ಇಸಾಕನು ಯಾಕೋಬನನ್ನು ಕರೆದು ಆಶೀರ್ವದಿಸಿ ಅವನಿಗೆ ಆಜ್ಞಾಪಿಸಿದ್ದೇ ನಂದರೆ--ಕಾನಾನ್ಯರ ಕುಮಾರ್ತೆಗಳಲ್ಲಿ ನೀನು ಹೆಂಡತಿ ಯನ್ನು ತಕ್ಕೊಳ್ಳಬಾರದು.
Cross references
ಆಗ ದೇವಕುಮಾರರು ಮನುಷ್ಯ ಕುಮಾರ್ತೆಯರ ಸೌಂದರ್ಯವನ್ನು ನೋಡಿ ತಾವು ಆರಿಸಿಕೊಂಡವರನ್ನೆಲ್ಲಾ ತಮಗೆ ಹೆಂಡತಿಯ ರನ್ನಾಗಿ ಮಾಡಿಕೊಂಡರು.
ನೀನು ನನ್ನ ಸುತ್ತಲೂ ವಾಸವಾಗಿರುವ ಕಾನಾನ್ಯರ ಕುಮಾರ್ತೆಯರೊಳಗಿಂದ ನನ್ನ ಮಗನಿಗೆ ಹೆಂಡತಿಯನ್ನು ತಕ್ಕೊಳ್ಳುವದಿಲ್ಲವೆಂದೂ
ನನ್ನ ಯಜಮಾನನು--ನಾನು ಯಾರ ದೇಶದಲ್ಲಿ ವಾಸ ಮಾಡುತ್ತೇನೋ ಆ ಕಾನಾನ್ಯರ ಕುಮಾರ್ತೆಗಳಲ್ಲಿ ನನ್ನ ಮಗನಿಗೆ ಹೆಂಡತಿಯನ್ನು ತಕ್ಕೊಳ್ಳಬೇಡ;
ಏಸಾವನು ನಾಲ್ವತ್ತು ವರುಷದವನಾಗಿದ್ದಾಗ ಹಿತ್ತಿಯನಾದ ಬೇರಿಯನ ಮಗಳಾದ ಯೆಹೂದೀತ ಳನ್ನೂ ಹಿತ್ತಿಯನಾದ ಏಲೋನನ ಮಗಳಾದ ಬಾಸೆಮತಳನ್ನೂ ಹೆಂಡತಿಯರನ್ನಾಗಿ ತಕ್ಕೊಂಡನು.ಇವರು ಇಸಾಕನಿಗೂ ರೆಬೆಕ್ಕಳಿಗೂ ಮನೋವ್ಯಥೆ ಯಾಗಿದ್ದರು.
ನಾನು ಪ್ರೀತಿಮಾಡುವ ರುಚಿಯಾದ ಊಟವನ್ನೂ ಸಿದ್ಧ ಮಾಡಿ ತಕ್ಕೊಂಡು ಬಾ. ಆಗ ನಾನು ಸಾಯುವದಕ್ಕಿಂತ ಮುಂಚೆ ನನ್ನ ಪ್ರಾಣವು ನಿನ್ನನ್ನು ಆಶೀರ್ವದಿಸುವ ಹಾಗೆ ಅದನ್ನು ಊಟಮಾಡುವೆನು ಅಂದನು.
ಆಗ ಯಾಕೋಬನು ಹತ್ತಿರ ಬಂದು ಮುದ್ದಿಟ್ಟನು. ಇಸಾಕನು ಅವನ ವಸ್ತ್ರಗಳ ವಾಸನೆಯನ್ನು ಮೂಸಿ ನೋಡಿ ಅವನನ್ನು ಆಶೀರ್ವದಿಸಿ--ಇಗೋ, ನನ್ನ ಮಗನ ವಾಸನೆಯು ಯೆಹೋವನು ಆಶೀರ್ವದಿಸಿದ ಹೊಲದ ವಾಸನೆಯಂತಿದೆ.
ಆಗ ಇಸಾಕನು ಬಹಳವಾಗಿ ನಡುಗುತ್ತಾ ಹೇಳಿದ್ದೇನಂದರೆ--ನೀನು ಬರುವದಕ್ಕಿಂತ ಮೊದಲು ಬೇಟೆಯಾಡಿ ನನಗೆ ತಂದವನು ಯಾರು? ಅವನು ಎಲ್ಲಿದ್ದಾನೆ? ನೀನು ಬರುವದರೊಳಗಾಗಿ ನಾನು ಎಲ್ಲವನ್ನೂ ಊಟಮಾಡಿ ಅವನನ್ನು ಆಶೀರ್ವ ದಿಸಿದೆನು. ಹೌದು, ಅವನು ಆಶೀರ್ವದಿಸಲ್ಪಟ್ಟಿರಲಿ ಅಂದನು.
ತರುವಾಯ ರೆಬೆಕ್ಕಳು ಇಸಾಕನಿಗೆ--ಹೇತನ ಕುಮಾರ್ತೆಗಳ ದೆಸೆಯಿಂದ ನನ್ನ ಜೀವ ನನಗೆ ಬೇಸರವಾಗಿದೆ; ಹೇತನ ಕುಮಾರ್ತೆಗಳಂತಿರುವ ಈ ದೇಶದ ಕುಮಾರ್ತೆಗಳಲ್ಲಿ ಒಬ್ಬಳನ್ನು ಯಾಕೋಬನು ಹೆಂಡತಿಯಾಗಿ ತಕ್ಕೊಂಡರೆ ನಾನು ಬದುಕುವದರಿಂದ ನನಗೇನು ಪ್ರಯೋಜನ ಅಂದಳು.
ಸರ್ವಶಕ್ತನಾದ ದೇವರು ನಿನ್ನನ್ನು ಆಶೀರ್ವದಿಸಿ ನೀನು ಜನಸಮುದಾಯವಾಗುವಂತೆ ನಿನ್ನನ್ನು ಅಭಿವೃದ್ಧಿ ಮಾಡಿ ಹೆಚ್ಚಿಸಲಿ,
ನೀವು ನಮ್ಮೊಂದಿಗೆ ಮದುವೆ ಗಳನ್ನು ಮಾಡಿರಿ; ನಿಮ್ಮ ಕುಮಾರ್ತೆಯರನ್ನು ನಮಗೆ ಕೊಡಿರಿ, ನಮ್ಮ ಕುಮಾರ್ತೆಯರನ್ನು ನೀವು ತಕ್ಕೊಳ್ಳಿರಿ.
ನಮ್ಮ ಕುಮಾರ್ತೆಯರನ್ನು ನಿಮಗೆ ಕೊಟ್ಟು ನಿಮ್ಮ ಕುಮಾರ್ತೆಯರನ್ನು ತಕ್ಕೊಳ್ಳುವೆವು. ಇದಲ್ಲದೆ ನಾವು ನಿಮ್ಮಲ್ಲಿ ವಾಸಮಾಡಿ ಒಂದೇ ಜನಾಂಗವಾಗುವೆವು;
ಅಲ್ಲಿ ಯೆಹೂದನು ಕಾನಾನ್ಯನಾದ ಶೂಗನ ಮಗಳನ್ನು ನೋಡಿ ಅವಳನ್ನು ತಕ್ಕೊಂಡು ಅವಳನ್ನು ಕೂಡಿದನು.
ಆಗ ಅವನು ಯೋಸೇಫನನ್ನು ಆಶೀರ್ವದಿಸಿ--ನನ್ನ ತಂದೆಗಳಾದ ಅಬ್ರಹಾಮನೂ ಇಸಾಕನೂ ಯಾವಾತನ ಮುಂದೆ ನಡಕೊಂಡರೋ ಆ ದೇವರೇ, ನಾನು ಹುಟ್ಟಿದಂದಿನಿಂದ ಇಂದಿನ ವರೆಗೆ ನನ್ನನ್ನು ಪೋಷಣೆ ಮಾಡಿದ ದೇವರು,
ಇವರೆಲ್ಲಾ ಇಸ್ರಾಯೇಲನ ಹನ್ನೆರಡು ಗೋತ್ರ ಗಳು; ಅವರ ತಂದೆ ಅವರಿಗೆ ಹೇಳಿದ್ದು ಇದೇ. ಅವನು ಒಬ್ಬೊಬ್ಬನನ್ನು ಅವನವನ ಆಶೀರ್ವಾದದ ಪ್ರಕಾರ ಆಶೀರ್ವದಿಸಿದನು.
ಆ ದೇಶ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡಬಾರದು. ಅವರು ಅನ್ಯ ದೇವರುಗಳನ್ನು ಆರಾಧಿಸಿ, ಅವುಗಳಿಗೆ ಯಜ್ಞಗಳನ್ನು ಮಾಡುವಾಗ ಒಬ್ಬನು ನಿನ್ನನ್ನು ಕರೆದಾನು; ನೀನು ಅವನ ಬಲಿಯನ್ನು ತಿನ್ನ ಬೇಕಾದೀತು.
ದೇವರ ಮನುಷ್ಯನಾದ ಮೋಶೆ ಸಾಯುವದಕ್ಕಿಂತ ಮುಂಚೆ ಇಸ್ರಾಯೇಲ್ ಮಕ್ಕಳಿಗೆ ಕೊಟ್ಟ ಆಶೀರ್ವಾದವು ಯಾವದಂದರೆ--
ಮನಸ್ಸೆಯ ಅರ್ಧ ಗೋತ್ರಕ್ಕೆ ಮೋಶೆಯು ಬಾಷಾನಿನಲ್ಲಿ ಸ್ವಾಸ್ತ್ಯ ಕೊಟ್ಟಿದ್ದನು. ಆದರೆ ಅವರ ಉಳಿದ ಅರ್ಧ ಗೋತ್ರಕ್ಕೆ ಯೆಹೋ ಶುವನು ಯೊರ್ದನಿನ ಪಶ್ಚಿಮಕ್ಕೆ ಅವರ ಸಹೋದರರ ನಡುವೆ ಸ್ವಾಸ್ತ್ಯವನ್ನು ಕೊಟ್ಟನು. ಇದಲ್ಲದೆ ಯೆಹೋ ಶುವನು ಅವರನ್ನು ಅವರ ಡೇರೆಗಳಿಗೆ ಕಳುಹಿಸಿ ಬಿಡುವಾಗ ಅವರನ್ನು ಆಶೀರ್ವದಿಸಿದನು.
ಈಗ ವಿಚಾರಿಸಿ ನೋಡಿರಿ; ಗಂಡಸು ಪ್ರಸವವೇದನೆ ಪಡುವದುಂಟೇ? ನಾನು ಯಾಕೆ ಪುರುಷರೆಲ್ಲರನು ಪ್ರಸವವೇದನೆ ಪಡುವ ಸ್ತ್ರೀಯ ಹಾಗೆ ನಡುವಿನ ಮೇಲೆ ಕೈ ಇಟ್ಟವರ ಹಾಗೆ ನೋಡುತ್ತೇನೆ; ಯಾಕೆ ಮುಖಗಳೆಲ್ಲಾ ಕಳೆಗುಂದಿದವು?
ನೀವು ಅವಿಶ್ವಾಸಿಗಳೊಂದಿಗೆ ಸೇರಿ ಸಮವಲ್ಲದ ನೊಗವನ್ನು ಹೊರಬೇಡಿರಿ; ಯಾಕಂದರೆ ಅನೀತಿಯ ಕೂಡ ನೀತಿಗೆ ಅನ್ಯೋನ್ಯತೆ ಏನು? ಕತ್ತಲೆಯ ಕೂಡ ಬೆಳಕಿಗೆ ಐಕ್ಯವೇನು?