Home Bibles ಆದಿಕಾಂಡ 24:35 · ಕನ್ನಡ ಬೈಬಲ್
ಆದಿಕಾಂಡ 24:35 · ಕನ್ನಡ ಬೈಬಲ್

ಕರ್ತನು ನನ್ನ ಯಜಮಾನನನ್ನು ಬಹಳವಾಗಿ ಆಶೀರ್ವದಿಸಿದ್ದರಿಂದ ಅವನು ದೊಡ್ಡವನಾದನು. ಆತನು ಅವನಿಗೆ ಕುರಿದನಗಳನ್ನೂ ಬೆಳ್ಳಿಬಂಗಾರವನ್ನೂ ದಾಸದಾಸಿಯರನ್ನೂ ಒಂಟೆಗಳನ್ನೂ ಕತ್ತೆಗಳನ್ನೂ ಕೊಟ್ಟಿದ್ದಾನೆ.

Cross references

ಆದಿಕಾಂಡ 12:2

ನಾನು ನಿನ್ನನ್ನು ದೊಡ್ಡ ಜನಾಂಗವಾಗ ಮಾಡಿ ನಿನ್ನನ್ನು ಆಶೀರ್ವದಿಸಿ ನಿನ್ನ ಹೆಸರನ್ನು ದೊಡ್ಡ ದಾಗಿ ಮಾಡುವೆನು, ನೀನು ಆಶೀರ್ವಾದವಾಗಿರುವಿ.

ಆದಿಕಾಂಡ 12:16

ಅವನು ಆಕೆಗೋಸ್ಕರ ಅಬ್ರಾಮನಿಗೆ ಒಳ್ಳೇದನ್ನು ಮಾಡಿದನು. ಅವನಿಗೆ ಕುರಿಗಳೂ ಎತ್ತುಗಳೂ ಕತ್ತೆಗಳೂ ದಾಸರೂ ದಾಸಿ ಯರೂ ಹೆಣ್ಣುಕತ್ತೆಗಳೂ ಒಂಟೆಗಳೂ ದೊರೆತವು.

ಆದಿಕಾಂಡ 13:2

ಅಬ್ರಾಮನು ದನಗಳಲ್ಲಿಯೂ ಬೆಳ್ಳಿಯಲ್ಲಿಯೂ ಬಂಗಾರದಲ್ಲಿಯೂ ಬಹು ಧನವಂತನಾಗಿದ್ದನು.

ಆದಿಕಾಂಡ 24:1

ಅಬ್ರಹಾಮನು ಮುದುಕನೂ ದಿನಗತಿಸಿದವನೂ ಆಗಿದ್ದನು. ಕರ್ತನು ಅಬ್ರಹಾಮ ನನ್ನು ಎಲ್ಲಾದರಲ್ಲಿ ಆಶೀರ್ವದಿಸಿದನು.

ಆದಿಕಾಂಡ 25:11

ಅಬ್ರಹಾಮನು ಸತ್ತನಂತರ ದೇವರು ಅವನ ಮಗನಾದ ಇಸಾಕನನ್ನು ಆಶೀರ್ವದಿಸಿದನು. ಇಸಾ ಕನು ಲಹೈರೋಯಿ ಎಂಬ ಬಾವಿಯ ಬಳಿಯಲ್ಲಿ ವಾಸಿಸಿದನು.

ಆದಿಕಾಂಡ 26:12

ಇದಲ್ಲದೆ ಇಸಾಕನು ಆ ದೇಶದಲ್ಲಿ ಬಿತ್ತಿದ ವರುಷದಲ್ಲಿಯೇ ನೂರರಷ್ಟು ಫಲವನ್ನು ಹೊಂದಿ ದನು. ಕರ್ತನು ಅವನನ್ನು ಆಶೀರ್ವದಿಸಿದನು.

ಆದಿಕಾಂಡ 49:25

ಅಂದರೆ ನಿನಗೆ ಸಹಾಯಮಾಡುವ ನಿನ್ನ ತಂದೆಯ ದೇವರಿಂದ, ಮೇಲಿರುವ ಪರಲೋಕದ ಆಶೀರ್ವಾದಗಳೊಂದಿಗೂ ಕೆಳಗಿರುವ ಅಗಾಧದ ಆಶೀರ್ವಾದಗಳೊಂದಿಗೂ ಮೊಲೆಗಳ ಮತ್ತು ಗರ್ಭದ ಆಶೀರ್ವಾದಗಳೊಂದಿಗೂ ನಿನ್ನನ್ನು ಆಶೀರ್ವದಿಸುವ ಸರ್ವಶಕ್ತನಿಂದ ಬಲಿಷ್ಠನಾಗಿ ಮಾಡಲ್ಪಟ್ಟಿವೆ. (ಅಲ್ಲಿಂದ ಆತನು ಇಸ್ರಾಯೇಲನ ಕುರುಬನೂ ಬಂಡೆಯೂ ಆಗಿದ್ದಾನೆ.)

ಯೋಬ 1:3

ಅವನ ಸಂಪತ್ತು--ಏಳು ಸಾವಿರ ಕುರಿಗಳು, ಮೂರು ಸಾವಿರ ಒಂಟೆಗಳು, ಐನೂರು ಜೋಡು ಎತ್ತುಗಳು, ಐನೂರು ಹೆಣ್ಣು ಕತ್ತೆಗಳೂ ಮತ್ತು ಬಹು ಸೇವಕರ ಸಮೂಹವಿತ್ತು. ಹೀಗೆ ಆ ಮನುಷ್ಯನು ಎಲ್ಲಾ ಮೂಡಣದವರಿಗಿಂತಲೂ ಬಹು ಸ್ವಾಸ್ತ್ಯವುಳ್ಳವ ನಾಗಿದ್ದನು.

ಯೋಬ 42:10

ಯೋಬನು ತನ್ನ ಸ್ನೇಹಿತರಿಗೋಸ್ಕರ ಪ್ರಾರ್ಥನೆ ಮಾಡಿದಾಗ ಕರ್ತನು ಅವನ ಸೆರೆಯನ್ನು ತಿರುಗಿ ಸಿದನು. ಕರ್ತನು ಯೋಬನಿಗೆ ಮೊದಲು ಇದ್ದವು ಗಳಿಗಿಂತ ಎರಡರಷ್ಟು ಕೊಟ್ಟನು.

ಕೀರ್ತನೆಗಳು 18:35

ನಿನ್ನ ರಕ್ಷಣೆಯ ಗುರಾಣಿಯನ್ನು ಸಹ ನನಗೆ ನೀನು ಕೊಟ್ಟಿದ್ದೀ; ನಿನ್ನ ಬಲಗೈ ನನ್ನನ್ನು ಹಿಡಿದಿದೆ. ನಿನ್ನ ಸಾತ್ವಿಕತ್ವವು ನನ್ನನ್ನು ಹೆಚ್ಚಿಸಿಯದೆ.

ಕೀರ್ತನೆಗಳು 107:38

ಆತನು ಅವರನ್ನು ಆಶೀರ್ವದಿಸಿದ್ದರಿಂದ ಅವರು ಬಹಳವಾಗಿ ಹೆಚ್ಚುತ್ತಾರೆ; ಅವರ ದನಗಳನ್ನು ಸಹ ಆತನು ಕಡಿಮೆ ಮಾಡುವದಿಲ್ಲ.

ಕೀರ್ತನೆಗಳು 112:3

ದ್ರವ್ಯವೂ ಐಶ್ವರ್ಯವೂ ಅವನ ಮನೆಯಲ್ಲಿ ಅವೆ; ಆತನ ನೀತಿಯು ಎಂದೆಂ ದಿಗೂ ನಿಲ್ಲುತ್ತದೆ.

ಸಾಮೇತಿಗಳು 10:22

ಕರ್ತನ ಆರ್ಶೀ ವಾದವು ಐಶ್ವರ್ಯವನ್ನುಂಟು ಮಾಡುವದು. ಅದ ರೊಂದಿಗೆ ಆತನು ಯಾವ ದುಃಖವನ್ನೂ ಸೇರಿಸುವ ದಿಲ್ಲ.

ಸಾಮೇತಿಗಳು 22:4

ಐಶ್ವ ರ್ಯವೂ ಮಾನವೂ ಜೀವವೂ ವಿನಯ ಕರ್ತನ ಭಯದಿಂದಲೇ.

ಮತ್ತಾಯ 6:33

ಆದರೆ ಮೊದಲು ನೀವು ದೇವರ ರಾಜ್ಯವನ್ನೂ ಆತನ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವುಗಳು ಕೂಡಿಸಲ್ಪಡುವವು.ಆದಕಾರಣ ನಾಳೆಗೋಸ್ಕರ ಚಿಂತೆ ಮಾಡಬೇಡಿರಿ; ಯಾಕಂದರೆ ನಾಳಿನ ದಿನವು ತನಗೆ ಸಂಬಂಧ ಪಟ್ಟವುಗಳಿಗಾಗಿ ತಾನೇ ಚಿಂತಿಸುವದು. ಆ ದಿನಕ್ಕೆ ಅದರ ಕಾಟ ಸಾಕು.

1 ತಿಮೋಥೆಯ 4:8

ದೇಹಸಾಧನೆಯು ಸ್ವಲ್ಪ ಮಟ್ಟಿಗೆ ಲಾಭಕರವಾಗಿದೆ, ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಲಾಭಕರವಾದದ್ದು; ಆದಕ್ಕೆ ಈಗಲೂ ಮುಂದೆ ಬರುವದಕ್ಕೂ ಜೀವಾಗ್ದಾನ ಉಂಟು.

Interlinear

Choose Theme