ಸ್ತ್ರೀಯು--ಆ ಮರದ ಫಲವು ಆಹಾರಕ್ಕೆ ಒಳ್ಳೇದಾಗಿಯೂ ಕಣ್ಣಿಗೆ ರಮ್ಯವಾಗಿಯೂ ಒಬ್ಬನನ್ನು ಜ್ಞಾನಿಯನ್ನಾಗಿ ಮಾಡುವದಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಅದೆ ಎಂದು ನೋಡಿ ಅದರ ಫಲವನ್ನು ತೆಗೆದುಕೊಂಡು ತಿಂದಳು; ತನ್ನ ಸಂಗಡ ಇದ್ದ ತನ್ನ ಗಂಡನಿಗೂ ಕೊಟ್ಟಳು; ಅವನೂ ತಿಂದನು.
Cross references
ಅವನು--ನೀನು ನನ್ನ ಸಂಗಡ ಇರುವದಕ್ಕೆ ಕೊಟ್ಟ ಸ್ತ್ರೀಯು ಆ ಮರದ ಫಲವನ್ನು ನನಗೆ ಕೊಟ್ಟಳು; ನಾನು ತಿಂದೆನು ಎಂದು ಹೇಳಿದನು.
ಆದಾಮನಿಗೆ ಆತನು--ನೀನು ನಿನ್ನ ಹೆಂಡತಿಯ ಮಾತನ್ನು ಕೇಳಿ ತಿನ್ನಬಾರದೆಂದು ನಾನು ನಿನ ಆಜ್ಞಾಪಿಸಿದ ಮರದ ಫಲವನ್ನು ತಿಂದಕಾರಣ ನಿನ್ನ ನಿಮಿತ್ತ ಭೂಮಿಯು ಶಪಿಸಲ್ಪಟ್ಟಿದೆ; ನಿನ್ನ ಜೀವನದ ದಿನಗಳಲ್ಲೆಲ್ಲಾ ದುಃಖದಲ್ಲೇ ನೀನು ಅದರ ಫಲವನ್ನು ತಿನ್ನುವಿ.
ಆಗ ದೇವಕುಮಾರರು ಮನುಷ್ಯ ಕುಮಾರ್ತೆಯರ ಸೌಂದರ್ಯವನ್ನು ನೋಡಿ ತಾವು ಆರಿಸಿಕೊಂಡವರನ್ನೆಲ್ಲಾ ತಮಗೆ ಹೆಂಡತಿಯ ರನ್ನಾಗಿ ಮಾಡಿಕೊಂಡರು.
ಇವುಗಳಾದ ಮೇಲೆ ಯೋಸೇಫನ ಯಜಮಾನನ ಹೆಂಡತಿಯು ಅವನ ಮೇಲೆ ಕಣ್ಣುಹಾಕಿ--ನನ್ನ ಸಂಗಡ ಮಲಗು ಅಂದಳು.
ಏನಂದರೆ, ನಾನು ಕೊಳ್ಳೆಯಲ್ಲಿ ಬಾಬೆಲಿನ ಒಂದು ಒಳ್ಳೇ ನಿಲುವಂಗಿಯನ್ನೂ ಇನ್ನೂರು ಬೆಳ್ಳಿ ಶೇಕೆಲುಗಳನ್ನೂ ಐವತ್ತು ಶೇಕೆಲ್ ತೂಕವಾದ ಒಂದು ಬಂಗಾರದ ಗಟ್ಟಿಯನ್ನೂ ಕಂಡು ಅವುಗಳನ್ನು ಆಶಿಸಿ ತೆಗೆದುಕೊಂಡೆನು; ಇಗೋ, ಅವುಗಳನ್ನು ನನ್ನ ಗುಡಾರದ ಮಧ್ಯದಲ್ಲಿ ನೆಲದೊಳಗೆ ಬಚ್ಚಿಟ್ಟಿದ್ದೇನೆ; ಬೆಳ್ಳಿಯೂ ಅದರ ಕೆಳಗೆ ಇದೆ ಅಂದನು.
ಅವರಿಗೆ ಔತಣ ಇದ್ದ ಏಳು ದಿವಸಗಳಲ್ಲಿ ಅವನ ಮುಂದೆ ಅವಳು ಅತ್ತಳು. ಆದರೆ ಏಳನೇ ದಿನದಲ್ಲಿ ಅವಳು ಅವನನ್ನು ಬಹಳವಾಗಿ ಪೀಡಿಸಿದ್ದರಿಂದ ಅವಳಿಗೆ ತಿಳಿಸಿದನು. ಆಗ ಆಕೆ ತನ್ನ ಜನರ ಮಕ್ಕಳಿಗೆ ಆ ಒಗಟನ್ನು ತಿಳಿಸಿದಳು.
ಆಗ ಸಂಸೋನನು ಗಾಜಕ್ಕೆ ಹೋಗಿ ಅಲ್ಲಿ ಒಬ್ಬ ಜಾರಸ್ತ್ರೀಯನ್ನು ಕಂಡು ಅವಳ ಬಳಿಗೆ ಹೋದನು.
ಆಗ ಆದದ್ದೇನಂದರೆ, ದಾವೀದನು ಒಂದು ದಿನ ಸಾಯಂಕಾಲದಲ್ಲಿ ತನ್ನ ಹಾಸಿಗೆಯಿಂದ ಎದ್ದು ಅರಮನೆಯ ಉಪ್ಪರಿಗೆಯ ಮೇಲೆ ತಿರುಗಾಡುತ್ತಾ ಇರುವಾಗ ಸ್ನಾನಮಾಡುತ್ತಿರುವ ಒಬ್ಬ ಸ್ತ್ರೀಯನ್ನು ಉಪ್ಪರಿಗೆಯ ಮೇಲಿನಿಂದ ನೋಡಿದನು.
ಹಾಗೆಯೇ ಪ್ರವಾದಿಯು ಇವನ ಸಂಗಡ ಹಿಂದಕ್ಕೆ ಹೋಗಿ ಅವನ ಮನೆಯಲ್ಲಿ ರೊಟ್ಟಿ ತಿಂದು ನೀರು ಕುಡಿದನು.
ನನ್ನ ಕಣ್ಣುಗಳೊಡನೆ ಒಡಂಬಡಿಕೆ ಮಾಡಿದೆನು; ಕನ್ನಿಕೆಯ ಮೇಲೆ ಲಕ್ಷ್ಯವಿಡುವದು ಹೇಗೆ?
ಮನುಷ್ಯಪುತ್ರನೇ, ಇಗೋ, ಒಂದೇ ಏಟಿನಿಂದ ನೇತ್ರಾನಂದವಾಗಿರುವದನ್ನು ನಿನ್ನಿಂದ ತೆಗೆಯುತ್ತೇನೆ; ಆದರೆ ನೀನು ದುಃಖಪಡಬೇಡ, ಅಳಬೇಡ, ನಿನ್ನ ಕಣ್ಣೀರು ಹರಿದು ಹೋಗದಿರಲಿ.
ಇಸ್ರಾಯೇಲ್ಯರ ಮನೆ ತನದವರೊಂದಿಗೆ ಮಾತನಾಡಿ ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳು--ಇಗೋ, ನಾನು ನನ್ನ ಪರಿಶುದ್ಧ ಸ್ಥಳವನ್ನೂ ನಿಮ್ಮ ಬಲದ ಶ್ರೇಷ್ಠತ್ವವನ್ನೂ ನಿಮ್ಮ ನೇತ್ರಾನಂದಕರವಾದದ್ದನ್ನೂ ನಿಮ್ಮ ಮನಸ್ಸು ಅಭಿಲಾಷಿಸುವದನ್ನೂ ನಾನು ಅಪವಿತ್ರಪಡಿಸುವೆನು; ನೀವು ಬಿಟ್ಟಿರುವ ನಿಮ್ಮ ಕುಮಾರರೂ ಕುಮಾರ್ತೆಯರೂ ಕತ್ತಿಯಿಂದ ಬೀಳುವರು.
ಇದಲ್ಲದೆ ಮನುಷ್ಯಪುತ್ರನೇ, ಅವರ ಮಹತ್ತಾದ ಸಂತೋಷವನ್ನೂ ನೇತ್ರಾನಂದಕರವಾದದ್ದನ್ನೂ ಅವರು ಆಶಿಸುವದನ್ನೂ ಕುಮಾರ ಕುಮಾರ್ತೆಯರನ್ನೂ ಅವರ ಬಲದಿಂದ ನಾನು ತೆಗೆದುಹಾಕುವ
ಆದರೆ ಅವರು ಒಡಂಬಡಿಕೆಯನ್ನು ವಿಾರಿದ ಮನುಷ್ಯರ ಹಾಗೆ ಇದ್ದಾರೆ; ಅಲ್ಲಿ ಅವರು ನನಗೆ ವಿರುದ್ಧವಾಗಿ ದ್ರೋಹದಿಂದ ನಡೆದುಕೊಂಡಿದ್ದಾರೆ.
ಆದರೆ ನಾನು ನಿಮಗೆ ಹೇಳುವದೇನಂದರೆ--ಒಬ್ಬ ಸ್ತ್ರೀಯನ್ನು ಮೋಹಿಸುವದಕ್ಕೆ ನೋಡುವ ಪ್ರತಿಯೊಬ್ಬನು ಆಗಲೇ ತನ್ನ ಹೃದಯದಲ್ಲಿ ಆಕೆಯ ಕೂಡ ವ್ಯಭಿಚಾರ ಮಾಡಿದ್ದಾನೆ.
ಈ ವಿಷಯ ಹೇಗಂದರೆ, ಒಬ್ಬ ಮನುಷ್ಯ ನಿಂದಲೇ ಪಾಪವೂ ಪಾಪದಿಂದ ಮರಣವೂ ಲೋಕ ದೊಳಗೆ ಸೇರಿದವು; ಎಲ್ಲರೂ ಪಾಪಮಾಡಿದ್ದರಿಂದ ಮರಣವು ಹೀಗೆ ಎಲ್ಲರಲ್ಲಿಯೂ ವ್ಯಾಪಿಸಿತು.
ಇದ ಲ್ಲದೆ ಆದಾಮನು ವಂಚನೆಗೆ ಒಳಬೀಳಲಿಲ್ಲ, ಸ್ತ್ರೀಯು ವಂಚನೆಗೆ ಒಳಬಿದ್ದು ಅಪರಾಧಿಯಾದಳು.ಆದರೂ ಅವರು ಸ್ವಸ್ಥ ಬುದ್ಧಿಯಿಂದೊಡಗೂಡಿದ ನಂಬಿಕೆಯ ಲ್ಲಿಯೂ ಪ್ರೀತಿಯಲ್ಲಿಯೂ ಪರಿಶುದ್ಧತೆಯಲ್ಲಿಯೂ ನೆಲೆಗೊಂಡಿದ್ದರೆ ಆಕೆಯು ಮಗುವನ್ನು ಹೆರುವದರಲ್ಲಿ ರಕ್ಷಣೆ ಹೊಂದುವಳು.
ಆದರೆ ಪ್ರತಿಯೊಬ್ಬನು ತನ್ನ ಸ್ವಂತ ದುರಾಶೆಯಿಂದ ಎಳೆಯಲ್ಪಟ್ಟು ಮರುಳುಗೊಂಡವನಾಗಿ ಶೋಧಿಸಲ್ಪಡುತ್ತಾನೆ.
ಲೋಕದಲ್ಲಿರುವವುಗಳೆಲ್ಲವು ಅಂದರೆ ಶರೀರದಾಶೆ, ಕಣ್ಣಿನಾಶೆ, ಜೀವನದ ಗರ್ವ ಇವು ತಂದೆಗೆ ಸಂಬಂಧ ಪಟ್ಟವುಗಳಲ್ಲ, ಲೋಕಕ್ಕೆ ಸಂಬಂಧಪಟ್ಟವುಗಳಾಗಿವೆ.