ಅಬೀ ಮೆಲೆಕನ ಸೇವಕರು ಬಲಾತ್ಕಾರದಿಂದ ತಕ್ಕೊಂಡ ನೀರಿನ ಬಾವಿಗಾಗಿ ಅಬ್ರಹಾಮನು ಅಬೀಮೆಲೆಕನನ್ನು ಗದರಿಸಿದಾಗ
Cross references
ಆಗ ಅಬ್ರಾಮನ ದನಕಾಯುವವರಿಗೂ ಲೋಟನ ದನಕಾಯುವವರಿಗೂ ಜಗಳವಾಯಿತು. ಕಾನಾನ್ಯರೂ ಪೆರಿಜೀಯರೂ ಆಗ ದೇಶದಲ್ಲಿ ವಾಸವಾಗಿದ್ದರು.
ಅವನ ತಂದೆಯಾದ ಅಬ್ರಹಾಮನ ದಿನಗಳಲ್ಲಿ ಅಬ್ರಹಾಮನ ಸೇವಕರು ಅಗಿದ ಬಾವಿಗಳನ್ನೆಲ್ಲಾ ಫಿಲಿಷ್ಟಿಯರು ಮಣ್ಣಿನಿಂದ ಮುಚ್ಚಿದರು.
ಗೆರಾರಿನ ಮಂದೆಯನ್ನು ಮೇಯಿಸುವವರು --ಈ ನೀರು ನಮ್ಮದು ಎಂದು ಇಸಾಕನ ಮಂದೆಯನ್ನು ಮೇಯಿಸುವವರ ಸಂಗಡ ಜಗಳವಾಡಿದರು. ಅವರು ಅವನ ಸಂಗಡ ಜಗಳವಾಡಿದ ಕಾರಣ ಅವನು ಆ ಬಾವಿಗೆ ಏಸೆಕ್ ಎಂದು ಹೆಸರಿಟ್ಟನು.
ತರುವಾಯ ಅವರು ಇನ್ನೊಂದು ಬಾವಿಯನ್ನು ಅಗಿದಾಗ ಅದಕ್ಕಾಗಿಯೂ ಅವರು ಜಗಳವಾಡಿದಾಗ ಅವನು ಅದಕ್ಕೆ ಸಿಟ್ನಾ ಎಂದು ಹೆಸರಿಟ್ಟನು.
ಅದಕ್ಕೆ ಅವರು--ಮಂದೆಗಳನ್ನೆಲ್ಲಾ ಒಟ್ಟುಗೂಡಿಸಿದ ಮೇಲೆ ಬಾವಿಯ ಮೇಲಿರುವ ಕಲ್ಲನ್ನು ಮುಚ್ಚುತ್ತಾರೆ; ಆಗ ನಾವು ಕುರಿಗಳಿಗೆ ನೀರನ್ನು ಕುಡಿಸುತ್ತೇವೆ ಅಂದರು.
ಫರೋಹನು ಈ ಮಾತುಗಳನ್ನು ಕೇಳಿ ಮೋಶೆ ಯನ್ನು ಕೊಲ್ಲಲು ಹುಡುಕಿದನು. ಆದರೆ ಮೋಶೆಯು ಫರೋಹನ ಎದುರಿನಿಂದ ಓಡಿಹೋಗಿ ಮಿದ್ಯಾನ್ ದೇಶದಲ್ಲಿದ್ದು ಒಂದು ಬಾವಿಯ ಬಳಿಯಲ್ಲಿ ಕೂತು ಕೊಂಡನು.
ಅವಳು ಅವನಿಗೆ--ನನಗೆ ಆಶೀರ್ವಾದಕೊಡು; ನೀನು ದಕ್ಷಿಣ ಭೂಮಿಯನ್ನು ನನಗೆ ಕೊಟ್ಟುಬಿಟ್ಟೆ ಯಲ್ಲಾ, ನೀರು ಬುಗ್ಗೆಗಳನ್ನು ಸಹ ಕೊಡು ಅಂದಳು. ಕಾಲೇಬನು ಮೇಲಿನ ಬುಗ್ಗೆಗಳನ್ನೂ ಕೆಳಗಿನ ಬುಗ್ಗೆಗಳನ್ನೂ ಅವಳಿಗೆ ಕೊಟ್ಟನು.
ಬುದ್ಧಿಹೀನನಿಗೆ ನೂರು ಪೆಟ್ಟುಗಳಿಗಿಂತ ಜ್ಞಾನಿಗೆ ಒಂದು ಗದರಿಕೆಯ ಮಾತು ಹೆಚ್ಚಾಗಿ ನಾಟು ತ್ತದೆ.
ನಿನ್ನ ನೆರೆಯವನೊಂದಿಗೆ ನಿನ್ನ ವ್ಯಾಜ್ಯವನ್ನು ಚರ್ಚಿಸು; ಗುಟ್ಟನ್ನು ಬೇರೊಬ್ಬನಿಗೆ ಹೊರಪಡಿಸಬೇಡ;
ರಹಸ್ಯವಾದ ಪ್ರೀತಿಗಿಂತಲೂ ಬಹಿರಂಗವಾದ ಗದರಿಕೆಯೇ ಲೇಸು.
ಇದಲ್ಲದೆ ನಿನ್ನ ಸಹೋದರನು ನಿನಗೆ ವಿರೋಧ ವಾಗಿ ತಪ್ಪು ಮಾಡಿದರೆ ನೀನೂ ಅವನೂ ಮಾತ್ರ ಇರುವಾಗ ಅವನ ತಪ್ಪನ್ನು ಅವನಿಗೆ ತಿಳಿಸು; ಅವನು ನಿನ್ನ ಮಾತನ್ನು ಕೇಳಿದರೆ ನೀನು ನಿನ್ನ ಸಹೋದರನನ್ನು ಸಂಪಾದಿಸಿಕೊಂಡಿರುವಿ.