ಅದೇ ರಾತ್ರಿಯಲ್ಲಿ ಕರ್ತನು ಅವನಿಗೆ ಕಾಣಿಸಿ ಕೊಂಡು--ನಿನ್ನ ತಂದೆಯಾದ ಅಬ್ರಹಾಮನ ದೇವರು ನಾನೇ; ಭಯಪಡಬೇಡ; ನಾನು ನಿನ್ನ ಸಂಗಡ ಇದ್ದೇನೆ; ನನ್ನ ದಾಸನಾದ ಅಬ್ರಹಾಮನಿಗೋಸ್ಕರ ನಿನ್ನನ್ನು ಆಶೀರ್ವದಿಸಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು ಅಂದನು.
Cross references
ನಿನ್ನ ಸಂತತಿಯನ್ನು ಭೂಮಿಯ ಧೂಳಿನಷ್ಟು ಮಾಡುವೆನು. ಭೂಮಿಯ ಧೂಳನ್ನು ಒಬ್ಬನು ಲೆಕ್ಕಿಸಬಹುದಾದರೆ ನಿನ್ನ ಸಂತಾನವು ಸಹ ಲೆಕ್ಕಿಸಲ್ಪಡುವದು.
ಇವುಗಳಾದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಕರ್ತನ ವಾಕ್ಯವು ಬಂದು--ಅಬ್ರಾಮನೇ, ಭಯಪಡಬೇಡ; ನಾನೇ ನಿನ್ನ ಗುರಾಣಿಯೂ ನಿನ್ನ ಅತ್ಯಧಿಕವಾದ ಬಹುಮಾನವೂ ಆಗಿದ್ದೇನೆ.
ಇದಲ್ಲದೆ ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ದೇವರಾಗಿರುವದಕ್ಕೆ ನನಗೂ ನಿನಗೂ ನಿನ್ನ ತರುವಾಯ ಬರುವ ತಲ ತಲಾಂತರಗಳಲ್ಲಿ ನಿನ್ನ ಸಂತಾನಕ್ಕೂ ಮಧ್ಯದಲ್ಲಿ ನನ್ನ ಒಡಂಬಡಿಕೆಯನ್ನು ನಿತ್ಯವಾದ ಒಡಂಬಡಿಕೆಯಾಗಿ ಸ್ಥಾಪಿಸುತ್ತೇನೆ.
ತರುವಾಯ ಅಬ್ರಹಾಮನು ತನ್ನ ಯುವಕರ ಬಳಿಗೆ ಹಿಂತಿರುಗಿ ಬಂದನು. ಅವರು ಎದ್ದು ಅವ ರೊಂದಿಗೆ ಬೇರ್ಷೆಬಕ್ಕೆ ಹೋದರು. ಅಬ್ರಹಾಮನು ಬೇರ್ಷೆಬದಲ್ಲಿ ವಾಸಿಸಿದನು.
ಆಗ ಅವನು--ನನ್ನ ಯಜಮಾನನಾದ ಅಬ್ರಹಾ ಮನ ದೇವರಾಗಿರುವ ಕರ್ತನೇ, ಈಹೊತ್ತು ನನಗೆ ತ್ವರೆಯಾಗಿ ಕಾರ್ಯಕೈಗೂಡುವಂತೆ ಮಾಡಿ ನನ್ನ ಯಜಮಾನನಾದ ಅಬ್ರಹಾಮನಿಗೆ ದಯೆ ತೋರಿಸು.
ಆಗ ಕರ್ತನು ಅವನಿಗೆ ಕಾಣಿಸಿಕೊಂಡು--ಐಗುಪ್ತಕ್ಕೆ ಇಳಿದು ಹೋಗಬೇಡ. ನಾನು ನಿನಗೆ ಹೇಳುವ ದೇಶದಲ್ಲಿ ವಾಸವಾಗಿರು.
ನೀನು ಈ ದೇಶದಲ್ಲಿ ಪ್ರವಾಸಿಯಾಗಿರು; ನಾನು ನಿನ್ನ ಸಂಗಡ ಇದ್ದು ನಿನ್ನನ್ನು ಆಶೀರ್ವದಿಸುವೆನು. ನಿನಗೂ ನಿನ್ನ ಸಂತಾನಕ್ಕೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ತಂದೆಯಾದ ಅಬ್ರಹಾಮನಿಗೆ ನಾನು ಮಾಡಿದ ಪ್ರಮಾಣವನ್ನು ಈಡೇರಿಸುವೆನು.
ಇಗೋ, ಕರ್ತನು ಅದರ ಮೇಲೆ ನಿಂತುಕೊಂಡು ಹೇಳಿದ್ದೇನಂದರೆ--ನಿನ್ನ ತಂದೆ ಯಾದ ಅಬ್ರಹಾಮನ ಕರ್ತನಾದ ದೇವರೂ ಇಸಾಕನ ದೇವರೂ ನಾನೇ, ನೀನು ಮಲಗಿರುವ ಭೂಮಿಯನ್ನು ನಿನಗೂ ನಿನ್ನ ಸಂತತಿಗೂ ಕೊಡುವೆನು.
ಅವರಿಗೆ--ನಿಮ್ಮ ತಂದೆಯ ಮುಖವು ಮೊದಲು ನನ್ನ ಕಡೆಗೆ ಇದ್ದಹಾಗೆ ಈಗ ಇಲ್ಲದಿರುವದನ್ನು ನಾನು ನೋಡುತ್ತಿದ್ದೇನೆ. ಆದರೆ ನನ್ನ ತಂದೆಯ ದೇವರು ನನ್ನ ಸಂಗಡ ಇದ್ದನು.
ಕರ್ತನು ಯೋಸೇಫನ ಸಂಗಡ ಇದದ್ದರಿಂದ ಅವನು ಏಳಿಗೆಯಾಗಿ ಐಗುಪ್ತದವನಾದ ತನ್ನ ಯಜಮಾನನ ಮನೆಯಲ್ಲಿ ಇದ್ದನು.
ಕರ್ತನು ಅವನ ಸಂಗಡ ಇದ್ದಾನೆಂದೂ ಅವನು ಮಾಡಿದ್ದನ್ನೆಲ್ಲಾ ಕರ್ತನು ಅವನ ಕೈಯಿಂದ ಅಭಿವೃದ್ಧಿಮಾಡಿದನೆಂದೂ ಅವನ ಯಜಮಾನನು ನೋಡಿದನು.
ಇದಲ್ಲದೆ ಆತನು ಅವನಿಗೆ--ನಾನು ನಿನ್ನ ತಂದೆಯ ದೇವರು ಅಬ್ರಹಾಮನ ದೇವರು ಇಸಾಕನ ದೇವರು ಯಾಕೋಬನ ದೇವರು ಆಗಿದ್ದೇನೆ ಎಂದು ಹೇಳಿದನು. ಆಗ ಮೋಶೆಯು ದೇವರನ್ನು ನೋಡುವದಕ್ಕೆ ಭಯ ಪಟ್ಟು ತನ್ನ ಮುಖವನ್ನು ಮುಚ್ಚಿಕೊಂಡನು.
ಅದಕ್ಕೆ ಮೋಶೆಯು ಜನರಿಗೆ--ನೀವು ಭಯಪಡ ಬೇಡಿರಿ; ಕದಲದೆ ನಿಲ್ಲಿರಿ; ಕರ್ತನು ನಿಮಗೆ ಈ ಹೊತ್ತು ತೋರಿಸುವ ರಕ್ಷಣೆಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಐಗುಪ್ತ್ಯರನ್ನು ಇನ್ನು ಮುಂದೆ ಎಂದೆಂದಿಗೂ ನೋಡುವದಿಲ್ಲ.
ನಾನು ಯಾಕೋಬ್ ಇಸಾಕ್ ಅಬ್ರಹಾಮ್ ಇವ ರಿಗೆ ಮಾಡಿದ ನನ್ನ ಒಡಂಬಡಿಕೆಯನ್ನೂ ಅವರ ದೇಶವನ್ನೂ ಜ್ಞಾಪಕಮಾಡಿಕೊಳ್ಳುವೆನು.
ನಾನು ಅವರಿಗೆ ದೇವರಾಗಿರುವದರಿಂದ ಜನಾಂಗಗಳ ಮುಂದೆ ಐಗುಪ್ತದೇಶದಿಂದ ಹೊರಗೆ ಬರಮಾಡಿದ ಅವರ ಪಿತೃಗಳ ಒಡಂಬಡಿಕೆಯನ್ನು ಅವರಿಗೊಸ್ಕರ ಜ್ಞಾಪಕ ಮಾಡಿಕೊಳ್ಳುವೆನು; ನಾನೇ ಕರ್ತನು.ಕರ್ತನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಮೂಲಕ ತನಗೂ ಇಸ್ರಾಯೇಲ್ ಮಕ್ಕಳಿಗೂ ಮಧ್ಯದಲ್ಲಿ ಕೊಟ್ಟ ನಿಯಮ ಗಳೂ ನ್ಯಾಯಗಳೂ ನ್ಯಾಯಪ್ರಮಾಣಗಳೂ ಇವೇ.
ಬಲವಾಗಿರ್ರಿ; ಧೈರ್ಯವಾಗಿರ್ರಿ; ಭಯಪಡಬೇಡಿರಿ; ಅವರಿಗೆ ಹೆದರಬೇಡಿರಿ; ನಿನ್ನ ದೇವರಾದ ಕರ್ತನು ತಾನೇ ನಿನ್ನ ಸಂಗಡ ಹೋಗುತ್ತಾನೆ; ಆತನು ನಿನ್ನನ್ನು ಬಿಡುವದಿಲ್ಲ, ವಿಸರ್ಜಿಸುವದೂ ಇಲ್ಲ ಎಂದು ಹೇಳಿದನು.
ಈಗ ನನ್ನ ಮಗಳೇ, ನೀನು ಭಯಪಡಬೇಡ; ನಿನಗೆ ಬೇಕಾಗಿರುವದನ್ನು ನಿನಗೆ ಮಾಡುವೆನು; ಯಾಕಂದರೆ ನೀನು ಗುಣವತಿ ಯಾದ ಸ್ತ್ರೀ ಎಂದು ಪಟ್ಟಣದಲ್ಲಿರುವ ನನ್ನ ಜನರೆಲ್ಲರು ಬಲ್ಲರು.
ಆಗ ಎಲೀಯನು ಅವಳಿಗೆ--ಭಯಪಡಬೇಡ; ನೀನು ಹೋಗಿ ನಿನ್ನ ಮಾತಿನ ಪ್ರಕಾರವೇ ಮಾಡು. ಆದರೆ ಮೊದಲು ಅದರಲ್ಲಿ ನನಗೆ ಒಂದು ಚಿಕ್ಕ ರೊಟ್ಟಿ ಮಾಡಿ, ನನ್ನ ಬಳಿಗೆ ತಕ್ಕೊಂಡು ಬಾ; ತರು ವಾಯ ನಿನಗೂ ನಿನ್ನ ಮಗನಿಗೂ ಸಿದ್ದಮಾಡಿಕೋ.
ಕರ್ತನು ನನ್ನ ಬೆಳಕೂ ರಕ್ಷಣೆಯೂ ಆಗಿದ್ದಾನೆ; ನಾನು ಯಾರಿಗೆ ಭಯಪಡು ವೆನು? ಕರ್ತನು ನನ್ನ ಜೀವದ ಬಲವಾಗಿದ್ದಾನೆ; ನಾನು ಯಾರಿಗೆ ಹೆದರುವೆನು?
ನಮ್ಮ ಆಶ್ರಯವೂ ಬಲವೂ ಆಗಿರುವ ದೇವರು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.
ಇಗೋ, ದೇವರೇ ನನ್ನ ರಕ್ಷಣೆಯು; ನಾನು ಭರ ವಸವಿಡುವೆನು ಮತ್ತು ಭಯಪಡೆನು; ಕರ್ತನಾದ ಯೆಹೋವನೇ ನನ್ನ ಬಲವೂ ಕೀರ್ತನೆಯೂ ಆತನೇ ನನಗೆ ರಕ್ಷಣೆಯೂ ಆಗಿದ್ದಾನೆ.
ನೀನಂತೂ ಹೆದರಬೇಡ; ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು. ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿ ಸುತ್ತೇನೆ; ಹೌದು, ನಾನು ನಿನಗೆ ಸಹಾಯ ಮಾಡು ತ್ತೇನೆ. ಹೌದು, ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿ ಹಿಡಿಯುತ್ತೇನೆ.
ನಿನಗೆ ಸಹಾಯ ಮಾಡುತ್ತೇನೆಂದು ನಿನಗೆ ಹೇಳುವ ಕರ್ತನೂ ನಿನ್ನ ದೇವರೂ ಆಗಿರುವ ನಾನೇ ನಿನ್ನ ಕೈಹಿಡಿಯುತ್ತೇನಲ್ಲಾ.
ಈಗಲಾದರೋ ಓ ಯಾಕೋಬೇ, ಇಸ್ರಾಯೇಲೇ ನಿನ್ನನ್ನು ಸೃಷ್ಟಿಸಿದಾತನೂ ರೂಪಿಸಿದಾತನೂ ಆದ ಕರ್ತನು ಇಂತೆನ್ನುತ್ತಾನೆ--ಹೆದರಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ ನಿನ್ನ ಹೆಸರು ಹಿಡಿದು ಕರೆದೆನಲ್ಲಾ; ನೀನು ನನ್ನವನೇ.
ನಿನ್ನನ್ನು ನಿರ್ಮಾಣ ಮಾಡಿ ಗರ್ಭದಿಂದಲೂ ರೂಪಿಸುತ್ತಾ ಬಂದು ನಿನಗೆ ಸಹಾಯ ಮಾಡುವವನಾದ ಕರ್ತನು ಹೀಗೆನ್ನುತ್ತಾನೆ--ನನ್ನ ಸೇವಕನಾದ ಯಾಕೋಬೇ, ನಾನು ಆದುಕೊಂಡ ಯೆಶುರೂನೇ, ಭಯಪಡಬೇಡ.
ನೀತಿಯನ್ನು ಅರಿತು ನನ್ನ ನ್ಯಾಯಪ್ರಮಾಣವನ್ನು ಹೃದಯದಲ್ಲಿಟ್ಟು ಕೊಂಡಿರುವ ಜನರೇ, ನನಗೆ ಕಿವಿಗೊಡಿರಿ, ಮನುಷ್ಯರ ನಿಂದೆಗೆ ಭಯಪಡಬೇಡಿರಿ; ಇಲ್ಲವೆ ಅವರ ದೂಷಣೆಗೆ ಹೆದರ ಬೇಡಿರಿ.
ನಾನೇ, ನಾನೇ ನಿನ್ನನ್ನು ಆದರಿಸುವವನಾಗಿ ದ್ದೇನೆ; ಹಾಗಾದರೆ ಸಾಯುವ ಮನುಷ್ಯನಿಗೂ ಹುಲ್ಲಿನಂತೆ ಮಾಡಲ್ಪಟ್ಟಿರುವ ನರಪುತ್ರನಿಗೂ ಭಯ ಪಡುವ ನೀನು ಯಾರು?
ನಾನು ನಿನ್ನನ್ನು ಕರೆದ ದಿನದಲ್ಲಿ ನೀನು ಸವಿಾಪಕ್ಕೆ ಬಂದು--ಭಯಪಡ ಬೇಡ ಎಂದು ಹೇಳಿದಿ.
ನಾನು ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು ಎಂದು ದೇವರು ನಿಮಗೆ ಹೇಳಿದ್ದನ್ನು ನೀವು ಓದಲಿಲ್ಲವೋ? ದೇವರು ಜೀವಿಸುವವರಿಗೇ ದೇವರಾಗಿದ್ದಾನೆ, ಸತ್ತವರಿಗಲ್ಲ ಎಂದು ಹೇಳಿದನು.
ಚಿಕ್ಕ ಹಿಂಡೇ, ಭಯಪಡಬೇಡ; ಯಾಕಂದರೆ ನಿಮಗೆ ರಾಜ್ಯವನ್ನು ಕೊಡುವದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ.
ಆಗ--ನಾನು ನಿನ್ನ ಪಿತೃಗಳ ದೇವರು, ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಎಂದು ಹೇಳುವ ಕರ್ತನ ಧ್ವನಿಯು ಅವನಿಗಾಯಿತು. ಆಗ ಮೋಶೆಯು ನಡುಗುತ್ತಾ ಅದನ್ನು ನೋಡುವದಕ್ಕೆ ಧೈರ್ಯವಿಲ್ಲ ದವನಾದನು.
ಆದದರಿಂದ--ಕರ್ತನು ನನ್ನ ಸಹಾಯಕನು, ಭಯಪಡೆನು, ಮನುಷ್ಯನು ನನಗೆ ಏನು ಮಾಡಾನು ಎಂದು ನಾವು ಧೈರ್ಯವಾಗಿ ಹೇಳಬಲ್ಲೆವು.
ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು--ಹೆದರಬೇಡ, ನಾನು ಮೊದಲನೆಯ ವನೂ ಕಡೆಯವನೂ ಆಗಿದ್ದೇನೆ.