ತರುವಾಯ ಯಾಕೋಬನು ಪ್ರಯಾಣ ಮಾಡಿ ಪೂರ್ವದಿಕ್ಕಿನ ಜನರ ದೇಶಕ್ಕೆ ಬಂದನು.
Cross references
ಇವುಗಳಾದ ಮೇಲೆ ಅಬ್ರಹಾಮನಿಗೆ--ಇಗೋ, ಮಿಲ್ಕಳು ಸಹ ನಿನ್ನ ಸಹೋದರನಾದ ನಾಹೋರನಿಗೆ ಮಕ್ಕಳನ್ನು ಹೆತ್ತಿದ್ದಾಳೆ ಎಂದು ತಿಳಿಸಲ್ಪಟ್ಟಿತು.
ಆಗ ಆ ಸೇವಕನು ತನ್ನ ಯಜಮಾನನ ಒಂಟೆಗಳಲ್ಲಿ ಹತ್ತು ಒಂಟೆಗಳನ್ನು ತೆಗೆದುಕೊಂಡು ಹೋದನು. ಅವನ ಯಜಮಾನನ ಎಲ್ಲಾ ಆಸ್ತಿಯು ಅವನ ಕೈಯಲ್ಲಿ ಇತ್ತು. ಅವನು ಎದ್ದು ನಾಹೋರನ ಪಟ್ಟಣವಾದ ಮೆಸೊಪೊತಾಮ್ಯಕ್ಕೆ ಹೋದನು.
ಅಬ್ರಹಾಮನಿಗೆ ಇದ್ದ ಉಪಪತ್ನಿಗಳ ಮಕ್ಕಳಿಗೆ ಅಬ್ರಹಾಮನು ದಾನಗಳನ್ನು ಕೊಟ್ಟು ತಾನು ಜೀವಿಸುತ್ತಿರುವಾಗಲೇ ಅವರನ್ನು ತನ್ನ ಮಗನಾದ ಇಸಾಕನ ಬಳಿಯಿಂದ ಪೂರ್ವದಿಕ್ಕಿನ ಕಡೆಗೆ ಮೂಡಣ ದೇಶಕ್ಕೆ ಕಳುಹಿಸಿದನು.
ಇಸಾಕನು ನಾಲ್ವತ್ತು ವರುಷದವನಾಗಿದ್ದಾಗ ಪದ್ದನ್ ಅರಾಮಿನಿಂದ ಅರಾಮ್ಯನಾದ ಬೆತೂವೇಲನ ಮಗಳೂ ಲಾಬಾನನ ಸಹೋದರಿಯೂ ಆದ ರೆಬೆಕ್ಕಳನ್ನು ಹೆಂಡತಿಯಾಗಿ ತಕ್ಕೊಂಡನು.
ಇಸಾಕನು ಯಾಕೋಬನನ್ನು ಕಳುಹಿಸಿದಾಗ ಅವನು ಪದ್ದನ್ ಅರಾಮಿನಲ್ಲಿದ್ದ ಯಾಕೋಬನ ಮತ್ತು ಏಸಾವನ ತಾಯಿಯಾದ ರೆಬೆಕ್ಕಳ ಸಹೋದರನಾದ ಅರಾಮಿನವನಾದ ಬೆತೊ ವೇಲನ ಮಗನಾಗಿದ್ದ ಲಾಬಾನನ ಬಳಿಗೆ ಹೋದನು.
ದೇವರು ಯಾಕೋಬನಿಗೆ--ಎದ್ದು ಬೇತೇಲಿಗೆ ಹೋಗಿ ಅಲ್ಲಿ ವಾಸಮಾಡು; ನೀನು ನಿನ್ನ ಸಹೋದರನಾದ ಏಸಾವನೆದುರಿನಿಂದ ಓಡಿ ಹೋಗುತ್ತಿದ್ದಾಗ ನಿನಗೆ ಕಾಣಿಸಿಕೊಂಡ ದೇವರಿಗೆ ಅಲ್ಲಿ ಯಜ್ಞವೇದಿಯನ್ನು ಕಟ್ಟು ಅಂದನು.
ಅಲ್ಲಿ ಅವನು ಯಜ್ಞ ವೇದಿಯನ್ನು ಕಟ್ಟಿ ತಾನು ತನ್ನ ಸಹೋದರನ ಬಳಿ ಯಿಂದ ಓಡಿಹೋದಾಗ ಅಲ್ಲಿ ದೇವರು ತನಗೆ ಪ್ರತ್ಯಕ್ಷನಾದದ್ದರಿಂದ ಆ ಸ್ಥಳಕ್ಕೆ ಏಲ್ ಬೇತೇಲ್ ಎಂದು ಹೆಸರಿಟ್ಟನು.
ಆಗ ಅವನು ಸಾಮ್ಯರೂಪವಾಗಿ--ಮೋವಾಬಿನ ಅರಸನಾದ ಬಾಲಾಕನು ನನ್ನನ್ನು ಅರಾಮಿನಿಂದಲೂ ಪೂರ್ವ ಪರ್ವತಗಳಿಂದಲೂ ಕರೆಯಿಸಿ--ನನಗೋ ಸ್ಕರ ಯಾಕೋಬನನ್ನು ಶಪಿಸ ಬಾ; ಇಸ್ರಾಯೇಲನ್ನು ಎದುರಿಸುವದಕ್ಕೆ ಬಾ ಎಂದು ನನಗೆ ಹೇಳಿದ್ದಾನೆ.
ಇಸ್ರಾಯೇಲ್ಯರು ಬೀಜ ಬಿತ್ತಿದ ತರುವಾಯ ಮಿದ್ಯಾನ್ಯರೂ ಅಮಾಲೇ ಕ್ಯರೂ ಮೂಡಣದ ಮಕ್ಕಳೂ ಅವರಿಗೆ ವಿರೋಧವಾಗಿ ಬಂದು ದಂಡಿಳಿದು
ಮಿದ್ಯಾನ್ಯರೂ ಅಮಾಲೇಕ್ಯರೂ ಮೂಡಣದ ಮಕ್ಕಳೆಲ್ಲರೂ ಏಕವಾಗಿ ಕೂಡಿ ದಾಟಿಬಂದು ಇಜ್ರೇ ಲಿನ ತಗ್ಗಿನಲ್ಲಿ ದಂಡಿಳಿದರು.
ಮಿದ್ಯಾನ್ಯರೂ ಅಮಾಲೇಕ್ಯರೂ ಸಕಲ ಮೂಡ ಣದ ಮಕ್ಕಳೂ ಮಿಡತೆಗಳಷ್ಟು ಗುಂಪಾಗಿ ತಗ್ಗಿನಲ್ಲಿ ಇಳು ಕೊಂಡಿದ್ದದರು. ಅವರ ಒಂಟೆಗಳಿಗೆ ಲೆಕ್ಕವಿಲ್ಲ. ಅವು ಸಮುದ್ರದ ಮರಳಿನ ಹಾಗೆ ಗುಂಪಾಗಿದ್ದವು.
ಆದರೆ ಜೆಬಹನೂ ಚಲ್ಮುನ್ನನೂ ತಮ್ಮ ಸೈನ್ಯವಾದ ಹೆಚ್ಚುಕಡಿಮೆ ಹದಿನೈದು ಸಾವಿರ ಜನರ ಸಂಗಡ ಕರ್ಕೋರಿನಲ್ಲಿ ಇದ್ದರು. ಇವರೆಲ್ಲಾ ಕತ್ತಿ ಹಿಡಿಯತಕ್ಕ ಲಕ್ಷದ ಇಪ್ಪತ್ತು ಸಾವಿರ ಜನ ಬಿದ್ದುಹೋದಾಗ ಮೂಡಣದ ಸಮಸ್ತ ಮಕ್ಕಳು ಅಲ್ಲಿ ಉಳಿದರು.
ಸೊಲೊಮೋನನ ಜ್ಞಾನವು ಮೂಡಣ ದೇಶದ ಎಲ್ಲಾ ಜನರ ಜ್ಞಾನಕ್ಕಿಂತಲೂ ಐಗುಪ್ತದ ಎಲ್ಲಾ ಜನರ ಜ್ಞಾನಕ್ಕಿಂತಲೂ ಅಧಿಕವಾಗಿತ್ತು.
ನಿನ್ನ ಆಜ್ಞೆಗಳ ಮಾರ್ಗದಲ್ಲಿ ಓಡುವೆನು; ನೀನು ನನ್ನ ಹೃದಯವನ್ನು ವಿಶಾಲಮಾಡುತ್ತೀ.
ನಿನ್ನ ಆಜ್ಞೆಗಳನ್ನು ಕೈಕೊಳ್ಳು ವದಕ್ಕೆ ತಡಮಾಡದೆ ತ್ವರೆಪಟ್ಟಿದ್ದೇನೆ.
ನೀನು ಹೋಗಿ ಸಂತೋಷದಿಂದ ನಿನ್ನ ರೊಟ್ಟಿ ಯನ್ನು ತಿಂದು ಹರ್ಷಹೃದಯದಿಂದ ನಿನ್ನ ದ್ರಾಕ್ಷಾ ರಸವನ್ನು ಕುಡಿ; ದೇವರು ಈಗ ನಿನ್ನ ಕೆಲಸಗಳನ್ನು ಒಪ್ಪಿಕೊಳ್ಳುತ್ತಾನೆ.
ಯಾಕೋಬನು ಸಿರಿಯಾ ದೇಶಕ್ಕೆ ಓಡಿಹೋದನು; ಇಸ್ರಾಯೇಲನು ಹೆಂಡತಿಯ ನಿಮಿತ್ತ ಸೇವೆಮಾಡಿ ಹೆಂಡತಿಯ ನಿಮಿತ್ತ ಕುರಿಗಳನ್ನು ಕಾದನು.