ಈಗ ನನ್ನ ಸಹೋದರನಾದ ಏಸಾವನ ಕೈಯಿಂದ ನನ್ನನ್ನು ತಪ್ಪಿಸು. ಅವನು ಬಂದು ನನ್ನನ್ನು ಮಕ್ಕಳ ಸಂಗಡ ತಾಯಿಯನ್ನು ಕೊಲ್ಲುವನೇನೋ ಎಂದು ನಾನು ಅವನಿಗೆ ಭಯಪಡುತ್ತೇನೆ.
Cross references
ನನ್ನ ಯಜಮಾನನಾದ ಅಬ್ರಹಾಮನ ಕರ್ತನಾದ ದೇವರು ಸ್ತುತಿಹೊಂದಲಿ; ಆತನು ನನ್ನ ಯಜಮಾನನನ್ನು ಅನಾಥನನ್ನಾಗಿ ಬಿಡದೆ ತನ್ನ ಕೃಪೆಯನ್ನೂ ಸತ್ಯವನ್ನೂ ತೋರಿಸಿದ್ದಾನೆ. ನಾನು ಮಾರ್ಗದಲ್ಲಿರುವಾಗ ಕರ್ತನು ನನ್ನನ್ನು ನನ್ನ ಯಜಮಾನನ ಸಹೋದರನ ಮನೆಗೆ ನಡಿಸಿದ್ದಾನೆ ಅಂದನು.
ತಂದೆಯು ಯಾಕೋಬನಿಗೆ ಕೊಟ್ಟ ಆಶೀರ್ವಾದ ಕ್ಕೋಸ್ಕರ ಏಸಾವನು ಅವನನ್ನು ಹಗೆಮಾಡಿ--ನನ್ನ ತಂದೆಗೋಸ್ಕರ ದುಃಖಪಡುವ ದಿನಗಳು ಸವಿಾಪ ವಾಗಿವೆ, ತರುವಾಯ ನಾನು ನನ್ನ ಸಹೋದರ ನಾದ ಯಾಕೋಬನನ್ನು ಕೊಲ್ಲುವೆನು ಎಂದು ಹೃದಯದಲ್ಲಿ ಅಂದುಕೊಂಡನು.
ನಿನಗೆ ಮಾರ್ಗದಲ್ಲಿ ಯಾವದಾದರೊಂದು ಗಿಡದ ಲ್ಲಾಗಲಿ ನೆಲದಲ್ಲಾಗಲಿ ಮರಿಗಳುಳ್ಳ ಇಲ್ಲವೆ ಮೊಟ್ಟೆಗ ಳುಳ್ಳ ಪಕ್ಷಿಯ ಗೂಡು ಸಿಕ್ಕಿದರೆ ಮರಿಗಳ ಮೇಲೆಯಾ ಗಲಿ ಮೊಟ್ಟೆಗಳ ಮೇಲೆಯಾಗಲಿ ತಾಯಿ ಕೂತು ಕೊಂಡಿದ್ದರೆ ಮರಿಗಳ ಸಂಗಡ ತಾಯಿಯನ್ನು ತಕ್ಕೊಳ್ಳ ಬಾರದು;
ಇವರು ಅವರ ಸಂಗಡ ಯುದ್ಧಮಾಡಿದರು. ಆದದರಿಂದ ಅವರು ಕರ್ತನಿಗೆ ಮೊರೆಯಿಟ್ಟು--ನಾವು ಕರ್ತನಾದ ನಿನ್ನನ್ನು ಬಿಟ್ಟು ಬಾಳನನ್ನೂ ಅಷ್ಟೋರೆತನ್ನೂ ಸೇವಿಸಿದ್ದರಿಂದ ಪಾಪಮಾಡಿದೆವು. ಈಗ ನೀನು ನಮ್ಮ ಶತ್ರುಗಳ ಕೈಯಿಂದ ನಮ್ಮನ್ನು ಬಿಡಿಸು, ನಾವು ನಿನ್ನನ್ನು ಸೇವಿಸು ವೆವು ಅಂದರು.
ಕರ್ತನು ನ್ಯಾಯಾಧಿಪತಿಯಾಗಿದ್ದು ನನಗೂ ನಿನಗೂ ನ್ಯಾಯತೀರಿಸಿ ನನ್ನ ವ್ಯಾಜ್ಯವನ್ನು ನೋಡಿ ವ್ಯಾಜ್ಯವಾಡಿ ನನ್ನನ್ನು ನಿನ್ನ ಕೈಗೆ ತಪ್ಪಿಸಿಬಿಡಲಿ ಅಂದನು.
ಆಗ ಅರಸ ನಾದ ದಾವೀದನು ಒಳಗೆ ಪ್ರವೇಶಿಸಿ ಕರ್ತನ ಸನ್ನಿಧಿ ಯಲ್ಲಿ ಕೂತುಕೊಂಡು--ಓ ಕರ್ತನಾದ ದೇವರೇ, ನನ್ನನ್ನು ನೀನು ಇಷ್ಟರ ಮಟ್ಟಿಗೆ ತಂದದ್ದಕ್ಕೆ ನಾನು ಎಷ್ಟರವನು? ನನ್ನ ಮನೆ ಎಷ್ಟರದು?
ಓ ದೇವರೇ, ನನ್ನನ್ನು ಕಾಪಾಡು; ನಿನ್ನಲ್ಲಿ ಭರವಸವಿಟ್ಟಿದ್ದೇನೆ.
ಹಾ, ನನ್ನ ಪ್ರಾಣವನ್ನು ಕಾಪಾಡಿ ನನ್ನನ್ನು ಬಿಡಿಸು; ನಾನು ಆಶಾಭಂಗಪಡದಂತೆ ಮಾಡು; ನಾನು ನಿನ್ನಲ್ಲಿ ಭರವಸ ವಿಟ್ಟಿದ್ದೇನೆ.
ನಿನ್ನ ಕಿವಿಯನ್ನು ನನ್ನ ಕಡೆಗೆ ತಿರುಗಿಸು; ಬೇಗ ನನ್ನನ್ನು ರಕ್ಷಿಸು. ನನ್ನನ್ನು ರಕ್ಷಿಸುವದಕ್ಕೆ ನನಗೆ ಬಲವಾದ ಬಂಡೆಯೂ ರಕ್ಷಣಾ ಮನೆಯೂ ಆಗಿರು.
ಓ ದೇವರೇ, ನನಗೆ ನ್ಯಾಯತೀರಿಸು. ಭಕ್ತಿ ಇಲ್ಲದ ಜನಾಂಗದ ಸಂಗಡ ನನ್ನ ನ್ಯಾಯವನ್ನು ವಾದಿಸು; ಮೋಸವೂ ಅನ್ಯಾಯವೂ ಉಳ್ಳ ಮನುಷ್ಯನಿಂದ ನನ್ನನ್ನು ತಪ್ಪಿಸು.
ಓ ನನ್ನ ದೇವರೇ, ನನ್ನ ಶತ್ರುಗಳಿಂದ ನನ್ನನ್ನು ಬಿಡಿಸು; ನನಗೆ ವಿರೋಧವಾಗಿ ಎದ್ದವರಿಂದ ನನ್ನನ್ನು ರಕ್ಷಿಸು.
ಮನುಷ್ಯರ ಬಲಾತ್ಕಾರದಿಂದ ನನ್ನನ್ನು ತಪ್ಪಿಸು; ಆಗ ನಿನ್ನ ಕಟ್ಟಳೆಗಳನ್ನು ನಾನು ಕೈಕೊಳ್ಳುವೆನು.
ನನ್ನ ಕೂಗನ್ನು ಆಲೈಸು; ನಾನು ಬಹಳ ಕುಂದಿ ಹೋಗಿದ್ದೇನೆ. ನನ್ನನ್ನು ಹಿಂಸಿಸುವವರಿಂದ ನನ್ನನ್ನು ಬಿಡಿಸು; ಅವರು ನನಗಿಂತ ಬಲವುಳ್ಳವರಾಗಿದ್ದಾರೆ.ನಿನ್ನ ಹೆಸರನ್ನು ಕೊಂಡಾಡುವ ಹಾಗೆ ನನ್ನ ಪ್ರಾಣ ವನ್ನು ಸೆರೆಯಿಂದ ಹೊರಗೆ ಬರಮಾಡು; ನೀತಿವಂತರು ನನ್ನನ್ನು ಮುತ್ತಿಕೊಳ್ಳುವರು; ನನಗೆ ನೀನು ಉಪಕಾರ ಮಾಡುವಿ.
ಬಲವಾದ ಪಟ್ಟಣಕ್ಕಿಂತ ಅನ್ಯಾಯ ಹೊಂದಿದ ಸಹೋದರನನ್ನು ಸಂಪಾದಿಸುವದು ಕಷ್ಟ ಕರ. ಅವರ ಕಲಹಗಳು ಅರಮನೆಯ ಸಲಾಕಿಗಳಂತೆ ಇವೆ.
ಒಂದು ವೇಳೆ ಹಾಗೆ ಇದ್ದರೆ ನಿಶ್ಚಯವಾಗಿ ನಾವು ಸೇವಿಸುವ ನಮ್ಮ ದೇವರು ಉರಿಯುವ ಬೆಂಕಿಯ ಆವಿಗೆಯೊಳಗಿಂದ ನಮ್ಮನ್ನು ತಪ್ಪಿಸಲು ಸಮರ್ಥನಾಗಿದ್ದಾನೆ. ಓ ಅರಸನೇ, ನಿನ್ನ ಕೈಯಿಂದಲೂ ನಮ್ಮನ್ನು ತಪ್ಪಿಸುವನು.
ನಿನ್ನ ಜನರಲ್ಲಿ ಗಲಭೆ ಉಂಟಾಗುವದು; ಶಲ್ಮಾನನು ಬೇತ್ ಅರ್ಬೇ ಲನ್ನು ನಾಶಮಾಡಿದ ಪ್ರಕಾರ ನಿನ್ನ ಕೋಟೆಗಳೆಲ್ಲಾ ನಾಶಮಾಡಲ್ಪಡುವವು; ತಾಯಿಯು ತನ್ನ ಮಕ್ಕಳ ಮೇಲೆ ಅಪ್ಪಳಿಸಿ ಪುಡಿಪುಡಿಯಾಗಿ ಮಾಡಲ್ಪಟ್ಟಳು.ಹಾಗೆಯೇ ನಿಮ್ಮ ಬಹಳ ದುಷ್ಟತ್ವದ ನಿಮಿತ್ತ ಬೇತೇಲು ನಿಮಗೆ ಹೀಗೆ ಮಾಡುವದು. ಬೆಳಗಿನ ಜಾವದಲ್ಲಿ ಇಸ್ರಾಯೇಲಿನ ಅರಸನು ಸಂಪೂರ್ಣವಾಗಿ ಕಡಿಯಲ್ಪ ಡುವನು (ಹಾಳಾಗುವನು).
ನಮ್ಮನ್ನು ಶೋಧನೆಯೊಳಗೆ ನಡಿಸದೆ ಕೇಡಿನಿಂದ ತಪ್ಪಿಸು. ಯಾಕಂದರೆ ರಾಜ್ಯವೂ ಬಲವೂ ಮಹಿಮೆಯೂ ಎಂದೆಂದಿಗೂ ನಿನ್ನವೇ. ಆಮೆನ್.