು ಹೇಳುವಾಗ ಅವನು ಪಾಪ ದಿಂದ ತಿರುಗಿಕೊಂಡರೆ ಮತ್ತು ನ್ಯಾಯವನ್ನೂ ನೀತಿ ಯನ್ನೂ ಮಾಡಿದರೆ
ಆಗ ಯೋನನು ಒಂದು ದಿನದ ಪ್ರಯಾಣ ಮಾಡಿ ಪಟ್ಟಣದಲ್ಲಿ ಪ್ರವೇಶಿಸಲಾರಂಭಿಸಿ--ಇನ್ನು ನಾಲ್ವತ್ತು ದಿವಸಗಳಾದ ಮೇಲೆ ನಿನೆವೆ ಕೆಡವಲ್ಪಡು ವದೆಂದು ಕೂಗಿ ಹೇಳಿದನು.
ಅವನು ಇವುಗಳನ್ನು ಆಲೋಚನೆ ಮಾಡುತ್ತಿದ್ದಾಗ ಇಗೋ, ಕರ್ತನ ದೂತನು ಅವನಿಗೆ ಕನಸಿನಲ್ಲಿ ಕಾಣಿಸಿ ಕೊಂಡು-- ಯೋಸೇಫನೇ, ದಾವೀದನ ಕುಮಾರನೇ, ನಿನ್ನ ಹೆಂಡತಿಯಾದ ಮರಿಯಳನ್ನು ಸೇರಿಸಿಕೊಳ್ಳು ವದಕ್ಕೆ ಭಯಪಡಬೇಡ; ಯಾಕಂದರೆ ಆಕೆಯ ಗರ್ಭವು ಪವಿತ್ರಾತ್ಮನಿಂದಲೇ ಆಗಿದೆ.
ಆಮೇಲೆ ಅವರು ಹೆರೋದನ ಬಳಿಗೆ ಹಿಂತಿರುಗಬಾರದೆಂದು ಕನಸಿನಲ್ಲಿ ದೇವರಿಂದ ಎಚ್ಚರಿಸಲ್ಪಟ್ಟು ಬೇರೊಂದು ದಾರಿಯಿಂದ ತಮ್ಮ ಸ್ವದೇಶಕ್ಕೆ ಹೊರಟುಹೋದರು.
ಅವನು ನ್ಯಾಯಾಸನದ ಮೇಲೆ ಕೂತಿದ್ದಾಗ ಅವನ ಹೆಂಡತಿಯು ಅವ ನಿಗೆ--ನೀನು ಆ ನೀತಿವಂತನ ಗೊಡವೆಗೆ ಹೋಗ ಬೇಡ; ಯಾಕಂದರೆ ಈ ದಿವಸ ನಾನು ಸ್ವಪ್ನದಲ್ಲಿ ಆತನ ವಿಷಯವಾಗಿ ಬಹಳ ಕಷ್ಟಪಟ್ಟಿದ್ದೇನೆ ಎಂದು ಹೇಳಿಕಳುಹಿಸಿದಳು.