ಆದರೆ ಯಾರ ಬಳಿಯಲ್ಲಿ ನಿನ್ನ ದೇವರುಗಳನ್ನು ಕಂಡುಕೊಳ್ಳುವಿಯೋ ಅವರು ಬದುಕದೆ ಇರಲಿ; ನನ್ನ ಬಳಿಯಲ್ಲಿ ನಿನ್ನದೇನಾದರೂ ಇದ್ದರೆ ನಮ್ಮ ಸಹೋದರರ ಮುಂದೆ ವಿಚಾರಿಸಿ ಅದನ್ನು ತೆಗೆದುಕೋ ಅಂದನು. ಆದರೆ ರಾಹೇಲಳು ಅವುಗಳನ್ನು ಕದ್ದು ಕೊಂಡದ್ದು ಯಾಕೋಬನಿಗೆ ತಿಳಿದಿರಲಿಲ್ಲ.
Cross references
ಅಬ್ರಾಮನು ಲೋಟನಿಗೆ--ನನಗೂ ನಿನಗೂ ನನ್ನ ದನಕಾಯುವವರಿಗೂ ನಿನ್ನ ದನಕಾಯುವವರಿಗೂ ಜಗಳವಿರಬಾರದು; ನಾವು ಸಹೋದರರು.
ನನ್ನ ಸಹೋದರರೇ, ಈ ಅತಿದುಷ್ಟ ತನವನ್ನು ಮಾಡಬೇಡಿರಿ.
ಹೀಗಿದ್ದರೆ ಬರುವ ಕಾಲದಲ್ಲಿ ನನ್ನ ಸಂಬಳಕ್ಕಾಗಿ ನಾನು ನಿನ್ನ ಮುಂದೆ ಬಂದಾಗ ನನ್ನ ನೀತಿಯು ನನಗಾಗಿ ಉತ್ತರ ಕೊಡುವದು. ಮೇಕೆಗಳಲ್ಲಿ ಚುಕ್ಕೆ ಮಚ್ಚೆ ಕುರಿಗಳಲ್ಲಿ ಕಂದು ಬಣ್ಣವಿಲ್ಲದವುಗಳೂ ನನ್ನ ಬಳಿಯಲ್ಲಿದ್ದರೆ ಅವು ಕದ್ದವುಗಳಾಗಿ ಎಣಿಕೆಯಾಗಿರಲಿ ಅಂದನು.
ಆಗ ಲಾಬಾನನು ತನ್ನ ಕುರಿಗಳ ಉಣ್ಣೆ ಕತ್ತರಿಸುವದಕೆ ಹೋಗಿದ್ದನು. ಆದದರಿಂದ ರಾಹೇಲಳು ತನ್ನ ತಂದೆಯ ವಿಗ್ರಹಗಳನ್ನು ಕದ್ದುಕೊಂಡಳು.
ಆಗ ಅವನು ತನ್ನ ಸಹೋದರರನ್ನು ಕರಕೊಂಡು ಅವನನ್ನು ಬೆನ್ನಟ್ಟಿ ಏಳು ದಿನ ಪ್ರಯಾಣಮಾಡಿ ಗಿಲ್ಯಾದ್ ಪರ್ವತದಲ್ಲಿ ಅವನನ್ನು ಸಂಧಿಸಿದನು.
ಈಗ ನೀನು ನಿನ್ನ ತಂದೆಯ ಮನೆಯನ್ನು ಬಹಳವಾಗಿ ಆಶಿಸಿದ್ದರಿಂದ ಹೋಗಬೇಕಾಯಿತು. ಆದರೆ ನೀನು ನನ್ನ ದೇವರುಗಳನ್ನು ಕದ್ದದ್ದು ಯಾಕೆ ಅಂದನು.
ಅದು ನಿನ್ನ ದಾಸರಲ್ಲಿ ಯಾರ ಹತ್ತಿರ ಸಿಕ್ಕುವದೋ ಅವನು ಸಾಯಲಿ ಮತ್ತು ನಾವು ಸಹ ನಮ್ಮ ಒಡೆಯನಿಗೆ ದಾಸರಾಗುವೆವು ಅಂದರು.
ಇಗೋ, ನಾನು ಇಲ್ಲಿದ್ದೇನೆ; ಕರ್ತನ ಮುಂದೆಯೂ ಆತನ ಅಭಿಷಿಕ್ತನ ಮುಂದೆಯೂ ನನಗೆ ವಿರೋಧವಾಗಿ ಸಾಕ್ಷಿಕೊಡಿರಿ. ನಾನು ಯಾರ ಎತ್ತನ್ನಾದರೂ ಕತ್ತೆಯ ನ್ನಾದರೂ ತೆಗೆದುಕೊಂಡೆನೋ? ಯಾರಿಗಾದರೂ ವಂಚನೆ ಮಾಡಿದೆನೋ? ಯಾರನ್ನಾದರೂ ಹಿಂಸಿಸಿ ದೆನೋ? ಯಾರಿಂದಲಾದರೂ ಕಣ್ಣಿಗೆ ಮರೆಮಾಡುವ ಲಂಚವನ್ನು ತೆಗೆದುಕೊಂಡೆನೋ? ಹೀಗಿದ್ದರೆ ಹೇಳಿರಿ ತಿರಿಗಿಕೊಡುತ್ತೇನೆ ಅಂದನು.
ಆದರೆ ಇಸ್ರಾಯೇಲ್ಯರು ಆ ದಿವಸದಲ್ಲಿ ಬಹಳ ಬಳಲಿಹೋದರು. ಯಾಕಂದರೆ ಸೌಲನು--ನಾನು ನನ್ನ ಶತ್ರುಗಳಿಗೆ ಮುಯ್ಯಿ ತೀರಿಸುವ ಹಾಗೆ ಸಾಯಂಕಾ ಲದ ವರೆಗೆ ಯಾವನು ಆಹಾರ ತಿನ್ನುತ್ತಾನೋ ಅವನು ಶಪಿಸಲ್ಪಡಲಿ ಎಂದು ಆಣೆ ಇಟ್ಟದ್ದರಿಂದ ಜನರೆಲ್ಲರೂ ಆಹಾರದ ರುಚಿ ನೋಡದೆ ಇದ್ದರು.
ನಾವು ಪಾರುಪತ್ಯ ಮಾಡುವ ಈ ಸಮೃದ್ಧಿಯ ವಿಷಯದಲ್ಲಿ ಒಬ್ಬರೂ ನಮ್ಮ ಮೇಲೆ ತಪ್ಪುಹೊರಿಸುವದಕ್ಕೆ ಆಸ್ಪದ ವಿರಬಾರದು.
ನಿಮ್ಮ ಬಳಿಗೆ ಕಳುಹಿಸಿದವರಲ್ಲಿ ಯಾವನ ಮೂಲಕವಾಗಿಯಾಗಲಿ ನಿಮ್ಮಿಂದ ನಾನು ಲಾಭ ಪಡೆದುಕೊಂಡೆನೋ?