ಅಬೀಮೆಲೆಕನು ಅಬ್ರಹಾ ಮನನ್ನು ಕರೆದು ಅವನಿಗೆ--ನೀನು ನಮಗೆ ಮಾಡಿ ದ್ದೇನು? ನೀನು ನನ್ನ ಮೇಲೆಯೂ ನನ್ನ ರಾಜ್ಯದ ಮೇಲೆಯೂ ದೊಡ್ಡ ಪಾಪವನ್ನು ಬರಮಾಡುವಂತೆ ನಾನು ನಿನಗೆ ಏನು ಅಪರಾಧ ಮಾಡಿದ್ದೇನೆ? ನನಗೆ ನೀನು ಮಾಡಬಾರದ ಕಾರ್ಯಗಳನ್ನು ಮಾಡಿದ್ದೀ ಅಂದನು.
Cross references
ಆಗ ಫರೋ ಹನು ಅಬ್ರಾಮನನ್ನು ಕರೆಯಿಸಿ--ನೀನು ನನಗೆ ಮಾಡಿದ್ದೇನು? ಈಕೆಯು ನಿನ್ನ ಹೆಂಡತಿಯೆಂದು ಯಾಕೆ ತಿಳಿಸಲಿಲ್ಲ?
ಆಗ ಅಬೀಮೆಲೆಕನು--ನೀನು ನಮಗೆ ಮಾಡಿದ್ದೇನು? ಜನರಲ್ಲಿ ಒಬ್ಬನು ನಿನ್ನ ಹೆಂಡತಿಯ ಸಂಗಡ ಮಲಗಿದ್ದರೆ ನೀನು ನಮ್ಮ ಮೇಲೆ ಅಪರಾಧವನ್ನು ಬರಮಾಡುತ್ತಿದ್ದೆಯಲ್ಲಾ ಅಂದನು.
ಯಾಕೋಬನ ಮಕ್ಕಳು ಅದನ್ನು ಕೇಳಿದಾಗ ಅವರು ಹೊಲದಿಂದ ಬಂದರು. ಶೆಕೆಮನು ಯಾಕೋಬನ ಮಗಳ ಸಂಗಡ ಮಲಗಿ ಇಸ್ರಾಯೇಲಿ ನಲ್ಲಿ ಅವಮಾನಕರವಾದದ್ದನ್ನು ಮಾಡಿದ್ದರಿಂದ ಆ ಮನುಷ್ಯರು ವ್ಯಸನಪಟ್ಟು ಬಹಳ ಉರಿಗೊಂಡರು. ಅದು ಹಾಗೆ ಆಗಬಾರದಾಗಿತ್ತು.
ಹೆಚ್ಚುಕಡಿಮೆ ಮೂರು ತಿಂಗಳಾದ ಮೇಲೆ ಯೆಹೂದನಿಗೆ--ನಿನ್ನ ಸೊಸೆಯಾದ ತಾಮಾರಳು ಜಾರತ್ವ ಮಾಡಿದ್ದಾಳೆ; ಜಾರತ್ವದಿಂದ ಗರ್ಭಿಣಿಯಾಗಿ ದ್ದಾಳೆ ಎಂದು ತಿಳಿಸಿದರು. ಆಗ ಯೆಹೂದನು--ಅವಳನ್ನು ಹೊರಗೆ ತನ್ನಿರಿ, ಅವಳು ಸುಡಲ್ಪಡಲಿ ಅಂದನು.
ಈ ಮನೆಯಲ್ಲಿ ನನಗಿಂತ ದೊಡ್ಡವ ನಾರೂ ಇಲ್ಲ. ನೀನು ಅವನ ಹೆಂಡತಿಯಾಗಿರುವದ ರಿಂದ ನಿನ್ನನ್ನಲ್ಲದೆ ನನಗೆ ಮತ್ತೇನೂ ಮರೆಮಾಡಲಿಲ್ಲ. ಹಾಗಿರುವಲ್ಲಿ ನಾನು ಈ ದೊಡ್ಡ ದುಷ್ಕೃತ್ಯಮಾಡಿ ದೇವರಿಗೆ ವಿರೋಧವಾಗಿ ಪಾಪಮಾಡುವದು ಹೇಗೆ ಅಂದನು.
ಮೋಶೆಯು ಆರೋನನಿಗೆ--ಈ ಜನರ ಮೇಲೆ ದೊಡ್ಡ ಪಾಪವನ್ನು ನೀನು ಬರಮಾಡುವಂತೆ ಅವರು ನಿನಗೆ ಏನು ಮಾಡಿದರು ಎಂದು ಕೇಳಿದನು.
ಹೀಗೆ ಜನರ ಪ್ರೇರಣೆಯಿಂದ ಆರೋನನು ಕರುವನ್ನು ಮಾಡಿದ್ದರಿಂದ ಕರ್ತನು ಜನರನ್ನು ಬಾಧಿಸಿದನು.
ಒಬ್ಬನು ಮತ್ತೊಬ್ಬನ ಹೆಂಡತಿಯೊಡನೆ ವ್ಯಭಿ ಚಾರಮಾಡಿದರೆ, ಅಂದರೆ ತನ್ನ ನೆರೆಯವನ ಹೆಂಡ ತಿಯೊಡನೆ ವ್ಯಭಿಚಾರಮಾಡಿದರೆ ವ್ಯಭಿಚಾರ ಮಾಡುವವನಿಗೂ ವ್ಯಭಿಚಾರಮಾಡುವವಳಿಗೂ ನಿಶ್ಚಯವಾಗಿ ಮರಣದಂಡನೆ ವಿಧಿಸಬೇಕು.
ಆಗ ಯೆಹೋಶುವನು ಅವನಿಗೆ--ನೀನು ನಮ್ಮನ್ನು ತೊಂದರೆ ಪಡಿಸಿದ್ದೇನು? ಇಂದು ಕರ್ತನು ನಿನ್ನನ್ನು ತೊಂದರೆ ಪಡಿಸುವನು ಅಂದನು. ಆಗ ಇಸ್ರಾಯೇಲ್ಯ ರೆಲ್ಲರೂ ಅವನ ಮೇಲೆ ಕಲ್ಲೆಸೆದರು. ತರುವಾಯ ಬೆಂಕಿಯಿಂದ ಅವರನ್ನು ಸುಟ್ಟುಬಿಟ್ಟುಅವರ ಮೇಲೆ ಕಲ್ಲು ಕುಪ್ಪೆ ಕೂಡಿಸಿದರು. ಅದು ಈ ದಿನದ ವರೆಗೂ ಇದೆ. ಆಗ ಕರ್ತನು ತನ್ನ ಕೋಪದ ಉರಿಯನ್ನು ಬಿಟ್ಟು ತಿರುಗಿದನು; ಆದದರಿಂದ ಆ ಸ್ಥಳವು ಈ ವರೆಗೂ ಆಕೋರಿನ ತಗ್ಗೆಂದು ಕರೆಯಲ್ಪಡುವದು.
ನನ್ನ ಒಡೆಯನು ತನ್ನ ಸೇವಕ ನನ್ನು ಹೀಗೆ ಹಿಂದಟ್ಟುವದೇನು? ನಾನೇನು ಮಾಡಿ ದೆನು? ನನ್ನ ಕೈಯಲ್ಲಿ ಏನು ಕೆಟ್ಟತನ ಅದೆ?
ಆಗ ದಾವೀದನು ಆ ಮನುಷ್ಯನ ಮೇಲೆ ಬಹಳ ಕೋಪಿಸಿಕೊಂಡು ನಾತಾನನಿಗೆ--ಕರ್ತನ ಜೀವದಾಣೆ, ಇದನ್ನು ಮಾಡಿದ ಆ ಮನುಷ್ಯನು ನಿಜವಾಗಿಯೂ ಸಾಯಬೇಕು.
ಈಗ ನೀನು ನನ್ನನ್ನು ತಿರಸ್ಕರಿಸಿ ಹಿತ್ತಿಯ ನಾದ ಊರೀಯನ ಹೆಂಡತಿಯನ್ನು ನಿನಗೆ ಹೆಂಡತಿ ಯಾಗಿ ತೆಗೆದುಕೊಂಡದ್ದರಿಂದ ಕತ್ತಿಯು ಎಂದಿಗೂ ನಿನ್ನ ಮನೆಯನ್ನು ಬಿಟ್ಟು ಹೋಗುವುದಿಲ್ಲ ಎಂದು ಹೇಳುತ್ತಾನೆ.
ಅದಕ್ಕವಳು--ನನ್ನ ಸಹೋದರನೇ, ಬೇಡ; ನನ್ನನ್ನು ಒತ್ತಾಯಮಾಡಬೇಡ; ಯಾಕಂದರೆ ಇಸ್ರಾಯೇಲಿನಲ್ಲಿ ಇಂಥಾ ಕಾರ್ಯಮಾಡಕೂಡದು; ಇಂಥಾ ಬುದ್ಧಿಹೀನ ವಾದ ಕೆಲಸ ಮಾಡಬೇಡ.
ದುರ್ಮಾರ್ಗದಲ್ಲಿ ನೀತಿವಂತರನ್ನು ದಾರಿತಪ್ಪಿಸು ವವನು ತಾನೇ ತನ್ನ ಸ್ವಂತ ಕುಣಿಯೊಳಕ್ಕೆ ಬೀಳುವನು; ಯಥಾರ್ಥವಂತರಿಗಾದರೋ ಒಳ್ಳೆಯವುಗಳು ಸೊತ್ತಾ ಗುವವು.
ದೇವರಲ್ಲಿ ಪಕ್ಷಪಾತವಿಲ್ಲ.
ಅವರು ನೀಚಲಾಭವನ್ನು ಹೊಂದುವದಕ್ಕಾಗಿ ಮಾಡಬಾರದ ಉಪದೇಶವನ್ನು ಮಾಡಿ ಇಡೀ ಕುಟುಂಬಗಳನ್ನೇ ಹಾಳುಮಾಡುತ್ತಾರಾದದರಿಂದ ಅವರ ಬಾಯಿಗಳನ್ನು ಮುಚ್ಚಿಸತಕ್ಕದ್ದು.
ವಿವಾಹವು ಎಲ್ಲಾದರಲ್ಲಿ ಗೌರವವಾದದ್ದೂ ಹಾಸಿಗೆಯು ನಿಷ್ಕಳಂಕವಾದದ್ದೂ ಆಗಿದೆ. ಆದರೆ ಜಾರರಿಗೂ ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನು.