ಜನಗಳು ನಿನ್ನನ್ನು ಸೇವಿಸಲಿ, ಜನಾಂಗಗಳು ನಿನಗೆ ಅಡ್ಡಬೀಳಲಿ, ನಿನ್ನ ಸಹೋದರರಿಗೆ ನೀನು ದೊರೆ ಯಾಗಿರು. ನಿನ್ನ ತಾಯಿಯ ಮಕ್ಕಳು ನಿನಗೆ ಅಡ್ಡಬೀಳಲಿ, ನಿನ್ನನ್ನು ಶಪಿಸುವವರಿಗೆ ಶಾಪವೂ ಆಶೀರ್ವದಿಸುವ ವರಿಗೆ ಆಶೀರ್ವಾದವೂ ಆಗಲಿ ಅಂದನು.
Cross references
ಕಾನಾನನು ಶಾಪಗ್ರಸ್ತನಾಗಲಿ. ಅವನು ತನ್ನ ಸಹೋದರರಿಗೆ ದಾಸಾನುದಾಸನಾ ಗಿರುವನು ಅಂದನು. ಅವನು--
ನಿನ್ನನ್ನು ಆಶೀರ್ವದಿಸುವವರನ್ನು ಆಶೀರ್ವದಿಸು ವೆನು. ನಿನ್ನನ್ನು ಶಪಿಸುವವರನ್ನು ಶಪಿಸುವೆನು; ನಿನ್ನಲ್ಲಿ ಭೂಮಿಯ ಎಲ್ಲಾ ಜನಾಂಗಗಳು ಆಶೀರ್ವದಿಸಲ್ಪಡು ವವು ಎಂದು ಹೇಳಿದನು.
ನಿನ್ನನ್ನು ಆಶೀರ್ವದಿ ಸಿಯೇ ಆಶೀರ್ವದಿಸುವೆನು; ನಿನ್ನ ಸಂತಾನವನ್ನು ಆಕಾಶದ ನಕ್ಷತ್ರಗಳ ಹಾಗೆಯೂ ಸಮುದ್ರದ ತೀರ ದಲ್ಲಿರುವ ಮರಳಿನ ಹಾಗೆಯೂ ಹೆಚ್ಚಿಸೇ ಹೆಚ್ಚಿಸುವೆನು; ನಿನ್ನ ಸಂತಾನವು ತನ್ನ ಶತ್ರುಗಳ ದ್ವಾರವನ್ನು ವಶ ಮಾಡಿಕೊಳ್ಳುವದು.
ಆಗ ಅವಳ ಗರ್ಭ ದಲ್ಲಿ ಶಿಶುಗಳು ಒಂದನ್ನೊಂದು ನೂಕಿಕೊಂಡಾಗ ಆಕೆಯು--ಯಾಕೆ ನನಗೆ ಹೀಗೆ ಆಗುತ್ತಿರುವದು ಎಂದು ವಿಚಾರಿಸುವದಕ್ಕೆ ಕರ್ತನ ಬಳಿಗೆ ಹೋದಳು.
ಕರ್ತನು ಆಕೆಗೆ--ನಿನ್ನ ಹೊಟ್ಟೆಯಲ್ಲಿ ಎರಡು ಜನಾಂಗಗಳು ಇವೆ. ನಿನ್ನ ಗರ್ಭದೊಳಗಿನಿಂದಲೇ ಎರಡು ತರವಾದ ಜನಗಳು ಬೇರೆಬೇರೆಯಾಗುವರು. ಒಂದು ತರವಾದ ಜನಕ್ಕಿಂತ ಇನ್ನೊಂದು ಬಲಗೊಳ್ಳು ವದು. ಇದಲ್ಲದೆ ಹಿರಿಯನು ಕಿರಿಯನನ್ನು ಸೇವಿಸುವನು ಎಂದು ಹೇಳಿದನು.
ಯಾಕೋಬನು-- ಈ ಹೊತ್ತು ನನಗೆ ಪ್ರಮಾಣಮಾಡು ಅಂದನು. ಆಗ ಅವನು ಯಾಕೋಬನಿಗೆ ಪ್ರಮಾಣಮಾಡಿ ತನ್ನ ಚೊಚ್ಚಲತನವನ್ನು ಅವನಿಗೆ ಮಾರಿದನು.ಆಗ ಯಾಕೋಬನು ಏಸಾವನಿಗೆ ರೊಟ್ಟಿಯನ್ನೂ ಅಲಸಂದಿಯ ತೋವೆಯನ್ನೂ ಕೊಟ್ಟನು. ಅವನು ತಿಂದು ಕುಡಿದು ಎದ್ದುಹೋದನು. ಹೀಗೆ ಏಸಾವನು ತನ್ನ ಚೊಚ್ಚಲತನದ ಹಕ್ಕನ್ನು ಉದಾಸೀನಮಾಡಿದನು.
ಇಸಾಕನು ಪ್ರತ್ಯುತ್ತರವಾಗಿ ಏಸಾವನಿಗೆ--ಇಗೋ, ಅವನನ್ನು ನಿನಗೆ ದೊರೆಯಾಗಿ ಇಟ್ಟು ಅವನ ಸಹೋದರರೆಲ್ಲರನ್ನೂ ಅವನಿಗೆ ಸೇವಕ ರನ್ನಾಗಿ ಕೊಟ್ಟು ಧಾನ್ಯದಿಂದಲೂ ದ್ರಾಕ್ಷಾರಸ ದಿಂದಲೂ ಅವನನ್ನು ಪೋಷಿಸಿದ್ದೇನೆ. ಈಗ ನನ್ನ ಮಗನೇ, ನಿನಗೆ ನಾನು ಏನು ಮಾಡಲಿ ಅಂದನು.
ನಿನ್ನ ಕತ್ತಿಯಿಂದಲೇ ನೀನು ಬದುಕುವಿ, ನಿನ್ನ ಸಹೋದರನನ್ನು ಸೇವಿಸುವಿ; ಆದರೆ ನಿನಗೆ ಪ್ರಭುತ್ವವು ಬಂದಾಗ ಆಗುವದೇನಂದರೆ, ಅವನ ನೊಗವನ್ನು ನಿನ್ನ ಕೊರಳಿನಿಂದ ಮುರಿದು ಹಾಕುವಿ.
ಇಗೋ, ನಾವು ಹೊಲದಲ್ಲಿ ಸಿವುಡುಗಳನ್ನು ಕಟ್ಟುತ್ತಾ ಇದ್ದೆವು; ಆಗ ಇಗೋ, ನನ್ನ ಸಿವುಡು ಎದ್ದು ನಿಂತಿತು; ಆಗ ಇಗೋ, ನಿಮ್ಮ ಸಿವುಡುಗಳು ತಿರುಗಿ ಕೊಂಡು ನನ್ನ ಸಿವುಡಿಗೆ ಅಡ್ಡಬಿದ್ದವು ಅಂದನು.
ಯೆಹೂದನೇ, ನಿನ್ನ ಸಹೋದರರು ನಿನ್ನನ್ನು ಹೊಗಳು ವರು. ನಿನ್ನ ಕೈ ನಿನ್ನ ಶತ್ರುಗಳ ಕುತ್ತಿಗೆಯ ಮೇಲಿರುವದು, ನಿನ್ನ ತಂದೆಯ ಮಕ್ಕಳು ನಿನಗೆ ಅಡ್ಡ ಬೀಳುವರು.
ಇಗೋ, ಐಗುಪ್ತ ದೇಶದಿಂದ ಹೊರಟಿರುವ ಒಂದು ಜನಾಂಗವು ಭೂಮುಖವನ್ನು ಆವರಿಸಿಕೊಂಡಿದೆ; ಈಗ ನೀನು ಬಂದು ನನಗೋಸ್ಕರ ಅದನ್ನು ಶಪಿಸು; ಒಂದು ವೇಳೆ ಅದರ ಸಂಗಡ ಯುದ್ಧಮಾಡಿ ಅದನ್ನು ಹೊರಗೆ ಹಾಕುವದಕ್ಕೆ ನಾನು ಸಮರ್ಥನಾದೇನು ಎಂಬದು.
ದೇವರು ಶಪಿಸದವನನ್ನು ನಾನು ಹೇಗೆ ಶಪಿಸಲಿ? ಕರ್ತನು ಎದುರಿಸದವನನ್ನು ನಾನು ಹೇಗೆ ಎದುರಿ ಸಲಿ?
ಅವನು ಸಿಂಹದ ಹಾಗೆಯೂ ದೊಡ್ಡ ಸಿಂಹದ ಹಾಗೆಯೂ ಬಾಗಿ ಮಲಗುತ್ತಾನೆ; ಅವನನ್ನು ಎಬ್ಬಿಸುವವರು ಯಾರು? ನಿನ್ನನ್ನು ಆಶೀರ್ವದಿಸುವವರಿಗೆ ಆಶೀರ್ವಾದ, ನಿನ್ನನ್ನು ಶಪಿಸುವವರಿಗೆ ಶಾಪ ಉಂಟು.
ಇದಾದ ಮೇಲೆ ಏನಾಯಿತಂದರೆ, ದಾವೀದನು ಫಿಲಿಷ್ಟಿಯರನ್ನು ಹೊಡೆದು ಅವರನ್ನು ಅಣಗಿಸಿ ಅವರ ಕೈಯಿಂದ ಮೇತೆಗಮ್ಮವನ್ನು ತಕ್ಕೊಂಡನು.
ಇದರ ತರುವಾಯ ಏನಾಯಿತಂದರೆ, ಅಮ್ಮೋನನ ಮಕ್ಕಳ ಅರಸನು ಸತ್ತನು; ಅವನ ಮಗನಾದ ಹಾನೂನನು ಅವನಿಗೆ ಬದಲಾಗಿ ಅರಸನಾದನು.
ಇದಲ್ಲದೆ ಸೊಲೊಮೋನನು ನದಿ ಮೊದಲು ಗೊಂಡು ಫಿಲಿಷ್ಟಿಯರ ದೇಶವನ್ನು ಹಾದು ಐಗುಪ್ತದ ಮೇರೆಯ ವರೆಗೂ ಇರುವ ಸಮಸ್ತ ರಾಜ್ಯಗಳ ಮೇಲೆ ಆಳುತ್ತಿದ್ದನು. ಆ ರಾಜ್ಯಗಳವರು ಸೊಲೊಮೋನನು ಜೀವಿಸಿರುವ ದಿವಸಗಳಲ್ಲೆಲ್ಲಾ ಕಾಣಿಕೆಗಳನ್ನು ತಂದು ಅವನನ್ನು ಸೇವಿಸುತ್ತಾ ಇದ್ದರು.
ಅವನು ಎದೋಮಿನಲ್ಲಿ ಅರಸನ ಸಂತತಿಯವನಾಗಿದ್ದನು. ಹೇಗಂದರೆ, ದಾವೀದನು ಎದೋಮಿನಲ್ಲಿ ರುವಾಗ ಸೈನ್ಯಾಧಿಪತಿಯಾದ ಯೋವಾಬನು ಎದೋ ಮಿನಲ್ಲಿ ಗಂಡಸರೆಲ್ಲರನ್ನೂ ಕೊಂದುಹಾಕಿದ ತರು ವಾಯ
ಆ ಕಾಲದಲ್ಲಿ ಎದೋಮಿನೊಳಗೆ ಅರಸ ನಿರಲಿಲ್ಲ; ಅಧಿಪತಿಯು ಆಳುತ್ತಿದ್ದನು.
ಯೆಹೂದನು ತನ್ನ ಸಹೋದರರಿಗಿಂತ ಪ್ರಬಲವುಳ್ಳವನಾದನು. ಅವ ನಿಂದ ಮುಖ್ಯ ಅಧಿಕಾರಿಯು ಹುಟ್ಟಿದನು. ಆದರೆ ಚೊಚ್ಚಲತನ ಯೋಸೆಫನದಾಗಿತ್ತು).
ಅಮಚ್ಯನು ತನ್ನನ್ನು ಬಲಪಡಿಸಿ ತನ್ನ ಜನರನ್ನು ನಡಿಸಿಕೊಂಡು ಉಪ್ಪಿನ ತಗ್ಗಿಗೆ ಹೋಗಿ ಅಲ್ಲಿ ಸೇಯಾ ರಿನ ಮಕ್ಕಳೊಳಗೆ ಹತ್ತು ಸಾವಿರ ಮಂದಿಯನ್ನು ಹೊಡೆದನು.
ಆದಾಗ್ಯೂ ನಾನು ನನ್ನ ಅರಸನನ್ನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನ ಮೇಲೆ ಸ್ಥಾಪಿಸಿದ್ದೇನೆ.
ಓ ದೇವರೇ, ಕೋಪಿಸಿಕೊಂಡು ನಮ್ಮನ್ನು ತಳ್ಳಿ ಚದರಿಸಿಬಿಟ್ಟಿದ್ದೀ; ಮತ್ತೆ ನಮ್ಮ ಕಡೆಗೆ ತಿರುಗಿಕೋ.
ಸಮುದ್ರದಿಂದ ಸಮುದ್ರದ ವರೆಗೂ ನದಿಯಿಂದ ಭೂಮಿಯ ಕೊನೆಗಳವರೆಗೂ ಆತನು ಆಳುವನು.
ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.
ಕರ್ತನು ಹೇಳುವದೇನಂದರೆ--ಐಗುಪ್ತದ ಆದಾ ಯವೂ ಇಥಿಯೋಪ್ಯದ ವ್ಯಾಪಾರವೂ ಎತ್ತರದ ಮನುಷ್ಯರಾದ ಸೆಬಾಯರೂ ನಿಮ್ಮಲ್ಲಿಗೆ ಸೇರಿ ನಿಮ್ಮವ ರಾಗಿ ನಿಮ್ಮನ್ನು ಅನುಸರಿಸುವರು; ಸಂಕೋಲೆಗಳನ್ನು ಕಟ್ಟಿಕೊಂಡು ಬಂದು ನಿಮ್ಮ ಮುಂದೆ ಅಡ್ಡಬಿದ್ದು ನಿಶ್ಚಯವಾಗಿ ದೇವರು ನಿಮ್ಮಲ್ಲಿಯೇ ಇದ್ದಾನೆ, ಮತ್ತೊ ಬ್ಬನು ಇಲ್ಲ, ಬೇರೆ ದೇವರು ಇಲ್ಲವೇ ಇಲ್ಲ.
ಮನುಷ್ಯನಿಂದ ತಿರಸ್ಕರಿಸಲ್ಪಟ್ಟವನು ಜನಾಂಗಕ್ಕೆ ಅಸ ಹ್ಯನೂ ಅಧಿಕಾರಿಗಳ ಸೇವಕನಿಗೆ ಇಸ್ರಾಯೇಲಿನ ವಿಮೋಚಕನೂ ಮತ್ತು ಅವನ ಪರಿಶುದ್ಧನಾದ ಕರ್ತನೂ ಹೀಗೆ ಹೇಳುತ್ತಾನೆ, ಕರ್ತನ ನಂಬಿಗಸ್ತಿ ಕೆಯನ್ನೂ ನಿನ್ನನ್ನು ಆದುಕೊಂಡ ಇಸ್ರಾಯೇಲಿನ ಪರಿಶುದ್ಧನನ್ನೂ ನೋಡಿ ಅರಸರು ಏಳುತ್ತಾರೆ; ಅಧಿ ಪತಿಗಳು ಸಹ ಆರಾಧಿಸುವರು.
ಅರಸುಗಳು ನಿನಗೆ ಸಾಕು ತಂದೆಗಳು, ಅವರ ರಾಣಿಯರು ನಿನಗೆ ದಾದಿಗಳಾ ಗುವರು; ಅವರು ಭೂಮಿಯ ಕಡೆಗೆ ತಮ್ಮ ಮುಖ ವನ್ನು ಬಾಗಿಸಿ, ಅಡ್ಡಬಿದ್ದು ನಿನ್ನ ಪಾದದ ಧೂಳನ್ನು ನೆಕ್ಕುವರು; ಆಗ ನಾನೇ ಕರ್ತನೆಂದು ನೀನು ತಿಳು ಕೊಳ್ಳುವಿ; ನನ್ನನ್ನು ನಿರೀಕ್ಷಿಸಿಕೊಂಡಿರುವವರು ನಾಚಿ ಕೆಗೆ ಈಡಾಗರು.
ಎದೋಮಿನಿಂದಲೂ ರಕ್ತಾಂಬರ ಧರಿಸಿಕೊಂಡು ಬೊಚ್ರದಿಂದಲೂ ಬರುವ ಇವನ್ಯಾರು? ಪ್ರಭೆಯುಳ್ಳ ವಸ್ತ್ರಗಳನ್ನು ತೊಟ್ಟುಕೊಂಡ ವನಾಗಿ ತನ್ನ ಮಹಾಪರಾಕ್ರಮದಲ್ಲಿ ಸಂಚಾರ ಮಾಡುವ ಇವನ್ಯಾರು? ನೀತಿಯಲ್ಲಿ ಮಾತನಾಡು ವವನೂ ರಕ್ಷಿಸಲು ಬಲಿಷ್ಠನೂ ಆಗಿರುವ ನಾನೇ.
ಅರ ಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವನು. ಅದರ ರಾಜ್ಯ ವನ್ನು ಬೇರೆ ಜನರಿಗೆ ಕೊಡದೆ ಆ ರಾಜ್ಯಗಳನ್ನೆಲ್ಲಾ ಧ್ವಂಸ ಮಾಡಿ ಮುಗಿಸಿ ಎಂದೆಂದಿಗೂ ನಿಲ್ಲುವದು.
ನನ್ನ ಜನರನ್ನು ನಿಂದಿಸಿ, ಅವರ ಮೇರೆಗೆ ಮೋವಾ ಬ್ಯರೂ ಅಮ್ಮೋನ್ಯರೂ ವಿರೋಧವಾಗಿ ತಮ್ಮನ್ನು ಹೆಚ್ಚಿಸಿ ಕೊಂಡದ್ದನ್ನು ನಾನು ಕೇಳಿದ್ದೇನೆ.
ನಿಮ್ಮನ್ನು ಪ್ರೀತಿಮಾಡಿದ್ದೇನೆಂದು ಕರ್ತನು ಹೇಳುತ್ತಾನೆ; ಆದಾಗ್ಯೂ ನೀವು--ಯಾವದರಲ್ಲಿ ನೀನು ನಮ್ಮನ್ನು ಪ್ರೀತಿಮಾಡಿದ್ದೀ ಎಂದು ಹೇಳುತ್ತೀರಿ. ಕರ್ತನು ಅನು ್ನತ್ತಾನೆ--ಏಸಾವನು ಯಾಕೋಬನಿಗೆ ಅಣ್ಣನಲ್ಲವೋ? ಆದಾಗ್ಯೂ ನಾನು ಯಾಕೋಬನನ್ನು ಪ್ರೀತಿ ಮಾಡಿ ದೆನು.
ಅದಕ್ಕೆ ಅರಸನು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನೀವು ಈ ನನ್ನ ಸಹೋದರ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡಿದ್ದು ನನಗೂ ಮಾಡಿದಂತಾಯಿತು ಅಂದನು.
ಆಗ ಆತನು ಅವರಿಗೆ ಪ್ರತ್ಯುತ್ತರವಾಗಿ--ನಾನು ನಿಮಗೆ ನಿಜವಾಗಿ ಹೇಳುವದೇನಂದರೆ, ನೀವು ಇವ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡದೆ ಹೋದ ದರಿಂದ ನನಗೂ ಮಾಡಲಿಲ್ಲ ಎಂದು ಹೇಳುವನು.ಇವರು ನಿತ್ಯವಾದ ಶಿಕ್ಷೆಗೆ ಹೋಗುವರು; ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು.
ಹಿರಿಯವನು ಕಿರಿಯವನಿಗೆ ಸೇವೆ ಮಾಡುವನು ಎಂದು ಆಕೆಗೆ ಹೇಳಲ್ಪಟ್ಟಿದೆ.
ಆತನ ತೊಡೆಯ ಮೇಲೆಯೂ ವಸ್ತ್ರದ ಮೇಲೆಯೂ--ರಾಜಾ ಧಿರಾಜನೂ ಕರ್ತರ ಕರ್ತನೂ ಎಂಬ ಹೆಸರು ಬರೆದದೆ.