ನಿನ್ನ ಕಡೆಗಿರುವ ನಿನ್ನ ಸಹೋದರನ ಕೋಪವು ತೀರಿಹೋಗಿ ನೀನು ಅವನಿಗೆ ಮಾಡಿದ್ದನ್ನು ಅವನು ಮರೆಯುವ ವರೆಗೆ ಅಲ್ಲೇ ಇರು. ತರುವಾಯ ನಾನು ಕಳುಹಿಸಿ ನಿನ್ನನ್ನು ಅಲ್ಲಿಂದ ಕರೆಯಿಸುವೆನು. ಒಂದೇ ದಿನದಲ್ಲಿ ನಾನು ನಿಮ್ಮಿಬ್ಬರನ್ನು ಕಳಕೊಳ್ಳುವದು ಯಾಕೆ ಅಂದಳು.ತರುವಾಯ ರೆಬೆಕ್ಕಳು ಇಸಾಕನಿಗೆ--ಹೇತನ ಕುಮಾರ್ತೆಗಳ ದೆಸೆಯಿಂದ ನನ್ನ ಜೀವ ನನಗೆ ಬೇಸರವಾಗಿದೆ; ಹೇತನ ಕುಮಾರ್ತೆಗಳಂತಿರುವ ಈ ದೇಶದ ಕುಮಾರ್ತೆಗಳಲ್ಲಿ ಒಬ್ಬಳನ್ನು ಯಾಕೋಬನು ಹೆಂಡತಿಯಾಗಿ ತಕ್ಕೊಂಡರೆ ನಾನು ಬದುಕುವದರಿಂದ ನನಗೇನು ಪ್ರಯೋಜನ ಅಂದಳು.
Cross references
ಆಗ ಕಾಯಿನನು ತನ್ನ ಸಹೋದರನಾದ ಹೇಬೆಲನ ಸಂಗಡ ಮಾತನಾಡಿದನು; ತರುವಾಯ ಆದದ್ದೇ ನಂದರೆ, ಅವರು ಹೊಲದಲ್ಲಿದ್ದಾಗ ಕಾಯಿನನು ತನ್ನ ಸಹೋದರನಾದ ಹೇಬೆಲನಿಗೆ ವಿರುದ್ಧವಾಗಿ ಎದ್ದು ಅವನನ್ನು ಕೊಂದುಹಾಕಿದನು.
ಇದಲ್ಲದೆ ನಿಮ್ಮ ಪ್ರಾಣಗಳಿಗೋಸ್ಕರ ನಿಮ್ಮ ರಕ್ತವನ್ನು ನಾನು ಖಂಡಿತವಾಗಿಯೂ ವಿಚಾರಿಸುವೆನು.
ಅವನು --ನಿನ್ನ ಸಹೋದರನು ಮೋಸದಿಂದ ಬಂದು ನಿನ್ನ ಆಶೀರ್ವಾದವನ್ನು ತಕ್ಕೊಂಡಿದ್ದಾನೆ ಅಂದನು.
ಆದರೆ ನಿನ್ನ ಸೇವಕಳಿಗೆ ಇಬ್ಬರು ಕುಮಾರರಿದ್ದರು; ಅವರಿಬ್ಬರೂ ಹೊಲದಲ್ಲಿ ಹೊಡೆದಾಡಿದರು; ಅವ ರನ್ನು ಬಿಡಿಸುವವರು ಯಾರೂ ಇಲ್ಲದ್ದರಿಂದ ಒಬ್ಬನು ಮತ್ತೊಬ್ಬನನ್ನು ಹೊಡೆದು ಕೊಂದುಹಾಕಿದನು.
ಮನುಷ್ಯನ ಹೃದಯದಲ್ಲಿ ಅನೇಕ ಕಲ್ಪನೆಗಳಿವೆ; ಆದರೂ ಕರ್ತನ ಸಂಕಲ್ಪವೇ ಈಡೇರು ವದು.
ಕರ್ತನು ಆಜ್ಞಾಪಿಸದಿರು ವಾಗ ಸಂಭವಿಸಿ ನಡೆಯುವ ಹಾಗೆ ಹೇಳುವವನು ಯಾರು?
ಆ ವಿಷಜಂತು ಅವನ ಕೈಯಿಂದ ಜೋತಾಡುವದನ್ನು ಆ ಅನಾಗರಿಕರು ನೋಡಿ--ಈ ಮನುಷ್ಯನು ಸಮುದ್ರದಿಂದ ತಪ್ಪಿಸಿ ಕೊಂಡರೂ ಪ್ರತೀಕಾರವು ಇವನನ್ನು ಬದುಕಗೊಡಿಸು ವದಿಲ್ಲ. ಇವನು ನಿಸ್ಸಂದೇಹವಾಗಿ ಕೊಲೆ ಪಾತಕನು ಎಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡರು.
ಈ ಹೊತ್ತು ಇಲ್ಲವೆ ನಾಳೆ ನಾವು ಇಂಥ ಪಟ್ಟಣಕ್ಕೆ ಹೋಗಿ ಅಲ್ಲಿ ಒಂದು ವರುಷವಿದ್ದುಕೊಂಡು ಕೊಳ್ಳುವ ಮತ್ತು ಮಾರುವ ವ್ಯಾಪಾರವನ್ನು ಮಾಡಿ ಲಾಭವನ್ನು ಸಂಪಾದಿಸುತ್ತೇವೆ ಅನ್ನುವವರೇ, ಕೇಳಿರಿ.