Home Bibles ಆದಿಕಾಂಡ 3:24 · ಕನ್ನಡ ಬೈಬಲ್
ಆದಿಕಾಂಡ 3:24 · ಕನ್ನಡ ಬೈಬಲ್

ಹೀಗೆ ಆತನು ಮನುಷ್ಯನನ್ನು ಹೊರಗೆ ಹಾಕಿ ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವದಕ್ಕೆ ಏದೆನ್‌ ತೋಟದ ಪೂರ್ವದಿಕ್ಕಿನಲ್ಲಿ ಕೆರೂಬಿಯರನ್ನೂ ಎಲ್ಲಾ ಕಡೆಯಲ್ಲಿ ಸುತ್ತುವ ಜ್ವಾಲೆಯ ಕತ್ತಿಯನ್ನೂ ಇರಿಸಿದನು.

Cross references

ಆದಿಕಾಂಡ 2:8

ಕರ್ತನಾದ ದೇವರು ಏದೆನಿನಲ್ಲಿ ಪೂರ್ವ ದಿಕ್ಕಿಗೆ ತೋಟವನ್ನು ಮಾಡಿ ತಾನು ರೂಪಿಸಿದ ಮನುಷ್ಯನನ್ನು ಅದರಲ್ಲಿ ಇಟ್ಟನು.

ನಿರ್ಗಮಕಾಂಡ 25:2

ನನಗೆ ಕಾಣಿಕೆಗಳನ್ನು ತಕ್ಕೊಂಡು ಬರು ವಂತೆ ಇಸ್ರಾಯೇಲ್‌ ಮಕ್ಕಳ ಸಂಗಡ ಮಾತನಾಡು; ಮನಃಪೂರ್ವಕವಾಗಿಯೂ ಹೃದಯಪೂರ್ವಕವಾ ಗಿಯೂ ಕೊಡುವ ನನ್ನ ಕಾಣಿಕೆಯನ್ನು ನೀವು ತೆಗೆದು ಕೊಳ್ಳಬೇಕು.

ನಿರ್ಗಮಕಾಂಡ 25:18

ಬಂಗಾರದಿಂದ ಎರಡು ಕೆರೂಬಿಗಳನ್ನು ನಕ್ಷೆಯ ಕೆಲಸದಿಂದ ಕರುಣಾ ಸನದ ಎರಡು ಬದಿಗಳಲ್ಲಿ ಮಾಡಿಸಬೇಕು.

ಅಂಕೆಗಳ ಪುಸ್ತಕ 22:23

ಕತ್ತೆಯು ಮಾರ್ಗದಲ್ಲಿ ನಿಂತಿದ್ದ ಕರ್ತನ ದೂತನನ್ನೂ ಅವನ ಕೈಯಲ್ಲಿರುವ ಬಿಚ್ಚು ಕತ್ತಿಯನ್ನೂ ನೋಡಿ ಮಾರ್ಗದಿಂದ ವಾರೆಯಾಗಿ ಹೊಲದೊಳಗೆ ಹೋಯಿತು; ಆಗ ಬಿಳಾಮನು ಕತ್ತೆಯನ್ನು ಮಾರ್ಗದೊಳಗೆ ತಿರುಗಿಸು ವದಕ್ಕೆ ಅದನ್ನು ಹೊಡೆದನು.

ಯೆಹೋಶುವ 5:13

ಇದಾದ ಮೇಲೆ ಯೆಹೋಶುವನು ಯೆರಿ ಕೋವಿನ ಬಳಿಯಲ್ಲಿ ಇದ್ದಾಗ ಆದದ್ದೇನಂದರೆ, ತನ್ನ ಕಣ್ಣುಗಳನ್ನೆತ್ತಿ ನೋಡಿದಾಗ ಇಗೋ, ಒಬ್ಬ ಮನು ಷ್ಯನು ಅವನಿಗೆದುರಾಗಿ ನಿಂತಿದ್ದನು; ಆತನ ಕೈಯಲ್ಲಿ ಬಿಚ್ಚುಕತ್ತಿ ಇತ್ತು. ಯೆಹೋಶುವನು ಆತನ ಬಳಿಗೆ ಹೋಗಿ ಆತನಿಗೆ--ನೀನು ನಮಗೋಸ್ಕರವೋ? ನಮ್ಮ ವೈರಿಗಳಿಗೋಸ್ಕರವೋ? ಅಂದನು.

1 ಸಮುವೇಲ 4:4

ಹಾಗೆಯೇ ಜನರನ್ನು ಕೆರೂಬಿಗಳ ಮಧ್ಯ ದಲ್ಲಿರುವ ಸೈನ್ಯಗಳ ಕರ್ತನ ಒಡಂಬಡಿಕೆಯ ಮಂಜೂ ಷವನ್ನು ತಕ್ಕೊಂಡು ಬರುವಂತೆ ಶೀಲೋವಿಗೆ ಕಳು ಹಿಸಿದರು. ಅಲ್ಲಿ ಏಲಿಯ ಇಬ್ಬರು ಮಕ್ಕಳಾದ ಹೊಫ್ನಿಯೂ ಫೀನೆಹಾಸನೂ ದೇವರ ಒಡಂಬಡಿಕೆಯ ಮಂಜೂಷದ ಬಳಿಯಲ್ಲಿದ್ದರು;

1 ಅರಸುಗಳು 6:25

ಇನ್ನೊಂದು ಕೆರೂಬಿಯ ರೆಕ್ಕೆಗಳ ಅಂತರವೂ ಹತ್ತು ಮೊಳವಾಗಿತ್ತು. ಎರಡು ಕೆರೂಬಿಗಳಿಗೆ ಒಂದೇ ಅಳ ತೆಯೂ ಒಂದೇ ಆಕಾರವಿತ್ತು.

1 ದಿನವೃತ್ತಾಂತ 21:16

ಆಗ ದಾವೀದನು ತನ್ನ ಕಣ್ಣುಗಳನ್ನೆತ್ತಿ ಭೂಮಿಗೂ ಆಕಾಶಕ್ಕೂ ಮಧ್ಯದಲ್ಲಿ ನಿಂತಿರುವ ಕರ್ತನ ದೂತನನ್ನು ಕಂಡನು; ಅವನ ಕೈಯಲ್ಲಿ ಯೆರೂಸ ಲೇಮಿನ ಮೇಲೆ ಚಾಚಿದ್ದ ಬಿಚ್ಚುಕತ್ತಿ ಇತ್ತು. ಆಗ ದಾವೀದನೂ ಇಸ್ರಾಯೇಲಿನ ಹಿರಿಯರೂ ಗೋಣೀ ತಟ್ಟುಗಳಿಂದ ಮುಚ್ಚಿಕೊಂಡವರಾಗಿ ಮೋರೆ ಕೆಳಗಾಗಿ ಬಿದ್ದರು.

ಕೀರ್ತನೆಗಳು 80:1

ಯೋಸೇಫ್ಯರನ್ನು ಮಂದೆಯಂತೆ ನಡಿಸುವಾತನೇ, ಇಸ್ರಾಯೇಲ್ಯರ ಕುರುಬನೇ, ಕಿವಿಗೊಡು; ಕೆರೂಬಿಗಳ ಮಧ್ಯದಲ್ಲಿ ವಾಸಿಸುವಾತನೇ, ಪ್ರಕಾಶಿಸು.

ಕೀರ್ತನೆಗಳು 99:1

ಕರ್ತನು ಆಳುತ್ತಾನೆ; ಜನಗಳು ನಡುಗಲಿ; ಆತನು ಕೆರೂಬಿಗಳ ಮಧ್ಯದಲ್ಲಿ ಕೂತಿ ದ್ದಾನೆ; ಭೂಮಿಯು ಕದಲಲಿ.

ಕೀರ್ತನೆಗಳು 104:4

ಆತನು ತನ್ನ ದೂತರನ್ನು ಆತ್ಮಗಳನ್ನಾಗಿಯೂ ಉರಿಯುವ ಬೆಂಕಿಯನ್ನು ತನ್ನ ಸೇವಕರನ್ನಾಗಿಯೂ ಮಾಡುತ್ತಾನೆ.

ಯೆಹೆಜ್ಕೇಲ 10:2

ಆತನು ನಾರುಮಡಿಯನ್ನು ಧರಿಸಿ ಕೊಂಡಿದ್ದ ಮನುಷ್ಯನಿಗೆ ಹೇಳಿದ್ದೇನಂದರೆ--ನೀನು ಕೆರೂಬಿಗಳ ಕೆಳಗೆ ಇರುವ ಚಕ್ರಗಳ ನಡುವೆ ಪ್ರವೇಶಿಸಿ, ಕೆರೂಬಿಗಳ ನಡುವೆ ಇರುವ ಉರಿಕೆಂಡಗಳ ತಳದಲಿ ನಿನ್ನ ಕೈತುಂಬ ಎತ್ತಿ ಅದನ್ನು ಪಟ್ಟಣದ ಮೇಲೆ ಚೆಲ್ಲು ಅಂದನು. ಹಾಗೆಯೇ ನಾನು ಕಂಡಂತೆ ಒಳಗೆ ಪ್ರವೇಶಿಸಿದನು.

ಯೋಹಾನ 14:6

ಯೇಸು ಅವನಿಗೆ--ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.

ಹೆಬ್ರಿಯರಿಗೆ 1:7

ದೂತರ ವಿಷಯ ದಲ್ಲಿ ಆತನು ಹೇಳುವದೇನಂದರೆ--ದೇವರು ತನ್ನ ದೂತರನ್ನು ಆತ್ಮಗಳಾಗಿಯೂ ತನ್ನ ಸೇವಕರನ್ನು ಅಗ್ನಿಜ್ವಾಲೆಯನ್ನಾಗಿಯೂ ಮಾಡುತ್ತಾನೆ ಎಂಬದು.

ಹೆಬ್ರಿಯರಿಗೆ 10:18

ಪಾಪವು ಪರಿಹಾರವಾದಲ್ಲಿ ಇನ್ನು ಎಂದಿಗೂ ಅದಕ್ಕಾಗಿ ಅರ್ಪಣೆ ಇರುವದಿಲ್ಲ.

Interlinear

Choose Theme