ನೀನು ಮಣ್ಣಿಗೆ ತಿರುಗುವ ವರೆಗೆ ನಿನ್ನ ಹಣೆಯ ಬೆವರನ್ನು ಸುರಿಸಿ ರೊಟ್ಟಿಯನ್ನು ತಿನ್ನುವಿ. ಯಾಕಂದರೆ ನೀನು ಅದ ರೊಳಗಿಂದ ಅಂದರೆ (ಮಣ್ಣಿನೊಳಗಿಂದ) ತೆಗೆಯ ಲ್ಪಟ್ಟೆ; ನೀನು ಮಣ್ಣಾಗಿದ್ದಿ, ಮಣ್ಣಿಗೆ ತಿರುಗಿಕೊಳ್ಳುವಿ ಅಂದನು.
Cross references
ಕರ್ತನಾದ ದೇವರು ಭೂಮಿಯ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ ಅವನ ಮೂಗಿನಲ್ಲಿ ಜೀವಶ್ವಾಸ ವನ್ನು ಊದಿದನು; ಆಗ ಮನುಷ್ಯನು ಜೀವಾತ್ಮ ನಾದನು.
ಆದಾಮನು ಬದುಕಿದ ದಿನಗಳೆಲ್ಲಾ ಒಟ್ಟು ಒಂಭೈನೂರ ಮೂವತ್ತು ವರುಷಗಳಾಗಿದ್ದವು; ತರುವಾಯ ಅವನು ಸತ್ತನು.
ಆಗ ಅಬ್ರಹಾಮನು--ಇಗೋ, ಮಣ್ಣೂ ಬೂದಿಯೂ ಆಗಿರುವ ನಾನು ಕರ್ತನ ಸಂಗಡ ಮಾತನಾಡುವದಕ್ಕೆ ಮುಂಗೊಂಡಿದ್ದೇನೆ.
ನಾನು ನಿಮ್ಮಲ್ಲಿ ಪರದೇಶಸ್ಥನೂ ಪರವಾಸಿಯೂ ಆಗಿದ್ದೇನೆ; ನನಗೆ ನಿಮ್ಮ ಬಳಿಯಲ್ಲಿ ಸಮಾಧಿಯ ಸ್ಥಳವನ್ನು ಕೊಡಿರಿ; ಆಗ ನನ್ನ ಹೆಂಡತಿಯ ಶವವನ್ನು ಕಣ್ಣೆದುರಿಗೆ ಇಡದೆ ಹೂಣಿಡುವೆನು ಅಂದನು.
ಬೆತ್ತಲೆಯಾಗಿ ನನ್ನ ತಾಯಿಯ ಗರ್ಭ ದಿಂದ ಹೊರಟು ಬಂದೆನು, ಬೆತ್ತಲೆಯಾಗಿ ತಿರುಗಿ ಹೋಗಬೇಕು. ಕರ್ತನು ಕೊಟ್ಟನು, ಕರ್ತನು ತಕ್ಕೊಂಡನು; ಕರ್ತನ ಹೆಸರಿಗೆ ಸ್ತೋತ್ರ ಅಂದನು. 22ಇದೆಲ್ಲಾದರಲ್ಲಿ ಯೋಬನು ಪಾಪಮಾಡಲಿಲ್ಲ. ದೇವರ ಮೇಲೆ ತಪ್ಪನ್ನು ಹೊರಿಸಲೂ ಇಲ್ಲ.ಇದೆಲ್ಲಾದರಲ್ಲಿ ಯೋಬನು ಪಾಪಮಾಡಲಿಲ್ಲ. ದೇವರ ಮೇಲೆ ತಪ್ಪನ್ನು ಹೊರಿಸಲೂ ಇಲ್ಲ.
ಕುಂಬಾ ರನ ಮಣ್ಣಿನಂತೆ ನನ್ನನ್ನು ರೂಪಿಸಿದ್ದೀ ಎಂದು ಜ್ಞಾಪಕ ಮಾಡಿಕೋ ಎಂದು ಬೇಡಿಕೊಳ್ಳುತ್ತೇನೆ; ಆದಾಗ್ಯೂ ನನ್ನನ್ನು ಧೂಳಿಗೆ ತಿರುಗಿಸುತ್ತಿಯೋ?
ನಾನು ನಿರೀಕ್ಷಿಸಿದರೆ ಸಮಾಧಿಯೇ ನನ್ನ ಮನೆ; ಕತ್ತಲೆಯಲ್ಲಿ ನನ್ನ ಹಾಸಿಗೆಯನ್ನು ಹಾಸಿದ್ದೇನೆ.
ನನ್ನ ಚರ್ಮದ ಹುಳಗಳು ಈ ದೇಹ ವನ್ನು ನಾಶಪಡಿಸಿದಾಗ್ಯೂ ನಾನು ನನ್ನ ಶರೀರದಿಂದ ದೇವರನ್ನು ನೋಡುವೆನು.
ಧೂಳಿನಲ್ಲಿ ಮಲಗುತ್ತಾರೆ; ಹುಳಗಳು ಅವರನ್ನು ಅಡಗಿಸುತ್ತವೆ.
ಶರೀರಗಳೆಲ್ಲಾ ಒಟ್ಟಾಗಿ ನಾಶವಾಗು ವವು. ಮತ್ತು ಮನುಷ್ಯನು ದೂಳಿಗೆ ತಿರುಗುವನು.
ನನ್ನ ಶಕ್ತಿ ಬೋಕಿಯ ಹಾಗೆ ಒಣಗಿ ಹೋಗಿದೆ; ನನ್ನ ನಾಲಿಗೆ ಅಂಗಳಕ್ಕೆ ಹತ್ತುತ್ತದೆ; ಮರಣದ ಧೂಳಿಗೆ ನನ್ನನ್ನು ಬರಮಾಡಿದಿ.
ಭೂಮಿಯ ಪುಷ್ಟರೆಲ್ಲರೂ ಉಂಡು ಆರಾಧಿಸುವರು; ತಮ್ಮ ಪ್ರಾಣವನ್ನು ಬದುಕಿಸಲಾರದೆ ಧೂಳಿನಲ್ಲಿ ಇಳಿಯುವವರೆಲ್ಲರೂ ಆತನ ಮುಂದೆ ಅಡ್ಡಬೀಳುವರು.
ನೀನು ಮನುಷ್ಯನನ್ನು ನಾಶನಕ್ಕೆ ತಿರುಗಿಸಿ-- ಮನುಷ್ಯರ ಮಕ್ಕಳೇ, ಹಿಂತಿರುಗಿರಿ ಎಂದು ಹೇಳುತ್ತೀ;
ಆತನು ನಮ್ಮ ಪ್ರಕೃತಿಯನ್ನು ತಿಳುಕೊಂಡು ನಾವು ಧೂಳಿ ಯಾಗಿದ್ದೇವೆಂದು ಜ್ಞಾಪಕಮಾಡಿಕೊಳ್ಳುತ್ತಾನೆ;
ನೀನು ನಿನ್ನ ಮುಖವನ್ನು ಮರೆಮಾಡಲು ತಲ್ಲಣಿಸುತ್ತವೆ; ನೀನು ಅವುಗಳ ಶ್ವಾಸವನ್ನು ತೆಗೆದು ಬಿಡಲು, ಅವು ಸತ್ತುಹೋಗಿ, ತಮ್ಮ ಧೂಳಿಗೆ ತಿರುಗುತ್ತವೆ.
ವಿವೇ ಕದ ಮಾರ್ಗವನ್ನು ಬಿಟ್ಟು, ತಿರುಗುವವನು ಸತ್ತವರ ಕೂಟದಲ್ಲಿ ಇರುವಂಥವನಾಗಿದ್ದಾನೆ.
ಸೂರ್ಯನ ಕೆಳಗೆ ಮನುಷ್ಯನು ಪಡುವ ಎಲ್ಲಾ ಪ್ರಯಾಸದಲ್ಲಿ ಅವನಿಗೆ ಲಾಭವೇನು?
ಆಕಾಶದ ಕೆಳಗೆ ನಡೆಯುವ ಎಲ್ಲವುಗಳ ವಿಷಯವಾಗಿ ಜ್ಞಾನ ದಿಂದ ವಿಚಾರಿಸಿ ವಿಮರ್ಶಿಸುವದಕ್ಕೆ ನಾನು ನನ್ನ ಮನಸ್ಸು ಇಟ್ಟೆನು; ಇದರ ವಿಷಯವಾದ ಪ್ರಯಾಸವು ಮನಸ್ಸಿನಲ್ಲಿ ಯೋಚಿಸುವಂತೆ ದೇವರು ಮನುಷ್ಯ ಮಕ್ಕಳಿಗೆ ಈ ಕಷ್ಟಕರವಾದ ಪ್ರಯಾಸವನ್ನು ಕೊಟ್ಟಿ ದ್ದಾನೆ.
ಎಲ್ಲವೂ ಒಂದೇ ಸ್ಥಳಕ್ಕೆ ಹೋಗುತ್ತವೆ; ಎಲ್ಲವು ಗಳೂ ಮಣ್ಣಿನವುಗಳೇ ಮತ್ತು ಎಲ್ಲವೂ ಮಣ್ಣಿಗೆ ಸೇರುತ್ತವೆ.
ತನ್ನ ತಾಯಿಯ ಗರ್ಭದಿಂದ ಅವನು ಹೇಗೆ ಬಂದನೋ ಅವನು ಬಂದ ಹಾಗೆ ಬೆತ್ತಲೆಯಾಗಿ ತಿರುಗಿ ಹೋಗುವನು; ತನ್ನ ಕೈಯಲ್ಲಿ ತಕ್ಕೊಂಡು ಹೋಗುವದಕ್ಕೆ ತನ್ನ ಪ್ರಯಾಸದಲ್ಲಿ ಯಾವದನ್ನು ತೆಗೆದುಕೊಂಡು ಹೋಗುವದಿಲ್ಲ.
ಆಮೇಲೆ ಧೂಳು ಅದು ಇದ್ದ ಹಾಗೆಯೇ ಭೂಮಿಗೆ ಹಿಂತಿರುಗುವದು; ಆತ್ಮವು ಅದನ್ನು ಕೊಟ್ಟ ದೇವರ ಬಳಿಗೆ ಹಿಂತಿರುಗು ವದು.
ಭೂಮಿಯ ಧೂಳಿನೊಳಗೆ ನಿದ್ರೆಮಾಡುವವ ರಲ್ಲಿ ಅನೇಕರು ಎಚ್ಚತ್ತು ಕೆಲವರು ನಿತ್ಯಜೀವವನ್ನೂ ಕೆಲವರು ನಿತ್ಯ ನಾಚಿಕೆಗಳನ್ನೂ ಅನುಭವಿಸುವರು.
ಈ ವಿಷಯ ಹೇಗಂದರೆ, ಒಬ್ಬ ಮನುಷ್ಯ ನಿಂದಲೇ ಪಾಪವೂ ಪಾಪದಿಂದ ಮರಣವೂ ಲೋಕ ದೊಳಗೆ ಸೇರಿದವು; ಎಲ್ಲರೂ ಪಾಪಮಾಡಿದ್ದರಿಂದ ಮರಣವು ಹೀಗೆ ಎಲ್ಲರಲ್ಲಿಯೂ ವ್ಯಾಪಿಸಿತು.
ಮನುಷ್ಯನ ಮೂಲಕ ಮರಣವುಂಟಾದ ಕಾರಣ ಮನುಷ್ಯನ ಮೂಲಕವೇ ಸತ್ತವರಿಗೆ ಪುನರುತ್ಥಾನ ವುಂಟಾಗುವದು.
ಕಳವು ಮಾಡುವವನು ಇನ್ನು ಮೇಲೆ ಕಳವು ಮಾಡದೆ ಕೈಯಿಂದ ಯಾವದಾದರೊಂದು ಒಳ್ಳೇ ಉದ್ಯೋಗವನ್ನು ಮಾಡಿ ದುಡಿಯಲಿ; ಆಗ ಕೊರತೆಯಲ್ಲಿರುವವರಿಗೆ ಕೊಡು ವದಕ್ಕೆ ಅವನಿಂದಾ ಗುವದು.
ಸಹೋದ ರರೇ, ನಾವು ನಿಮ್ಮಲ್ಲಿ ಯಾರ ಮೇಲೆಯೂ ಭಾರಹಾಕ ಬಾರದೆಂದು ಹಗಲಿರುಳು ದುಡಿದು ಜೀವನ ಮಾಡಿ ಕೊಳ್ಳುತ್ತಾ ದೇವರ ಸುವಾರ್ತೆಯನ್ನು ನಿಮಗೆ ಸಾರಿದೆವು; ಆ ನಮ್ಮ ಕಷ್ಟವೂ ಪ್ರಯಾಸವೂ ನಿಮ್ಮ ನೆನಪಿನಲ್ಲಿ ರುವದಷ್ಟೆ.
ಇದಲ್ಲದೆ ನಾವು ನಿಮ್ಮ ಸಂಗಡ ಇದ್ದಾಗ ಕೆಲಸ ಮಾಡಲೊ ಲ್ಲದವನು ಊಟ ಮಾಡಬಾರದೆಂದು ನಿಮಗೆ ಆಜ್ಞಾಪಿಸಿದೆವಷ್ಟೆ.