ಯಾಕೋಬನು ತನ್ನ ಸಹೋದರರಿಗೆ (ಕಡೆಯವರಿಗೆ)--ಕಲ್ಲುಗಳನ್ನು ಕೂಡಿಸಿರಿ ಅಂದನು. ಅವರು ಕಲ್ಲುಗಳನ್ನು ತಕ್ಕೊಂಡು ಒಂದು ಕುಪ್ಪೆ ಮಾಡಿ ಆ ಕುಪ್ಪೆಯ ಮೇಲೆ ಅವರು ಊಟಮಾಡಿದರು.
Cross references
ಆಗ ಅವನು ತನ್ನ ಸಹೋದರರನ್ನು ಕರಕೊಂಡು ಅವನನ್ನು ಬೆನ್ನಟ್ಟಿ ಏಳು ದಿನ ಪ್ರಯಾಣಮಾಡಿ ಗಿಲ್ಯಾದ್ ಪರ್ವತದಲ್ಲಿ ಅವನನ್ನು ಸಂಧಿಸಿದನು.
ಆದರೆ ಯಾರ ಬಳಿಯಲ್ಲಿ ನಿನ್ನ ದೇವರುಗಳನ್ನು ಕಂಡುಕೊಳ್ಳುವಿಯೋ ಅವರು ಬದುಕದೆ ಇರಲಿ; ನನ್ನ ಬಳಿಯಲ್ಲಿ ನಿನ್ನದೇನಾದರೂ ಇದ್ದರೆ ನಮ್ಮ ಸಹೋದರರ ಮುಂದೆ ವಿಚಾರಿಸಿ ಅದನ್ನು ತೆಗೆದುಕೋ ಅಂದನು. ಆದರೆ ರಾಹೇಲಳು ಅವುಗಳನ್ನು ಕದ್ದು ಕೊಂಡದ್ದು ಯಾಕೋಬನಿಗೆ ತಿಳಿದಿರಲಿಲ್ಲ.
ನೀನು ನನ್ನ ಸಾಮಾನುಗಳನ್ನೆಲ್ಲಾ ಹುಡಿಕಿದ ಮೇಲೆ ನಿನ್ನ ಮನೆಯ ಸಾಮಾನುಗಳಲ್ಲಿ ಏನು ಕಂಡುಕೊಂಡಿ? ನನಗೂ ನಿನಗೂ ಸಹೋದರರಾಗಿರುವವರ ಮುಂದೆ ಅದನ್ನು ಇಲ್ಲಿ ಇಡು. ಅವರೇ ನಮ್ಮಿಬ್ಬರ ಮಧ್ಯೆ ನ್ಯಾಯತೀರಿಸಲಿ.
ಯಾಕೋ ಬನು ಆ ಬೆಟ್ಟದಲ್ಲಿ ಬಲಿಯನ್ನು ಅರ್ಪಿಸಿ ರೊಟ್ಟಿ ಯನ್ನು ತಿನ್ನುವದಕ್ಕೆ ತನ್ನ ಸಹೋದರರನ್ನು ಕರೇ ಕಳುಹಿಸಿದನು. ಅವರು ರೊಟ್ಟಿಯನ್ನು ತಿಂದು ಬೆಟ್ಟದಲ್ಲಿಯೇ ರಾತ್ರಿ ಇಳುಕೊಂಡರು.ಹೊತ್ತಾರೆ ಲಾಬಾನನು ಎದ್ದು ತನ್ನ ಕುಮಾರರಿಗೂ ಕುಮಾರ್ತೆ ಯರಿಗೂ ಮುದ್ದಿಟ್ಟು ಅವರನ್ನು ಆಶೀರ್ವದಿಸಿದನು. ಲಾಬಾನನು ಹೊರಟು ತನ್ನ ಸ್ಥಳಕ್ಕೆ ಹಿಂತಿರುಗಿ ಹೋದನು.
ಯೆಹೋಶುವನು ಅವರಿಗೆ--ನೀವು ಯೊರ್ದನಿನ ಮಧ್ಯದಲ್ಲಿ ನಿಮ್ಮ ದೇವರಾದ ಕರ್ತನ ಮಂಜೂಷದ ಮುಂದೆ ಇಸ್ರಾಯೇಲ್ ಮಕ್ಕಳ ಗೋತ್ರ ಗಳ ಲೆಕ್ಕಕ್ಕೆ ಸರಿಯಾಗಿ ಒಬ್ಬೊಬ್ಬನು ಒಂದೊಂದು ಕಲ್ಲನ್ನು ಹೆಗಲ ಮೇಲೆ ಹೊತ್ತುಕೊಂಡು ಹೋಗಿರಿ.
ಅಲ್ಲಿ ಅವರು ಯೊರ್ದನಿನಿಂದ ತೆಗೆದು ಕೊಂಡ ಹನ್ನೆರಡು ಕಲ್ಲುಗಳನ್ನು ಯೆಹೋಶುವನು ಗಿಲ್ಗಾಲಿನಲ್ಲಿ ನಿಲ್ಲಿಸಿದನು.
ಅವರ ಮೇಲೆ ಕಲ್ಲು ಕುಪ್ಪೆ ಕೂಡಿಸಿದರು. ಅದು ಈ ದಿನದ ವರೆಗೂ ಇದೆ. ಆಗ ಕರ್ತನು ತನ್ನ ಕೋಪದ ಉರಿಯನ್ನು ಬಿಟ್ಟು ತಿರುಗಿದನು; ಆದದರಿಂದ ಆ ಸ್ಥಳವು ಈ ವರೆಗೂ ಆಕೋರಿನ ತಗ್ಗೆಂದು ಕರೆಯಲ್ಪಡುವದು.
ಯೋವಾಬನು ಜನರನ್ನು ತಡೆ ದನು. ಅವರು ಅಬ್ಷಾಲೋಮನನ್ನು ತಕ್ಕೊಂಡು ಅಡವಿ ಯಲ್ಲಿರುವ ಒಂದು ದೊಡ್ಡ ಕುಣಿಯಲ್ಲಿ ಹಾಕಿ ಅವನ ಮೇಲೆ ದೊಡ್ಡ ಕಲ್ಲಿನ ಕುಪ್ಪೆಯನ್ನು ಹಾಕಿದರು. ಆಗ ಇಸ್ರಾಯೇಲ್ಯರೆಲ್ಲರೂ ತಮ್ಮ ಗುಡಾರಗಳಿಗೆ ಓಡಿ ಹೋದರು.
ಕಲ್ಲುಗಳನ್ನು ಎಸೆಯುವದಕ್ಕೆ ಒಂದು ಸಮಯ, ಕಲ್ಲುಗಳನ್ನು ಕೂಡಿಸು ವದಕ್ಕೆ ಒಂದು ಸಮಯ; ಅಪ್ಪಿಕೊಳ್ಳುವದಕ್ಕೆ ಒಂದು ಸಮಯ, ಅಪ್ಪಿಕೊಳ್ಳುವದರಿಂದ ನಿಗ್ರಹಿಸುವ ಸಮ ಯ;