ನಿನ್ನ ಕತ್ತಿಯಿಂದಲೇ ನೀನು ಬದುಕುವಿ, ನಿನ್ನ ಸಹೋದರನನ್ನು ಸೇವಿಸುವಿ; ಆದರೆ ನಿನಗೆ ಪ್ರಭುತ್ವವು ಬಂದಾಗ ಆಗುವದೇನಂದರೆ, ಅವನ ನೊಗವನ್ನು ನಿನ್ನ ಕೊರಳಿನಿಂದ ಮುರಿದು ಹಾಕುವಿ.
Cross references
ಕರ್ತನು ಆಕೆಗೆ--ನಿನ್ನ ಹೊಟ್ಟೆಯಲ್ಲಿ ಎರಡು ಜನಾಂಗಗಳು ಇವೆ. ನಿನ್ನ ಗರ್ಭದೊಳಗಿನಿಂದಲೇ ಎರಡು ತರವಾದ ಜನಗಳು ಬೇರೆಬೇರೆಯಾಗುವರು. ಒಂದು ತರವಾದ ಜನಕ್ಕಿಂತ ಇನ್ನೊಂದು ಬಲಗೊಳ್ಳು ವದು. ಇದಲ್ಲದೆ ಹಿರಿಯನು ಕಿರಿಯನನ್ನು ಸೇವಿಸುವನು ಎಂದು ಹೇಳಿದನು.
ಜನಗಳು ನಿನ್ನನ್ನು ಸೇವಿಸಲಿ, ಜನಾಂಗಗಳು ನಿನಗೆ ಅಡ್ಡಬೀಳಲಿ, ನಿನ್ನ ಸಹೋದರರಿಗೆ ನೀನು ದೊರೆ ಯಾಗಿರು. ನಿನ್ನ ತಾಯಿಯ ಮಕ್ಕಳು ನಿನಗೆ ಅಡ್ಡಬೀಳಲಿ, ನಿನ್ನನ್ನು ಶಪಿಸುವವರಿಗೆ ಶಾಪವೂ ಆಶೀರ್ವದಿಸುವ ವರಿಗೆ ಆಶೀರ್ವಾದವೂ ಆಗಲಿ ಅಂದನು.
ಆಗ ದೂತರು ಯಾಕೋಬನ ಬಳಿಗೆ ಹಿಂತಿರುಗಿ ಬಂದು--ನಾವು ನಿನ್ನ ಸಹೋದರನಾದ ಏಸಾವನ ಬಳಿಗೆ ಹೋಗಿ ಬಂದಿದ್ದೇವೆ; ಅವನು ನಾನೂರು ಮಂದಿಯನ್ನು ಕರಕೊಂಡು ನಿನ್ನನ್ನು ಎದುರುಗೊಳ್ಳುವದಕ್ಕೆ ಬರುತ್ತಾನೆ ಅಂದರು.
ಎದೋಮಿ ನಲ್ಲಿ ಕಾವಲುದಂಡುಗಳನ್ನು ಇಟ್ಟನು. ಎಲ್ಲಾ ಎದೋಮಿ ನಲ್ಲಿ ಅವನು ಕಾವಲುದಂಡುಗಳನ್ನು ಇಟ್ಟದ್ದರಿಂದ ಎದೋಮ್ಯರೆಲ್ಲರೂ ದಾವೀದನಿಗೆ ದಾಸರಾದರು. ದಾವೀದನು ಹೋದಲ್ಲೆಲ್ಲಾ ಕರ್ತನು ಅವನನ್ನು ಕಾಪಾಡಿದನು.
ಅವನು ಎದೋಮಿನಲ್ಲಿ ಅರಸನ ಸಂತತಿಯವನಾಗಿದ್ದನು. ಹೇಗಂದರೆ, ದಾವೀದನು ಎದೋಮಿನಲ್ಲಿ ರುವಾಗ ಸೈನ್ಯಾಧಿಪತಿಯಾದ ಯೋವಾಬನು ಎದೋ ಮಿನಲ್ಲಿ ಗಂಡಸರೆಲ್ಲರನ್ನೂ ಕೊಂದುಹಾಕಿದ ತರು ವಾಯ
ಅವನ ಕಾಲದಲ್ಲಿ ಯೆಹೂದದ ಕೈಕೆಳಗಿದ್ದ ಎದೋಮ್ಯರು ತಿರುಗಿ ಬಿದ್ದು ತಮಗೆ ಒಬ್ಬ ಅರಸ ನನ್ನು ಮಾಡಿಕೊಂಡರು.
ಅವನು ಉಪ್ಪಿನ ತಗ್ಗಿನಲ್ಲಿ ಎದೋಮ್ಯರಾದ ಹತ್ತು ಸಾವಿರ ಜನರನ್ನು ಹೊಡೆದು ಯುದ್ಧದಲ್ಲಿ ಸೆಲವನ್ನು ವಶಪಡಿಸಿಕೊಂಡು ಈ ದಿವಸದ ವರೆಗೂ ಯೊಕ್ತೆಯೇಲ್ ಎಂಬ ಹೆಸರಿಟ್ಟನು.
ನೀನು ಎದೋಮ್ಯ ರನ್ನು ಹೊಡೆದೇ ಹೊಡೆದದ್ದರಿಂದ ನಿನ್ನ ಹೃದಯವು ನಿನ್ನನ್ನು ಹೆಚ್ಚಿಸುವಂತೆ ಮಾಡಿತು. ಹೆಚ್ಚಳಪಡು; ಮನೆಯಲ್ಲಿ ಕಾದಿರು; ನಿನ್ನ ಕೇಡಿಗಾಗಿ ನೀನು ಯಾಕೆ ಜಗಳವಾಡಬೇಕು? ನೀನೂ ನಿನ್ನ ಸಂಗಡ ಯೆಹೂ ದವೂ ಬಿದ್ದು ಹೋಗುವಿರಲ್ಲಾ ಅಂದನು. ಆದರೆ ಅಮಚ್ಯನು ಕೇಳದೆ ಹೋದನು.
ಇವುಗಳನ್ನು ಅರಸನಾದ ದಾವೀದನು ಎದೋಮ್ಯರು ಮೋವಾಬ್ಯರು ಅಮ್ಮೋನನ ಮಕ್ಕಳು ಫಿಲಿಷ್ಟಿಯರು ಅಮಾಲೇಕ್ಯರು ಎಂಬ ಸಕಲ ಜನಾಂಗಗಳ ಬಳಿಯಿಂದ ತೆಗೆದುಕೊಂಡು ಬಂದ ಬೆಳ್ಳಿ ಬಂಗಾರವನ್ನು ಕರ್ತನಿಗೆ ಪ್ರತಿಷ್ಠೆಮಾಡಿದನು.
ಯೆಹೋರಾಮನ ದಿನಗಳಲ್ಲಿ ಎದೋಮ್ಯರು ಯೆಹೂ ದ್ಯರ ರಾಜ್ಯದ ಅಧೀನದಿಂದ ತಿರುಗಿಬಿದ್ದು ತಮಗೆ ತಾವೇ ಅರಸನನ್ನು ಮಾಡಿಕೊಂಡರು;
ಹೀಗೆಯೇ ಇಂದಿನ ವರೆಗೂ ಎದೋಮ್ಯರು ಯೆಹೂದ್ಯರ ಅಧೀನಕ್ಕೆ ತಿರುಗಿ ಬಿದ್ದರು. ಅದೇ ಕಾಲದಲ್ಲಿ ಅವರು ತಮ್ಮ ಪಿತೃಗಳ ದೇವರಾದ ಕರ್ತನನ್ನು ಬಿಟ್ಟುಬಿಟ್ಟದ್ದರಿಂದ ಲಿಬ್ನವು ಅವರ ಅಧೀನಕ್ಕೆ ತಪ್ಪಿ ತಿರುಗಿಬಿತ್ತು.
ಅಮಚ್ಯನು ತನ್ನನ್ನು ಬಲಪಡಿಸಿ ತನ್ನ ಜನರನ್ನು ನಡಿಸಿಕೊಂಡು ಉಪ್ಪಿನ ತಗ್ಗಿಗೆ ಹೋಗಿ ಅಲ್ಲಿ ಸೇಯಾ ರಿನ ಮಕ್ಕಳೊಳಗೆ ಹತ್ತು ಸಾವಿರ ಮಂದಿಯನ್ನು ಹೊಡೆದನು.
ಯಾಕಂದರೆ ಎದೋಮ್ಯರು ತಿರಿಗಿ ಬಂದು ಯೆಹೂದದವರನ್ನು ಸಂಹರಿಸಿ ಕೆಲವರನ್ನು ಸೆರೆಯಾಗಿ ತಕ್ಕೊಂಡು ಹೋದರು.
ಮೋವಾಬ್ ನನ್ನನ್ನು ತೊಳೆಯುವ ಪಾತ್ರೆಯು; ಎದೋಮಿನ ಮೇಲೆ ನನ್ನ ಕೆರವನ್ನು ಎಸೆಯುವೆನು; ಫಿಲಿಷ್ಟಿಯವೇ, ನನ್ನ ನಿಮಿತ್ತ ಜಯಧ್ವನಿ ಮಾಡು.
ಆದರೆ ಚೀಯೋನ್ ಪರ್ವತದಲ್ಲಿ ಬಿಡುಗಡೆ ಇರುವದು, ಅದು ಪರಿಶುದ್ಧ ವಾಗಿರುವದು; ಯಾಕೋಬಿನ ಮನೆತನದವರು ತಮ್ಮ ಸ್ವಾಸ್ತ್ಯಗಳನ್ನು ಸ್ವತಂತ್ರಿಸಿಕೊಳ್ಳುವರು.
ನಾನು ಭೂಮಿಯ ಮೇಲೆ ಸಮಾಧಾನವನ್ನು ಕಳುಹಿಸುವದಕ್ಕಾಗಿ ಬಂದೆನೆಂದು ನೆನಸಬೇಡಿರಿ; ಖಡ್ಗ ವನ್ನಲ್ಲದೆ ಸಮಾಧಾನವನ್ನು ಕಳುಹಿಸುವದಕ್ಕೆ ನಾನು ಬಂದಿಲ್ಲ;