ಮೂರನೆಯ ದಿನದಲ್ಲಿ ಅಬ್ರಹಾಮನು ತನ್ನ ಕಣ್ಣುಗಳನ್ನೆತ್ತಿ ಆ ಸ್ಥಳವನ್ನು ದೂರದಿಂದ ನೋಡಿದನು.
Cross references
ಆಗ ಅವರು ಫರೋಹ ನಿಗೆ--ಇಬ್ರಿಯರ ದೇವರು ನಮ್ಮನ್ನು ಎದುರುಗೊಂಡಿ ದ್ದಾನೆ; ಆದದರಿಂದ ನಾವು ಅರಣ್ಯದಲ್ಲಿ ಮೂರು ದಿನ ಪ್ರಯಾಣಮಾಡಿ ನಮ್ಮ ದೇವರಾದ ಕರ್ತನಿಗೆ ಬಲಿ ಅರ್ಪಿಸುವದಕ್ಕಾಗಿ ನಾವು ಹೋಗಬೇಕು; ಇಲ್ಲ ವಾದರೆ ಆತನು ವ್ಯಾಧಿಯಿಂದಲಾದರೂ ಕತ್ತಿಯಿಂದ ಲಾದರೂ ನಮ್ಮನ್ನು ಸಂಹಾರ ಮಾಡಾನು ಎಂದು ಅಂದರು.
ಹೀಗೆ ಮೋಶೆಯು ಇಸ್ರಾಯೇಲ್ಯರನ್ನು ಕೆಂಪು ಸಮುದ್ರದಿಂದ ಬರಮಾಡಿದನು; ಅವರು ಶೂರಿನ ಅರಣ್ಯದೊಳಗೆ ಹೋದರು; ಅವರು ಅರಣ್ಯದಲ್ಲಿ ಮೂರು ದಿನ ಪ್ರಯಾಣ ಮಾಡಿದಾಗ್ಯೂ ನೀರನ್ನು ಕಂಡುಕೊಳ್ಳಲಿಲ್ಲ.
ಮೂರ ನೆಯ ದಿನದಲ್ಲಿ ಅವರು ಸಿದ್ಧವಾಗಿರಲಿ; ಯಾಕಂದರೆ ಮೂರನೆಯ ದಿನದಲ್ಲಿ ಕರ್ತನು ಸಮಸ್ತ ಜನರ ಕಣ್ಣೆದುರಿನಲ್ಲಿ ಸೀನಾಯಿ ಪರ್ವತಕ್ಕೆ ಇಳಿದು ಬರುವನು.
ಅವನು ಜನರಿಗೆ--ಮೂರನೆಯ ದಿನ ಕ್ಕಾಗಿ ಸಿದ್ಧರಾಗಿರ್ರಿ, ನೀವು ನಿಮ್ಮ ಹೆಂಡತಿಯರ ಬಳಿಗೆ ಸೇರದೆ ಇರ್ರಿ ಅಂದನು.
ಉಳಿದಿರುವ ಯಜ್ಞದ ಮಾಂಸವನ್ನು ಮೂರನೆಯ ದಿನದಲ್ಲಿ ಬೆಂಕಿ ಯಿಂದ ಸುಡಬೇಕು.
ಅವರು ಕರ್ತನ ಪರ್ವತದ ಬಳಿಯಿಂದ ಮೂರು ದಿವಸಗಳ ವರೆಗೆ ಪ್ರಯಾಣಮಾಡಿದರು. ಕರ್ತನ ಒಡಂಬಡಿಕೆಯ ಮಂಜೂಷವು ಅವರಿಗೆ ಇಳು ಕೊಳ್ಳುವ ಸ್ಥಳವನ್ನು ಹುಡುಕುವದಕ್ಕಾಗಿ ಮೂರು ದಿವಸ ಗಳ ಪ್ರಯಾಣದಷ್ಟು ಅವರ ಮುಂದಾಗಿ ಹೋಯಿತು.
ಅವನು ಇದ ರಿಂದ ಮೂರನೇ ದಿವಸದಲ್ಲಿ ತನ್ನನ್ನು ಶುದ್ಧೀಕರಿಸಿ ಕೊಂಡು ಏಳನೇ ದಿವಸದಲ್ಲಿ ಶುದ್ಧನಾಗಬೇಕು; ಆದರೆ ಅವನು ಮೂರನೇ ದಿವಸದಲ್ಲಿ ತನ್ನನ್ನು ಶುದ್ಧಮಾಡಿ ಕೊಳ್ಳದಿದ್ದರೆ ಏಳನೇ ದಿವಸದಲ್ಲಿ ಶುದ್ಧನಾಗಲಾರನು.
ಪವಿತ್ರನಾ ದವನು ಅಪವಿತ್ರನಾದವನ ಮೇಲೆ ಮೂರನೇ ದಿವಸ ದಲ್ಲಿಯೂ ಏಳನೇ ದಿವಸದಲ್ಲಿಯೂ ಚಿಮುಕಿಸಲಿ. ಏಳನೇ ದಿವಸದಲ್ಲಿ ಅವನು ತನ್ನನ್ನು ಪವಿತ್ರಮಾಡಿ ಕೊಂಡು ತನ್ನ ವಸ್ತ್ರಗಳನ್ನು ಒಗೆದುಕೊಂಡು ಅವನು ಸ್ನಾನಮಾಡಿ ಸಾಯಂಕಾಲದಲ್ಲಿ ಪವಿತ್ರನಾಗುವನು.
ಯಾವನಾದರೂ ಒಬ್ಬ ವ್ಯಕ್ತಿಯನ್ನು ಕೊಂದವನು, ಸತ್ತವನನ್ನು ಮುಟ್ಟಿದವನು ಏಳು ದಿವಸದ ವರೆಗೆ ಪಾಳೆಯದ ಹೊರಗೆ ಇರಬೇಕು. ಮೂರನೇ ದಿನದಲ್ಲಿ ಮತ್ತು ಏಳನೆಯ ದಿನದಲ್ಲಿ ನಿಮ್ಮನ್ನು ಮತ್ತು ನಿಮ್ಮ ಸೆರೆಯವರನ್ನು ಶುದ್ಧಿ ಮಾಡಿಕೊಳ್ಳಿರಿ.
ನೀವು ದಂಡಿನ ಮಧ್ಯದಲ್ಲಿ ಹೋಗಿ ಜನರಿಗೆ ಆಜ್ಞಾಪಿಸಿ ಹೇಳಬೇಕಾದದ್ದೇನಂದರೆ--ನಿಮ ಗೋಸ್ಕರ ಆಹಾರವನ್ನು ಸಿದ್ಧಮಾಡಿಕೊಳ್ಳಿರಿ; ನಿಮ್ಮ ದೇವರಾದ ಕರ್ತನು ನಿಮಗೆ ಸ್ವಾಸ್ತ್ಯಕ್ಕಾಗಿ ಕೊಟ್ಟಿರುವ ದೇಶವನ್ನು ನೀವು ಸ್ವಾಧೀನಮಾಡಿಕೊಳ್ಳಲು ಇನ್ನು ಮೂರು ದಿವಸಗಳಲ್ಲಿ ಯೊರ್ದನನ್ನು ದಾಟಿ ಹೋಗ ಬೇಕು ಅಂದನು.
ದಾವೀದನು ದಾಟಿ ಆ ಕಡೆಗೆ ಹೋಗಿ ತಮಗೂ ಅವರಿಗೂ ಮಧ್ಯದಲ್ಲಿ ಬಹಳ ಸ್ಥಳ ಇರುವ ಹಾಗೆ ದೂರವಾಗಿರುವ ಒಂದು ಬೆಟ್ಟದ ಕೊನೆಯಲ್ಲಿ ನಿಂತು ಜನರಿಗೂ ನೇರನ ಮಗನಾದ ಅಬ್ನೇರನಿಗೂ ಎದು ರಾಗಿ ಕೂಗಿ ಹೇಳಿದ್ದೇನಂದರೆ--
ನೀನು ತಿರುಗಿಕೊಂಡು ನನ್ನ ಜನರ ನಾಯಕನಾದ ಹಿಜ್ಕೀಯನಿಗೆ ಹೇಳಬೇಕಾದದ್ದೇ ನಂದರೆ--ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ; ನಿನ್ನ ಕಣ್ಣೀರನ್ನು ನೋಡಿದ್ದೇನೆ; ಇಗೋ, ನಾನು ನಿನ್ನನ್ನು ಸ್ವಸ್ಥಮಾಡುತ್ತೇನೆ; ಮೂರನೇ ದಿವಸದಲ್ಲಿ ಕರ್ತನ ಮನೆಗೆ ಹೋಗುವಿ.
ಮೂರನೇ ದಿನದಲ್ಲಿ ಏನಾಯಿತಂದರೆ, ಎಸ್ತೇರಳು ರಾಜ ಭೂಷಣಗಳನ್ನು ಧರಿಸಿ ಕೊಂಡು ಅರಮನೆಗೆ ಎದುರಾಗಿರುವ ಅರಸನ ಮನೆಯ ಅಂಗಳದಲ್ಲಿ ಹೋಗಿ ನಿಂತಳು. ಅರಸನು ರಾಜ ಮನೆ ಯಲ್ಲಿ ಬಾಗಲಿಗೆದುರಾಗಿ ತನ್ನ ರಾಜ ಸಿಂಹಾಸನದ ಮೇಲೆ ಕುಳಿತಿದ್ದನು.
ಆತನು ಎರಡು ದಿನಗಳಾದ ಮೇಲೆ ನಮ್ಮನ್ನು ಪುನರ್ಜೀವಿಸ ಮಾಡುವನು; ಮೂರನೆಯ ದಿನದಲ್ಲಿ ಆತನೇ ನಮ್ಮನ್ನು ಎಬ್ಬಿಸುವನು; ನಾವು ಆತನ ದೃಷ್ಟಿಯಲ್ಲಿ ಜೀವಿಸುವೆವು.
ಅವರು ಆತನನ್ನು ಕೊಲ್ಲುವರು; ಇದಲ್ಲದೆ ಮೂರನೇ ದಿನದಲ್ಲಿ ಆತನು ತಿರಿಗಿ ಎಬ್ಬಿಸಲ್ಪಡುವನು ಎಂದು ಹೇಳಿದನು. ಅದಕ್ಕೆ ಅವರು ಬಹಳ ದುಃಖಪಟ್ಟರು.
ಅದಕ್ಕೆ ಆತನು ಅವರಿಗೆ--ಇಗೋ, ನಾನು ಈ ದಿವಸ ಮತ್ತು ನಾಳೆ ದೆವ್ವಗಳನ್ನು ಬಿಡಿಸಿ ಸ್ವಸ್ಥಮಾಡುತ್ತೇನೆ; ಮೂರನೆಯ ದಿನದಲ್ಲಿ ನಾನು ಸಿದ್ಧಿಗೆ ಬರುತ್ತೇನೆ ಎಂದು ನೀವು ಹೋಗಿ ಆ ನರಿಗೆ ಹೇಳಿರಿ.
ಹೂಣಲ್ಪಟ್ಟನು; ಬರಹದ ಪ್ರಕಾರವೇ ಆತನು ಮೂರನೆಯ ದಿನದಲ್ಲಿ ತಿರಿಗಿ ಎದ್ದುಬಂದನು.