ಈ ಪ್ರಕಾರ ಯಾಕೋಬನು ಅತ್ಯಧಿಕವಾಗಿ ಅಭಿವೃದ್ಧಿಯಾದದ್ದರಿಂದ ಬಹು ಕುರಿಗಳೂ ದಾಸದಾಸಿ ಯರೂ ಒಂಟೆಗಳೂ ಕತ್ತೆಗಳೂ ಅವನಿಗೆ ದೊರೆತವು.
Cross references
ಅವನು ಆಕೆಗೋಸ್ಕರ ಅಬ್ರಾಮನಿಗೆ ಒಳ್ಳೇದನ್ನು ಮಾಡಿದನು. ಅವನಿಗೆ ಕುರಿಗಳೂ ಎತ್ತುಗಳೂ ಕತ್ತೆಗಳೂ ದಾಸರೂ ದಾಸಿ ಯರೂ ಹೆಣ್ಣುಕತ್ತೆಗಳೂ ಒಂಟೆಗಳೂ ದೊರೆತವು.
ಅಬ್ರಾಮನು ದನಗಳಲ್ಲಿಯೂ ಬೆಳ್ಳಿಯಲ್ಲಿಯೂ ಬಂಗಾರದಲ್ಲಿಯೂ ಬಹು ಧನವಂತನಾಗಿದ್ದನು.
ಕರ್ತನು ನನ್ನ ಯಜಮಾನನನ್ನು ಬಹಳವಾಗಿ ಆಶೀರ್ವದಿಸಿದ್ದರಿಂದ ಅವನು ದೊಡ್ಡವನಾದನು. ಆತನು ಅವನಿಗೆ ಕುರಿದನಗಳನ್ನೂ ಬೆಳ್ಳಿಬಂಗಾರವನ್ನೂ ದಾಸದಾಸಿಯರನ್ನೂ ಒಂಟೆಗಳನ್ನೂ ಕತ್ತೆಗಳನ್ನೂ ಕೊಟ್ಟಿದ್ದಾನೆ.
ಅವನು ಅತಿ ದೊಡ್ಡವನಾಗುವ ವರೆಗೆ ಕ್ರಮೇಣ ಅಭಿವೃದ್ಧಿಯಾಗುತ್ತಾ ಬಂದನು.
ಇಗೋ, ನಾನು ನಿನ್ನ ಸಂಗಡ ಇದ್ದು ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಪಾಡಿ ಈ ದೇಶಕ್ಕೆ ನಿನ್ನನ್ನು ತಿರಿಗಿ ಬರಮಾಡುವೆನು. ಯಾಕಂದರೆ ನಾನು ನಿನಗೆ ಹೇಳಿದ್ದನ್ನು ಮಾಡುವ ವರೆಗೆ ನಿನ್ನನ್ನು ಬಿಡುವದಿಲ್ಲ ಅಂದನು.
ನಾನು ಬರುವದಿಕ್ಕಿಂತ ಮುಂಚೆ ನಿನಗಿದ್ದದ್ದು ಸ್ವಲ್ಪವೇ; ಈಗ ಅದು ಬಹಳವಾಗಿ ಹೆಚ್ಚಿದೆ. ನಾನು ಬಂದಂದಿನಿಂದ ಕರ್ತನು ನಿನ್ನನ್ನು ಆಶೀರ್ವದಿಸಿದ್ದಾನೆ. ಈಗ ನಾನು ನನ್ನ ಸ್ವಂತ ಮನೆಗೋಸ್ಕರ ಯಾವಾಗ ಸಂಪಾದಿಸಲಿ ಅಂದನು.
ಆದರೆ ನಿಮ್ಮ ತಂದೆಯು ನನಗೆ ವಂಚನೆ ಮಾಡಿ ನನ್ನ ಸಂಬಳವನ್ನು ಹತ್ತು ಸಾರಿ ಬದಲಾಯಿಸಿ ದನು. ಆದಾಗ್ಯೂ ದೇವರು ಅವನಿಂದ ನನಗೆ ಕೇಡುಮಾಡಗೊಡಿಸಲಿಲ್ಲ.
ಅಬ್ರಹಾಮನ ದೇವರೂ ನನ್ನ ತಂದೆಯಾದ ಇಸಾಕನು ಭಯಭಕ್ತಿಯಿಂದ ಸೇವಿಸುವ ದೇವರೂ ನನ್ನೊಂದಿಗೆ ಇಲ್ಲದೆ ಹೋಗಿದ್ದರೆ ನಿಜವಾಗಿಯೂ ನನ್ನನ್ನು ಬರಿಗೈಯಿಂದ ಕಳುಹಿಸುತ್ತಿದ್ದಿ; ನನ್ನ ಬಾಧೆ ಯನ್ನೂ ನನ್ನ ಕೈ ಕಷ್ಟವನ್ನೂ ದೇವರು ನೋಡಿ ನಿನ್ನೆ ರಾತ್ರಿ ನಿನ್ನನ್ನು ಗದರಿಸಿದನು ಅಂದನು.
ನೀನು ನಿನ್ನ ದಾಸನಿಗೆ ತೋರಿಸಿದ ಎಲ್ಲಾ ಕರುಣೆಗಳಿಗೂ ಎಲ್ಲಾ ಸತ್ಯಕ್ಕೂ ಅಯೋಗ್ಯನಾಗಿದ್ದೇನೆ. ಯಾಕಂದರೆ ನಾನು ಮೊದಲು ಈ ಯೊರ್ದನ್ ಹೊಳೆಯನ್ನು ದಾಟಿದಾಗ ನನಗೆ ಕೋಲು ಮಾತ್ರವೇ ಇತ್ತು; ಈಗ ಎರಡು ಗುಂಪುಗಳುಳ್ಳವನಾದೆನು.
ಅವು ಯಾವವಂದರೆ, ಇನ್ನೂರು ಮೇಕೆಗಳು, ಇಪ್ಪತ್ತು ಹೋತಗಳು, ಇನ್ನೂರು ಕುರಿಗಳು, ಇಪ್ಪತ್ತು ಟಗರುಗಳು;
ನಿನಗೋಸ್ಕರ ತಂದಿರುವ ನನ್ನ ಕಾಣಿಕೆಯನ್ನು ಅಂಗೀಕರಿಸಬೇಕೆಂದು ಬೇಡುತ್ತೇನೆ. ಯಾಕಂದರೆ ದೇವರು ನನ್ನೊಂದಿಗೆ ಕೃಪೆಯಿಂದ ವರ್ತಿಸಿದ್ದರಿಂದ ನನಗೆ ಬೇಕಾದಷ್ಟು ಇದೆ ಎಂದು ಹೇಳಿ ಅವನನ್ನು ಬಲವಂತ ಮಾಡಿದ್ದರಿಂದ ಅವನು ಅದನ್ನು ತಕ್ಕೊಂಡನು.
ಅವರು ಕೂಡಿ ಇರುವದಕ್ಕೆ ಆಗದಷ್ಟು ಅವರ ಸಂಪತ್ತು ಅಭಿವೃದ್ಧಿ ಯಾಗಿತ್ತು. ಅವರ ಹಿಂಡುಗಳಿಗೋಸ್ಕರ ಅವರು ಪ್ರವಾಸವಾಗಿದ್ದ ದೇಶವು ಅವರಿಗೆ ಸಾಲದೆ ಹೋಯಿತು.
ನನಗೆ ದಾಸದಾಸಿಯರು ಇದ್ದರು; ನನ್ನ ಮನೆಯಲ್ಲಿ ಹುಟ್ಟಿದ ದಾಸರು ನನಗೆ ಇದ್ದರು; ನನಗೆ ಮುಂಚೆ ಯೆರೂಸ ಲೇಮಿನಲ್ಲಿ ಇದ್ದವರಿಗಿಂತ ದನಕುರಿಗಳ ಸಂಪತ್ತು ಹೆಚ್ಚಾ ಗಿತ್ತು.
ಅದಕ್ಕಾಗಿ ಅವರು ಬಯಲಿನಿಂದ ಮರ ಗಳನ್ನಾಗಲಿ ತೆಗೆದುಕೊಳ್ಳುವುದಿಲ್ಲ, ಅಥವಾ ಅರಣ್ಯ ದಲ್ಲಿ ಯಾವುದನ್ನೂ ಕತ್ತರಿಸಿಕೊಳ್ಳುವದೂ ಇಲ್ಲ; ಅವರು ಆಯುಧಗಳನ್ನು ಬೆಂಕಿಯಿಂದಲೇ ಸುಡುವರು; ಅವರು ಸೂರೆಯಾದವುಗಳನ್ನು ಸೂರೆಮಾಡುವರು ಮತ್ತು ಕೊಳ್ಳೆಹೊಡೆದವರನ್ನು ತಾವು ಕೊಳ್ಳೆಹೊಡೆ ಯುವರು ಎಂದು ದೇವರಾದ ಕರ್ತನು ಹೇಳುತ್ತಾನೆ.