ಕರ್ತನು ತಾನು ಹೇಳಿದ ಹಾಗೆ ಸಾರಳನ್ನು ದರ್ಶಿಸಿ ತಾನು ಹೇಳಿದಂತೆ ಸಾರಳಿಗೆ ಮಾಡಿದನು.
Cross references
ಆಕೆಯನ್ನು ನಾನು ಆಶೀರ್ವದಿ ಸುತ್ತೇನೆ. ಆಕೆಯಿಂದ ನಿನಗೆ ಒಬ್ಬ ಮಗನನ್ನು ಸಹ ಕೊಡುತ್ತೇನೆ. ಹೌದು, ಜನಾಂಗಗಳ ತಾಯಿಯಾ ಗುವಂತೆ ಆಕೆಯನ್ನು ಆಶೀರ್ವದಿಸುತ್ತೇನೆ. ಆಕೆಯಿಂದ ಜನರ ಅರಸರು ಹುಟ್ಟುವರು ಅಂದನು.
ಅದಕ್ಕೆ ದೇವರು--ನಿಶ್ಚಯ ವಾಗಿ ನಿನ್ನ ಹೆಂಡತಿಯಾದ ಸಾರಳು ನಿನಗೆ ಮಗನನ್ನು ಹೆರುವಳು. ಅವನಿಗೆ ಇಸಾಕನೆಂದು ಹೆಸರಿಡಬೇಕು. ಅವನ ಸಂಗಡಲೂ ತರುವಾಯ ಹುಟ್ಟುವ ಅವನ ಸಂತತಿಯವರ ಸಂಗಡಲೂ ನನ್ನ ಶಾಶ್ವತವಾದ ಒಡಂಬಡಿಕೆಯನ್ನು ಸ್ಥಾಪಿಸುವೆನು.
ಆದರೆ ಬರುವ ವರುಷ ಈ ಕಾಲದಲ್ಲಿ ಸಾರಳು ನಿನಗೆ ಹೆರುವ ಇಸಾಕನ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸುವೆನು ಎಂದು ಹೇಳಿದನು.
ಆಗ ಆತನು--ಬರುವ ವರುಷ ಇದೇ ಸಮಯಕ್ಕೆ ನಿಶ್ಚಯ ವಾಗಿ ತಿರಿಗಿ ನಿನ್ನ ಬಳಿಗೆ ಬರುತ್ತೇನೆ. ಆಗ ಇಗೋ, ನಿನ್ನ ಹೆಂಡತಿಯಾದ ಸಾರಳಿಗೆ ಮಗನು ಇರುವನು ಅಂದನು. ಸಾರಳು ಆತನ ಹಿಂದೆ ಇದ್ದ ಗುಡಾರದ ಬಾಗಲಲ್ಲಿದ್ದು ಅದನ್ನು ಕೇಳಿಸಿಕೊಂಡಳು.
ಕರ್ತನಿಗೆ ಅಸಾಧ್ಯವಾದದ್ದು ಯಾವದಾದರೂ ಇದೆಯೋ? ಬರುವ ವರುಷ ಇದೇ ಸಮಯಕ್ಕೆ ನಾನು ನಿನ್ನ ಬಳಿಗೆ ತಿರಿಗಿ ಬರುವೆನು; ಆಗ ಸಾರಳಿಗೆ ಮಗನು ಇರುವನು ಅಂದನು.
ಇದಲ್ಲದೆ ಯೋಸೇಫನು ತನ್ನ ಸಹೋದ ರರಿಗೆ--ನಾನು ಸತ್ತ ಮೇಲೆ ದೇವರು ನಿಶ್ಚಯವಾಗಿ ನಿಮ್ಮನ್ನು ಪರಾಂಬರಿಸಿ ಈ ದೇಶದೊಳಗಿಂದ ತಾನು ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣ ಮಾಡಿದ ದೇಶಕ್ಕೆ ಹೋಗಮಾಡುವನು ಅಂದನು.
ಆತನು--ನೀನು ಹೋಗಿ ಇಸ್ರಾಯೇಲ್ ಹಿರಿಯ ರನ್ನು ಕೂಡಿಸಿ ಅವರಿಗೆ--ನಿಮ್ಮ ಪಿತೃಗಳ ದೇವರೂ ಅಬ್ರಹಾಮನ ದೇವರೂ ಇಸಾಕನ ದೇವರೂ ಯಾಕೋಬನ ದೇವರೂ ಆಗಿರುವ ಕರ್ತನು ನನಗೆ ಕಾಣಿಸಿಕೊಂಡು--ನಿಮ್ಮನ್ನೂ ಐಗುಪ್ತದಲ್ಲಿ ನಿಮಗೆ ಮಾಡಿದ್ದನ್ನೂ ನಿಶ್ಚಯವಾಗಿ ನಾನು ನೋಡಿದ್ದೇನೆ.
ಕರ್ತನು ಇಸ್ರಾಯೇಲ್ ಮಕ್ಕಳನ್ನು ದರ್ಶಿಸಿ ಅವರ ಸಂಕಟವನ್ನು ನೋಡಿದ್ದಾನೆಂದು ಅವರು ಕೇಳಿದಾಗ ತಲೆಬಾಗಿಸಿ ಆರಾಧಿಸಿದರು.
ನೀನು ಅವುಗಳಿಗೆ ಅಡ್ಡಬೀಳಬಾರದು, ಸೇವಿಸಲೂ ಬಾರದು. ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆಗಳ ಅಪರಾಧವನ್ನು ಮಕ್ಕಳ ಮೇಲೆ ಯೂ ಮೂರನೆಯ ನಾಲ್ಕನೆಯ ತಲೆಗಳ ವರೆಗೂ ಬರಮಾಡುವೆನು.
ಆದರೆ ಕರ್ತನು ತನ್ನ ಜನರಿಗೆ ರೊಟ್ಟಿಯನ್ನು ಕೊಡುವ ಹಾಗೆ ಅವರನ್ನು ದರ್ಶಿಸಿದನೆಂದು ಅವಳು ಮೋವಾಬ್ ದೇಶದಲ್ಲಿ ಕೇಳಿದ್ದರಿಂದ ಅವಳು ತನ್ನ ಸೊಸೆಯರ ಸಂಗಡ ಮೋವಾಬ್ ದೇಶದಿಂದ ಯೆಹೂದ ದೇಶಕ್ಕೆ ತಿರಿಗಿ ಹೋಗುವದಕ್ಕೋಸ್ಕರ ಪ್ರಯಾಣವಾಗಿ ತಾನು ಇದ್ದ ಸ್ಥಳವನ್ನು ಬಿಟ್ಟು ಹೊರ ಟಳು.
ಅವರು ತಿರಿಗಿ ತಮ್ಮ ಮನೆಗೆ ಹೋದರು. ಹಾಗೆಯೇ ಕರ್ತನು ಹನ್ನಳನ್ನು ದರ್ಶಿಸಿ ದ್ದರಿಂದ ಅವಳು ಗರ್ಭಧರಿಸಿ ಮೂವರು ಕುಮಾರ ರನ್ನೂ ಇಬ್ಬರು ಕುಮಾರ್ತೆಯರನ್ನೂ ಹೆತ್ತಳು. ಇದಲ್ಲದೆ ಬಾಲಕನಾದ ಸಮುವೇಲನು ಕರ್ತನ ಸನ್ನಿಧಿಯಲ್ಲಿ ಬೆಳೆಯುತ್ತಿದ್ದನು.
ಆ ಸ್ತ್ರೀಯು ಗರ್ಭಧರಿಸಿ ಎಲೀಷನು ತನಗೆ ಹೇಳಿದಂತೆ ಮುಂದಿನ ವರುಷ ಅದೇ ಕಾಲದಲ್ಲಿ ಒಬ್ಬ ಮಗನನ್ನು ಹೆತ್ತಳು.
ಕರ್ತನ ವಾಕ್ಯಗಳು ಶುದ್ಧವಾಕ್ಯಗಳಾಗಿವೆ: ಮಣ್ಣಿನ ಕುಲುಮೆಯಲ್ಲಿ ಏಳು ಸಾರಿ ಕರಗಿ ಪುಟಕ್ಕೆ ಹಾಕಿದ ಬೆಳ್ಳಿಯಂತೆ ಇವೆ.
ಓ ಕರ್ತನೇ, ನಿನ್ನ ಜನರ ಮೇಲಿರುವ ಕಟಾಕ್ಷದಿಂದ ನನ್ನನ್ನೂ ಜ್ಞಾಪಿಸಿಕೋ; ನಿನ್ನ ರಕ್ಷಣೆಯಿಂದ ನನ್ನನ್ನು ದರ್ಶಿಸು.
ಆಕಾಶವೂ ಭೂಮಿಯೂ ಅಳಿದುಹೋಗುವವು; ಆದರೆ ನನ್ನ ಮಾತುಗಳು ಅಳಿದುಹೋಗುವದೇ ಇಲ್ಲ.
ಇಸ್ರಾಯೇಲಿನ ದೇವರಾದ ಕರ್ತನು ಸ್ತುತಿ ಹೊಂದಲಿ, ಯಾಕಂದರೆ ಆತನು ತನ್ನ ಜನರನ್ನು ಸಂಧಿಸಿ ಅವರನ್ನು ವಿಮೋಚಿ ಸಿದ್ದಾನೆ.
ಇದಲ್ಲದೆ ಅವರು ನಿನ್ನನ್ನೂ ನಿನ್ನೊಳ ಗಿರುವ ನಿನ್ನ ಮಕ್ಕಳನ್ನೂ ನೆಲಸಮ ಮಾಡುವರು; ಮತ್ತು ನಿನ್ನಲ್ಲಿ ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ಇರದಂತೆ ಮಾಡುವರು; ಯಾಕಂದರೆ ನಿನ್ನನ್ನು ಸಂಧಿಸಿದ ಸಮಯವನ್ನು ನೀನು ತಿಳುಕೊಳ್ಳಲಿಲ್ಲ ಅಂದನು.
(ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ತಂದೆ ಯಾಗಿ ನೇಮಿಸಿದ್ದೇನೆ ಎಂದು ಬರೆದಿರುವ ಪ್ರಕಾರ) ದೇವರು ಸತ್ತವರನ್ನು ಬದುಕಿಸುವವನಾಗಿಯೂ ಇಲ್ಲ ದ್ದನ್ನು ಇರುವದಾಗಿ ಕರೆಯುವವನಾಗಿಯೂ ಆಗಿದ್ದಾ ನೆಂದು ದೇವರ ಮುಂದೆ ಅಬ್ರಹಾಮನು ನಂಬಿದನು.
ದಾಸಿಯಿಂದ ಹುಟ್ಟಿದವನು ಶರೀರಕ್ಕನಸುಸಾರವಾಗಿ ಹುಟ್ಟಿದನು. ಆದರೆ ಸ್ವತಂತ್ರಳಿಂದ ಹುಟ್ಟಿದವನು ವಾಗ್ದಾನದ ಮೂಲಕ ಹುಟ್ಟಿದನು.
ಸಹೋದರರೇ, ನಾವು ಈಗ ಇಸಾಕನಂತೆ ವಾಗ್ದಾನದ ಮಕ್ಕಳಾಗಿದ್ದೇವೆ.
ಸುಳ್ಳಾಡದ ದೇವರು ಲೋಕದಾರಂಭಕ್ಕೆ ಮೊದಲೇ ವಾಗ್ದಾನ ಮಾಡಿದ ನಿತ್ಯಜೀವದ ನಿರೀಕ್ಷೆಯನ್ನು