ಅಬ್ರಹಾಮನು ಬೆಳಿಗ್ಗೆ ಎದ್ದು ರೊಟ್ಟಿಯನ್ನೂ ನೀರಿನ ತಿತ್ತಿಯನ್ನೂ ತೆಗೆದುಕೊಂಡು ಹಾಗರಳಿಗೆ ಕೊಟ್ಟು ಅವುಗಳನ್ನು ಆಕೆಯ ಹೆಗಲಿನ ಮೇಲೆ ಇರಿಸಿ ಆ ಹುಡುಗನ ಸಂಗಡ ಅವಳನ್ನು ಕಳುಹಿಸಿಬಿಟ್ಟನು. ಆಕೆಯು ಹೋಗಿ ಬೇರ್ಷೆಬದ ಕಾಡಿನಲ್ಲಿ ಅಲೆದಾಡುವವ ಳಾದಳು.
Cross references
ಆಗ ಕರ್ತನ ದೂತನು ಅರಣ್ಯದಲ್ಲಿ ಶೂರಿನ ಮಾರ್ಗದಲ್ಲಿರುವ ಒಂದು ನೀರಿನ ಬುಗ್ಗೆಯ ಬಳಿಯಲ್ಲಿ ಅವಳನ್ನು ಕಂಡು
ಅಬ್ರಹಾಮನು ಬೆಳಿಗ್ಗೆ ಎದ್ದು ತಾನು ಕರ್ತನ ಸನ್ನಿಧಿಯಲ್ಲಿ ನಿಂತಿದ್ದ ಸ್ಥಳಕ್ಕೆ ಬಂದು
ಹೀಗೆ ಅವರಿಬ್ಬರೂ ಅಲ್ಲಿ ಪ್ರಮಾಣಮಾಡಿದ್ದರಿಂದ ಆ ಸ್ಥಳಕ್ಕೆ ಬೇರ್ಷೆಬ ಎಂದು ಅವನು ಹೆಸರಿಟ್ಟನು.
ಆಗ ಅಬ್ರಹಾಮನು ಬೇರ್ಷೆಬದಲ್ಲಿ ತೋಪನ್ನು ನೆಟ್ಟು (ಪಿಚುಲ ವೃಕ್ಷ) ನಿತ್ಯದೇವರಾದ ಕರ್ತನ ಹೆಸರನ್ನು ಹೇಳಿಕೊಂಡು ಆರಾಧಿಸಿದನು.ಅಬ್ರಹಾಮನು ಫಿಲಿಷ್ಟಿಯರ ದೇಶದಲ್ಲಿ ಬಹು ದಿವಸ ಪ್ರವಾಸಿಯಾಗಿದ್ದನು.
ಅಬ್ರಹಾಮನು ಬೆಳಿಗ್ಗೆ ಎದ್ದು ತನ್ನ ಕತ್ತೆಗೆ ತಡಿಹಾಕಿಸಿ ತನ್ನ ಯುವಕರಲ್ಲಿ ಇಬ್ಬರನ್ನೂ ತನ್ನ ಮಗನಾದ ಇಸಾಕನನ್ನೂ ಕರೆದು ಕೊಂಡು ದಹನಬಲಿಗಾಗಿ ಕಟ್ಟಿಗೆಗಳನ್ನು ಒಡಿಸಿ ಎದ್ದು ದೇವರು ತನಗೆ ಹೇಳಿದ ಸ್ಥಳಕ್ಕೆ ಹೋದನು.
ತರುವಾಯ ಅಬ್ರಹಾಮನು ತನ್ನ ಯುವಕರ ಬಳಿಗೆ ಹಿಂತಿರುಗಿ ಬಂದನು. ಅವರು ಎದ್ದು ಅವ ರೊಂದಿಗೆ ಬೇರ್ಷೆಬಕ್ಕೆ ಹೋದರು. ಅಬ್ರಹಾಮನು ಬೇರ್ಷೆಬದಲ್ಲಿ ವಾಸಿಸಿದನು.
ಅವನೂ ಅವನ ಸಂಗಡ ಇದ್ದ ಮನುಷ್ಯರೂ ಊಟ ಮುಗಿಸಿ ರಾತ್ರಿ ಯೆಲ್ಲಾ ಅಲ್ಲಿ ಇದ್ದರು. ಬೆಳಿಗ್ಗೆ ಎದ್ದ ಮೇಲೆ ಅವನು--ನನ್ನನ್ನು ನನ್ನ ಯಜಮಾನನ ಬಳಿಗೆ ಕಳುಹಿಸಿರಿ ಅಂದನು.
ಅಬ್ರಹಾಮನಿಗೆ ಇದ್ದ ಉಪಪತ್ನಿಗಳ ಮಕ್ಕಳಿಗೆ ಅಬ್ರಹಾಮನು ದಾನಗಳನ್ನು ಕೊಟ್ಟು ತಾನು ಜೀವಿಸುತ್ತಿರುವಾಗಲೇ ಅವರನ್ನು ತನ್ನ ಮಗನಾದ ಇಸಾಕನ ಬಳಿಯಿಂದ ಪೂರ್ವದಿಕ್ಕಿನ ಕಡೆಗೆ ಮೂಡಣ ದೇಶಕ್ಕೆ ಕಳುಹಿಸಿದನು.
ಬೆಳಿಗ್ಗೆ ಎದ್ದು ಒಬ್ಬರಿಗೊಬ್ಬರು ಪ್ರಮಾಣಮಾಡಿಕೊಂಡರು. ಆಗ ಇಸಾಕನು ಅವರನ್ನು ಕಳುಹಿಸಿಕೊಟ್ಟನು. ಅವರು ಸಮಾಧಾನದೊಡನೆ ಅವನ ಬಳಿಯಿಂದ ಹೊರಟುಹೋದರು.
ಅದಕ್ಕೆ ಅವನು ಷಿಬಾ ಎಂದು ಹೆಸರಿಟ್ಟನು. ಆದದರಿಂದ ಇಂದಿನ ವರೆಗೂ ಬೇರ್ಷೆಬ ಎಂದು ಆ ಪಟ್ಟಣಕ್ಕೆ ಹೆಸರಾಯಿತು.
ಯಾಕೋಬನು ಬೆಳಿಗ್ಗೆ ಎದ್ದು ತಾನು ತಲೆದಿಂಬಾಗಿ ಇಟ್ಟುಕೊಂಡಿದ್ದ ಕಲ್ಲನ್ನು ತೆಗೆದುಕೊಂಡು ಅದನ್ನು ಸ್ತಂಭವಾಗಿ ನೆಟ್ಟು ಅದರ ಮೇಲೆ ಎಣ್ಣೆಯನ್ನು ಹೊಯ್ದನು.
ತರುವಾಯ ಏಸಾವನು ತನ್ನ ಹೆಂಡತಿಯರನ್ನೂ ಕುಮಾರ ಕುಮಾರ್ತೆಯರನ್ನೂ ತನ್ನ ಮನೆಯಲ್ಲಿದ್ದ ಎಲ್ಲಾ ಮನುಷ್ಯರನ್ನೂ ತನ್ನ ಹಿಂಡುಗಳನ್ನೂ ತನ್ನ ಎಲ್ಲಾ ದನಗಳನ್ನೂ ಕಾನಾನ್ ದೇಶದಲ್ಲಿ ತಾನು ಸಂಪಾದಿಸಿದ್ದ ಎಲ್ಲಾ ಸಂಪತ್ತನ್ನೂ ತೆಗೆದುಕೊಂಡು ತನ್ನ ಸಹೋದರನಾದ ಯಾಕೋಬನ ಎದುರಿನಿಂದ ಮತ್ತೊಂದು ದೇಶಕ್ಕೆ ಹೋದನು.
ಒಬ್ಬಾನೊಬ್ಬ ಮನುಷ್ಯನು ಯೋಸೇಫ ನನ್ನು ಕಂಡಾಗ ಇಗೋ, ಅವನು ಹೊಲದಲ್ಲಿ ಅಲೆಯುತ್ತಿದ್ದನು. ಆ ಮನುಷ್ಯನು ಅವನಿಗೆ--ನೀನು ಏನು ಹುಡುಕುತ್ತೀ ಎಂದು ಕೇಳಿದನು.
ಇಸ್ರಾಯೇಲನು ತನಗಿದ್ದದ್ದನ್ನೆಲ್ಲಾ ತಕ್ಕೊಂಡು ಬೇರ್ಷೆಬಕ್ಕೆ ಬಂದು ತನ್ನ ತಂದೆಯಾದ ಇಸಾಕನ ದೇವರಿಗೆ ಬಲಿಗಳನ್ನು ಅರ್ಪಿಸಿ ದನು.
ಯೆಹೋಶುವನು ಬೆಳಿಗ್ಗೆ ಎದ್ದು ಅವನೂ ಇಸ್ರಾಯೇಲ್ ಮಕ್ಕಳೆಲ್ಲರೂ ಶಿಟ್ಟೀಮಿ ನಿಂದ ಪ್ರಯಾಣಮಾಡಿ ಯೊರ್ದನಿನ ಬಳಿಗೆ ಬಂದು ಅದನ್ನು ದಾಟುವದಕ್ಕಿಂತ ಮುಂಚೆ ಅಲ್ಲಿ ಇಳು ಕೊಂಡರು.
ಆದರೆ ಸಮುವೇಲನು ಉದಯಕಾಲದಲ್ಲೆದ್ದು ಸೌಲನನ್ನು ಎದುರುಗೊಳ್ಳಲು ಹೋದನು. ಆಗ ಸೌಲನು ಕರ್ಮೆಲಿಗೆ ಬಂದು, ಇಗೋ, ತನಗಾಗಿ ಒಂದು ಸ್ಥಳವನ್ನು ಪ್ರತ್ಯೇಕಿಸಿದನೆಂದೂ ಅಲ್ಲಿಂದ ಸುತ್ತಿಕೊಂಡು ದಾಟಿ ಗಿಲ್ಗಾಲಿಗೆ ಹೋದನೆಂದೂ ಸಮುವೇಲನಿಗೆ ತಿಳಿಸಲ್ಪಟ್ಟಿತು.
ಅವನು ಅದನ್ನು ಕೇಳಿ ಎದ್ದು ತನ್ನ ಪ್ರಾಣಕ್ಕೋಸ್ಕರ ಯೆಹೂದಕ್ಕೆ ಸೇರಿದ ಬೇರ್ಷೆಬಕ್ಕೆ ಹೊರಟುಹೋಗಿ ಅಲ್ಲಿ ತನ್ನ ಸೇವಕನನ್ನು ಬಿಟ್ಟನು.
ಆಗ ಅರಸನಾದ ಹಿಜ್ಕೀಯನು ಉದಯದಲ್ಲಿ ಎದ್ದು ಪಟ್ಟಣದ ಪ್ರಧಾನರನ್ನು ಕೂಡಿಸಿ ಕರ್ತನ ಆಲಯಕ್ಕೆ ಹೋದನು.
ಅರಣ್ಯದಲ್ಲಿಯೂ ಹಾದಿ ಇಲ್ಲದ ಕಾಡಿನಲ್ಲಿಯೂ ಅಲೆದು ವಾಸಿಸುವದಕ್ಕೆ ಪಟ್ಟಣವನ್ನು ಕಂಡುಕೊಳ್ಳದೆ,
ನಿನ್ನ ಆಜ್ಞೆಗಳನ್ನು ಕೈಕೊಳ್ಳು ವದಕ್ಕೆ ತಡಮಾಡದೆ ತ್ವರೆಪಟ್ಟಿದ್ದೇನೆ.
ಮುಂಜಾನೆ ಎದ್ದು ತನ್ನ ಸ್ನೇಹಿತನನ್ನು ದೊಡ್ಡ ಕೂಗಿನಿಂದ ಆಶೀರ್ವದಿಸುವವನಿಗೆ ಅದು ಶಾಪವೆಂದು ಎಣಿಸಲ್ಪಡುವದು.
ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಶಕ್ತಿಯಿಂದ ಮಾಡು; ನೀನು ಹೋಗಲಿರುವ ಸಮಾಧಿಯಲ್ಲಿ ಕೆಲಸವೂ ಯುಕ್ತಿಯೂ ತಿಳುವಳಿಕೆಯೂ ಜ್ಞಾನವೂ ಇರುವದಿಲ್ಲ.
ಹೆಷ್ಬೋನಿನ ಹೊಲ ಗಳೂ, ಸಿಬ್ಮದ ದ್ರಾಕ್ಷೆಯೂ ನಿಸ್ಸಾರವಾಗಿವೆ; ಅನ್ಯ ಜನಗಳ ಪ್ರಭುಗಳು ಅದರ ಮುಖ್ಯವಾದ ಗಿಡಗಳನ್ನು ಮುರಿದುಹಾಕಿದ್ದಾರೆ; ಅವರು ಯಜ್ಜೇರಿನ ವರೆಗೂ ಬಂದರು; ಅಡವಿಯಲ್ಲಿ ಅವರು ಸಂಚರಿಸಿದರು. ಅವಳ ಕೊಂಬೆಗಳು ಚಾಚಲ್ಪಟ್ಟವು ಅವರು ಸಮುದ್ರದ ಮೇಲೆ ಹೋದರು.
ಗುಲಾಮನು ಮನೆಯಲ್ಲಿ ಯಾವಾಗಲೂ ಇರುವದಿಲ್ಲ; ಆದರೆ ಮಗನು ಯಾವಾಗಲೂ ಇರುತ್ತಾನೆ.
ದಾಸಿಯಿಂದ ಹುಟ್ಟಿದವನು ಶರೀರಕ್ಕನಸುಸಾರವಾಗಿ ಹುಟ್ಟಿದನು. ಆದರೆ ಸ್ವತಂತ್ರಳಿಂದ ಹುಟ್ಟಿದವನು ವಾಗ್ದಾನದ ಮೂಲಕ ಹುಟ್ಟಿದನು.