ನಿನ್ನ ಸಂತತಿಯು ಭೂಮಿಯ ಧೂಳಿನಷ್ಟು ಆಗುವದು; ನೀನು ಪಶ್ಚಿಮ ಪೂರ್ವ ಉತ್ತರ ದಕ್ಷಿಣಗಳಿಗೆ ಹರಡಿಕೊಳ್ಳುತ್ತೀ. ನಿನ್ನಿಂದಲೂ ನಿನ್ನ ಸಂತತಿಯಿಂದಲೂ ಭೂಮಿಯ ಎಲ್ಲಾ ಕುಲದವರು ಆಶೀರ್ವದಿಸಲ್ಪ ಡುವರು.
Cross references
ನಿನ್ನನ್ನು ಆಶೀರ್ವದಿಸುವವರನ್ನು ಆಶೀರ್ವದಿಸು ವೆನು. ನಿನ್ನನ್ನು ಶಪಿಸುವವರನ್ನು ಶಪಿಸುವೆನು; ನಿನ್ನಲ್ಲಿ ಭೂಮಿಯ ಎಲ್ಲಾ ಜನಾಂಗಗಳು ಆಶೀರ್ವದಿಸಲ್ಪಡು ವವು ಎಂದು ಹೇಳಿದನು.
ಲೋಟನು ಅಬ್ರಾಮನಿಂದ ಅಗಲಿದ ಮೇಲೆ ಕರ್ತನು ಅವನಿಗೆ--ನಿನ್ನ ಕಣ್ಣುಗಳನ್ನು ಎತ್ತಿ ನೀನಿರುವ ಸ್ಥಳದಿಂದ ಉತ್ತರಕ್ಕೂ ದಕ್ಷಿಣಕ್ಕೂ ಪೂರ್ವಕ್ಕೂ ಪಶ್ಚಿಮಕ್ಕೂ ನೋಡು.
ನಿನ್ನ ಸಂತತಿಯನ್ನು ಭೂಮಿಯ ಧೂಳಿನಷ್ಟು ಮಾಡುವೆನು. ಭೂಮಿಯ ಧೂಳನ್ನು ಒಬ್ಬನು ಲೆಕ್ಕಿಸಬಹುದಾದರೆ ನಿನ್ನ ಸಂತಾನವು ಸಹ ಲೆಕ್ಕಿಸಲ್ಪಡುವದು.
ಅಬ್ರಹಾ ಮನು ನಿಶ್ಚಯವಾಗಿ ಬಲವಾದ ದೊಡ್ಡ ಜನಾಂಗ ವಾಗುವನು, ಭೂಲೋಕದ ಜನಾಂಗಗಳೆಲ್ಲಾ ಅವನಲ್ಲಿ ಆಶೀರ್ವದಿಸಲ್ಪಡುವವು.
ನೀನು ನನ್ನ ಸ್ವರಕ್ಕೆ ವಿಧೇಯ ನಾದದ್ದರಿಂದ ಭೂಮಿಯ ಜನಾಂಗಗಳೆಲ್ಲಾ ನಿನ್ನ ಸಂತಾನದಲ್ಲಿ ಆಶೀರ್ವದಿಸಲ್ಪಡುವವು ಎಂಬದೇ.
ನಿನ್ನ ಸಂತತಿಯನ್ನು ಆಕಾಶದ ನಕ್ಷತ್ರಗಳಂತೆ ಹೆಚ್ಚಿಸುವೆನು. ನಿನ್ನ ಸಂತತಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ಸಂತತಿಯಲ್ಲಿ ಭೂಮಿಯ ಜನಾಂಗ ಗಳೆಲ್ಲಾ ಆಶೀರ್ವದಿಸಲ್ಪಡುವವು.
ನಾನು --ನಿನಗೆ ಖಂಡಿತ ವಾಗಿ ಒಳ್ಳೆಯದನ್ನು ಮಾಡುವೆನು, ನಿನ್ನ ಸಂತತಿಯನ್ನು ಎಣಿಸುವದಕ್ಕಾಗದ ಸಮುದ್ರದ ಮರಳಿನ ಹಾಗೆ ಮಾಡುವೆನು ಎಂದು ಹೇಳಿದಿಯಲ್ಲಾ ಎಂದು ಬೇಡಿಕೊಂಡನು.
ದೇವರು ಅವನಿಗೆ ಹೇಳಿದ್ದೇನಂದರೆ--ಸರ್ವಶಕ್ತನಾದ ದೇವರು ನಾನೇ, ನೀನು ಅಭಿವೃದ್ಧಿಯಾಗಿ ಹೆಚ್ಚಾಗು; ಜನಾಂಗವೂ ಜನಾಂಗಗಳ ಗುಂಪೂ ನಿನ್ನಿಂದ ಉಂಟಾಗುವವು; ಅರಸರು ನಿನ್ನಿಂದ ಹುಟ್ಟುವರು.
ಆಕಾಶದ ನಕ್ಷತ್ರಗಳ ಹಾಗೆ ನಿಮ್ಮ ಸಂತತಿಯನ್ನು ಹೆಚ್ಚಿಸಿ, ನಾನು ಹೇಳಿದ ಈ ದೇಶವನ್ನು ನಿಮ್ಮ ಸಂತತಿಯು ನಿತ್ಯವಾಗಿ ಸ್ವತಂತ್ರಿಸಿಕೊಳ್ಳುವರು ಎಂದು ಯಾರಿಗೆ ನಿನ್ನ ಆಣೆಯಿಟ್ಟು ಪ್ರಮಾಣಮಾಡಿ ದಿಯೋ ಆ ನಿನ್ನ ಸೇವಕರಾದ ಅಬ್ರಹಾಮನನ್ನೂ ಇಸಾಕನನ್ನೂ ಇಸ್ರಾಯೇಲನನ್ನೂ ಜ್ಞಾಪಕ ಮಾಡಿಕೋ ಅಂದನು.
ಯಾಕೋಬನ ಧೂಳನ್ನು ಎಣಿಸುವದಕ್ಕೂ ಇಸ್ರಾಯೇಲಿನ ನಾಲ್ಕನೇ ಒಂದು ಪಾಲನ್ನಾದರೂ ಲೆಕ್ಕ ಮಾಡುವದಕ್ಕೂ ಯಾರಿಂದಾದೀತು? ನೀತಿವಂತನು ಸಾಯುವಂತೆ ನಾನೂ ಸಾಯಬೇಕು, ನನ್ನ ಕಡೇ ಅಂತ್ಯವು ಅವನಂತೆಯೇ ಆಗಲಿ ಎಂದು ಹೇಳಿದನು.
ನಿನ್ನ ದೇವರಾದ ಕರ್ತನು ನಿನಗೆ ವಾಗ್ದಾನ ಮಾಡಿದ ಹಾಗೆ ನಿನ್ನ ಮೇರೆಯನ್ನು ವಿಸ್ತಾರಮಾಡು ವಾಗ ನೀನು--ನನ್ನ ಪ್ರಾಣವು ಮಾಂಸವನ್ನು ತಿನ್ನ ಬೇಕೆಂದು ನಾನು ಆಶೆಪಡುವದರಿಂದ ನಾನು ಮಾಂಸ ವನ್ನು ತಿನ್ನುವೆನು ಎಂದು ಹೇಳಿ ನಿನಗೆ ಮನಸ್ಸಿದ್ದಷ್ಟು ಮಾಂಸವನ್ನು ತಿನ್ನಬಹುದು;
ಆತನ ನಾಮವು ಎಂದೆಂದಿಗೂ ಇರುವದು; ಸೂರ್ಯನು ಇರುವವರೆಗೂ ಆತನ ಹೆಸರು ಇರು ವದು. ಮನುಷ್ಯರು ಆತನಲ್ಲಿ ಆಶೀರ್ವಾದ ಹೊಂದು ವರು. ಎಲ್ಲಾ ಜನಾಂಗಗಳು ಆತನನ್ನು ಭಾಗ್ಯವಂತ ನೆಂದು ಕರೆಯುವರು.
ನಾನು ನಿಮಗೆ ಹೇಳುವದೇನಂದರೆ--ಬಹಳ ಜನರು ಪೂರ್ವದಿಂದಲೂ ಪಶ್ಚಿಮದಿಂದಲೂ ಬಂದು ಪರ ಲೋಕರಾಜ್ಯದಲ್ಲಿ ಅಬ್ರಹಾಮ್ ಇಸಾಕ್ ಯಾಕೋಬ್ ಅವರೊಂದಿಗೆ ಕೂತುಕೊಳ್ಳುವರು.
ಇದಲ್ಲದೆ ಅಬ್ರಹಾಮನಿಗೆ--ನಿನ್ನ ಸಂತ ತಿಯ ಮೂಲಕ ಭೂಲೋಕದ ಎಲ್ಲಾ ಕುಲದವರು ಆಶೀರ್ವದಿಸಲ್ಪಡುವರು ಎಂದು ದೇವರು ನಮ್ಮ ಪಿತೃಗಳೊಂದಿಗೆ ಮಾಡಿದ ಒಡಂಬಡಿಕೆಯ ಮಕ್ಕಳೂ ಪ್ರವಾದಿಗಳ ಮಕ್ಕಳೂ ನೀವಾಗಿದ್ದೀರಿ.ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ದ್ರೋಹಗಳಿಂದ ತಿರು ಗಿಸಿ ಆಶೀರ್ವದಿಸುವದಕ್ಕಾಗಿ ದೇವರು ತನ್ನ ಮಗನಾದ ಯೇಸುವನ್ನು ಎಬ್ಬಿಸಿ ಮೊದಲು ಆತನನ್ನು ನಿಮ್ಮ ಬಳಿಗೆ ಕಳುಹಿಸಿದನು ಎಂದು ಹೇಳಿದನು.
ದೇವರು ಅನ್ಯಜನರನ್ನು ನಂಬಿಕೆಯ ಮೂಲಕ ವಾಗಿಯೇ ನೀತಿವಂತರೆಂದು ನಿರ್ಣಯಿಸುವನೆಂಬ ದಾಗಿ ಬರಹವು ಮೊದಲೇ ಕಂಡು ಅಬ್ರಹಾಮ ನಿಗೆ--ನಿನ್ನ ಮೂಲಕ ಎಲ್ಲಾ ಜನಾಂಗಗಳವರಿಗೆ ಆಶೀರ್ವಾದವುಂಟಾಗುವದೆಂಬ ಸುವಾರ್ತೆಯನ್ನು ಮುಂಚಿತವಾಗಿಯೇ ಸಾರಿತು ಎಂಬದೇ.
ದೇವರು ಅಬ್ರಹಾಮನಿಗೂ ಅವನ ಸಂತತಿಗೂ ವಾಗ್ದಾನಗಳನ್ನು ಮಾಡಿದನು; ಆತನು--ನಿನ್ನ ಸಂತತಿಗಳಿಗೆ ಎಂದು ಹೇಳಿ ಅನೇಕರನ್ನು ಸೂಚಿಸದೆ--ನಿನ್ನ ಸಂತತಿಗೆ ಎಂದು ಹೇಳಿ ಒಬ್ಬನನ್ನೇ ಸೂಚಿಸುತ್ತಾನೆ. ಆ ಒಬ್ಬಾತನು ಕ್ರಿಸ್ತನೇ.
ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರ. ಆತನು ಪರಲೋಕದಲ್ಲಿನ ಸಕಲ ಆತ್ಮೀಯ ಆಶೀರ್ವಾದ ಗಳನ್ನು ನಮಗೆ ಕ್ರಿಸ್ತನಲ್ಲಿ ಅನುಗ್ರಹಿಸಿದ್ದಾನೆ.
ಮುದ್ರೆ ಹೊಂದಿದವರ ಸಂಖ್ಯೆಯನ್ನು ನಾನು ಕೇಳಿದೆನು; ಇಸ್ರಾಯೇಲ್ಯನ ಮಕ್ಕಳ ಗೋತ್ರದವರಲ್ಲಿ ಮುದ್ರೆಯನ್ನು ಹೊಂದಿದವರು ಒಂದು ಲಕ್ಷ ನಾಲ್ವತ್ತು ನಾಲ್ಕು ಸಾವಿರ.
ಇದಾದ ಮೇಲೆ ಇಗೋ, ನಾನು ನೋಡಲಾಗಿ ಸಮಸ್ತ ಜನಾಂಗ ಕುಲ ಪ್ರಜೆ ಭಾಷೆಗಳೊಳಗಿಂದ ಯಾರೂ ಎಣಿಸಲಾಗದಂತ ಮಹಾ ಸಮೂಹವು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡವರಾಗಿ ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡು ಸಿಂಹಾಸನದ ಮುಂದೆಯೂ ಕುರಿಮರಿಯಾದಾತನ ಮುಂದೆಯೂ