ದೇವರು ಅಬ್ರಹಾಮನಿಗೆ ಕೊಟ್ಟಿರುವ ಮತ್ತು ನೀನು ಈಗ ಪ್ರವಾಸಿಯಾಗಿರುವ ದೇಶವನ್ನು ಬಾಧ್ಯವಾಗಿ ಹೊಂದುವಂತೆ ದೇವರು ನಿನ್ನನ್ನು ಆಶೀರ್ವದಿಸಿ ನಿನಗೂ ನಿನ್ನ ಸಂತತಿಗೂ ಕೊಡಲಿ ಅಂದನು.
Cross references
ಆಗ ಕರ್ತನು ಅಬ್ರಾಮನಿಗೆ--ನೀನು ನಿನ್ನ ದೇಶದೊಳಗಿಂದಲೂ ಬಂಧು ಗಳಿಂದಲೂ ನಿನ್ನ ತಂದೆಯ ಮನೆಯಿಂದಲೂ ಹೊರ ಬಂದು ನಾನು ನಿನಗೆ ತೋರಿಸುವ ದೇಶಕ್ಕೆ ಹೋಗು.
ನಾನು ನಿನ್ನನ್ನು ದೊಡ್ಡ ಜನಾಂಗವಾಗ ಮಾಡಿ ನಿನ್ನನ್ನು ಆಶೀರ್ವದಿಸಿ ನಿನ್ನ ಹೆಸರನ್ನು ದೊಡ್ಡ ದಾಗಿ ಮಾಡುವೆನು, ನೀನು ಆಶೀರ್ವಾದವಾಗಿರುವಿ.
ಕರ್ತನು ಅಬ್ರಾಮನಿಗೆ ಕಾಣಿಸಿಕೊಂಡು--ನಿನ್ನ ಸಂತತಿಗೆ ನಾನು ಈ ದೇಶವನ್ನು ಕೊಡುವೆನು ಅಂದನು. ಆಗ ಅವನು ಅಲ್ಲಿ ತನಗೆ ಕಾಣಿಸಿಕೊಂಡ ಕರ್ತನಿಗೆ ಬಲಿಪೀಠವನ್ನು ಕಟ್ಟಿದನು.
ಲೋಟನು ಅಬ್ರಾಮನಿಂದ ಅಗಲಿದ ಮೇಲೆ ಕರ್ತನು ಅವನಿಗೆ--ನಿನ್ನ ಕಣ್ಣುಗಳನ್ನು ಎತ್ತಿ ನೀನಿರುವ ಸ್ಥಳದಿಂದ ಉತ್ತರಕ್ಕೂ ದಕ್ಷಿಣಕ್ಕೂ ಪೂರ್ವಕ್ಕೂ ಪಶ್ಚಿಮಕ್ಕೂ ನೋಡು.
ಕರ್ತನು ಅವನನ್ನು ಹೊರಗೆ ಕರಕೊಂಡು ಬಂದು--ಈಗ ನೀನು ಆಕಾಶವನ್ನು ದೃಷ್ಟಿಸಿ ನಕ್ಷತ್ರ ಗಳನ್ನು ಲೆಕ್ಕಿಸಶಕ್ತನಾದರೆ ಅವುಗಳನ್ನು ಲೆಕ್ಕಿಸು ಅಂದನು. ಆತನು ಅವನಿಗೆ--ಅದರಂತೆಯೇ ನಿನ್ನ ಸಂತತಿಯು ಆಗುವದು ಎಂದು ಅವನಿಗೆ ಹೇಳಿದನು.
ಅದೇ ದಿನದಲ್ಲಿ ಕರ್ತನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು--ಐಗುಪ್ತದ ನದಿಯಿಂದ ಮಹಾನದಿಯಾದ ಯೂಫ್ರೇಟೀಸ್ ನದಿಯ ವರೆಗೆ ವಾಸಿಸುವ
ನಾನು ನಿನ್ನನ್ನು ಅತ್ಯಧಿಕವಾಗಿ ವೃದ್ಧಿ ಯಾಗಮಾಡಿ ನಿನ್ನಿಂದ ಜನಾಂಗಗಳಾಗ ಮಾಡುವೆನು; ನಿನ್ನಿಂದ ಅರಸರು ಹುಟ್ಟುವರು.
ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ಶಾಶ್ವತವಾದ ಸ್ವಾಸ್ಥ್ಯವಾಗಿ ಕೊಡುತ್ತೇನೆ. ನಾನು ಅವರ ದೇವರಾಗಿರುವೆನು ಅಂದನು.
ನಿನ್ನನ್ನು ಆಶೀರ್ವದಿ ಸಿಯೇ ಆಶೀರ್ವದಿಸುವೆನು; ನಿನ್ನ ಸಂತಾನವನ್ನು ಆಕಾಶದ ನಕ್ಷತ್ರಗಳ ಹಾಗೆಯೂ ಸಮುದ್ರದ ತೀರ ದಲ್ಲಿರುವ ಮರಳಿನ ಹಾಗೆಯೂ ಹೆಚ್ಚಿಸೇ ಹೆಚ್ಚಿಸುವೆನು; ನಿನ್ನ ಸಂತಾನವು ತನ್ನ ಶತ್ರುಗಳ ದ್ವಾರವನ್ನು ವಶ ಮಾಡಿಕೊಳ್ಳುವದು.
ಓ ಕರ್ತನೇ, ನನ್ನ ಪ್ರಾರ್ಥನೆಯನ್ನು ಕೇಳು; ನನ್ನ ಮೊರೆಗೆ ಕಿವಿಗೊಡು; ನನ್ನ ಕಣ್ಣೀರಿಗೆ ಮೌನ ವಾಗಿರಬೇಡ. ನಾನು ನಿನ್ನ ಸಂಗಡ ಪರದೇಶಸ್ಥನು; ನನ್ನ ತಂದೆಗಳೆಲ್ಲರ ಹಾಗೆ ಪ್ರವಾಸಿಯಾಗಿದ್ದೇನೆ.ಕರ್ತನೇ ನನ್ನನ್ನು ಉಳಿಸು; ಆಗ ನಾನು ಇಲ್ಲಿಂದ ಹೋಗಿಬಿಟ್ಟು ಇಲ್ಲದೆ ಹೋಗುವದಕ್ಕಿಂತ ಮುಂಚೆ ಬಲವನ್ನು ತಿರಿಗಿ ಪಡೆಯುವೆನು.
ಆತನ ನಾಮವು ಎಂದೆಂದಿಗೂ ಇರುವದು; ಸೂರ್ಯನು ಇರುವವರೆಗೂ ಆತನ ಹೆಸರು ಇರು ವದು. ಮನುಷ್ಯರು ಆತನಲ್ಲಿ ಆಶೀರ್ವಾದ ಹೊಂದು ವರು. ಎಲ್ಲಾ ಜನಾಂಗಗಳು ಆತನನ್ನು ಭಾಗ್ಯವಂತ ನೆಂದು ಕರೆಯುವರು.
ಆತನ ಸೇವಕನಾದ ಅಬ್ರಹಾಮನ ಸಂತತಿಯೇ, ಆತನು ಆದುಕೊಂಡ ಯಾಕೋಬನ ಮಕ್ಕಳೇ,
ಹೇಗಂ ದರೆ--ಯಾರ ಅಪರಾಧಗಳು ಕ್ಷಮಿಸಲ್ಪಟ್ಟಿವೆಯೋ ಯಾರ ಪಾಪಗಳು ಮುಚ್ಚಿವೆಯೋ ಅವರೇ ಧನ್ಯರು;
ದೇವರು ಅನ್ಯಜನರನ್ನು ನಂಬಿಕೆಯ ಮೂಲಕ ವಾಗಿಯೇ ನೀತಿವಂತರೆಂದು ನಿರ್ಣಯಿಸುವನೆಂಬ ದಾಗಿ ಬರಹವು ಮೊದಲೇ ಕಂಡು ಅಬ್ರಹಾಮ ನಿಗೆ--ನಿನ್ನ ಮೂಲಕ ಎಲ್ಲಾ ಜನಾಂಗಗಳವರಿಗೆ ಆಶೀರ್ವಾದವುಂಟಾಗುವದೆಂಬ ಸುವಾರ್ತೆಯನ್ನು ಮುಂಚಿತವಾಗಿಯೇ ಸಾರಿತು ಎಂಬದೇ.
ಅಬ್ರಹಾಮನಿಗೆ ಉಂಟಾದ ಆಶೀರ್ವಾದವು ಯೇಸು ಕ್ರಿಸ್ತನ ಮೂಲಕ ಆನ್ಯಜನರಿಗೆ ಉಂಟಾಗು ವಂತೆ ದೇವರು ವಾಗ್ದಾನ ಮಾಡಿದ ಆತ್ಮನು ನಮಗೆ ನಂಬಿಕೆಯ ಮೂಲಕ ದೊರಕುವಂತಾಯಿತು.
ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರ. ಆತನು ಪರಲೋಕದಲ್ಲಿನ ಸಕಲ ಆತ್ಮೀಯ ಆಶೀರ್ವಾದ ಗಳನ್ನು ನಮಗೆ ಕ್ರಿಸ್ತನಲ್ಲಿ ಅನುಗ್ರಹಿಸಿದ್ದಾನೆ.
ನಂಬಿಕೆಯಿಂದಲೇ ಅವನು ವಾಗ್ದತ್ತ ದೇಶದಲ್ಲಿ ಅನ್ಯದೇಶದಲ್ಲಿ ಇದ್ದವನಂತೆ ಗುಡಾರಗಳಲ್ಲಿ ಇದ್ದುಕೊಂಡು ಪ್ರವಾಸಿಯಾಗಿದ್ದನು. ಅದೇ ವಾಗ್ದಾನಕ್ಕೆ ಬಾಧ್ಯರಾಗಿದ್ದ ಇಸಾಕ ಯಾಕೋಬರೊಂದಿಗೆ ಗುಡಾರಗಳಲ್ಲಿ ವಾಸಿಸಿದನು.