ಅವನು ಹೇಳಿದ್ದೇನಂದರೆ--ನಾನು ನನ್ನ ಮೇಲೆ ನಾನೇ ಆಣೆಯಿಟ್ಟು ಕೊಂಡಿದ್ದೇನೆ ಎಂದು ಕರ್ತನು ಹೇಳು ತ್ತಾನೆ. ಯಾಕಂದರೆ ನೀನು ಈ ಕಾರ್ಯವನ್ನು ಮಾಡಿ ನಿನ್ನ ಒಬ್ಬನೇ ಮಗನನ್ನು ನನಗೆ ಕೊಡುವದಕ್ಕೆ ಹಿಂತೆಗೆಯದೆ ಇದ್ದದರಿಂದ
Cross references
ನಾನು ನಿನ್ನನ್ನು ದೊಡ್ಡ ಜನಾಂಗವಾಗ ಮಾಡಿ ನಿನ್ನನ್ನು ಆಶೀರ್ವದಿಸಿ ನಿನ್ನ ಹೆಸರನ್ನು ದೊಡ್ಡ ದಾಗಿ ಮಾಡುವೆನು, ನೀನು ಆಶೀರ್ವಾದವಾಗಿರುವಿ.
ಆಕಾಶದ ನಕ್ಷತ್ರಗಳ ಹಾಗೆ ನಿಮ್ಮ ಸಂತತಿಯನ್ನು ಹೆಚ್ಚಿಸಿ, ನಾನು ಹೇಳಿದ ಈ ದೇಶವನ್ನು ನಿಮ್ಮ ಸಂತತಿಯು ನಿತ್ಯವಾಗಿ ಸ್ವತಂತ್ರಿಸಿಕೊಳ್ಳುವರು ಎಂದು ಯಾರಿಗೆ ನಿನ್ನ ಆಣೆಯಿಟ್ಟು ಪ್ರಮಾಣಮಾಡಿ ದಿಯೋ ಆ ನಿನ್ನ ಸೇವಕರಾದ ಅಬ್ರಹಾಮನನ್ನೂ ಇಸಾಕನನ್ನೂ ಇಸ್ರಾಯೇಲನನ್ನೂ ಜ್ಞಾಪಕ ಮಾಡಿಕೋ ಅಂದನು.
ಅಬ್ರಹಾಮನ ಸಂಗಡ ಮಾಡಿದ ಒಡಂಬಡಿಕೆಯನ್ನು ಇಸಾಕನಿಗೆ ಇಟ್ಟ ಆಣೆಯನ್ನು ಇದನ್ನು ನಿತ್ಯವೂ ಜ್ಞಾಪಕಮಾಡಿಕೊಳ್ಳಿರಿ.
ಅಬ್ರಹಾಮನ ಸಂಗಡ ಮಾಡಿದ ಒಡಂಬಡಿಕೆಯನ್ನೂ ಇಸಾಕನಿಗೆ ಇಟ್ಟ ಆಣೆಯನ್ನೂ ಆತನು ಯುಗಯುಗಕ್ಕೂ ಜ್ಞಾಪಕ ಮಾಡಿಕೊಂಡಿದ್ದಾನೆ.
ನನ್ನಷ್ಟಕ್ಕೆ ನಾನೇ ಆಣೆಯನ್ನು ಇಟ್ಟಿದ್ದೇನೆ, ನೀತಿಯುಳ್ಳ ವಾಕ್ಯವು ನನ್ನ ಬಾಯಿಂದ ಹೊರಟಿದೆ, ಅದು ಹಿಂದಿರುಗದು: ಎಲ್ಲರೂ ನನಗೆ ಅಡ್ಡಬೀಳುವರು, ಪ್ರತಿ ನಾಲಿಗೆಯು ಪ್ರತಿಜ್ಞೆ ಮಾಡು ವದು.
ಇಗೋ, ದಿನಗಳು ಬರುವವೆಂದು ಕರ್ತನು ಅನ್ನು ತ್ತಾನೆ; ಆಗ ನಾನು ದಾವೀದನಿಗೆ ನೀತಿಯುಳ್ಳ ಚಿಗುರನ್ನು ಎಬ್ಬಿಸುತ್ತೇನೆ; ಅರಸನು ರಾಜ್ಯವಾಳಿ ವೃದ್ಧಿಯಾಗುವನು; ಭೂಮಿಯಲ್ಲಿ ನ್ಯಾಯವನ್ನೂ ನೀತಿಯನ್ನೂ ನಡಿಸು ವನು.
ಕರ್ತನ ರೌದ್ರದ ನಿಮಿತ್ತ ಅದರಲ್ಲಿ ಯಾರೂ ವಾಸಮಾಡುವದಿಲ್ಲ; ಸಂಪೂರ್ಣ ಹಾಳಾಗುವದು ಬಾಬೆಲನ್ನು ಹಾದುಹೋಗುವವ ರೆಲ್ಲರು ಅದರ ಎಲ್ಲಾ ಬಾಧೆಗಳ ವಿಷಯ ವಿಸ್ಮಯಪಟ್ಟು ಸಿಳ್ಳಿಡುವರು.
ಸುತ್ತಲಿರುವ ಯೆರೂಸಲೇಮಿನ ಗೋಡೆ ಗಳನ್ನೆಲ್ಲಾ ಕಾವಲಿನವರ ಅಧಿಪತಿಯ ಸಂಗಡ ಇದ್ದ ಕಸ್ದೀಯರ ದಂಡೆಲ್ಲಾ ಕೆಡವಿ ಹಾಕಿತು.
ಸೈನ್ಯಗಳ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ದೇವರಾದ ಕರ್ತನು ತನ್ನ ಮೇಲೆ ಆಣೆಯಿಟ್ಟುಕೊಂಡಿ ದ್ದಾನೆ; ಅದೇನಂದರೆ--ನಾನು ಯಾಕೋಬಿನ ಹೆಚ್ಚಳ ವನ್ನು ಅಸಹ್ಯಿಸಿಕೊಂಡು ಅವನ ಅರಮನೆಗಳನ್ನು ಹಗೆ ಮಾಡುತ್ತೇನೆ; ಅದಕಾರಣ ಪಟ್ಟಣವನ್ನೂ ಅದರಲ್ಲಿ ರುವ ಸಮಸ್ತವನ್ನೂ ನಾನು ಒಪ್ಪಿಸಿಬಿಡುತ್ತೇನೆ.
ನೀನು ನಮ್ಮ ಪಿತೃಗಳಿಗೆ ಪೂರ್ವದ ಕಾಲದಲ್ಲಿ ಪ್ರಮಾಣ ಮಾಡಿದ ಸತ್ಯವನ್ನು ಯಾಕೋಬನಿಗೂ ಕರುಣೆಯನ್ನು ಅಬ್ರಹಾಮನಿಗೂ ಈಡೇರಿಸುವಿ.
ನಮ್ಮ ಪಿತೃವಾದ ಅಬ್ರಹಾಮನಿಗೆ ಆಣೆಯಿಟ್ಟು ಪ್ರಮಾಣ ಮಾಡಿದಂತೆ
ಅವನು ಲೋಕಕ್ಕೆ ಬಾಧ್ಯನಾಗುವನೆಂಬ ವಾಗ್ದಾ ನವು ಅಬ್ರಹಾಮನಿಗಾಗಲಿ ಅವನ ಸಂತತಿಯವರಿ ಗಾಗಲಿ ನ್ಯಾಯಪ್ರಮಾಣದಿಂದ ಆದದ್ದಲ್ಲ, ನಂಬಿಕೆ ಯಿಂದಾದ ನೀತಿಯಿಂದಲೇ ಆದದ್ದು.
ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದಾಗ ತನಗಿಂತ ಹೆಚ್ಚಿನವನ ಆಣೆಯಿಡುವದಕ್ಕಾಗದೆ ಇದ್ದದ್ದರಿಂದ ತನ್ನಾ ಣೆಯಿಟ್ಟು--