ಆಗ ಅವನು--ನನ್ನ ಯಜಮಾನನಾದ ಅಬ್ರಹಾ ಮನ ದೇವರಾಗಿರುವ ಕರ್ತನೇ, ಈಹೊತ್ತು ನನಗೆ ತ್ವರೆಯಾಗಿ ಕಾರ್ಯಕೈಗೂಡುವಂತೆ ಮಾಡಿ ನನ್ನ ಯಜಮಾನನಾದ ಅಬ್ರಹಾಮನಿಗೆ ದಯೆ ತೋರಿಸು.
Cross references
ಇವುಗಳಾದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಕರ್ತನ ವಾಕ್ಯವು ಬಂದು--ಅಬ್ರಾಮನೇ, ಭಯಪಡಬೇಡ; ನಾನೇ ನಿನ್ನ ಗುರಾಣಿಯೂ ನಿನ್ನ ಅತ್ಯಧಿಕವಾದ ಬಹುಮಾನವೂ ಆಗಿದ್ದೇನೆ.
ಇದಲ್ಲದೆ ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ದೇವರಾಗಿರುವದಕ್ಕೆ ನನಗೂ ನಿನಗೂ ನಿನ್ನ ತರುವಾಯ ಬರುವ ತಲ ತಲಾಂತರಗಳಲ್ಲಿ ನಿನ್ನ ಸಂತಾನಕ್ಕೂ ಮಧ್ಯದಲ್ಲಿ ನನ್ನ ಒಡಂಬಡಿಕೆಯನ್ನು ನಿತ್ಯವಾದ ಒಡಂಬಡಿಕೆಯಾಗಿ ಸ್ಥಾಪಿಸುತ್ತೇನೆ.
ನನ್ನ ಯಜಮಾನನಾದ ಅಬ್ರಹಾಮನ ಕರ್ತನಾದ ದೇವರು ಸ್ತುತಿಹೊಂದಲಿ; ಆತನು ನನ್ನ ಯಜಮಾನನನ್ನು ಅನಾಥನನ್ನಾಗಿ ಬಿಡದೆ ತನ್ನ ಕೃಪೆಯನ್ನೂ ಸತ್ಯವನ್ನೂ ತೋರಿಸಿದ್ದಾನೆ. ನಾನು ಮಾರ್ಗದಲ್ಲಿರುವಾಗ ಕರ್ತನು ನನ್ನನ್ನು ನನ್ನ ಯಜಮಾನನ ಸಹೋದರನ ಮನೆಗೆ ನಡಿಸಿದ್ದಾನೆ ಅಂದನು.
ಈ ದಿನ ನಾನು ಆ ಬಾವಿಯ ಬಳಿಗೆ ಬಂದಾಗ --ನನ್ನ ಯಜಮಾನನಾದ ಅಬ್ರಹಾಮನ ಕರ್ತನಾದ ದೇವರೇ, ನಾನು ಹೋಗುವ ಮಾರ್ಗ ವನ್ನು ನೀನು ಸಫಲ ಮಾಡುವದಾದರೆ
ನನ್ನ ತಲೆಯನ್ನು ಬಾಗಿಸಿ ಕರ್ತನನ್ನು ಆರಾಧಿಸಿ ನನ್ನ ಯಜಮಾನನ ಸಹೋದರನ ಮಗಳನ್ನು ಅವನ ಮಗನಿಗೆ ಹೆಂಡತಿ ಯಾಗಿ ತಕ್ಕೊಳ್ಳುವದಕ್ಕೆ ನನ್ನನ್ನು ಸರಿಯಾದ ಮಾರ್ಗ ದಲ್ಲಿ ನಡಿಸಿದ ನನ್ನ ಯಜಮಾನನಾದ ಅಬ್ರಹಾಮನ ದೇವರಾಗಿರುವ ಕರ್ತನನ್ನು ಕೊಂಡಾಡಿದೆನು.
ಅದೇ ರಾತ್ರಿಯಲ್ಲಿ ಕರ್ತನು ಅವನಿಗೆ ಕಾಣಿಸಿ ಕೊಂಡು--ನಿನ್ನ ತಂದೆಯಾದ ಅಬ್ರಹಾಮನ ದೇವರು ನಾನೇ; ಭಯಪಡಬೇಡ; ನಾನು ನಿನ್ನ ಸಂಗಡ ಇದ್ದೇನೆ; ನನ್ನ ದಾಸನಾದ ಅಬ್ರಹಾಮನಿಗೋಸ್ಕರ ನಿನ್ನನ್ನು ಆಶೀರ್ವದಿಸಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು ಅಂದನು.
ನೀನು ಅದನ್ನು ನಿನ್ನ ತಂದೆಯ ಬಳಿಗೆ ತಕ್ಕೊಂಡು ಹೋಗಬೇಕು. ಅವನು ಸಾಯುವದಕ್ಕಿಂತ ಮೊದಲು ನಿನ್ನನ್ನು ಆಶೀರ್ವದಿಸುವಂತೆ ಊಟಮಾಡಲಿ ಅಂದಳು.
ಇಸಾಕನು ತನ್ನ ಮಗನಿಗೆ--ನನ್ನ ಮಗನೇ, ಇಷ್ಟು ಬೇಗ ಅದು ನಿನಗೆ ಹೇಗೆ ಸಿಕ್ಕಿತು ಅಂದನು. ಅವನು--ನಿನ್ನ ದೇವರಾದ ಕರ್ತನು ನನ್ನೆದುರಿಗೆ ಅದು ಬರುವಂತೆ ಮಾಡಿದನು ಅಂದನು.
ಇಗೋ, ಕರ್ತನು ಅದರ ಮೇಲೆ ನಿಂತುಕೊಂಡು ಹೇಳಿದ್ದೇನಂದರೆ--ನಿನ್ನ ತಂದೆ ಯಾದ ಅಬ್ರಹಾಮನ ಕರ್ತನಾದ ದೇವರೂ ಇಸಾಕನ ದೇವರೂ ನಾನೇ, ನೀನು ಮಲಗಿರುವ ಭೂಮಿಯನ್ನು ನಿನಗೂ ನಿನ್ನ ಸಂತತಿಗೂ ಕೊಡುವೆನು.
ಅಬ್ರಹಾಮನ ದೇವರೂ ನನ್ನ ತಂದೆಯಾದ ಇಸಾಕನು ಭಯಭಕ್ತಿಯಿಂದ ಸೇವಿಸುವ ದೇವರೂ ನನ್ನೊಂದಿಗೆ ಇಲ್ಲದೆ ಹೋಗಿದ್ದರೆ ನಿಜವಾಗಿಯೂ ನನ್ನನ್ನು ಬರಿಗೈಯಿಂದ ಕಳುಹಿಸುತ್ತಿದ್ದಿ; ನನ್ನ ಬಾಧೆ ಯನ್ನೂ ನನ್ನ ಕೈ ಕಷ್ಟವನ್ನೂ ದೇವರು ನೋಡಿ ನಿನ್ನೆ ರಾತ್ರಿ ನಿನ್ನನ್ನು ಗದರಿಸಿದನು ಅಂದನು.
ಇದಲ್ಲದೆ ಯಾಕೋಬನು ಹೇಳಿದ್ದೇ ನಂದರೆ--ನನ್ನ ತಂದೆಯಾದ ಅಬ್ರಹಾಮನ ದೇವರೇ, ನನ್ನ ತಂದೆಯಾದ ಇಸಾಕನ ದೇವರೇ, ನಿನ್ನ ದೇಶಕ್ಕೂ ನಿನ್ನ ಬಂಧುಗಳ ಬಳಿಗೂ ತಿರಿಗಿ ಹೋಗು, ಆಗ ನಿನಗೆ ಒಳ್ಳೇದನ್ನು ಮಾಡುವೆನು ಎಂದು ನನಗೆ ಹೇಳಿದ ಕರ್ತನೇ,
ನೀನು ನಿನ್ನ ದಾಸನಿಗೆ ತೋರಿಸಿದ ಎಲ್ಲಾ ಕರುಣೆಗಳಿಗೂ ಎಲ್ಲಾ ಸತ್ಯಕ್ಕೂ ಅಯೋಗ್ಯನಾಗಿದ್ದೇನೆ. ಯಾಕಂದರೆ ನಾನು ಮೊದಲು ಈ ಯೊರ್ದನ್ ಹೊಳೆಯನ್ನು ದಾಟಿದಾಗ ನನಗೆ ಕೋಲು ಮಾತ್ರವೇ ಇತ್ತು; ಈಗ ಎರಡು ಗುಂಪುಗಳುಳ್ಳವನಾದೆನು.
ಸರ್ವಶಕ್ತನಾದ ದೇವರು ನಿಮ್ಮ ಬೇರೆ ಸಹೋದರ ನನ್ನೂ ಬೆನ್ಯಾವಿಾನನನ್ನೂ ಕಳುಹಿಸಿ ಕೊಡುವಹಾಗೆ ಆ ಮನುಷ್ಯನು ನಿಮ್ಮ ಮೇಲೆ ಕರುಣೆ ತೋರಿಸುವಂತೆ ಮಾಡಲಿ. ನಾನಂತೂ ಮಕ್ಕಳನ್ನು ಕಳಕೊಂಡವನಾಗಿರಬೇಕಾದರೆ ಹಾಗೆಯೇ ಆಗಲಿ ಅಂದನು.
ಇದಲ್ಲದೆ ಆತನು ಅವನಿಗೆ--ನಾನು ನಿನ್ನ ತಂದೆಯ ದೇವರು ಅಬ್ರಹಾಮನ ದೇವರು ಇಸಾಕನ ದೇವರು ಯಾಕೋಬನ ದೇವರು ಆಗಿದ್ದೇನೆ ಎಂದು ಹೇಳಿದನು. ಆಗ ಮೋಶೆಯು ದೇವರನ್ನು ನೋಡುವದಕ್ಕೆ ಭಯ ಪಟ್ಟು ತನ್ನ ಮುಖವನ್ನು ಮುಚ್ಚಿಕೊಂಡನು.
ದೇವರು ಮೋಶೆಗೆ--ನಿಮ್ಮ ಪಿತೃಗಳಾದ ಅಬ್ರಹಾಮ ಇಸಾಕ ಯಾಕೋಬರ ದೇವರು ಆಗಿರುವ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿ ದ್ದಾನೆಂದು ಇಸ್ರಾಯೇಲ್ ಮಕ್ಕಳಿಗೆ ಹೇಳಬೇಕು; ಇದೇ ಯುಗ ಯುಗಕ್ಕೆ ನನ್ನ ಹೆಸರೂ ತಲತಲಾಂತರಕ್ಕೆ ನನ್ನ ಸ್ಮರಣೆಯೂ ಆಗಿದೆ ಎಂದು ಹೇಳಿದನು.
ಸಾಯಂಕಾಲದ ಬಲಿಯನ್ನು ಅರ್ಪಿಸುವ ವೇಳೆ ಯಲ್ಲಿ ಪ್ರವಾದಿಯಾದ ಎಲೀಯನು ಸವಿಾಪಕ್ಕೆ ಬಂದು--ಅಬ್ರಹಾಮನಿಗೂ ಇಸಾಕನಿಗೂ ಇಸ್ರಾ ಯೇಲಿಗೂ ದೇವರಾದ ಕರ್ತನೇ, ಇಸ್ರಾಯೇಲಿನಲ್ಲಿ ನೀನು ದೇವರೆಂದೂ ನಾನು ನಿನ್ನ ಸೇವಕನೆಂದೂ ನಾನು ಈ ಕಾರ್ಯಗಳನ್ನೆಲ್ಲಾ ನಿನ್ನ ಮಾತಿನ ಹಾಗೆಯೇ ಮಾಡಿದೆನೆಂದೂ ಇಂದು ತಿಳಿಯಲ್ಪಡಲಿ.
ಎಲೀಯನಿಂದ ಬಿದ್ದ ಹೊದಿಕೆಯನ್ನು ತಕ್ಕೊಂಡು ನೀರನ್ನು ಹೊಡೆದು--ಎಲೀಯನ ದೇವರಾದ ಕರ್ತನು ಎಲ್ಲಿದ್ದಾನೆ ಅಂದನು. ಅವನು ಹಾಗೆ ನೀರನ್ನು ಹೊಡೆದ ತರುವಾಯ ಅದು ಎರಡು ಭಾಗವಾದದ್ದರಿಂದ ಎಲೀ ಷನು ದಾಟಿಹೋದನು.
ಓ ಕರ್ತನೇ, ನಿನ್ನ ನಾಮಕ್ಕೆ ಭಯಪಡಲು ಇಚ್ಛಿಸುವ ನಿನ್ನ ಸೇವಕನ ಪ್ರಾರ್ಥನೆಯನ್ನೂ ಸೇವಕರ ಪ್ರಾರ್ಥನೆಯನ್ನೂ ನಿನ್ನ ಕಿವಿ ಆಲೈಸುತ್ತಾ ಇರಲಿ; ಇಂದು ನಿನ್ನ ಸೇವಕನಿಗೆ ವೃದ್ಧಿಯನ್ನು ಕೊಟ್ಟು ಈ ಮನುಷ್ಯನ ದೃಷ್ಟಿಯಲ್ಲಿ ಅವನಿಗೆ ಕರುಣೆ ದೊರಕುವ ಹಾಗೆ ಮಾಡು. ಯಾಕಂದರೆ ನಾನು ಅರಸನಿಗೆ ಪಾನ ಕೊಡುವವನಾಗಿದ್ದೆನು.
ಅದಕ್ಕೆ ಅರಸನು ನನಗೆ--ನೀನು ಕೇಳುವದೇನು ಅಂದನು.
ನಿನ್ನ ಮಾರ್ಗವನ್ನು ಕರ್ತನಿಗೆ ಒಪ್ಪಿಸು; ಆತನಲ್ಲಿ ಭರವಸ ವಿಡು; ಆತನು ಅದನ್ನು ನೆರವೇರಿಸುವನು.
ನಿನ್ನ ಸೇವಕರಿಗೆ ನಿನ್ನ ಕೆಲಸವೂ ಅವರ ಮಕ್ಕಳಿಗೆ ನಿನ್ನ ಪ್ರಭೆಯೂ ತೋರಿಬರಲಿ.ನಮ್ಮ ದೇವರಾದ ಕರ್ತನ ರಮ್ಯತೆಯು ನಮ್ಮ ಮೇಲೆ ಇರಲಿ; ನಾವು ಕೈಹಾಕಿದ ಕೈಲಸವನ್ನು ನಮಗೆ ಸ್ಥಿರಪಡಿಸು; ಹೌದು, ನಮ್ಮ ಕೆಲಸವನ್ನು ಸ್ಥಿರಪಡಿಸು;
ಓ ಕರ್ತನೇ, ರಕ್ಷಿಸಬೇಕು ಎಂದು ನಾನು ನಿನ್ನನ್ನು ಬೇಡುತ್ತೇನೆ. ಓ ಕರ್ತನೇ, ಅಭಿವೃದ್ಧಿಯನ್ನು ಕೊಡು ಎಂದು ನಿನ್ನನ್ನು ಬೇಡುತ್ತೇನೆ.
ಯೆರೂಸಲೇಮಿನ ಸಮಾಧಾನಕ್ಕಾಗಿ ಪ್ರಾರ್ಥಿಸಿರಿ. ಯೆರೂಸಲೇಮನ್ನು ಪ್ರೀತಿಮಾಡುವವರು ಅಭಿವೃದ್ಧಿ ಯಾಗುವರು.
ಕರ್ತನು ಮನೆಯನ್ನು ಕಟ್ಟದಿದ್ದರೆ, ಅದನ್ನು ಕಟ್ಟುವವರು ವ್ಯರ್ಥವಾಗಿ ಕಷ್ಟಪಡುತ್ತಾರೆ; ಕರ್ತನು ಪಟ್ಟಣವನ್ನು ಕಾಪಾಡದೆ ಇದ್ದರೆ ಅದನ್ನು ಕಾಪಾಡುವವನು ವ್ಯರ್ಥವಾಗಿ ಎಚ್ಚರ ವಾಗಿರುತ್ತಾನೆ.
ನಿನ್ನ ಎಲ್ಲಾ ಮಾರ್ಗಗಳಲ್ಲಿ ಆತನನ್ನು ಸನ್ಮಾನಿಸು. ಆಗ ಆತನು ನಿನ್ನ ಮಾರ್ಗಗಳನ್ನು ಸರಾಗಮಾಡುವನು.
ನಾನು ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು ಎಂದು ದೇವರು ನಿಮಗೆ ಹೇಳಿದ್ದನ್ನು ನೀವು ಓದಲಿಲ್ಲವೋ? ದೇವರು ಜೀವಿಸುವವರಿಗೇ ದೇವರಾಗಿದ್ದಾನೆ, ಸತ್ತವರಿಗಲ್ಲ ಎಂದು ಹೇಳಿದನು.
ಯಾವ ಸಂಬಂಧ ವಾಗಿಯೂ ಚಿಂತೆಮಾಡದೆ ಸರ್ವವಿಷಯದಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆ ಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ತಿಳಿಯ ಪಡಿಸಿರಿ.
ನಿಮ್ಮ ಮುಖವನ್ನು ನೋಡುವದಕ್ಕೂ ನಿಮ್ಮ ನಂಬಿಕೆಯಲ್ಲಿ ಕೊರತೆಯನ್ನು ಪೂರೈಸುವದಕ್ಕೂ ನಾವು ಹಗಲಿರುಳು ಅತ್ಯಧಿಕವಾಗಿ ಬೇಡುವವರಾಗಿದ್ದೇವೆ.