ಇದಲ್ಲದೆ ಸ್ತಂಭವಾಗಿ ನಾನು ನಿಲ್ಲಿಸಿದ ಈ ಕಲ್ಲು ದೇವರ ಮನೆಯಾಗಿರುವದು. ಆಗ ನೀನು ನನಗೆ ಕೊಡುವದ ರಲ್ಲೆಲ್ಲಾ ಹತ್ತರಲ್ಲಿ ಒಂದು ಭಾಗವನ್ನು ನಿನಗೆ ನಾನು ಖಂಡಿತವಾಗಿ ಕೊಡುವೆನು ಅಂದನು.
Cross references
ಅಲ್ಲಿಂದ ಅವನು ಬೇತೇಲಿನ ಪೂರ್ವದ ಬೆಟ್ಟಕ್ಕೆ ಹೋಗಿ ಪಶ್ಚಿಮದಲ್ಲಿ ಬೇತೇಲು ಪೂರ್ವದಲ್ಲಿ ಆಯಿಯು ಇರುವ ಹಾಗೆ ತನ್ನ ಗುಡಾರವನ್ನು ಹಾಕಿ ಅಲ್ಲಿ ಕರ್ತನಿಗೆ ಬಲಿಪೀಠವನ್ನು ಕಟ್ಟಿ ಕರ್ತನ ಹೆಸರನ್ನು ಹೇಳಿಕೊಂಡನು.
ನಿನ್ನ ಶತ್ರುಗಳನ್ನು ನಿನ್ನ ಕೈಗೆ ಒಪ್ಪಿಸಿದ ಮಹೋನ್ನತ ನಾದ ದೇವರು ಸ್ತುತಿಹೊಂದಲಿ ಅಂದನು. ಅಬ್ರಾ ಮನು ಅವನಿಗೆ ಎಲ್ಲಾದರಲ್ಲಿ ದಶಮಭಾಗವನ್ನು ಕೊಟ್ಟನು.
ಆಗ ಅಬ್ರಹಾಮನು ಬೇರ್ಷೆಬದಲ್ಲಿ ತೋಪನ್ನು ನೆಟ್ಟು (ಪಿಚುಲ ವೃಕ್ಷ) ನಿತ್ಯದೇವರಾದ ಕರ್ತನ ಹೆಸರನ್ನು ಹೇಳಿಕೊಂಡು ಆರಾಧಿಸಿದನು.ಅಬ್ರಹಾಮನು ಫಿಲಿಷ್ಟಿಯರ ದೇಶದಲ್ಲಿ ಬಹು ದಿವಸ ಪ್ರವಾಸಿಯಾಗಿದ್ದನು.
ಅವನು ಭಯಪಟ್ಟು--ಈ ಸ್ಥಳವು ಎಷ್ಟೋ ಭಯಂಕರ ವಾದದ್ದು; ಇದು ದೇವರ ಮನೆಯೇ ಹೊರತು ಬೇರೆಯಲ್ಲ; ಇದೇ ಪರಲೋಕದ ಬಾಗಿಲು ಅಂದನು.
ಅಲ್ಲಿ ಯಜ್ಞವೇದಿಯನ್ನು ಕಟ್ಟಿಸಿ ಅದಕ್ಕೆ ಏಲೆಲೋಹೇ ಇಸ್ರಾಯೇಲ್ ಎಂದು ಹೆಸರಿಟ್ಟನು.
ದೇವರು ಯಾಕೋಬನಿಗೆ--ಎದ್ದು ಬೇತೇಲಿಗೆ ಹೋಗಿ ಅಲ್ಲಿ ವಾಸಮಾಡು; ನೀನು ನಿನ್ನ ಸಹೋದರನಾದ ಏಸಾವನೆದುರಿನಿಂದ ಓಡಿ ಹೋಗುತ್ತಿದ್ದಾಗ ನಿನಗೆ ಕಾಣಿಸಿಕೊಂಡ ದೇವರಿಗೆ ಅಲ್ಲಿ ಯಜ್ಞವೇದಿಯನ್ನು ಕಟ್ಟು ಅಂದನು.
ಅಲ್ಲಿ ಅವನು ಯಜ್ಞ ವೇದಿಯನ್ನು ಕಟ್ಟಿ ತಾನು ತನ್ನ ಸಹೋದರನ ಬಳಿ ಯಿಂದ ಓಡಿಹೋದಾಗ ಅಲ್ಲಿ ದೇವರು ತನಗೆ ಪ್ರತ್ಯಕ್ಷನಾದದ್ದರಿಂದ ಆ ಸ್ಥಳಕ್ಕೆ ಏಲ್ ಬೇತೇಲ್ ಎಂದು ಹೆಸರಿಟ್ಟನು.
ಯಾಕೋಬನು ತನ್ನ ಸಂಗಡ ಮಾತನಾಡಿದ ಸ್ಥಳದಲ್ಲಿ ಸ್ತಂಭವನ್ನು ಅಂದರೆ ಕಲ್ಲಿನ ಸ್ತಂಭವನ್ನು ನಿಲ್ಲಿಸಿ ಪಾನಾರ್ಪಣೆಮಾಡಿ ಅದರ ಮೇಲೆ ಎಣ್ಣೆಯನ್ನು ಹೊಯ್ದನು.
ಬೆಳೆ ಬಂದಾಗ ಐದನೆಯ ಪಾಲನ್ನು ಫರೋಹನಿಗೆ ಕೊಡಬೇಕು. ನಾಲ್ಕು ಪಾಲು ಹೊಲದ ಬೀಜಕ್ಕಾ ಗಿಯೂ ನಿಮ್ಮ ಆಹಾರಕ್ಕಾಗಿಯೂ ನಿಮ್ಮ ಮಕ್ಕಳ ಆಹಾರಕ್ಕಾಗಿಯೂ ನಿಮಗೆ ಇರಲಿ ಅಂದನು.
ಹೀಗೆ ಯೋಸೇಫನು ಫರೋಹನಿಗೆ ಐದನೆಯ ಪಾಲು ಆಗಬೇಕೆಂಬದನ್ನು ಐಗುಪ್ತದ ಭೂಮಿಗೆ ಇಂದಿನ ವರೆಗೂ ನೇಮಕಮಾಡಿ ಸ್ಥಾಪಿಸಿ ದನು. ವೈದಿಕರ ಭೂಮಿಯು ಮಾತ್ರ ಫರೋಹ ನದಾಗಲಿಲ್ಲ.
ಭೂಮಿಯ ಬೀಜದಲ್ಲಾಗಲಿ ಮರದ ಫಲದ ಲ್ಲಾಗಲಿ ಹತ್ತನೇ ಪಾಲೆಲ್ಲಾ ಕರ್ತನದೇ. ಅದು ಕರ್ತನಿಗೆ ಪರಿಶುದ್ಧವಾದದ್ದು.
ಇದಲ್ಲದೆ ದನಕುರಿಗಳಲ್ಲಿಯೂ ಕೋಲಿನ ಕೆಳಗೆ ದಾಟುವ ಎಲ್ಲಾದರಲ್ಲಿಯೂ ಹತ್ತರಲ್ಲಿ ಒಂದು ಭಾಗ ಕರ್ತನಿಗೆ ಪರಿಶುದ್ಧವಾಗಿರುವದು.
ನೀನು ಬಿತ್ತುವದರಿಂದ ಹೊಲದಲ್ಲಿ ವರುಷ ವರುಷಕ್ಕೆ ಬರುವ ಹುಟ್ಟುವಳಿಯಿಂದ ದಶಮಾಂಶವನ್ನು ತಪ್ಪದೆ ಕೊಡಬೇಕು.
ನನ್ನ ಆಲಯದಲ್ಲಿ ಆಹಾರವಿರುವ ಹಾಗೆ ಹತ್ತನೇ ಪಾಲು ಗಳನ್ನೆಲ್ಲಾ ಬೊಕ್ಕಸದ ಮನೆಯಲ್ಲಿ ತನ್ನಿರಿ; ಇದರಿಂದ ನನ್ನನ್ನು ಪರೀಕ್ಷಿಸಿರಿ; ನಾನು ನಿಮಗೆ ಆಕಾಶದ ಕಿಟಕಿ ಗಳನ್ನು ತೆರೆದು ಸಾಕಾಗುವಷ್ಟಕ್ಕಿಂತ ಹೆಚ್ಚಾಗುವಷ್ಟು ಆಶೀರ್ವಾದ ನಿಮಗೆ ಸುರಿಸದಿರುವೆನೇ? ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.