ಇಸಾಕನು ಆಕೆಯನ್ನು ತನ್ನ ತಾಯಿ ಯಾದ ಸಾರಳ ಗುಡಾರಕ್ಕೆ ಕರೆದುಕೊಂಡು ಹೋದನು. ಅವನು ರೆಬೆಕ್ಕಳನ್ನು ಅಂಗೀಕರಿಸಿದನು. ಆಕೆಯು ಅವನ ಹೆಂಡತಿಯಾದಳು; ಅವನು ಆಕೆಯನ್ನು ಪ್ರೀತಿಮಾಡಿದನು. ಹೀಗೆ ಇಸಾಕನು ತನ್ನ ತಾಯಿಯ ಮರಣದ ವಿಷಯದಲ್ಲಿ ಆದರಣೆ ಹೊಂದಿದನು.
Cross references
ಕರ್ತನಾದ ದೇವರು ಮನುಷ್ಯನಿಂದ ತಕ್ಕೊಂಡ ಪಕ್ಕೆಯ ಎಲು ಬನ್ನು ಸ್ತ್ರೀಯಾಗಮಾಡಿ ಅವಳನ್ನು ಅವನ ಬಳಿಗೆ ತಂದನು.
ಆಗ ಅಬ್ರಹಾಮನು ತ್ವರೆಯಾಗಿ ಗುಡಾರದಲ್ಲಿದ್ದ ಸಾರಳ ಬಳಿಗೆ ಹೋಗಿ--ತ್ವರೆಪಟ್ಟು ಮೂರು ಸೇರು ನಯವಾದ ಹಿಟ್ಟು ನಾದಿ ಒಲೆಯ ಮೇಲೆ ರೊಟ್ಟಿಗಳನ್ನು ಮಾಡು ಅಂದನು.
ಆಗ ಅವರು ಅವನಿಗೆ--ನಿನ್ನ ಹೆಂಡತಿಯಾದ ಸಾರಳು ಎಲ್ಲಿ ಎಂದು ಅವನನ್ನು ಕೇಳಲು ಅವನು-- ಇಗೋ, ಗುಡಾರದಲ್ಲಿದ್ದಾಳೆ ಅಂದನು.
ಸಾರಳು ನೂರಿಪ್ಪತ್ತೇಳು ವರುಷದವಳಾ ಗಿದ್ದಳು; ಸಾರಳ ಜೀವನದ ವರುಷ ಗಳು ಇವೇ.
ಸಾರಳು ಕಾನಾನ್ ದೇಶದಲ್ಲಿರುವ ಹೆಬ್ರೋನ್ ಎಂಬ ಕಿರ್ಯತರ್ಬದಲ್ಲಿ ಸತ್ತಳು. ಅಬ್ರಹಾಮನು ಸಾರಳಿಗೋಸ್ಕರ ಗೋಳಾಡುವದಕ್ಕೂ ಅಳುವದಕ್ಕೂ ಬಂದನು.
ಇಸಾಕನು ನಾಲ್ವತ್ತು ವರುಷದವನಾಗಿದ್ದಾಗ ಪದ್ದನ್ ಅರಾಮಿನಿಂದ ಅರಾಮ್ಯನಾದ ಬೆತೂವೇಲನ ಮಗಳೂ ಲಾಬಾನನ ಸಹೋದರಿಯೂ ಆದ ರೆಬೆಕ್ಕಳನ್ನು ಹೆಂಡತಿಯಾಗಿ ತಕ್ಕೊಂಡನು.
ಹೀಗಿರುವದರಿಂದ ಯಾಕೋಬನು ರಾಹೇಲಳನ್ನು ಪ್ರೀತಿಮಾಡಿ--ನಾನು ನಿನ್ನ ಕಿರಿಮಗಳಾಗಿರುವ ರಾಹೇಲಳಿಗೋಸ್ಕರ ನಿನ್ನಲ್ಲಿ ಏಳು ವರುಷ ಸೇವೆ ಮಾಡುತ್ತೇನೆ ಅಂದನು.
ಅವನ ಕುಮಾರ ಕುಮಾರ್ತೆಯರೆಲ್ಲಾ ಅವನನ್ನು ಆದರಿಸಿದಾಗ್ಯೂ ಅವನು ಆದರಣೆ ಹೊಂದಲೊಲ್ಲದೆ--ನನ್ನ ಮಗನ ಬಳಿಗೆ ಸಮಾಧಿಗೆ ದುಃಖದಿಂದಲೇ ಇಳಿದು ಹೋಗು ವೆನು ಅಂದನು. ಹೀಗೆ ಅವನ ತಂದೆ ಅವನಿಗೋಸ್ಕರ ಅತ್ತನು.ಇದಲ್ಲದೆ ಆ ಮಿದ್ಯಾನ್ಯರು ಯೋಸೇಫನನ್ನು ಐಗುಪ್ತದಲ್ಲಿ ಫರೋಹನ ಉದ್ಯೋಗಸ್ಥನಾದ ಪೋಟೀಫರನಿಗೆ ಮಾರಿದನು. ಅವನು ಮೈಗಾವಲಿನ ದಳವಾಯಿಯಾಗಿದ್ದನು.
ಬಹಳ ದಿನಗಳಾದ ಮೇಲೆ ಯೆಹೂದನ ಹೆಂಡತಿಯಾಗಿದ್ದ ಶೂಗನ ಮಗಳು ಸತ್ತಳು. ಯೆಹೂ ದನು ಆದರಣೆ ಹೊಂದಿದ ಮೇಲೆ ತಾನೂ ತನ್ನ ಸ್ನೇಹಿತನಾಗಿರುವ ಅದುಲ್ಲಾಮ್ಯನಾದ ಹೀರನೂ ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವವರ ಬಳಿಗೆ ತಿಮ್ನಾತಿಗೆ ಹೋದನು.
ನೀನು ನನ್ನನ್ನು ಉಪದೇಶಿಸುವ ಹಾಗೆ ನಾನು ನಿನ್ನನ್ನು ನಡಿಸಿ ನನ್ನ ತಾಯಿಯ ಮನೆಯೊಳಗೆ ನಿನ್ನನ್ನು ಬರಮಾಡಿ, ದಾಳಿಂಬರ ಹಣ್ಣಿನ ರಸವಾದ ಊರಿಟ್ಟ ಪಾನವನ್ನು ನಿನಗೆ ಕುಡಿಸುತ್ತಿದ್ದೆನು.
ಓ ಹೆರದವಳೇ, ನೀನು ಹರ್ಷಧ್ವನಿಗೈ! ಪ್ರಸವವೇದನೆಯನ್ನನುಭವಿಸದವಳೇ, ಆನಂದ ಸ್ವರವನ್ನೆತ್ತಿ ಗಟ್ಟಿಯಾಗಿ ಕೂಗು! ಮದುವೆ ಯಾದವಳಿಗಿಂತ ಆಗದವಳಿಗೆ ಮಕ್ಕಳು ಹೆಚ್ಚು ಎಂದು ಕರ್ತನು ಹೇಳುತ್ತಾನೆ.
ನನ್ನ ಬುದ್ಧಿಹೀನತೆಯನ್ನು ನೀವು ಸ್ವಲ್ಪ ಮಟ್ಟಿಗೆ ಸಹಿಸಿಕೊಳ್ಳಬೇಕೆಂದು ನಾನು ಅಪೇಕ್ಷಿಸುತ್ತೇನೆ; ನಿಜವಾಗಿಯೂ ನನ್ನನ್ನು ಸಹಿಸಿ ಕೊಳ್ಳಿರಿ;
ಸ್ತ್ರೀಯರೇ, ನೀವು ಕರ್ತನಿಗೆ ಹೇಗೋ ಹಾಗೆಯೇ ನಿಮ್ಮನಿಮ್ಮ ಗಂಡಂದಿರಿಗೆ ಅಧೀನರಾಗಿರ್ರಿ.
ಇದಲ್ಲದೆ ಸಹೋದರರೇ, ನಿರೀಕ್ಷೆಯಿಲ್ಲದ ಬೇರೆಯವರ ಹಾಗೆ ದುಃಖಿಸಿದಂತೆ ನಿದ್ರೆಹೋದವರ ವಿಷಯದಲ್ಲಿ ನೀವು ತಿಳಿದಿರಬೇಕೆಂದು ನಾನು ಇಚ್ಚಿಸುತ್ತೇನೆ.
ನಾವು ಕರ್ತನ ಮಾತಿನ ಆಧಾರದಿಂದ ನಿಮಗೆ ಹೇಳುವದೇನಂದರೆ, ಕರ್ತನು ಪ್ರತ್ಯಕ್ಷನಾಗು ವವರೆಗೂ ಜೀವದಿಂದುಳಿದಿರುವ ನಾವು ನಿದ್ರೆಹೋದ ವರಿಗಿಂತ ಮುಂದಾಗುವದೇ ಇಲ್ಲ.