ಆದದರಿಂದ ದೇವರು ನಿನಗೆ ಆಕಾಶದ ಮಂಜನ್ನೂ ಸಾರವುಳ್ಳ ಭೂಮಿಯನ್ನೂ ಸಮೃದ್ಧಿಯಾದ ಧಾನ್ಯ ದ್ರಾಕ್ಷಾರಸವನ್ನೂ ಕೊಡಲಿ.
Cross references
ಆಗ ಅವನ ತಂದೆಯಾದ ಇಸಾಕನು ಪ್ರತ್ಯುತ್ತರವಾಗಿ ಅವನಿಗೆ--ಇಗೋ, ನಿನ್ನ ನಿವಾಸವು ಭೂಮಿಯಸಾರ ದಿಂದಲೂ ಆಕಾಶದ ಮಂಜಿನಿಂದಲೂ ಇರುವದು.
ನಿಮ್ಮ ತಂದೆಯನ್ನೂ ನಿಮ್ಮ ನಿಮ್ಮ ಮನೆಯವರನ್ನೂ ಕರಕೊಂಡು ನನ್ನ ಬಳಿಗೆ ಬನ್ನಿರಿ. ಐಗುಪ್ತದೇಶದ ಉತ್ತಮವಾದದ್ದನ್ನು ನಾನು ನಿಮಗೆ ಕೊಡುವೆನು. ಈ ದೇಶದ ಸಾರವನ್ನು ಊಟಮಾಡುವಿರಿ.
ಆಶೇರನಿಂದ ಕೊಬ್ಬಿದ ಆಹಾರವು ಬರುವದು. ಅವನು ಅರಸರ ಸವಿಯೂಟ ವನ್ನು ಕೊಡುವನು.
ಆ ಭೂಮಿಯು ಎಂಥದ್ದೋ ಸಾರವಾ ದದ್ದೋ? ನಿಸ್ಸಾರವಾದದ್ದೋ ಮರಗಳುಳ್ಳದ್ದೋ? ಇಲ್ಲದಿರುವದೋ ಎಂದೂ ನೋಡಿರಿ. ನೀವು ಧೈರ್ಯ ವುಳ್ಳವರಾಗಿದ್ದು ಆ ಭೂಮಿಯ ಫಲವನ್ನು ತೆಗೆದು ಕೊಳ್ಳಿರಿ ಅಂದನು. ಆಗ ಪ್ರಥಮ ದ್ರಾಕ್ಷೇಹಣ್ಣುಗಳ ಕಾಲವಾಗಿತ್ತು.
ಉತ್ತಮವಾದ ಎಲ್ಲಾ ಎಣ್ಣೆಯೂ ದ್ರಾಕ್ಷಾರಸವೂ ಗೋಧಿಯೂ ಅವರು ಕರ್ತನಿಗೆ ಕೊಡುವ ಅವುಗಳ ಪ್ರಥಮ ಫಲಗಳನ್ನೂ ನಿನಗೆ ಕೊಟ್ಟಿದ್ದೇನೆ.
ಆತನು ನಿನ್ನನ್ನು ಪ್ರೀತಿಮಾಡಿ ಆಶೀರ್ವದಿಸಿ ಹೆಚ್ಚಿಸುವನು; ನಿನಗೆ ಕೊಡುತ್ತೇನೆಂದು ಆತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ದೇಶದಲ್ಲಿ ನಿನ್ನ ಗರ್ಭದ ಫಲ ವನ್ನೂ ಭೂಮಿಯ ಹುಟ್ಟುವಳಿಯನ್ನೂ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಪಶುಗಳನ್ನೂ ನಿನ್ನ ಕುರಿಮಂದೆಗಳನ್ನೂ ಆಶೀರ್ವದಿಸುವನು.
ನಿನ್ನ ದೇವರಾದ ಕರ್ತನು ನಿನ್ನನ್ನು ಉತ್ತಮ ದೇಶಕ್ಕೆ ಬರಮಾಡುತ್ತಾನೆ; ಅದು ನೀರಿನ ಹಳ್ಳಗಳೂ ತಗ್ಗಿನಲ್ಲಿಯೂ ಬೆಟ್ಟದಲ್ಲಿಯೂ ಉಕ್ಕುವ ಬುಗ್ಗೆಗಳುಳ್ಳ ದೇಶವೇ.
ಆದರೆ ನೀವು ಸ್ವಾಧೀನಮಾಡಿ ಕೊಳ್ಳುವದಕ್ಕೆ ಹೋಗುವ ದೇಶವು ಬೆಟ್ಟಗಳೂ ತಗ್ಗು ಗಳೂ ಉಳ್ಳ ದೇಶವೇ; ಅದು ಆಕಾಶದ ಮಳೆಯಿಂದ ನೀರು ಕುಡಿಯುತ್ತದೆ;
ನನ್ನ ಬೋಧನೆಯು ಮಳೆಯಂತೆ ಸುರಿಯುವದು; ನನ್ನ ಮಾತು ಮಂಜಿನಂತೆಯೂ ಹುಲ್ಲಿನ ಮೇಲೆ ಬೀಳುವ ತುಂತುರಿನ ಹಾಗೆಯೂ ಪಲ್ಯದ ಮೇಲೆ ಬೀಳುವ ವೃಷ್ಟಿಗಳ ಹಾಗೆಯೂ ಬೀಳುವದು.
ಯೋಸೇಫನ ವಿಷಯವಾಗಿ--ಅವನ ದೇಶವು ಆಕಾಶದ ಅಮೂಲ್ಯವಾದವುಗಳಿಂದಲೂ ಮಂಜಿ ನಿಂದಲೂ ಕೆಳಗೆ ಮಲಗಿರುವ ಅಗಾಧದಿಂದಲೂ
ಇಸ್ರಾಯೇಲು ಒಂಟಿಯಾಗಿ ಭರವಸದಿಂದ ಸುರಕ್ಷಿತವಾಗಿ ವಾಸಿಸುವದು. ಧಾನ್ಯ ದ್ರಾಕ್ಷಾರಸಗಳ ದೇಶದಲ್ಲಿ ಯಾಕೋಬನ ಬುಗ್ಗೆ ಇರುವದು. ಅವನ ಆಕಾಶಗಳು ಸಹ ಮಂಜನ್ನು ಸುರಿಸುವವು.ಇಸ್ರಾಯೇಲೇ, ನೀನು ಸಂತೋಷವುಳ್ಳವನೂ ನಿನ್ನ ಸಹಾಯದ ಗುರಾಣಿಯೂ ನಿನ್ನ ಘನತೆಯ ಕತ್ತಿಯೂ ಆಗಿರುವ ಕರ್ತನಿಂದ ರಕ್ಷಿಸಲ್ಪಟ್ಟ ಓ ಜನವೇ, ನಿನ್ನ ಹಾಗೆ ಯಾರಿದ್ದಾರೆ? ನಿನ್ನ ಶತ್ರುಗಳು ನಿನಗೆ ಸುಳ್ಳುಗಾರರಾಗಿ ಕಂಡುಬರುವರು. ನೀನು ಅವರ ಉನ್ನತವಾದ ಸ್ಥಳಗಳ ಮೇಲೆ ನಡೆದು ಹೋಗುವಿ.
ಕರ್ತನ ಸ್ವರಕ್ಕೆ ವಿಧೇಯರಾಗದೆ ಹೋದದರಿಂದ ಐಗುಪ್ತದಿಂದ ಹೊರಟ ಯುದ್ಧದ ಮನುಷ್ಯರಾದ ಜನರೆಲ್ಲಾ ನಾಶವಾಗುವ ವರೆಗೂ ಇಸ್ರಾಯೇಲ್ ಮಕ್ಕಳು ನಾಲ್ವತ್ತು ವರುಷಗಳು ಅರಣ್ಯದಲ್ಲಿ ಅಲೆದಾಡು ತ್ತಿದ್ದರು; ಯಾಕಂದರೆ ನಮಗೆ ಕೊಡುವದಕ್ಕೆ ಕರ್ತನು ಅವರ ತಂದೆಗಳಿಗೆ ಆಣೆ ಇಟ್ಟ ದೇಶವನ್ನು ಅಂದರೆ ಹಾಲೂ ಜೇನೂ ಹರಿಯುವ ದೇಶವನ್ನು ಅವರಿಗೆ ತೋರಿಸುವದಿಲ್ಲ ಎಂದು ಕರ್ತನು ಅವರಿಗೆ ಆಣೆ ಇಟ್ಟಿದ್ದನು.
ಗಿಲ್ಬೋವ ಬೆಟ್ಟಗಳೇ, ನಿಮ್ಮ ಮೇಲೆ ಮಂಜೂ ಮಳೆಯೂ ಅರ್ಪಣೆಗಳ ಹೊಲ ಗಳೂ ಇಲ್ಲದೆ ಹೋಗಲಿ. ಯಾಕಂದರೆ ಅಲ್ಲಿ ಪರಾ ಕ್ರಮಶಾಲಿಗಳ ಗುರಾಣಿಯೂ ಸೌಲನ ಗುರಾಣಿಯೂ ಅವಮಾನವಾಗಿ ಬಿದ್ದವು. ಸೌಲನು ಎಣ್ಣೆಯಿಂದ ಅಭಿಷೇಕಿಸಲ್ಪಡದವನ ಹಾಗಾದನು.
ಸೊಲೊ ಮೋನನು ಹೀರಾಮನಿಗೆ ಅವನ ಮನೆಯವರ ಆಹಾರ ಕ್ಕೋಸ್ಕರ ಇಪ್ಪತ್ತು ಸಾವಿರ ಅಳತೆ ಗೋಧಿಯನ್ನೂ ಇಪ್ಪತ್ತು ಅಳತೆ ಶುದ್ಧವಾದ ಎಣ್ಣೆಯನ್ನೂ ಕೊಟ್ಟನು. ಹೀಗೆಯೇ ಸೊಲೊಮೋನನು ಹೀರಾಮನಿಗೆ ಪ್ರತಿ ವರುಷ ಕೊಡುತ್ತಾ ಇದ್ದನು.
ಗಿಲ್ಯಾದಿನ ನಿವಾಸಿಗಳಲ್ಲಿ ತಿಷ್ಬೀಯನಾದ ಎಲೀಯನು ಅಹಾಬನಿಗೆ--ಯಾವಾತನ ಸಮ್ಮುಖದಲ್ಲಿ ನಿಲ್ಲುತ್ತೇನೋ ಆ ಇಸ್ರಾಯೇಲಿನ ದೇವ ರಾದ ಕರ್ತನ ಜೀವದಾಣೆ, ನನ್ನ ಮಾತಿನ ಪ್ರಕಾರ ವಲ್ಲದೆ ಈ ವರ್ಷಗಳಲ್ಲಿ ಮಂಜೂ ಮಳೆಯೂ ಬೀಳು ವದಿಲ್ಲ ಅಂದನು.
ಇಗೋ, ನಾನು ಮರಗಳನ್ನು ಕಡಿಯುವ ನಿನ್ನ ಸೇವಕರಿಗೆ ಇಪ್ಪತ್ತು ಸಾವಿರ ಅಳತೆ ಗೋಧಿಯನ್ನೂ ಇಪ್ಪತ್ತು ಸಾವಿರ ಅಳತೆ ಜವೆಗೋಧಿ ಯನ್ನೂ ಇಪ್ಪತ್ತು ಸಾವಿರ ಅಳತೆ ದ್ರಾಕ್ಷಾರಸವನ್ನೂ ಇಪ್ಪತ್ತು ಸಾವಿರ ಅಳತೆ ಎಣ್ಣೆಯನ್ನೂ ಕೊಡುವೆನು ಅಂದನು.
ನಿನ್ನ ಆಲಯದ ಪರಿಪೂರ್ಣತೆಯಿಂದ ಅವರು ಸಂತೃಪ್ತಿಯಾಗುವರು; ನಿನ್ನ ಸಂಭ್ರಮದ ನದಿಯಿಂದ ಅವರಿಗೆ ಕುಡಿಯ ಮಾಡುವಿ.
ನೀನು ಭೂಮಿಯನ್ನು ಕಟಾಕ್ಷಿಸಿ ಅದನ್ನು ತೋಯಿಸಿ ನೀರಿನಿಂದ ತುಂಬಿರುವಂತೆ ದೇವರ ನದಿ ಯಿಂದ ಅದನ್ನು ಚೆನ್ನಾಗಿ ಹದಗೊಳಿಸುತ್ತೀ; ಹೀಗೆ ಭೂಮಿಯನ್ನು ಸಿದ್ಧಮಾಡಿ ಮನುಷ್ಯರಿಗೆ ಧಾನ್ಯವನ್ನು ಒದಗಿಸುತ್ತೀ.
ದ್ರಾಕ್ಷಾರಸವು ಮನುಷ್ಯನ ಹೃದಯವನ್ನು ಸಂತೋಷ ಪಡಿಸುತ್ತದೆ; ಎಣ್ಣೆಯು ಅವನ ಮುಖವನ್ನು ಪ್ರಕಾ ಶಿಸುವಂತೆ ಮಾಡುತ್ತದೆ; ರೊಟ್ಟಿಯು ಮನುಷ್ಯನ ಹೃದಯವನ್ನು ಬಲಪಡಿಸುತ್ತದೆ.
ಚೀಯೋನಿನ ಪರ್ವತಗಳ ಮೇಲೆ ಬೀಳುವ ಹೆರ್ಮೋನಿನ ಮಂಜಿನ ಹಾಗೆಯೂ ಅದೆ; ಅಲ್ಲಿ ಕರ್ತನು ಆಶೀರ್ವಾದವನ್ನೂ ಯುಗಯುಗಕ್ಕಿರುವ ಜೀವವನ್ನೂ ಆಜ್ಞಾಪಿಸಿದ್ದಾನೆ.
ಆಕಾಶ ಗಳೇ, ಮೇಲಿನಿಂದ ಹನಿಯನ್ನು ಬೀಳಿಸಿರಿ; ಗಗನಗಳು ನೀತಿಯನ್ನು ಸುರಿಸಲಿ; ಭೂಮಿಯು ತೆರೆದು ರಕ್ಷಣೆ ಯನ್ನು ತರಲಿ, ನೀತಿಯು ಅದರೊಂದಿಗೆ ಮೊಳೆ ಯಲಿ. ಇದನ್ನು ಸೃಷ್ಟಿಸಿದ ಕರ್ತನು ನಾನೇ.
ಇಸ್ರಾಯೇಲಿಗೆ ನಾನು ಮಂಜಿನ ಹಾಗೆ ಇರುವೆನು. ಅವನು ತಾವರೆಯ ಹಾಗೆ ಬೆಳೆಯುವನು; ತನ್ನ ಬೇರುಗಳನ್ನು ಲೆಬನೋನಿನ ಹಾಗೆ ಹರಡುವನು.
ಹೌದು, ಕರ್ತನು ಉತ್ತರ ಕೊಟ್ಟು ತನ್ನ ಜನರಿಗೆ ಹೇಳುವದೇ ನಂದರೆ--ಇಗೋ, ನಾನು ನಿಮಗೆ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಸಾಕಾಗುವಷ್ಟು ಕಳು ಹಿಸಿ ನಿಮ್ಮನ್ನು ಇನ್ನು ಮೇಲೆ ಜನಾಂಗಗಳಲ್ಲಿ ನಿಂದಿತ ರಾಗಿ ಇಡುವದಿಲ್ಲ.
ಇದಲ್ಲದೆ ಯಾಕೋಬಿನ ಶೇಷವು ಅನೇಕ ಜನಗಳ ಮಧ್ಯದಲ್ಲಿ ಕರ್ತನಿಂದ ಮಂಜಿನ ಹಾಗೆಯೂ ಹುಲ್ಲಿನ ಮೇಲೆ ಜಡಿಮಳೆಯ ಹಾಗೆಯೂ ಇರುವದು; ಅದು ಮನುಷ್ಯರಿಗೊಸ್ಕರ ತಡೆಮಾಡುವ ದಿಲ್ಲ; ಮನುಷ್ಯನ ಮಕ್ಕಳಿಗೋಸ್ಕರ ಕಾದುಕೊಳ್ಳುವದಿಲ್ಲ.
ಬೀಜವುವೃದ್ಧಿಯಾಗುವದು; ದ್ರಾಕ್ಷೇ ಬಳ್ಳಿ ತನ್ನ ಫಲವನ್ನು ಕೊಡುವದು; ಭೂಮಿಯು ತನ್ನ ಹುಟ್ಟುವಳಿಯನ್ನು ಹೆಚ್ಚಾಗಿ ಕೊಡುವದು; ಆಕಾಶ ಗಳು ತಮ್ಮ ಮಂಜನ್ನು ಕೊಡುವವು; ಈ ಜನರಲ್ಲಿ ಉಳಿದವರು ಇವುಗಳನ್ನೆಲ್ಲಾ ಸ್ವಾಧೀನ ಮಾಡಿಕೊಳ್ಳು ವಂತೆ ಮಾಡುವೆನು.
ಆತನ ಒಳ್ಳೇತನವು ಎಷ್ಟೋ ದೊಡ್ಡದು; ಆತನ ಸೌಂದರ್ಯವು ಎಷ್ಟು ಮಹತ್ತಾ ದದ್ದು! ಧಾನ್ಯವು ಯೌವನಸ್ಥರನ್ನೂ ದ್ರಾಕ್ಷಾರಸವು ಯುವತಿಯರನ್ನೂ ಹರ್ಷಗೊಳಿಸುವವು.
ಆದರೆ ಕೆಲವು ಕೊಂಬೆಗಳು ಮುರಿದು ಹಾಕಲ್ಪಟ್ಟ ದ್ದರಿಂದ ಕಾಡೆಣ್ಣೇ ಮರದಂತಿರುವ ನೀನು ಅವುಗಳ ತಾವಿನಲ್ಲಿ ಕಸಿಕಟ್ಟಿಸಿಕೊಂಡವನಾಗಿ ಊರೆಣ್ಣೇ ಮರದ ರಸವತ್ತಾದ ಬೇರಿನಲ್ಲಿ ಪಾಲು ಹೊಂದಿದವನಾಗಿದ್ದೀ.
ನಂಬಿಕೆಯಿಂದಲೇ ಇಸಾಕನು ಮುಂದೆ ಬರ ಬೇಕಾದವುಗಳ ವಿಷಯದಲ್ಲಿ ಯಾಕೋಬನನ್ನೂ ಏಸಾವನನ್ನೂ ಆಶೀರ್ವದಿಸಿದನು.