ಆಗ ಯಾಕೋಬನು ಏಸಾವನಿಗೆ ರೊಟ್ಟಿಯನ್ನೂ ಅಲಸಂದಿಯ ತೋವೆಯನ್ನೂ ಕೊಟ್ಟನು. ಅವನು ತಿಂದು ಕುಡಿದು ಎದ್ದುಹೋದನು. ಹೀಗೆ ಏಸಾವನು ತನ್ನ ಚೊಚ್ಚಲತನದ ಹಕ್ಕನ್ನು ಉದಾಸೀನಮಾಡಿದನು.
Cross references
ಹೌದು, ಅವರು, ಮನೋಹರವಾದ ದೇಶ ವನ್ನು ಅಸಹ್ಯಿಸಿಬಿಟ್ಟು ಆತನ ಮಾತನ್ನು ನಂಬದೆ ಹೋದರು.
ಆಗ ನಾನು ಸಂತೋಷವನ್ನು ಹೊಗಳಿದೆನು. ಮನು ಷ್ಯನಿಗೆ ಸೂರ್ಯನ ಕೆಳಗೆ ಕುಡಿಯುವದೂ ತಿನ್ನುವದೂ ಸಂತೋಷಪಡುವದೇ ಹೊರತು ಬೇರೇನೂ ಒಳ್ಳೆ ಯದು ಇಲ್ಲ; ಸೂರ್ಯನ ಕೆಳಗೆ ದೇವರು ಅವನಿಗೆ ಕೊಡುವ ಜೀವನದ ದಿವಸಗಳಲ್ಲಿ ಅವನು ಪಡುವ ಕಷ್ಟದಿಂದ ಅದು ಅವನಿಗೆ ಸೇರುತ್ತದೆ.
ಆದರೆ ಇಗೋ, ಉತ್ಸಾ ಹವು ಸಂತೋಷವು, ದನಕೊಯ್ಯುವದು ಕುರಿಕಡಿಯು ವದು ಮಾಂಸವನ್ನು ತಿನ್ನುವದು, ದ್ರಾಕ್ಷಾರಸ ಕುಡಿ ಯುವದು, ನಾಳೆ ಸಾಯುತ್ತೇವೆಂದು ತಿಂದು ಕುಡಿಯು ವದೇ (ಇವೆ, ನಿಮ್ಮ ಕಾರ್ಯ).
ಆಗ ಕರ್ತನು ನನಗೆ--ಅದನ್ನು ಕುಂಬಾರನಿಗೆ ಹಾಕು; ನಾನು ಅವರಿಂದ ಬೆಲೆ ಮಾಡಲ್ಪಟ್ಟದ್ದು ಸರಿಯಾದ ಬೆಲೆ ಅಲ್ಲವೋ ಅಂದನು; ಆಗ ನಾನು ಆ ಮೂವತ್ತು ರೂಪಾಯಿಗಳನ್ನು ತಕ್ಕೊಂಡು ಕರ್ತನ ಆಲಯದಲ್ಲಿ ಅವುಗಳನ್ನು ಕುಂಬಾರನಿಗೆ ಹಾಕಿದೆನು.
ಕರೆಯಲ್ಪಟ್ಟವರು ಅದನ್ನು ಅಲಕ್ಷ್ಯಮಾಡಿ ಒಬ್ಬನು ತನ್ನ ಹೊಲಕ್ಕೂ ಇನ್ನೊಬ್ಬನು ತನ್ನ ವ್ಯಾಪಾರಕ್ಕೂ ಹೊರಟುಹೋದರು.
ನಾನು ಆತನನ್ನು ನಿಮಗೆ ಒಪ್ಪಿಸಿಕೊಟ್ಟರೆ ನೀವು ನನಗೆ ಏನು ಕೊಡುತ್ತೀರಿ ಅಂದನು. ಆಗ ಅವರು ಅವನೊಂದಿಗೆ ಮೂವತ್ತು ಬೆಳ್ಳಿಯ ನಾಣ್ಯಗಳಿಗೆ ಒಪ್ಪಂದ ಮಾಡಿಕೊಂಡರು.
ಆದರೆ ಅವರೆಲ್ಲರೂ ಒಂದೇ ಮನ ಸ್ಸಿನಿಂದ ನೆವ ಹೇಳಲಾರಂಭಿಸಿ ಮೊದಲನೆಯವನು ಅವನಿಗೆ--ನಾನು ಒಂದು ತುಂಡು ಭೂಮಿಯನ್ನು ಕೊಂಡುಕೊಂಡಿದ್ದೇನೆ, ಹೋಗಿ ಅದನ್ನು ನೋಡುವದು ಅವಶ್ಯವಾಗಿದೆ; ನನ್ನನ್ನು ಕ್ಷಮಿಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.
ಅದೇನಂದರೆ--ಇಗೋ, ತಿರ ಸ್ಕಾರ ಮಾಡುವವರೇ, ಆಶ್ಚರ್ಯಪಡಿರಿ, ನಾಶವಾಗಿ ಹೋಗಿರಿ, ನಿಮ್ಮ ದಿನಗಳಲ್ಲಿ ನಾನು ಒಂದು ಕಾರ್ಯ ವನ್ನು ಮಾಡುವೆನು; ಆ ಕಾರ್ಯವನ್ನು ಒಬ್ಬನು ನಿಮಗೆ ವಿವರಿಸಿದರೂ ನೀವು ಅದನ್ನು ಎಷ್ಟು ಮಾತ್ರಕ್ಕೂ ನಂಬುವದಿಲ್ಲ ಎಂಬದೇ.
ನಾನು ಎಫೆಸದಲ್ಲಿ ಮೃಗಗಳೊಂದಿಗೆ ಯುದ್ಧ ಮಾಡಿದ್ದು ಕೇವಲ ಮನುಷ್ಯರೀತಿಯಾಗಿದ್ದು ಸತ್ತವರು ಎದ್ದು ಬರುವದಿಲ್ಲವಾದರೆ ಅದರಿಂದ ನನಗೇನು ಪ್ರಯೋಜನ? ಹಾಗಾದರೆ ನಾವು ತಿನ್ನೋಣ, ಕುಡಿಯೋಣ, ನಾಳೆ ಸಾಯುತ್ತೇವಲ್ಲಾ.
(ಅನೇಕರು ಕ್ರಿಸ್ತನ ಶಿಲುಬೆಗೆ ವಿರೋಧಿಗಳಾಗಿ ನಡೆಯುತ್ತಾರೆ; ಅವರ ವಿಷಯದಲ್ಲಿ ನಾನು ನಿಮಗೆ ಎಷ್ಟೋ ಸಾರಿ ಹೇಳಿದೆನು, ಈಗಲೂ ಅಳುತ್ತಾ ಹೇಳುತ್ತೇನೆ.
ಯಾವ ಜಾರನಾಗಲಿ--ಏಸಾವನಂಥ ಪ್ರಾಪಂಚಿಕನಾಗಲಿ ನಿಮ್ಮಲ್ಲಿ ಇರದಂತೆಯೂ ಜಾಗ್ರತೆ ಯಿಂದ ನೋಡಿಕೊಳ್ಳಿರಿ. ಆ ಏಸಾವನು ಒಂದು ತುತ್ತನ್ನಕ್ಕಾಗಿ ತನ್ನ ಚೊಚ್ಚಲತನದ ಹಕ್ಕನ್ನು ಮಾರಿ ಬಿಟ್ಟನು;